AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LSG vs MI: ಔಟ್ ಆಗಿದ್ದರೂ ಅಪೀಲ್ ಮಾಡದೇ ಪಂದ್ಯವನ್ನೇ ಕೈಚೆಲ್ಲಿಕೊಂಡ ಮುಂಬೈ ಇಂಡಿಯನ್ಸ್

Lucknow Super Giants vs Mumbai Indians: ಲಕ್ನೋದಲ್ಲಿ ನಡೆದ ಐಪಿಎಲ್​ನ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 203 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡ 191 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದು ಎಲ್​ಎಸ್​ಜಿ ತಂಡದ ಮಿಚೆಲ್ ಮಾರ್ಷ್. ಆದರೆ ಮಾರ್ಷ್ ಅವರನ್ನು ಪೆವಿಲಿಯನ್​ಗೆ ಕಳುಹಿಸುವ ಅತ್ಯುತ್ತಮ ಅವಕಾಶವನ್ನು ಮುಂಬೈ ಇಂಡಿಯನ್ಸ್ ಕೈಚೆಲ್ಲಿಕೊಂಡಿದ್ದರು.

LSG vs MI: ಔಟ್ ಆಗಿದ್ದರೂ ಅಪೀಲ್ ಮಾಡದೇ ಪಂದ್ಯವನ್ನೇ ಕೈಚೆಲ್ಲಿಕೊಂಡ ಮುಂಬೈ ಇಂಡಿಯನ್ಸ್
Lsg Vs Mi
Follow us
ಝಾಹಿರ್ ಯೂಸುಫ್
|

Updated on: Apr 05, 2025 | 8:05 AM

IPL 2025: ಐಪಿಎಲ್​ನ 16ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡ 12 ರನ್​ಗಳ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಮಿಚೆಲ್ ಮಾರ್ಷ್. ಏಕೆಂದರೆ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಮಾರ್ಷ್ ಪವರ್​ಪ್ಲೇನಲ್ಲೇ 60 ರನ್​ ಚಚ್ಚಿದ್ದರು. ಅಂತಹದೊಂದು ಸ್ಪೋಟಕ ಆರಂಭದ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 203 ರನ್​ಗಳಿಸಲು ಸಾಧ್ಯವಾಯಿತು.

ಕುತೂಹಲಕಾರಿ ವಿಷಯ ಎಂದರೆ ಇದೇ ಮಿಚೆಲ್ ಮಾರ್ಷ್ ಮೊದಲ ಓವರ್​ನಲ್ಲೇ ಪೆವಿಲಿಯನ್​ ಸೇರುತ್ತಿದ್ದರು. ಏಕೆಂದರೆ ಟ್ರೆಂಟ್ ಬೌಲ್ಟ್ ಎಸೆದ ಇನಿಂಗ್ಸ್​ನ ಮೊದಲ ಓವರ್​ನ 4ನೇ ಎಸೆತದಲ್ಲಿ ಮಾರ್ಷ್ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿದ್ದರು. ಆದರೆ ಇತ್ತ ವಿಕೆಟ್ ಕೀಪರ್ ಆಗಲಿ, ಮುಂಬೈ ಇಂಡಿಯನ್ಸ್ ಆಟಗಾರರಾಗಲಿ ಕ್ಯಾಚ್​ಗಾಗಿ ಅಪೀಲ್ ಮಾಡಿರಲಿಲ್ಲ.

ಇದನ್ನೂ ಓದಿ
Image
ಹುಡುಗಿಯಾಗಿ ಬದಲಾದ ಟೀಮ್ ಇಂಡಿಯಾದ ಮಾಜಿ ಆಟಗಾರನ ಪುತ್ರ
Image
VIDEO: ವಿರಾಟ್ ಕೊಹ್ಲಿಗೆ ಬೌಲಿಂಗ್: ಭಾವುಕರಾಗಿ ಅರ್ಧದಲ್ಲೇ ನಿಂತ ಸಿರಾಜ್
Image
11ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ವಿಶ್ವ ದಾಖಲೆ ಬರೆದ ನಸೀಮ್ ಶಾ
Image
MS Dhoni: ಕೇವಲ 3 ರನ್​: ಗ್ರೇಟ್​ ಫಿನಿಶರ್ ಫಿನಿಶ್..!

ಇದರ ಬೆನ್ನಲ್ಲೇ ರೀಪ್ಲೆನಲ್ಲಿ ಮಿಚೆಲ್​ ಮಾರ್ಷ್​ ಅವರ ಬ್ಯಾಟ್​ಗೆ ಚೆಂಡು ತಾಗಿರುವುದನ್ನು ತೋರಿಸಲಾಯಿತು. ಅವಾಗಲೇ ಮುಂಬೈ ಇಂಡಿಯನ್ಸ್ ಆಟಗಾರರಿಗೆ ತಮ್ಮ ತಪ್ಪಿನ ಅರಿವಾಗಿದ್ದು. ಅಲ್ಲದೆ ಅತ್ಯುತ್ತಮ ಅವಕಾಶವನ್ನು ಕೈ ತಪ್ಪಿಸಿಕೊಂಡಿರುವುದಕ್ಕೆ ನಾಯಕ ಹಾರ್ದಿಕ್ ಪಾಂಡ್ಯ ಸೇರಿದಂತೆ ಕೆಲ ಆಟಗಾರರ ಮುಖದಲ್ಲಿ ನಿರಾಸೆ ಮೂಡಿತು.

ಮಿಚೆಲ್ ಮಾರ್ಷ್​ ಬ್ಯಾಟ್ ಎಡ್ಜ್​ ಆಗಿರುವ ವಿಡಿಯೋ:

ಅತ್ತ ಮೊದಲ ಓವರ್​ನಲ್ಲಿ ಸಿಕ್ಕ ಜೀವದಾನವನ್ನು ಬಳಸಿಕೊಂಡ ಮಿಚೆಲ್ ಮಾರ್ಷ್ ಸ್ಪೋಟಕ ಇನಿಂಗ್ಸ್ ಆಡಿದರು. ಕೇವಲ 31 ಎಸೆತಗಳನ್ನು ಎದುರಿಸಿದ ಮಾರ್ಷ್ 2 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 60 ರನ್ ಚಚ್ಚಿದರು.

ಇನ್ನು ಐಡೆನ್ ಮಾರ್ಕ್ರಾಮ್ 53 ರನ್​ಗಳ ಕೊಡುಗೆ ನೀಡಿದರು. ಈ ಎರಡು ಅರ್ಧಶತಕಗಳ ನೆರವಿನೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 203 ರನ್​ ಕಲೆಹಾಕಿತು.

204 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ ಸೂರ್ಯಕುಮಾರ್ ಯಾದವ್ 43 ಎಸೆತಗಳಲ್ಲಿ 67 ರನ್ ಬಾರಿಸಿದರೂ, ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಪರಿಣಾಮ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 191 ರನ್​ಗಳಿಸಿ 12 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ: IPL 2025: ಸೋಲಿನ ಬೆನ್ನಲ್ಲೇ ರಿಷಭ್ ಪಂತ್​ಗೆ ಸಂಜೀವ್ ಗೊಯೆಂಕಾ ಖಡಕ್ ಸೂಚನೆ

ಒಂದು ವೇಳೆ ಮಿಚೆಲ್ ಮಾರ್ಷ್ ಅವರ ವಿಕೆಟ್ ಮೊದಲ ಓವರ್​ನಲ್ಲೇ ಪಡೆದಿದ್ದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡದ ಸ್ಕೋರ್ 150ರ ಅಸುಪಾಸಿನಲ್ಲಿರುತ್ತಿತ್ತು. ಏಕೆಂದರೆ ಮಾರ್ಷ್ ಅವರನ್ನು ಹೊರತುಪಡಿಸಿ ಲಕ್ನೋ ಪರ ಯಾವುದೇ ಬ್ಯಾಟರ್ ಸ್ಪೋಟಕ ಇನಿಂಗ್ಸ್​ ಆಡಿರಲಿಲ್ಲ. ಇತ್ತ ಸಿಕ್ಕ ಅವಕಾಶವನ್ನು ಕೈಚೆಲ್ಲುವ ಮೂಲಕ ಮುಂಬೈ ಇಂಡಿಯನ್ಸ್ ತಂಡವು 12 ರನ್​ಗಳಿಂದ ಸೋಲೊಪ್ಪಿಕೊಂಡಿದ್ದಾರೆ.

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ