Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್ ಉದ್ಘಾಟನಾ ಸಮಾರಂಭದಲ್ಲಿ ಯಾರೆಲ್ಲಾ ಪ್ರದರ್ಶನ ನೀಡಲಿದ್ದಾರೆ ಗೊತ್ತಾ?

IPL 2025 Opening Ceremony: 2025ರ ಐಪಿಎಲ್ ಉದ್ಘಾಟನಾ ಸಮಾರಂಭದಲ್ಲಿ ದಿಶಾ ಪಟಾನಿ, ಶ್ರೇಯಾ ಘೋಷಾಲ್ ಮತ್ತು ಕರಣ್ ಔಜ್ಲಾ ಅವರಂತಹ ಪ್ರಸಿದ್ಧ ತಾರೆಗಳು ಪ್ರದರ್ಶನ ನೀಡಲಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಕೆಕೆಆರ್ ಮತ್ತು ಆರ್‌ಸಿಬಿ ನಡುವಿನ ಮೊದಲ ಪಂದ್ಯದ ಮುನ್ನ ಸಂಜೆ 6ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಪಂದ್ಯಕ್ಕಾಗಿ ಟಿಕೆಟ್‌ಗಳು BookMyShow ನಲ್ಲಿ ಲಭ್ಯವಿದೆ.

IPL 2025: ಐಪಿಎಲ್ ಉದ್ಘಾಟನಾ ಸಮಾರಂಭದಲ್ಲಿ ಯಾರೆಲ್ಲಾ ಪ್ರದರ್ಶನ ನೀಡಲಿದ್ದಾರೆ ಗೊತ್ತಾ?
ಐಪಿಎಲ್ ಉದ್ಘಾಟನಾ ಸಮಾರಂಭ
Follow us
ಪೃಥ್ವಿಶಂಕರ
|

Updated on:Mar 17, 2025 | 7:43 PM

ಮಿಲಿಯನ್ ಡಾಲರ್ ಟೂರ್ನಿ, 2025 ರ ಐಪಿಎಲ್ ಆರಂಭಕ್ಕೆ ಇನ್ನು ಕೇವಲ 5 ದಿನಗಳು ಮಾತ್ರ ಬಾಕಿ ಉಳಿದಿವೆ. ಟೂರ್ನಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡವು, ಆರ್‌ಸಿಬಿ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ಕೊಲ್ಕತ್ತಾದ ಈಡನ್ ಗಾರ್ಡನ್ ಮೈದಾನ ಆತಿಥ್ಯವಹಿಸಲಿದೆ. ಆದರೆ ಈ ಪಂದ್ಯದ ಆರಂಭಕ್ಕೂ ಮುನ್ನ ಪ್ರತಿ ವರ್ಷದಂತೆ ಈ ವರ್ಷವೂ ಐಪಿಎಲ್ ಆಯೋಜಕರು ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದ್ದಾರೆ. ವರದಿ ಪ್ರಕಾರ, ಈ ಬಾರಿಯ ಐಪಿಎಲ್ ಉದ್ಘಾಟನಾ ಸಮಾರಂಭದಲ್ಲಿ ಯಾವೆಲ್ಲ ಸೆಲೆಬ್ರೆಟಿಗಳು ಪ್ರದರ್ಶನ ನೀಡಲಿದ್ದಾರೆ ಎಂಬುದು ಹೊರಬಿದ್ದಿದೆ.

ಪ್ರದರ್ಶನ ನೀಡುವವರು ಯಾರು?

ವಾಸ್ತವವಾಗಿ ಪ್ರತಿ ಆವೃತ್ತಿಯ ಐಪಿಎಲ್ ಆರಂಭಕ್ಕೂ ಮುನ್ನ ಬಿಸಿಸಿಐ, ಅದ್ಧೂರಿಯಾದ ಉದ್ಘಾಟನಾ ಸಮಾರಂಭವನ್ನು ಆಯೋಜಿಸುತ್ತದೆ. ಈ ಕಾರ್ಯಕ್ರಮಕ್ಕೆ ದೇಶ ವಿದೇಶಗಳಿಂದ ಸ್ಟಾರ್ ಕಲಾವಿದರನ್ನು ಕರೆಸುವ ಬಿಸಿಸಿಐ, ಅವರಿಂದ ಪ್ರದರ್ಶನ ಕೊಡಿಸಿ ಅಭಿಮಾನಿಗಳಿಗೆ ಐಪಿಎಲ್ ಆರಂಭಕ್ಕೂ ಮುನ್ನ ಭರ್ಜರಿ ಮನರಂಜನೆ ನೀಡುತ್ತದೆ. ಅದರಂತೆ ಈ ಬಾರಿಯೂ ಬಾಲಿವುಡ್​ನ ಸ್ಟಾರ್ ನಟಿಯಾದ ದಿಶಾ ಪಟಾನಿ, ಖ್ಯಾತ ಹಿನ್ನಲೆ ಗಾಯಕಿ ಶ್ರೇಯಾ ಘೋಷಾಲ್ ಹಾಗೂ ಪಂಜಾಬಿ ಗಾಯಕ ಕರಣ್ ಔಜ್ಲಾ ಅವರು ಈ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಲಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ
Image
ರಿಷಬ್ ಪಂತ್ ಮೂರ್ಖ ಎಂದು ಬೈದಿದ್ದು ಯಾರಿಗೆ?
Image
ಚೇತರಿಸಿಕೊಳ್ಳಲಾರದಷ್ಟು ಪಾತಾಳಕ್ಕೆ ಕುಸಿದ ಪಾಕ್ ಕ್ರಿಕೆಟ್
Image
ಇವರೇ ಮುಂಬೈ ತಂಡದ ಬೆನ್ನೇಲುಬು ಎಂದ ಹಾರ್ದಿಕ್ ಪಾಂಡ್ಯ
Image
ಕೆಕೆಆರ್​ಗೆ ಪ್ಲೇಯಿಂಗ್ 11; ನಾಯಕ ರಹಾನೆಗೆ ಯಾವ ಕ್ರಮಾಂಕ?

ಇವರಲ್ಲದೆ ಐಪಿಎಲ್ 2025 ರ ಉದ್ಘಾಟನಾ ಸಮಾರಂಭದಲ್ಲಿ ಅನೇಕ ತಾರೆಯರು ಪ್ರದರ್ಶನ ನೀಡುವುದನ್ನು ಕಾಣಬಹುದು. ಈ ತಾರೆಯರ ಪ್ರದರ್ಶನದ ಜೊತೆಗೆ, ಇತರ ಹಲವು ವರ್ಣರಂಜಿತ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು.

ಟಿಕೆಟ್ ಖರೀದಿಸುವುದು ಹೇಗೆ?

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ನಡೆಯಲ್ಲಿರುವ ಕೆಕೆಆರ್ ಹಾಗೂ ಆರ್‌ಸಿಬಿ ನಡುವಿನ ಪಂದ್ಯಕ್ಕೂ ಮುನ್ನ ಐಪಿಎಲ್ ಉದ್ಘಾಟನಾ ಸಮಾರಂಭ ನಡೆಯಲಿದೆ. ಅಂದರೆ ಪಂದ್ಯ ಸಂಜೆ 7:30 ಕ್ಕೆ ಆರಂಭವಾದರೆ, ಉದ್ಘಾಟನಾ ಸಮಾರಂಭ ಸಂಜೆ 6 ಗಂಟೆಗೆ ಆರಂಭವಾಗಲಿದೆ. ಈ ಪಂದ್ಯಕ್ಕೆ ಟಿಕೆಟ್ ಖರೀದಿಸಿರುವ ಅಭಿಮಾನಿಗಳು ಉದ್ಘಾಟನಾ ಸಮಾರಂಭವನ್ನು ಕಣ್ತುಂಬಿಕೊಳ್ಳಬಹುದಾಗಿದೆ. ಈ ಪಂದ್ಯದ ಟಿಕೆಟ್‌ಗಳು ಆನ್‌ಲೈನ್‌ನಲ್ಲಿ ಈಗಾಗಲೇ ಮಾರಾಟಕ್ಕೆ ಲಭ್ಯವಿವೆ. ಅಭಿಮಾನಿಗಳು BookMyShow ನಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡಬಹುದು.

IPL 2025: ಮೂರ್ಖ ಎಂದು ಹೇಳಿ ಗವಾಸ್ಕರ್​ರನ್ನು ಗೇಲಿ ಮಾಡಿದ್ರಾ ರಿಷಬ್ ಪಂತ್? ವಿಡಿಯೋ ವೈರಲ್

ಕೆಕೆಆರ್- ಆರ್​ಸಿಬಿ ಮುಖಾಮುಖಿ

ಇನ್ನು 2025 ರ ಐಪಿಎಲ್‌ನಲ್ಲಿ ಮೊದಲ ಪಂದ್ಯದಲ್ಲೇ ಮುಖಾಮುಖಿಯಾಗುತ್ತಿರುವ ಆರ್​ಸಿಬಿ ಹಾಗೂ ಕೆಕೆಆರ್ ಕಳೆದ ಆವೃತ್ತಿಯಲ್ಲಿ ಎರಡು ಬಾರಿ ಮುಖಾಮುಖಿಯಾಗಿದ್ದವು. ಈ ಎರಡೂ ಪಂದ್ಯಗಳಲ್ಲೂ ಕೆಕೆಆರ್ ಜಯ ಸಾಧಿಸಿತ್ತು. ಮೊದಲ ಪಂದ್ಯದಲ್ಲಿ 7 ವಿಕೆಟ್​ಗಳಿಂದ ಆರ್​ಸಿಬಿಯನ್ನು ಮಣಿಸಿದ್ದ ಕೆಕೆಆರ್, ಎರಡನೇ ಪಂದ್ಯವನ್ನು 1 ರನ್​ಗಳಿಂದ ಗೆದ್ದಿಕೊಂಡಿತ್ತು. ಹೀಗಾಗಿ ಕಳೆದ ಬಾರಿಯ ಹೀನಾಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿ ಆರ್​ಸಿಬಿ ಇದ್ದರೆ, ಇತ್ತ ತನ್ನ ಗೆಲುವಿನ ಓಟವನ್ನು ಮುಂದುವರೆಸಲು ಕೆಕೆಆರ್ ಎದುರು ನೋಡುತ್ತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:42 pm, Mon, 17 March 25

ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು