AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PBKS vs CSK: ಸೋಲಿಗೆ ಕಾರಣ ಬ್ಯಾಟರ್, ಬೌಲರ್ ಅಲ್ಲ: ರುತುರಾಜ್ ಗಾಯಕ್ವಾಡ್

IPL 2025 PBKS vs CSK: ಐಪಿಎಲ್​ನ 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಗ್ಗರಿಸಿದೆ. ಚಂಡೀಗಢ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 219 ರನ್​ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ 201 ರನ್​ಗಳಿಸಲಷ್ಟೇ ಶಕ್ತರಾದರು.

PBKS vs CSK: ಸೋಲಿಗೆ ಕಾರಣ ಬ್ಯಾಟರ್, ಬೌಲರ್ ಅಲ್ಲ: ರುತುರಾಜ್ ಗಾಯಕ್ವಾಡ್
Ruturaj Gaikwad
ಝಾಹಿರ್ ಯೂಸುಫ್
|

Updated on:Apr 09, 2025 | 6:59 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 22ನೇ ಪಂದ್ಯದಲ್ಲಿ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಪಂಜಾಬ್ ಕಿಂಗ್ಸ್ (PBKS) ಜಯ ಸಾಧಿಸಿದೆ. ಮುಲ್ಲನ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 219 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು 201 ರನ್​ಗಳು ಮಾತ್ರ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡವು 18 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಈ ಸೋಲಿನ ಬಳಿಕ ಮಾತನಾಡಿದ ಸಿಎಸ್​ಕೆ ತಂಡದ ನಾಯಕ ರುತುರಾಜ್ ಗಾಯಕ್ವಾಡ್, ತಂಡದ ಪ್ರದರ್ಶನಕ್ಕೆ ನಿರಾಶೆ ವ್ಯಕ್ತಪಡಿಸಿದರು. ಕಳೆದ ನಾಲ್ಕು ಪಂದ್ಯಗಳಲ್ಲಿ ನಾವು ಸೋತಿದ್ದೇವೆ. ಈ ಸೋಲುಗಳಿಗೆ ನನ್ನ ಪ್ರಕಾರ, ಬ್ಯಾಟ್ಸ್​ಮನ್ ಅಥವಾ ಬೌಲರ್​ ಕಾರಣ ಅಲ್ಲ . ಬದಲಾಗಿ ಫೀಲ್ಡಿಂಗ್​ನಲ್ಲಿದ್ದ ತಪ್ಪುಗಳಿಂದಲೇ ನಾವು ಸೋಲುತ್ತಿದ್ದೇವೆ ಎಂದರು.

ನಾವು ಫೀಲ್ಡಿಂಗ್​​ನಲ್ಲಿ ಬಿಡುತ್ತಿರುವ ಕ್ಯಾಚ್​ಗಳು ಹಾಗೂ ಮಿಸ್​ ಫೀಲ್ಡಿಂಗ್​ಗಳಿಂದ ಸ್ಕೋರ್​ಗಳಲ್ಲಿ ವ್ಯತ್ಯಾಸಗಳು ಉಂಟಾಗುತ್ತಿದೆ ಎಂಬುದು ನನ್ನ ಭಾವನೆ. ಇದರಿಂದ ಬ್ಯಾಟ್ಸ್‌ಮನ್​ಗಳು 15, 20, 30 ರನ್‌ಗಳನ್ನು ಗಳಿಸುತ್ತಿದ್ದಾರೆ. ಈ ರನ್​ಗಳ ಅಂತರದಿಂದಲೇ ನಾವು ಪಂದ್ಯಗಳನ್ನು ಕಳೆದುಕೊಳ್ಳುತ್ತಿದ್ದೇವೆ ಎಂದು ರುತುರಾಜ್ ಗಾಯಕ್ವಾಡ್ ಹೇಳಿದ್ದಾರೆ.

ಇದನ್ನೂ ಓದಿ
Image
ಹುಡುಗಿಯಾಗಿ ಬದಲಾದ ಟೀಮ್ ಇಂಡಿಯಾದ ಮಾಜಿ ಆಟಗಾರನ ಪುತ್ರ
Image
VIDEO: ವಿರಾಟ್ ಕೊಹ್ಲಿಗೆ ಬೌಲಿಂಗ್: ಭಾವುಕರಾಗಿ ಅರ್ಧದಲ್ಲೇ ನಿಂತ ಸಿರಾಜ್
Image
11ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ವಿಶ್ವ ದಾಖಲೆ ಬರೆದ ನಸೀಮ್ ಶಾ
Image
MS Dhoni: ಕೇವಲ 3 ರನ್​: ಗ್ರೇಟ್​ ಫಿನಿಶರ್ ಫಿನಿಶ್..!

ಇನ್ನು ಈ ಪಂದ್ಯದಲ್ಲಿ ಪ್ರಿಯಾಂಶ್ ಆರ್ಯ ತುಂಬಾ ಚೆನ್ನಾಗಿ ಬ್ಯಾಟಿಂಗ್ ಸಹ ಮಾಡಿದ್ದರು. ನಾವು ನಿಯಮಿತವಾಗಿ ವಿಕೆಟ್‌ಗಳನ್ನು ಪಡೆಯುತ್ತಿದ್ದೆವು. ಆದರೆ ಅವರು ರನ್​ ವೇಗವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾದರು. 10-15 ರನ್‌ಗಳು ಕಡಿಮೆ ಇದ್ದಿದ್ದರೆ ನಾವು ಪಂದ್ಯವನ್ನು ಗೆಲ್ಲುತ್ತಿದ್ದೆವು. ಆದರೆ ಕ್ಯಾಚ್‌ಗಳನ್ನು ಕೈಬಿಟ್ಟ ಪರಿಣಾಮ ಅವರು ಹೆಚ್ಚುವರಿ ರನ್​ಗಳಿಸಲು ಸಾಧ್ಯವಾಯಿತು ಎಂದು ರುತುರಾಜ್ ಹೇಳಿದ್ದಾರೆ.

ಸಿಎಸ್​ಕೆ ಪರ ರಚಿನ್ ರವೀಂದ್ರ ಹಾಗೂ ಡೆವೊನ್ ಕಾನ್ವೆ ಪವರ್​ಪ್ಲೇನಲ್ಲಿ ಉತ್ತಮವಾಗಿಯೇ ಆಡಿದ್ದಾರೆ. ಇದು ನಮ್ಮ ಬ್ಯಾಟಿಂಗ್ ವಿಭಾಗದಲ್ಲಿನ ಸಕಾರಾತ್ಮಕ ಅಂಶಗಳು. ಇದಾಗ್ಯೂ ನಾವು ಗೆಲುವಿಗಾಗಿ ಕೇವಲ ಎರಡು ಮೂರು ಬಿಗ್ ಹಿಟ್​ಗಳ ಅಂತರದಲ್ಲಿದ್ದೆವು. ಒಂದು ವೇಳೆ ಫೀಲ್ಡಿಂಗ್​ನಲ್ಲಿ ತಪ್ಪುಗಳನ್ನು ಮಾಡದಿದ್ದರೆ ಫಲಿತಾಂಶವು ನಮ್ಮ ಪರವಾಗುತ್ತಿತ್ತು.

ಇದನ್ನೂ ಓದಿ: IPL 2025: ಗೆಲುವಿನ ಬೆನ್ನಲ್ಲೇ RCB ನಾಯಕ ರಜತ್ ಪಾಟಿದಾರ್​ಗೆ ದಂಡ ವಿಧಿಸಿದ ಬಿಸಿಸಿಐ

ಪಂದ್ಯದ ಆರಂಭಕ್ಕೂ ಮುನ್ನವೇ ನಾವು ಫೀಲ್ಡಿಂಗ್​ ಬಗ್ಗೆ ಮಾತನಾಡಿದ್ದೆವು. ನರ್ವಸ್ ಆಗಿದ್ದರೆ, ನೀವು ಕ್ಯಾಚ್ ಅನ್ನು ಬಿಡುತ್ತೀರಿ ಎಂದು ಸಹ ಎಚ್ಚರಿಸಿದ್ದೆವು. ಅತ್ಯುತ್ತಮ ಫೀಲ್ಡಿಂಗ್​ನಿಂದ ಸಹ ಪಂದ್ಯದ ಗತಿ ಬದಲಿಸಬಹುದು. ಆದರೆ ನಮ್ಮ ಪಾಲಿಗೆ ಇಂದು ಕೆಟ್ಟ ದಿನವಾಗಿತ್ತು ಎಂದು ರುತುರಾಜ್ ಗಾಯಕ್ವಾಡ್ ಹೇಳಿದ್ದಾರೆ.  ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸತತ ನಾಲ್ಕನೇ ಸೋಲಿಗೆ ಫೀಲ್ಡಿಂಗ್ ಕಾರಣ ಎಂದು ಸಿಎಸ್​ಕೆ ನಾಯಕ ದೂರಿದ್ದಾರೆ.

Published On - 6:56 am, Wed, 9 April 25

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ