AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PBKS vs CSK: ಸೋಲಿಗೆ ಕಾರಣ ಬ್ಯಾಟರ್, ಬೌಲರ್ ಅಲ್ಲ: ರುತುರಾಜ್ ಗಾಯಕ್ವಾಡ್

IPL 2025 PBKS vs CSK: ಐಪಿಎಲ್​ನ 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಗ್ಗರಿಸಿದೆ. ಚಂಡೀಗಢ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 219 ರನ್​ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ 201 ರನ್​ಗಳಿಸಲಷ್ಟೇ ಶಕ್ತರಾದರು.

PBKS vs CSK: ಸೋಲಿಗೆ ಕಾರಣ ಬ್ಯಾಟರ್, ಬೌಲರ್ ಅಲ್ಲ: ರುತುರಾಜ್ ಗಾಯಕ್ವಾಡ್
Ruturaj Gaikwad
Follow us
ಝಾಹಿರ್ ಯೂಸುಫ್
|

Updated on:Apr 09, 2025 | 6:59 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 22ನೇ ಪಂದ್ಯದಲ್ಲಿ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಪಂಜಾಬ್ ಕಿಂಗ್ಸ್ (PBKS) ಜಯ ಸಾಧಿಸಿದೆ. ಮುಲ್ಲನ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 219 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು 201 ರನ್​ಗಳು ಮಾತ್ರ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡವು 18 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಈ ಸೋಲಿನ ಬಳಿಕ ಮಾತನಾಡಿದ ಸಿಎಸ್​ಕೆ ತಂಡದ ನಾಯಕ ರುತುರಾಜ್ ಗಾಯಕ್ವಾಡ್, ತಂಡದ ಪ್ರದರ್ಶನಕ್ಕೆ ನಿರಾಶೆ ವ್ಯಕ್ತಪಡಿಸಿದರು. ಕಳೆದ ನಾಲ್ಕು ಪಂದ್ಯಗಳಲ್ಲಿ ನಾವು ಸೋತಿದ್ದೇವೆ. ಈ ಸೋಲುಗಳಿಗೆ ನನ್ನ ಪ್ರಕಾರ, ಬ್ಯಾಟ್ಸ್​ಮನ್ ಅಥವಾ ಬೌಲರ್​ ಕಾರಣ ಅಲ್ಲ . ಬದಲಾಗಿ ಫೀಲ್ಡಿಂಗ್​ನಲ್ಲಿದ್ದ ತಪ್ಪುಗಳಿಂದಲೇ ನಾವು ಸೋಲುತ್ತಿದ್ದೇವೆ ಎಂದರು.

ನಾವು ಫೀಲ್ಡಿಂಗ್​​ನಲ್ಲಿ ಬಿಡುತ್ತಿರುವ ಕ್ಯಾಚ್​ಗಳು ಹಾಗೂ ಮಿಸ್​ ಫೀಲ್ಡಿಂಗ್​ಗಳಿಂದ ಸ್ಕೋರ್​ಗಳಲ್ಲಿ ವ್ಯತ್ಯಾಸಗಳು ಉಂಟಾಗುತ್ತಿದೆ ಎಂಬುದು ನನ್ನ ಭಾವನೆ. ಇದರಿಂದ ಬ್ಯಾಟ್ಸ್‌ಮನ್​ಗಳು 15, 20, 30 ರನ್‌ಗಳನ್ನು ಗಳಿಸುತ್ತಿದ್ದಾರೆ. ಈ ರನ್​ಗಳ ಅಂತರದಿಂದಲೇ ನಾವು ಪಂದ್ಯಗಳನ್ನು ಕಳೆದುಕೊಳ್ಳುತ್ತಿದ್ದೇವೆ ಎಂದು ರುತುರಾಜ್ ಗಾಯಕ್ವಾಡ್ ಹೇಳಿದ್ದಾರೆ.

ಇದನ್ನೂ ಓದಿ
Image
ಹುಡುಗಿಯಾಗಿ ಬದಲಾದ ಟೀಮ್ ಇಂಡಿಯಾದ ಮಾಜಿ ಆಟಗಾರನ ಪುತ್ರ
Image
VIDEO: ವಿರಾಟ್ ಕೊಹ್ಲಿಗೆ ಬೌಲಿಂಗ್: ಭಾವುಕರಾಗಿ ಅರ್ಧದಲ್ಲೇ ನಿಂತ ಸಿರಾಜ್
Image
11ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ವಿಶ್ವ ದಾಖಲೆ ಬರೆದ ನಸೀಮ್ ಶಾ
Image
MS Dhoni: ಕೇವಲ 3 ರನ್​: ಗ್ರೇಟ್​ ಫಿನಿಶರ್ ಫಿನಿಶ್..!

ಇನ್ನು ಈ ಪಂದ್ಯದಲ್ಲಿ ಪ್ರಿಯಾಂಶ್ ಆರ್ಯ ತುಂಬಾ ಚೆನ್ನಾಗಿ ಬ್ಯಾಟಿಂಗ್ ಸಹ ಮಾಡಿದ್ದರು. ನಾವು ನಿಯಮಿತವಾಗಿ ವಿಕೆಟ್‌ಗಳನ್ನು ಪಡೆಯುತ್ತಿದ್ದೆವು. ಆದರೆ ಅವರು ರನ್​ ವೇಗವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾದರು. 10-15 ರನ್‌ಗಳು ಕಡಿಮೆ ಇದ್ದಿದ್ದರೆ ನಾವು ಪಂದ್ಯವನ್ನು ಗೆಲ್ಲುತ್ತಿದ್ದೆವು. ಆದರೆ ಕ್ಯಾಚ್‌ಗಳನ್ನು ಕೈಬಿಟ್ಟ ಪರಿಣಾಮ ಅವರು ಹೆಚ್ಚುವರಿ ರನ್​ಗಳಿಸಲು ಸಾಧ್ಯವಾಯಿತು ಎಂದು ರುತುರಾಜ್ ಹೇಳಿದ್ದಾರೆ.

ಸಿಎಸ್​ಕೆ ಪರ ರಚಿನ್ ರವೀಂದ್ರ ಹಾಗೂ ಡೆವೊನ್ ಕಾನ್ವೆ ಪವರ್​ಪ್ಲೇನಲ್ಲಿ ಉತ್ತಮವಾಗಿಯೇ ಆಡಿದ್ದಾರೆ. ಇದು ನಮ್ಮ ಬ್ಯಾಟಿಂಗ್ ವಿಭಾಗದಲ್ಲಿನ ಸಕಾರಾತ್ಮಕ ಅಂಶಗಳು. ಇದಾಗ್ಯೂ ನಾವು ಗೆಲುವಿಗಾಗಿ ಕೇವಲ ಎರಡು ಮೂರು ಬಿಗ್ ಹಿಟ್​ಗಳ ಅಂತರದಲ್ಲಿದ್ದೆವು. ಒಂದು ವೇಳೆ ಫೀಲ್ಡಿಂಗ್​ನಲ್ಲಿ ತಪ್ಪುಗಳನ್ನು ಮಾಡದಿದ್ದರೆ ಫಲಿತಾಂಶವು ನಮ್ಮ ಪರವಾಗುತ್ತಿತ್ತು.

ಇದನ್ನೂ ಓದಿ: IPL 2025: ಗೆಲುವಿನ ಬೆನ್ನಲ್ಲೇ RCB ನಾಯಕ ರಜತ್ ಪಾಟಿದಾರ್​ಗೆ ದಂಡ ವಿಧಿಸಿದ ಬಿಸಿಸಿಐ

ಪಂದ್ಯದ ಆರಂಭಕ್ಕೂ ಮುನ್ನವೇ ನಾವು ಫೀಲ್ಡಿಂಗ್​ ಬಗ್ಗೆ ಮಾತನಾಡಿದ್ದೆವು. ನರ್ವಸ್ ಆಗಿದ್ದರೆ, ನೀವು ಕ್ಯಾಚ್ ಅನ್ನು ಬಿಡುತ್ತೀರಿ ಎಂದು ಸಹ ಎಚ್ಚರಿಸಿದ್ದೆವು. ಅತ್ಯುತ್ತಮ ಫೀಲ್ಡಿಂಗ್​ನಿಂದ ಸಹ ಪಂದ್ಯದ ಗತಿ ಬದಲಿಸಬಹುದು. ಆದರೆ ನಮ್ಮ ಪಾಲಿಗೆ ಇಂದು ಕೆಟ್ಟ ದಿನವಾಗಿತ್ತು ಎಂದು ರುತುರಾಜ್ ಗಾಯಕ್ವಾಡ್ ಹೇಳಿದ್ದಾರೆ.  ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸತತ ನಾಲ್ಕನೇ ಸೋಲಿಗೆ ಫೀಲ್ಡಿಂಗ್ ಕಾರಣ ಎಂದು ಸಿಎಸ್​ಕೆ ನಾಯಕ ದೂರಿದ್ದಾರೆ.

Published On - 6:56 am, Wed, 9 April 25

‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್
ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್
ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
ಆಪರೇಷನ್ ಸಿಂಧೂರ್​ ಕಾರ್ಯಾಚರಣೆ ಬೆಂಬಲಿಸಿ ಕಾಂಗ್ರೆಸ್​ ತಿರಂಗಾ ಯಾತ್ರೆ
ಆಪರೇಷನ್ ಸಿಂಧೂರ್​ ಕಾರ್ಯಾಚರಣೆ ಬೆಂಬಲಿಸಿ ಕಾಂಗ್ರೆಸ್​ ತಿರಂಗಾ ಯಾತ್ರೆ