AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PBKS vs CSK: ಸೋಲಿಗೆ ಕಾರಣ ಬ್ಯಾಟರ್, ಬೌಲರ್ ಅಲ್ಲ: ರುತುರಾಜ್ ಗಾಯಕ್ವಾಡ್

IPL 2025 PBKS vs CSK: ಐಪಿಎಲ್​ನ 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಗ್ಗರಿಸಿದೆ. ಚಂಡೀಗಢ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 219 ರನ್​ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ 201 ರನ್​ಗಳಿಸಲಷ್ಟೇ ಶಕ್ತರಾದರು.

PBKS vs CSK: ಸೋಲಿಗೆ ಕಾರಣ ಬ್ಯಾಟರ್, ಬೌಲರ್ ಅಲ್ಲ: ರುತುರಾಜ್ ಗಾಯಕ್ವಾಡ್
Ruturaj Gaikwad
ಝಾಹಿರ್ ಯೂಸುಫ್
|

Updated on:Apr 09, 2025 | 6:59 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 22ನೇ ಪಂದ್ಯದಲ್ಲಿ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಪಂಜಾಬ್ ಕಿಂಗ್ಸ್ (PBKS) ಜಯ ಸಾಧಿಸಿದೆ. ಮುಲ್ಲನ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 219 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು 201 ರನ್​ಗಳು ಮಾತ್ರ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡವು 18 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಈ ಸೋಲಿನ ಬಳಿಕ ಮಾತನಾಡಿದ ಸಿಎಸ್​ಕೆ ತಂಡದ ನಾಯಕ ರುತುರಾಜ್ ಗಾಯಕ್ವಾಡ್, ತಂಡದ ಪ್ರದರ್ಶನಕ್ಕೆ ನಿರಾಶೆ ವ್ಯಕ್ತಪಡಿಸಿದರು. ಕಳೆದ ನಾಲ್ಕು ಪಂದ್ಯಗಳಲ್ಲಿ ನಾವು ಸೋತಿದ್ದೇವೆ. ಈ ಸೋಲುಗಳಿಗೆ ನನ್ನ ಪ್ರಕಾರ, ಬ್ಯಾಟ್ಸ್​ಮನ್ ಅಥವಾ ಬೌಲರ್​ ಕಾರಣ ಅಲ್ಲ . ಬದಲಾಗಿ ಫೀಲ್ಡಿಂಗ್​ನಲ್ಲಿದ್ದ ತಪ್ಪುಗಳಿಂದಲೇ ನಾವು ಸೋಲುತ್ತಿದ್ದೇವೆ ಎಂದರು.

ನಾವು ಫೀಲ್ಡಿಂಗ್​​ನಲ್ಲಿ ಬಿಡುತ್ತಿರುವ ಕ್ಯಾಚ್​ಗಳು ಹಾಗೂ ಮಿಸ್​ ಫೀಲ್ಡಿಂಗ್​ಗಳಿಂದ ಸ್ಕೋರ್​ಗಳಲ್ಲಿ ವ್ಯತ್ಯಾಸಗಳು ಉಂಟಾಗುತ್ತಿದೆ ಎಂಬುದು ನನ್ನ ಭಾವನೆ. ಇದರಿಂದ ಬ್ಯಾಟ್ಸ್‌ಮನ್​ಗಳು 15, 20, 30 ರನ್‌ಗಳನ್ನು ಗಳಿಸುತ್ತಿದ್ದಾರೆ. ಈ ರನ್​ಗಳ ಅಂತರದಿಂದಲೇ ನಾವು ಪಂದ್ಯಗಳನ್ನು ಕಳೆದುಕೊಳ್ಳುತ್ತಿದ್ದೇವೆ ಎಂದು ರುತುರಾಜ್ ಗಾಯಕ್ವಾಡ್ ಹೇಳಿದ್ದಾರೆ.

ಇದನ್ನೂ ಓದಿ
Image
ಹುಡುಗಿಯಾಗಿ ಬದಲಾದ ಟೀಮ್ ಇಂಡಿಯಾದ ಮಾಜಿ ಆಟಗಾರನ ಪುತ್ರ
Image
VIDEO: ವಿರಾಟ್ ಕೊಹ್ಲಿಗೆ ಬೌಲಿಂಗ್: ಭಾವುಕರಾಗಿ ಅರ್ಧದಲ್ಲೇ ನಿಂತ ಸಿರಾಜ್
Image
11ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ವಿಶ್ವ ದಾಖಲೆ ಬರೆದ ನಸೀಮ್ ಶಾ
Image
MS Dhoni: ಕೇವಲ 3 ರನ್​: ಗ್ರೇಟ್​ ಫಿನಿಶರ್ ಫಿನಿಶ್..!

ಇನ್ನು ಈ ಪಂದ್ಯದಲ್ಲಿ ಪ್ರಿಯಾಂಶ್ ಆರ್ಯ ತುಂಬಾ ಚೆನ್ನಾಗಿ ಬ್ಯಾಟಿಂಗ್ ಸಹ ಮಾಡಿದ್ದರು. ನಾವು ನಿಯಮಿತವಾಗಿ ವಿಕೆಟ್‌ಗಳನ್ನು ಪಡೆಯುತ್ತಿದ್ದೆವು. ಆದರೆ ಅವರು ರನ್​ ವೇಗವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾದರು. 10-15 ರನ್‌ಗಳು ಕಡಿಮೆ ಇದ್ದಿದ್ದರೆ ನಾವು ಪಂದ್ಯವನ್ನು ಗೆಲ್ಲುತ್ತಿದ್ದೆವು. ಆದರೆ ಕ್ಯಾಚ್‌ಗಳನ್ನು ಕೈಬಿಟ್ಟ ಪರಿಣಾಮ ಅವರು ಹೆಚ್ಚುವರಿ ರನ್​ಗಳಿಸಲು ಸಾಧ್ಯವಾಯಿತು ಎಂದು ರುತುರಾಜ್ ಹೇಳಿದ್ದಾರೆ.

ಸಿಎಸ್​ಕೆ ಪರ ರಚಿನ್ ರವೀಂದ್ರ ಹಾಗೂ ಡೆವೊನ್ ಕಾನ್ವೆ ಪವರ್​ಪ್ಲೇನಲ್ಲಿ ಉತ್ತಮವಾಗಿಯೇ ಆಡಿದ್ದಾರೆ. ಇದು ನಮ್ಮ ಬ್ಯಾಟಿಂಗ್ ವಿಭಾಗದಲ್ಲಿನ ಸಕಾರಾತ್ಮಕ ಅಂಶಗಳು. ಇದಾಗ್ಯೂ ನಾವು ಗೆಲುವಿಗಾಗಿ ಕೇವಲ ಎರಡು ಮೂರು ಬಿಗ್ ಹಿಟ್​ಗಳ ಅಂತರದಲ್ಲಿದ್ದೆವು. ಒಂದು ವೇಳೆ ಫೀಲ್ಡಿಂಗ್​ನಲ್ಲಿ ತಪ್ಪುಗಳನ್ನು ಮಾಡದಿದ್ದರೆ ಫಲಿತಾಂಶವು ನಮ್ಮ ಪರವಾಗುತ್ತಿತ್ತು.

ಇದನ್ನೂ ಓದಿ: IPL 2025: ಗೆಲುವಿನ ಬೆನ್ನಲ್ಲೇ RCB ನಾಯಕ ರಜತ್ ಪಾಟಿದಾರ್​ಗೆ ದಂಡ ವಿಧಿಸಿದ ಬಿಸಿಸಿಐ

ಪಂದ್ಯದ ಆರಂಭಕ್ಕೂ ಮುನ್ನವೇ ನಾವು ಫೀಲ್ಡಿಂಗ್​ ಬಗ್ಗೆ ಮಾತನಾಡಿದ್ದೆವು. ನರ್ವಸ್ ಆಗಿದ್ದರೆ, ನೀವು ಕ್ಯಾಚ್ ಅನ್ನು ಬಿಡುತ್ತೀರಿ ಎಂದು ಸಹ ಎಚ್ಚರಿಸಿದ್ದೆವು. ಅತ್ಯುತ್ತಮ ಫೀಲ್ಡಿಂಗ್​ನಿಂದ ಸಹ ಪಂದ್ಯದ ಗತಿ ಬದಲಿಸಬಹುದು. ಆದರೆ ನಮ್ಮ ಪಾಲಿಗೆ ಇಂದು ಕೆಟ್ಟ ದಿನವಾಗಿತ್ತು ಎಂದು ರುತುರಾಜ್ ಗಾಯಕ್ವಾಡ್ ಹೇಳಿದ್ದಾರೆ.  ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸತತ ನಾಲ್ಕನೇ ಸೋಲಿಗೆ ಫೀಲ್ಡಿಂಗ್ ಕಾರಣ ಎಂದು ಸಿಎಸ್​ಕೆ ನಾಯಕ ದೂರಿದ್ದಾರೆ.

Published On - 6:56 am, Wed, 9 April 25

Follow Us
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ