Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಕನ್ನಡಿಗನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್ ಕಿಂಗ್ಸ್

IPL 2025 Gujarat Titans vs Punjab Kings: ಇಂಡಿಯನ್ ಪ್ರೀಮಿಯರ್ ಲೀಗ್​ನ 5ನೇ ಪಂದ್ಯದಲ್ಲಿ ರೋಚಕ ಜಯ ಸಾಧಿಸಿ ಪಂಜಾಬ್ ಕಿಂಗ್ಸ್ ತಂಡ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 243 ರನ್​ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 232 ರನ್ ಕಲೆಹಾಕಿತು.

IPL 2025: ಕನ್ನಡಿಗನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್ ಕಿಂಗ್ಸ್
Punjab Kings
Follow us
ಝಾಹಿರ್ ಯೂಸುಫ್
|

Updated on:Mar 26, 2025 | 7:07 AM

IPL 2025: ಅಹದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 5ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ವಿರುದ್ಧ ಪಂಜಾಬ್ ಕಿಂಗ್ಸ್ (PBKS) ತಂಡ ಜಯಭೇರಿ ಬಾರಿಸಿದೆ. ಈ ಗೆಲುವಿನ ರೂವಾರಿ ಕನ್ನಡಿಗ ವೈಶಾಲ್ ವಿಜಯಕುಮಾರ್ ಎಂಬುದು ವಿಶೇಷ. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡಕ್ಕೆ ಆರಂಭಿಕ ಆಟಗಾರ ಪ್ರಿಯಾಂಶ್ ಆರ್ಯ (47) ಸ್ಪೋಟಕ ಆರಂಭ ಒದಗಿಸಿದ್ದರು.

ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಶ್ರೇಯಸ್ ಅಯ್ಯರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 42 ಎಸೆತಗಳನ್ನು ಎದುರಿಸಿದ ಅಯ್ಯರ್ 9 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 97 ರನ್ ಚಚ್ಚಿದರು.

ಇದನ್ನೂ ಓದಿ
Image
RCBಯಲ್ಲಿ ಬ್ರಿಟಿಷ್ ಪಡೆ... ಸೋತು ಸುಣ್ಣವಾಗಲಿದೆ ಎಂದ ಗಿಲ್​ಕ್ರಿಸ್ಟ್
Image
IPL 2025: ಐಪಿಎಲ್​ ಕಣದಲ್ಲಿದ್ದಾರೆ 13 ಕನ್ನಡಿಗರು
Image
IPL 2025: ಬ್ಯಾನ್ ಬ್ಯಾನ್ ಬ್ಯಾನ್... ಐಪಿಎಲ್ ಆಟಗಾರರಿಗೆ ಬ್ಯಾನ್ ಭೀತಿ
Image
IPL 2025: ಐಪಿಎಲ್​ನಲ್ಲಿ 10 ನಿಮಯಗಳು ಬದಲಾವಣೆ

ಹಾಗೆಯೇ ಅಂತಿಮ ಓವರ್​ಗಳ ವೇಳೆ ಅಬ್ಬರಿಸಿದ ಶಶಾಂಕ್ ಸಿಂಗ್ 16 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ ಅಜೇಯ 44 ರನ್ ಬಾರಿಸಿದರು. ಈ ಸ್ಪೋಟಕ ಇನಿಂಗ್ಸ್​ಗಳ ನೆರವಿನೊಂದಿಗೆ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 243 ರನ್​ ಕಲೆಹಾಕಿತು.

244 ರನ್​ಗಳ ಕಠಿಣ ಗುರಿ ಪಡೆದ ಗುಜರಾತ್ ಟೈಟಾನ್ಸ್ ತಂಡಕ್ಕೆ ಶುಭ್​ಮನ್ ಗಿಲ್ (33) ಹಾಗೂ ಸಾಯಿ ಸುದರ್ಶನ್ (74) ಭರ್ಜರಿ ಆರಂಭ ಒದಗಿಸಿದ್ದರು. ಇದಾದ ಬಳಿಕ ಜೋಸ್ ಬಟ್ಲರ್ ಹಾಗೂ ಶೆರ್ಫೆನ್ ರುದರ್​ಫೋರ್ಡ್​ ಬಿರುಸಿನ ಬ್ಯಾಟಿಂಗ್​ನೊಂದಿಗೆ ಪಂಜಾಬ್ ಕಿಂಗ್ಸ್​ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ 14 ಓವರ್​ಗಳಲ್ಲಿ ಗುಜರಾತ್ ಟೈಟಾನ್ಸ್ ತಂಡವು ಬರೋಬ್ಬರಿ 169 ರನ್​ ಕಲೆಹಾಕಿತು. ಅಲ್ಲದೆ ಉಳಿದ 6 ಓವರ್​ಗಳಲ್ಲಿ 75 ರನ್ ಬಾರಿಸುವ ನಿರೀಕ್ಷೆಯನ್ನು ಹುಟ್ಟುಹಾಕಿದ್ದರು.

ಕನ್ನಡಿಗನನ್ನು ಕಣಕ್ಕಿಳಿಸಿದ ಪಂಜಾಬ್ ಕಿಂಗ್ಸ್:

ಕೊನೆಯ 6 ಓವರ್​ಗಳಿರುವಾಗ ಪಂಜಾಬ್ ಕಿಂಗ್ಸ್ ತಂಡವು ಇಂಪ್ಯಾಕ್ಟ್ ಪ್ಲೇಯರ್​​ ಆಗಿ ಕರ್ನಾಟಕದ ವೇಗಿ ವೈಶಾಕ್ ವಿಜಯಕುಮಾರ್ ಅವರನ್ನು ಕಣಕ್ಕಿಳಿಸಿತು. ಅದರಂತೆ ಅದರಂತೆ 15ನೇ ಓವರ್​ ಎಸೆದ ವೈಶಾಕ್ ನೀಡಿದ್ದು ಕೇವಲ 5 ರನ್ ಮಾತ್ರ.

ಇದಾದ ಬಳಿಕ ಮತ್ತೆ 17ನೇ ಓವರ್​ ಎಸೆದ ವೈಶಾಕ್ ಕೇವಲ 5 ರನ್​ ಮಾತ್ರ ಬಿಟ್ಟು ಕೊಟ್ಟರು. ಅಂದರೆ ನಿರ್ಣಾಯಕ ಹಂತದಲ್ಲಿ 2 ಓವರ್​ಗಳಲ್ಲಿ ಕೇವಲ 10 ರನ್ ನೀಡುವ ಮೂಲಕ ಗುಜರಾತ್ ಟೈಟಾನ್ಸ್ ಪರ ವಾಲಿದ್ದ ಪಂದ್ಯವನ್ನು ಕನ್ನಡಿಗ ಮತ್ತೆ ಪಂಜಾಬ್ ಕಿಂಗ್ಸ್ ತೆಕ್ಕೆಗೆ ತೆಗೆದುಕೊಂಡರು. ಅದು ಸಹ ಅನುಭವಿ ಬ್ಯಾಟರ್​ಗಳ ಜೋಸ್ ಬಟ್ಲರ್ (54) ಹಾಗೂ ಶೆರ್ಫೇನ್ ರುದರ್​ಫೋರ್ಡ್ (46)​ ಅವರ ಅಬ್ಬರವನ್ನು ನಿಯಂತ್ರಿಸುವ ಮೂಲಕ.

ಇನ್ನು ಕೊನೆಯ ಎರಡು ಓವರ್​ಗಳಲ್ಲಿ ಗುಜರಾತ್ ಟೈಟಾನ್ಸ್ ತಂಡಕ್ಕೆ 45 ರನ್​ಗಳ ಅವಶ್ಯಕತೆಯಿತ್ತು. 19ನೇ ಓವರ್​ ಎಸೆದ ವೈಶಾಕ್ 18 ರನ್​ಗಳನ್ನು ನೀಡಿದರೂ ಪಂಜಾಬ್ ಕಿಂಗ್ಸ್ ತಂಡಕ್ಕೆ ಗೆಲ್ಲುವ ಅವಕಾಶವನ್ನು ಮಾಡಿಕೊಟ್ಟರು.

ಅದರಂತೆ 20ನೇ ಓವರ್​ನಲ್ಲಿ 27 ರನ್​ಗಳ ಗುರಿ ಪಡೆದ ಗುಜರಾತ್ ಟೈಟಾನ್ಸ್ ತಂಡವು ಅಂತಿಮವಾಗಿ 15 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಗುಜರಾತ್ ಪಡೆಯನ್ನು 20 ಓವರ್​ಗಳಲ್ಲಿ 232 ರನ್​ಗಳಿಗೆ ನಿಯಂತ್ರಿಸಿ ಪಂಜಾಬ್ ಕಿಂಗ್ಸ್ ತಂಡವು 11 ರನ್​ಗಳ ಜಯ ಸಾಧಿಸಿತು.

ನಿರ್ಣಾಯಕ ಹಂತದಲ್ಲಿ ಡೆತ್  ಮೂರು ಓವರ್​ಗಳನ್ನು ಎಸೆದ ವೈಶಾಕ್ ವಿಜಯಕುಮಾರ್ ಕೇವಲ 28 ರನ್​ಗಳನ್ನು ನೀಡುವ ಮೂಲಕ ಪಂಜಾಬ್ ಕಿಂಗ್ಸ್ ತಂಡ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿರುವುದು ವಿಶೇಷ.

ಪಂಜಾಬ್ ಪಡೆಯ ಗೆಲುವಿನ ಸಂಭ್ರಮ:

ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ 11: ಶುಭ್​ಮನ್ ಗಿಲ್ (ನಾಯಕ) , ಜೋಸ್ ಬಟ್ಲರ್ (ವಿಕೆಟ್ ಕೀಪರ್) , ಸಾಯಿ ಸುದರ್ಶನ್ , ಶಾರುಖ್ ಖಾನ್ , ರಾಹುಲ್ ತೆವಾಟಿಯಾ , ಸಾಯಿ ಕಿಶೋರ್ , ಅರ್ಷದ್ ಖಾನ್ , ರಶೀದ್ ಖಾನ್ , ಕಗಿಸೋ ರಬಾಡ , ಮೊಹಮ್ಮದ್ ಸಿರಾಜ್ , ಪ್ರಸಿದ್ಧ್ ಕೃಷ್ಣ.

ಇದನ್ನೂ ಓದಿ: David Warner: ಡೇವಿಡ್ ವಾರ್ನರ್​ಗೆ ಒಲಿದ ನಾಯಕತ್ವ..!

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ 11: ಪ್ರಭ್‌ಸಿಮ್ರಾನ್ ಸಿಂಗ್ (ವಿಕೆಟ್ ಕೀಫರ್) , ಪ್ರಿಯಾಂಶ್ ಆರ್ಯ , ಶ್ರೇಯಸ್ ಅಯ್ಯರ್ (ನಾಯಕ) , ಶಶಾಂಕ್ ಸಿಂಗ್ , ಮಾರ್ಕಸ್ ಸ್ಟೊಯಿನಿಸ್ , ಗ್ಲೆನ್ ಮ್ಯಾಕ್ಸ್‌ವೆಲ್ , ಸೂರ್ಯಾಂಶ್ ಶೆಡ್ಜ್ , ಅಝ್ಮತುಲ್ಲಾ ಒಮರ್ಜಾಯ್ , ಮಾರ್ಕೊ ಯಾನ್ಸೆನ್ , ಅರ್ಷ್‌ದೀಪ್ ಸಿಂಗ್ , ಯುಜ್ವೇಂದ್ರ ಚಹಲ್.

Published On - 7:05 am, Wed, 26 March 25

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ