AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025 Playoffs Schedule: ಐಪಿಎಲ್ ಪ್ಲೇಆಫ್ ವೇಳಾಪಟ್ಟಿ ಪ್ರಕಟ: ಫೈನಲ್ ಪಂದ್ಯಕ್ಕೆ ಸಜ್ಜಾಗುತ್ತಿದೆ ಈ ಮೈದಾನ

TATA IPL 2025 Final: ಐಪಿಎಲ್ 2025ರ ಲೀಗ್ ಹಂತದ 70 ಪಂದ್ಯಗಳ ನಂತರ ಪ್ಲೇಆಫ್‌ ನಡೆಯಲಿದೆ. ಮೊದಲ ಅರ್ಹತಾ ಪಂದ್ಯವು ಮೇ 29 ರಂದು ನ್ಯೂ ಚಂಡೀಗಢದ ಪಿಸಿಎ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯವು ಅಗ್ರ ಎರಡು ತಂಡಗಳ ನಡುವೆ ನಡೆಯಲಿದೆ. ಇದರ ನಂತರ, ಮೇ 30 ರಂದು ಎಲಿಮಿನೇಟರ್ ಪಂದ್ಯ ನಡೆಯಲಿದೆ.

IPL 2025 Playoffs Schedule: ಐಪಿಎಲ್ ಪ್ಲೇಆಫ್ ವೇಳಾಪಟ್ಟಿ ಪ್ರಕಟ: ಫೈನಲ್ ಪಂದ್ಯಕ್ಕೆ ಸಜ್ಜಾಗುತ್ತಿದೆ ಈ ಮೈದಾನ
Ipl 2025 Playoffs Schedule
Vinay Bhat
|

Updated on: May 20, 2025 | 7:13 PM

Share

ಬೆಂಗಳೂರು (ಮೇ. 20): ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇಂಡಿಯನ್ ಪ್ರೀಮಿಯರ್ ಲೀಗ್ 2025 ರ (Indian Premier League) ಪ್ಲೇಆಫ್‌ಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. 70 ಲೀಗ್ ಪಂದ್ಯಗಳ ನಂತರ, ಈ ಪಂದ್ಯವು ನ್ಯೂ ಚಂಡೀಗಢದ ಪಿಸಿಎ ಕ್ರೀಡಾಂಗಣದಲ್ಲಿ ನಡೆಯಲಿದೆ. ಇಲ್ಲಿ ಕ್ವಾಲಿಫೈಯರ್ 1 ಮತ್ತು ಎಲಿಮಿನೇಟರ್ ಪಂದ್ಯಗಳನ್ನು ಆಯೋಜಿಸಲಾಗಿದೆ. ಹಾಗೆಯೆ ಐಪಿಎಲ್ 2025 ಫೈನಲ್ ಪಂದ್ಯ ನಡೆಯುವ ಸ್ಥಳವನ್ನು ಘೋಷಿಸಲಾಗಿದೆ. ಅಂತಿಮ ಪ್ರಶಸ್ತಿ ಕಾದಾಟ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಇಲ್ಲಿಯೇ ಕ್ವಾಲಿಫೈಯರ್ 2 ಪಂದ್ಯವನ್ನು ಆಯೋಜಿಸಲಿದೆ.

ಮತ್ತೊಂದೆಡೆ ಕೆಟ್ಟ ಹವಾಮಾನದಿಂದಾಗಿ, ಆರ್‌ಸಿಬಿ ಮತ್ತು ಸನ್‌ರೈಸರ್ಸ್ ನಡುವಿನ ಪಂದ್ಯವನ್ನು ಲಕ್ನೋಗೆ ಸ್ಥಳಾಂತರಿಸಲಾಗಿದೆ. ಇಂದಿನಿಂದ ಉಳಿದ ಎಲ್ಲ ಪಂದ್ಯಗಳಿಗೆ ಒಂದು ಗಂಟೆ ಹೆಚ್ಚುವರಿ ಸಮಯ ನೀಡಲಾಗುವುದು ಎಂದುಕೂಡ ಬಿಸಿಸಿಐ ಹೇಳಿದೆ. ಲೀಗ್ ಹಂತದ 70 ಪಂದ್ಯಗಳ ನಂತರ ಪ್ಲೇಆಫ್‌ ನಡೆಯಲಿದೆ. ಮೊದಲ ಅರ್ಹತಾ ಪಂದ್ಯವು ಮೇ 29 ರಂದು ನ್ಯೂ ಚಂಡೀಗಢದ ಪಿಸಿಎ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯವು ಅಗ್ರ ಎರಡು ತಂಡಗಳ ನಡುವೆ ನಡೆಯಲಿದೆ. ಇದರ ನಂತರ, ಮೇ 30 ರಂದು ಎಲಿಮಿನೇಟರ್ ಪಂದ್ಯ ನಡೆಯಲಿದೆ.

ಇದನ್ನೂ ಓದಿ
Image
ಪಂತ್ ಮಾತ್ರವಲ್ಲ LSG ದೋಣಿಯನ್ನು ಮುಳುಗಿಸಿದ್ದು ಈ 5 ಆಟಗಾರರು
Image
IPLನಿಂದ ಲಕ್ನೋ ಔಟ್: ಪಂದ್ಯದ ಬಳಿಕ ವಿಚಿತ್ರ ಹೇಳಿಕೆ ನೀಡಿದ ರಿಷಭ್ ಪಂತ್
Image
ಐದನೇ ತಂಡವಾಗಿ ಲೀಗ್​ನಿಂದ ಹೊರಬಿದ್ದ ಲಕ್ನೋ
Image
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣವು ಎರಡನೇ ಕ್ವಾಲಿಫೈಯರ್ ಮತ್ತು ಅಂತಿಮ ಪಂದ್ಯವನ್ನು ಆಯೋಜಿಸಲಿದೆ. ಜೂನ್ 1 ರಂದು ಕ್ವಾಲಿಫೈಯರ್ 2 ನಡೆಯಲಿದೆ. ಈ ಪಂದ್ಯವು ಕ್ವಾಲಿಫೈಯರ್ 1 ರಲ್ಲಿ ಸೋತ ತಂಡ ಮತ್ತು ಎಲಿಮಿನೇಟರ್ ಗೆದ್ದ ತಂಡದ ನಡುವೆ ನಡೆಯಲಿದೆ. ಜೂನ್ 3 ರಂದು ಅಂತಿಮ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಐಪಿಎಲ್ 18 ನೇ ಸೀಸನ್‌ನ ವಿಜೇತರು ಯಾರು ಎಂಬುದು ನಿರ್ಧಾರ ಆಗಲಿದೆ.

LSG: ಪಂತ್ ಮಾತ್ರವಲ್ಲ ಲಕ್ನೋ ಸೂಪರ್‌ ಜೇಂಟ್ಸ್ ದೋಣಿಯನ್ನು ಮುಳುಗಿಸಿದ್ದು ಈ 5 ಆಟಗಾರರು

ಐಪಿಎಲ್ ಆಡಳಿತ ಮಂಡಳಿಯಿಂದ ದೊಡ್ಡ ನಿರ್ಧಾರ

ಈ ಹಿಂದೆ ಹೈದರಾಬಾದ್ ಮತ್ತು ಕೋಲ್ಕತ್ತಾ ಕ್ರೀಡಾಂಗಣದಲ್ಲಿ ಪ್ಲೇಆಫ್‌ ಪಂದ್ಯಗಳು ನಡೆಯಬೇಕಿತ್ತು. ಆದರೆ ಪಂದ್ಯಾವಳಿಯಲ್ಲಿ ಒಂದು ವಾರದ ವಿರಾಮದ ನಂತರ, ಸ್ಥಳವನ್ನು ಬದಲಾಯಿಸಲಾಗಿದೆ. ಹವಾಮಾನ ಮತ್ತು ಇತರ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ಐಪಿಎಲ್ ಆಡಳಿತ ಮಂಡಳಿ ಈ ದೊಡ್ಡ ನಿರ್ಧಾರ ತೆಗೆದುಕೊಂಡಿದೆ. ಮತ್ತೊಂದು ಬದಲಾವಣೆ ಕೂಡ ಮಾಡಲಾಗಿದೆ. ಆರ್‌ಸಿಬಿ ಮತ್ತು ಸನ್‌ರೈಸರ್ಸ್ ನಡುವೆ ನಡುವೆ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಪಂದ್ಯ ಲಕ್ನೋದಲ್ಲಿ ಆಯೋಜಿಸಲಾಗಿದೆ. ಬೆಂಗಳೂರಿನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಪಂದ್ಯವು ಈಗ ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಇನ್ನು ಪಂದ್ಯಗಳ ಸಮಯದಲ್ಲೂ ಬದಲಾವಣೆ ಮಾಡಲಾಗಿದೆ. ಲೀಗ್ ಹಂತದ ಉಳಿದ ಪಂದ್ಯಗಳಲ್ಲಿ ಒಂದು ಗಂಟೆ ಹೆಚ್ಚುವರಿ ಸಮಯ ನೀಡಲಾಗುವುದು. ಈ ನಿಯಮ ಮೇ 20 ರಿಂದ ಜಾರಿಗೆ ಬಂದಿದೆ. ಹೀಗಾಗಿ ಮುಂದಿನ ಪಂದ್ಯಗಳು ಇನ್ನಷ್ಟು ರೋಮಾಂಚನಕಾರಿಯಾಗಿರುತ್ತವೆ. ಹವಾಮಾನವನ್ನು ಗಮನದಲ್ಲಿಟ್ಟುಕೊಂಡು ಪ್ಲೇಆಫ್‌ಗಳಿಗೆ ಹೊಸ ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ. ಬಿಸಿಸಿಐ ಪಂದ್ಯಗಳನ್ನು ಯಾವುದೇ ಅಡೆತಡೆಯಿಲ್ಲದೆ ನಡೆಸಬೇಕೆಂದು ಈ ನಿರ್ಧಾರ ತೆಗೆದುಕೊಂಡಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!