AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ರಿಕಿ ಪಾಂಟಿಂಗ್ ಭಾರತೀಯ ಆಟಗಾರರನ್ನು ನಿರ್ಲಕ್ಷಿಸುತ್ತಿದ್ದಾರೆ..!

IPL 2025 Punjab Kings: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್​ 2025) ಈವರೆಗೆ 9 ಪಂದ್ಯಗಳನ್ನಾಡಿರುವ ಪಂಜಾಬ್ ಕಿಂಗ್ಸ್ ತಂಡವು 5 ಜಯದೊಂದಿಗೆ ಒಟ್ಟು 11 ಅಂಕಗಳನ್ನು ಕಲೆಹಾಕಿದೆ. ಈ ಅಂಕಗಳೊಂದಿಗೆ ಶ್ರೇಯಸ್ ಅಯ್ಯರ್ ಪಡೆ ಐಪಿಎಲ್ ಪಾಯಿಂಟ್ಸ್​ ಟೇಬಲ್​ನಲ್ಲಿ 4ನೇ ಸ್ಥಾನ ಅಲಂಕರಿಸಿದೆ.

IPL 2025: ರಿಕಿ ಪಾಂಟಿಂಗ್ ಭಾರತೀಯ ಆಟಗಾರರನ್ನು ನಿರ್ಲಕ್ಷಿಸುತ್ತಿದ್ದಾರೆ..!
Ricky Ponting
ಝಾಹಿರ್ ಯೂಸುಫ್
|

Updated on: Apr 27, 2025 | 1:28 PM

Share

IPL 2025: ಪಂಜಾಬ್ ಕಿಂಗ್ಸ್ (PBKS) ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್ (Ricky Ponting) ಭಾರತೀಯ ಆಟಗಾರರನ್ನು ನಿರ್ಲಕ್ಷಿಸುತ್ತಿದ್ದಾರೆ. ಇಂತಹದೊಂದು ಗಂಭೀರ ಆರೋಪ ಮಾಡಿರುವುದು ಟೀಮ್ ಇಂಡಿಯಾದ ಮಾಜಿ ಆಟಗಾರ ಮನೋಜ್ ತಿವಾರಿ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕೆಕೆಆರ್ ವಿರುದ್ಧದ ಪಂದ್ಯದ ವೇಳೆ ಇನ್ ಫಾರ್ಮ್​ ಆಟಗಾರರನ್ನು ನಿರ್ಲಕ್ಷಿಸಿ ಪಾಂಟಿಂಗ್ ವಿದೇಶಿ ಆಟಗಾರರನ್ನು ಬ್ಯಾಟಿಂಗ್​ಗೆ ಕಳುಹಿಸಿದ್ದರು. ಈ ಕಾರ್ಯತಂತ್ರಗಳ ಬಗ್ಗೆ ಮನೋಜ್ ತಿವಾರಿ ಪ್ರಶ್ನೆಗಳನ್ನು ಎತ್ತಿದ್ದಾರೆ.

ಮನೋಜ್ ತಿವಾರಿ ಹೇಳಿದ್ದೇನು?

ಈ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡವು ಟ್ರೋಫಿ ಎತ್ತಿ ಹಿಡಿಯುವ ಸಾಧ್ಯತೆಯಿಲ್ಲ. ಏಕೆಂದರೆ ಅವರ ಕಾರ್ಯತಂತ್ರವೇ ಆಗಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ವೇಳೆ ಇನ್​ ಫಾರ್ಮ್​ನಲ್ಲಿರುವ ಆಟಗಾರರ ಬದಲು, ಕಳಪೆ ಫಾರ್ಮ್​ನಲ್ಲಿರುವ ಬ್ಯಾಟರ್​ಗಳನ್ನು ಕಣಕ್ಕಿಳಿಸಿದ್ದಾರೆ.

ಇನ್-ಫಾರ್ಮ್ ಬ್ಯಾಟ್ಸ್‌ಮನ್‌ಗಳಾದ ನೆಹಾಲ್ ವಧೇರಾ ಮತ್ತು ಶಶಾಂಕ್ ಸಿಂಗ್ ಅವರನ್ನು ಬ್ಯಾಟಿಂಗ್​ಗೆ ಕಳುಹಿಸಲೇ ಇಲ್ಲ. ಬದಲಾಗಿ ತಮ್ಮ ವಿದೇಶಿ ಆಟಗಾರರ ಮೇಲೆ ನಂಬಿಕೆ ಇಟ್ಟಿದ್ದರು. ಇದರಿಂದ ಅವರು ಭಾರತೀಯ ಆಟಗಾರರನ್ನು ನಂಬುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಅವರು ಹೀಗೆಯೇ ಮುಂದುವರೆದರೆ, ಪಂಜಾಬ್ ಕಿಂಗ್ಸ್ ಟಾಪ್​-2 ನಲ್ಲಿ ಕಾಣಿಸಿಕೊಂಡರೂ  ಅವರು ಪ್ರಶಸ್ತಿಯನ್ನು ಗೆಲ್ಲಲು ಸಾಧ್ಯವಾಗುವುದಿಲ್ಲ ಎಂದು ಮನೋಜ್ ತಿವಾರಿ ಹೇಳಿದ್ದಾರೆ.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಮ್ಯಾಕ್ಸ್​ವೆಲ್​ಗೆ ಮತ್ತೆ ಮತ್ತೆ ಅವಕಾಶ:

ರಿಕಿ ಪಾಂಟಿಂಗ್ ಅವರ ಕಾರ್ಯತಂತ್ರವನ್ನು ಪ್ರಶ್ನಿಸಿರುವ ಮನೋಜ್ ತಿವಾರಿ, ಗ್ಲೆನ್ ಮ್ಯಾಕ್ಸ್​ವೆಲ್​​ಗೆ ಸತತ ಅವಕಾಶ ನೀಡುತ್ತಿರುವುದಕ್ಕೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಮ್ಯಾಕ್ಸ್‌ವೆಲ್ ನಿರಂತರ ವೈಫಲ್ಯ ಅನುಭವಿಸುತ್ತಿದ್ದರೂ ಅವರಿಗೆ ಚಾನ್ಸ್ ನೀಡಲಾಗುತ್ತಿದೆ. ಇದೇ ವೇಳೆ ಭಾರತೀಯ ಆಟಗಾರರನ್ನು ನಿರ್ಲಕ್ಷಿಸುತ್ತಿದ್ದಾರೆ.

ಪಾಂಟಿಂಗ್ ತನಗೆ ಬೇಕಾದ ಆಟಗಾರರೊಂದಿಗೆ ಕಾರ್ಯ ತಂತ್ರ ರೂಪಿಸಿದರೆ, ಅದಕ್ಕೆ ಪಂಜಾಬ್ ಕಿಂಗ್ಸ್ ತಂಡವು ಬೆಲೆ ತೆರಲಿದೆ. ಇದರಿಂದ ಟ್ರೋಫಿ ಗೆಲ್ಲುವ ಅವಕಾಶವೇ ಕೈ ತಪ್ಪುವ ಸಾಧ್ಯತೆಯಿದೆ ಮನೋಜ್ ತಿವಾರಿ ಎಚ್ಚರಿಸಿದ್ದಾರೆ.

ಇನ್ನು ಕೆಕೆಆರ್ ವಿರುದ್ಧದ ಈ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ 8 ಎಸೆತಗಳಲ್ಲಿ ಕೇವಲ 7 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಹಾಗೆಯೇ ಆ ಬಳಿಕ ಮಾರ್ಕೊ ಯಾನ್ಸೆನ್ ಅವರನ್ನು ಕಣಕ್ಕಿಳಿಸಲಾಗಿತ್ತು. ಇದಾದ ಬಳಿಕ ಬ್ಯಾಟ್ ಬೀಸಿದ್ದ ಜೋಶ್ ಇಂಗ್ಲಿಸ್. ಇದಾಗ್ಯೂ ಉತ್ತಮ ಫಾರ್ಮ್​ನಲ್ಲಿರುವ ನೆಹಾಲ್ ವಧೇರಾ ಹಾಗೂ ಶಶಾಂಕ್ ಸಿಂಗ್ ಅವರಿಗೆ ಬ್ಯಾಟಿಂಗ್ ಮಾಡಲು ಅವಕಾಶ ನೀಡಿರಲಿಲ್ಲ.

ಇದನ್ನೂ ಓದಿ: IPL 2025: ಅಣ್ಣಾ ಬಿಟ್ ಬಿಡಣ್ಣ… RCB ತಂಡದಲ್ಲಿ ಎಲ್ಲವೂ ಸರಿಯಿಲ್ವಾ?

ಇದನ್ನೇ ಪ್ರಸ್ತಾಪಿಸಿ ಮನೋಜ್ ತಿವಾರಿ ಪಂಜಾಬ್ ಕಿಂಗ್ಸ್ ತಂಡದ ಕೋಚ್ ರಿಕಿ ಪಾಂಟಿಂಗ್ ಭಾರತೀಯ ಆಟಗಾರರನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

Follow Us
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್