AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ರಿಕಿ ಪಾಂಟಿಂಗ್ ಭಾರತೀಯ ಆಟಗಾರರನ್ನು ನಿರ್ಲಕ್ಷಿಸುತ್ತಿದ್ದಾರೆ..!

IPL 2025 Punjab Kings: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್​ 2025) ಈವರೆಗೆ 9 ಪಂದ್ಯಗಳನ್ನಾಡಿರುವ ಪಂಜಾಬ್ ಕಿಂಗ್ಸ್ ತಂಡವು 5 ಜಯದೊಂದಿಗೆ ಒಟ್ಟು 11 ಅಂಕಗಳನ್ನು ಕಲೆಹಾಕಿದೆ. ಈ ಅಂಕಗಳೊಂದಿಗೆ ಶ್ರೇಯಸ್ ಅಯ್ಯರ್ ಪಡೆ ಐಪಿಎಲ್ ಪಾಯಿಂಟ್ಸ್​ ಟೇಬಲ್​ನಲ್ಲಿ 4ನೇ ಸ್ಥಾನ ಅಲಂಕರಿಸಿದೆ.

IPL 2025: ರಿಕಿ ಪಾಂಟಿಂಗ್ ಭಾರತೀಯ ಆಟಗಾರರನ್ನು ನಿರ್ಲಕ್ಷಿಸುತ್ತಿದ್ದಾರೆ..!
Ricky Ponting
ಝಾಹಿರ್ ಯೂಸುಫ್
|

Updated on: Apr 27, 2025 | 1:28 PM

Share

IPL 2025: ಪಂಜಾಬ್ ಕಿಂಗ್ಸ್ (PBKS) ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್ (Ricky Ponting) ಭಾರತೀಯ ಆಟಗಾರರನ್ನು ನಿರ್ಲಕ್ಷಿಸುತ್ತಿದ್ದಾರೆ. ಇಂತಹದೊಂದು ಗಂಭೀರ ಆರೋಪ ಮಾಡಿರುವುದು ಟೀಮ್ ಇಂಡಿಯಾದ ಮಾಜಿ ಆಟಗಾರ ಮನೋಜ್ ತಿವಾರಿ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕೆಕೆಆರ್ ವಿರುದ್ಧದ ಪಂದ್ಯದ ವೇಳೆ ಇನ್ ಫಾರ್ಮ್​ ಆಟಗಾರರನ್ನು ನಿರ್ಲಕ್ಷಿಸಿ ಪಾಂಟಿಂಗ್ ವಿದೇಶಿ ಆಟಗಾರರನ್ನು ಬ್ಯಾಟಿಂಗ್​ಗೆ ಕಳುಹಿಸಿದ್ದರು. ಈ ಕಾರ್ಯತಂತ್ರಗಳ ಬಗ್ಗೆ ಮನೋಜ್ ತಿವಾರಿ ಪ್ರಶ್ನೆಗಳನ್ನು ಎತ್ತಿದ್ದಾರೆ.

ಮನೋಜ್ ತಿವಾರಿ ಹೇಳಿದ್ದೇನು?

ಈ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡವು ಟ್ರೋಫಿ ಎತ್ತಿ ಹಿಡಿಯುವ ಸಾಧ್ಯತೆಯಿಲ್ಲ. ಏಕೆಂದರೆ ಅವರ ಕಾರ್ಯತಂತ್ರವೇ ಆಗಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ವೇಳೆ ಇನ್​ ಫಾರ್ಮ್​ನಲ್ಲಿರುವ ಆಟಗಾರರ ಬದಲು, ಕಳಪೆ ಫಾರ್ಮ್​ನಲ್ಲಿರುವ ಬ್ಯಾಟರ್​ಗಳನ್ನು ಕಣಕ್ಕಿಳಿಸಿದ್ದಾರೆ.

ಇನ್-ಫಾರ್ಮ್ ಬ್ಯಾಟ್ಸ್‌ಮನ್‌ಗಳಾದ ನೆಹಾಲ್ ವಧೇರಾ ಮತ್ತು ಶಶಾಂಕ್ ಸಿಂಗ್ ಅವರನ್ನು ಬ್ಯಾಟಿಂಗ್​ಗೆ ಕಳುಹಿಸಲೇ ಇಲ್ಲ. ಬದಲಾಗಿ ತಮ್ಮ ವಿದೇಶಿ ಆಟಗಾರರ ಮೇಲೆ ನಂಬಿಕೆ ಇಟ್ಟಿದ್ದರು. ಇದರಿಂದ ಅವರು ಭಾರತೀಯ ಆಟಗಾರರನ್ನು ನಂಬುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಅವರು ಹೀಗೆಯೇ ಮುಂದುವರೆದರೆ, ಪಂಜಾಬ್ ಕಿಂಗ್ಸ್ ಟಾಪ್​-2 ನಲ್ಲಿ ಕಾಣಿಸಿಕೊಂಡರೂ  ಅವರು ಪ್ರಶಸ್ತಿಯನ್ನು ಗೆಲ್ಲಲು ಸಾಧ್ಯವಾಗುವುದಿಲ್ಲ ಎಂದು ಮನೋಜ್ ತಿವಾರಿ ಹೇಳಿದ್ದಾರೆ.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಮ್ಯಾಕ್ಸ್​ವೆಲ್​ಗೆ ಮತ್ತೆ ಮತ್ತೆ ಅವಕಾಶ:

ರಿಕಿ ಪಾಂಟಿಂಗ್ ಅವರ ಕಾರ್ಯತಂತ್ರವನ್ನು ಪ್ರಶ್ನಿಸಿರುವ ಮನೋಜ್ ತಿವಾರಿ, ಗ್ಲೆನ್ ಮ್ಯಾಕ್ಸ್​ವೆಲ್​​ಗೆ ಸತತ ಅವಕಾಶ ನೀಡುತ್ತಿರುವುದಕ್ಕೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಮ್ಯಾಕ್ಸ್‌ವೆಲ್ ನಿರಂತರ ವೈಫಲ್ಯ ಅನುಭವಿಸುತ್ತಿದ್ದರೂ ಅವರಿಗೆ ಚಾನ್ಸ್ ನೀಡಲಾಗುತ್ತಿದೆ. ಇದೇ ವೇಳೆ ಭಾರತೀಯ ಆಟಗಾರರನ್ನು ನಿರ್ಲಕ್ಷಿಸುತ್ತಿದ್ದಾರೆ.

ಪಾಂಟಿಂಗ್ ತನಗೆ ಬೇಕಾದ ಆಟಗಾರರೊಂದಿಗೆ ಕಾರ್ಯ ತಂತ್ರ ರೂಪಿಸಿದರೆ, ಅದಕ್ಕೆ ಪಂಜಾಬ್ ಕಿಂಗ್ಸ್ ತಂಡವು ಬೆಲೆ ತೆರಲಿದೆ. ಇದರಿಂದ ಟ್ರೋಫಿ ಗೆಲ್ಲುವ ಅವಕಾಶವೇ ಕೈ ತಪ್ಪುವ ಸಾಧ್ಯತೆಯಿದೆ ಮನೋಜ್ ತಿವಾರಿ ಎಚ್ಚರಿಸಿದ್ದಾರೆ.

ಇನ್ನು ಕೆಕೆಆರ್ ವಿರುದ್ಧದ ಈ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ 8 ಎಸೆತಗಳಲ್ಲಿ ಕೇವಲ 7 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಹಾಗೆಯೇ ಆ ಬಳಿಕ ಮಾರ್ಕೊ ಯಾನ್ಸೆನ್ ಅವರನ್ನು ಕಣಕ್ಕಿಳಿಸಲಾಗಿತ್ತು. ಇದಾದ ಬಳಿಕ ಬ್ಯಾಟ್ ಬೀಸಿದ್ದ ಜೋಶ್ ಇಂಗ್ಲಿಸ್. ಇದಾಗ್ಯೂ ಉತ್ತಮ ಫಾರ್ಮ್​ನಲ್ಲಿರುವ ನೆಹಾಲ್ ವಧೇರಾ ಹಾಗೂ ಶಶಾಂಕ್ ಸಿಂಗ್ ಅವರಿಗೆ ಬ್ಯಾಟಿಂಗ್ ಮಾಡಲು ಅವಕಾಶ ನೀಡಿರಲಿಲ್ಲ.

ಇದನ್ನೂ ಓದಿ: IPL 2025: ಅಣ್ಣಾ ಬಿಟ್ ಬಿಡಣ್ಣ… RCB ತಂಡದಲ್ಲಿ ಎಲ್ಲವೂ ಸರಿಯಿಲ್ವಾ?

ಇದನ್ನೇ ಪ್ರಸ್ತಾಪಿಸಿ ಮನೋಜ್ ತಿವಾರಿ ಪಂಜಾಬ್ ಕಿಂಗ್ಸ್ ತಂಡದ ಕೋಚ್ ರಿಕಿ ಪಾಂಟಿಂಗ್ ಭಾರತೀಯ ಆಟಗಾರರನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು