AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025 Qualifier 1 : ರಜತ್ ಅಥವಾ ಜಿತೇಶ್; ಕ್ವಾಲಿಫೈಯರ್ 1 ಪಂದ್ಯದಲ್ಲಿ ಆರ್​ಸಿಬಿ ನಾಯಕ ಯಾರು?

IPL 2025 Qualifier 1: ಐಪಿಎಲ್ 2025 ರ ಕ್ವಾಲಿಫೈಯರ್ 1 ರಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಆರ್‌ಸಿಬಿ ತಂಡಗಳ ನಡುವಿನ ಪಂದ್ಯ ಮಹತ್ವದ್ದಾಗಿದೆ. ರಜತ್ ಪಾಟಿದಾರ್ ಅವರ ಗಾಯದಿಂದಾಗಿ, ಜಿತೇಶ್ ಶರ್ಮಾ ಕಳೆದ ಎರಡು ಪಂದ್ಯಗಳಲ್ಲಿ ಆರ್‌ಸಿಬಿ ತಂಡವನ್ನು ಮುನ್ನಡೆಸಿದ್ದಾರೆ. ಆದರೆ ಜಿತೇಶ್ ಅವರ ನಾಯಕತ್ವ ಪರಿಣಾಮಕಾರಿಯಾಗಿರಲಿಲ್ಲ. ಕ್ವಾಲಿಫೈಯರ್ 1 ರಲ್ಲಿ ರಜತ್ ಪಾಟಿದಾರ್ ಮತ್ತೆ ನಾಯಕತ್ವ ವಹಿಸಿಕೊಳ್ಳುವರೇ ಅಥವಾ ಜಿತೇಶ್ ಮುಂದುವರಿಯುವರೇ ಎಂಬುದು ಕುತೂಹಲಕರವಾಗಿದೆ. ಈ ಪಂದ್ಯ ಫೈನಲ್‌ಗೆ ಪ್ರವೇಶ ಪಡೆಯುವುದಕ್ಕೆ ನಿರ್ಣಾಯಕವಾಗಿದೆ.

IPL 2025 Qualifier 1 : ರಜತ್ ಅಥವಾ ಜಿತೇಶ್; ಕ್ವಾಲಿಫೈಯರ್ 1 ಪಂದ್ಯದಲ್ಲಿ ಆರ್​ಸಿಬಿ ನಾಯಕ ಯಾರು?
Rcb
ಪೃಥ್ವಿಶಂಕರ
|

Updated on:May 29, 2025 | 5:19 PM

Share

ಐಪಿಎಲ್ 2025 (IPL 2025) ರಲ್ಲಿ ಇಂದು ಪಂಜಾಬ್ ಕಿಂಗ್ಸ್ ಮತ್ತು ಆರ್‌ಸಿಬಿ (PBKS vs RCB) ನಡುವೆ ಕ್ವಾಲಿಫೈಯರ್ 1 ಪಂದ್ಯ ನಡೆಯಲಿದೆ. ಈ ಮಹತ್ವದ ಪಂದ್ಯಕ್ಕೆ ಎರಡೂ ತಂಡಗಳು ಸಿದ್ಧವಾಗಿವೆ. ಕಳೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸುವ ಮೂಲಕ ಆರ್‌ಸಿಬಿ ಅಗ್ರ-2 ರಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ರಜತ್ ಪಾಟಿದಾರ್ ಗಾಯಗೊಂಡಿದ್ದು, ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡುತ್ತಿರುವುದರಿಂದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜಿತೇಶ್ ಶರ್ಮಾ (Jitesh Sharma) ಕೊನೆಯ 2 ಪಂದ್ಯಗಳಿಗೆ ಆರ್‌ಸಿಬಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಈ ಪಂದ್ಯವನ್ನು ಗೆಲ್ಲುವ ಮೂಲಕ, ಎರಡೂ ತಂಡಗಳು ಇಂದು ಫೈನಲ್‌ಗೆ ತಮ್ಮ ಟಿಕೆಟ್ ಅನ್ನು ಖಚಿತಪಡಿಸುವ ಇರಾದೆಯಲ್ಲಿವೆ. ಇದರ ಜೊತೆಗೆ, ಸೋತ ತಂಡವು ಮತ್ತೆ ಕ್ವಾಲಿಫೈಯರ್ 2 ರಲ್ಲಿ ಆಡುವುದನ್ನು ಕಾಣಬಹುದು.

ಆದರೆ ಕ್ವಾಲಿಫೈಯರ್ 1 ರಲ್ಲಿಯೂ ಜಿತೇಶ್ ತಂಡದ ನಾಯಕತ್ವವಹಿಸಿಕೊಳ್ಳುತ್ತಾರಾ? ಅಥವಾ ಖಾಯಂ ನಾಯಕ ರಜತ್ ಪಾಟಿದರ್ ಮತ್ತೆ ನಾಯಕತ್ವದ ಚುಕ್ಕಾಣಿ ಹಿಡಿಯುತ್ತಾರಾ ಎಂಬುದು ಪ್ರಶ್ನೆಯಾಗಿದೆ. ಏಕೆಂದರೆ ಕಳೆದೆರಡು ಪಂದ್ಯಗಳಲ್ಲಿ ಜಿತೇಶ್ ಅವರ ನಾಯಕತ್ವ ಅಷ್ಟು ಪರಿಣಾಮಕಾರಿಯಾಗಿರಲಿಲ್ಲ. ತಂಡದ ಬೌಲರ್​ಗಳು ತುಂಬಾ ದುಬಾರಿಯಾಗಿದ್ದರು. ಹೀಗಾಗಿ ಕ್ವಾಲಿಫೈಯರ್ ಪಂದ್ಯಕ್ಕೂ ಮುನ್ನ ಆರ್‌ಸಿಬಿಯ ನಾಯಕ ಮತ್ತೊಮ್ಮೆ ಬದಲಾಗಬಹುದು.

ರಜತ್ ಪಾಟಿದಾರ್ ನಾಯಕ?

ವಾಸ್ತವವಾಗಿ, ಆರ್‌ಸಿಬಿಯ ನಿಯಮಿತ ನಾಯಕ ರಜತ್ ಪಾಟಿದಾರ್ ಬೆರಳಿನ ಗಾಯಕ್ಕೆ ತುತ್ತಾಗಿದ್ದಾರೆ. ಆದ್ದರಿಂದ ಪಂದ್ಯದ ಸಮಯದಲ್ಲಿ ಅವರು ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡುತ್ತಿದ್ದಾರೆ. ಹೀಗಾಗಿ ಅವರು ಕ್ಷೇತ್ರರಕ್ಷಣೆಗೆ ಬರುವುದಿಲ್ಲ. ಇದೇ ತಂಡಕ್ಕೆ ದೊಡ್ಡ ತಲೆನೋವಾಗಿರುವುದು. ಏಕೆಂದರೆ ಜಿತೇಶ್ ಶರ್ಮಾ ಕಳೆದೆರಡು ಪಂದ್ಯಗಳಲ್ಲಿ ಅಂತಹ ಪರಿಣಾಮಕಾರಿ ಕ್ಷೇತ್ರರಕ್ಷಣೆ ನಿಯೋಜಿಸುವಲ್ಲಿ ವಿಫಲರಾಗುತ್ತಿದ್ದಾರೆ. ಇದರಿಂದಲೇ ರನ್​ಗಳು ಸರಾಗವಾಗಿ ಹರಿಯುತ್ತಿವೆ. ಆದ್ದರಿಂದ ಈ ಪಂದ್ಯದಲ್ಲಿ ರಜತ್ ಪಾಟಿದಾರ್ ಸಂಪೂರ್ಣವಾಗಿ ಫಿಟ್‌ ಆಗಿ ಮತ್ತೊಮ್ಮೆ ಆರ್‌ಸಿಬಿಗೆ ನಾಯಕತ್ವ ವಹಿಸಿಕೊಳ್ಳಲಿ ಎಂಬುದು ಅಭಿಮಾನಿಗಳ ಆಶಯ.

PBKS vs RCB, Qualifier 1: ಪಂಜಾಬ್-ಆರ್​ಸಿಬಿ ಪಂದ್ಯದಲ್ಲಿ ಹವಾಮಾನ ಹೇಗಿರುತ್ತೆ?, ಪಿಚ್ ಯಾರಿಗೆ ಸಹಕಾರಿ?

ಜಿತೇಶ್ ಮೇಲೆ ಎಲ್ಲರ ಕಣ್ಣು

ಕಳೆದ ಪಂದ್ಯದಲ್ಲಿ, ಜಿತೇಶ್ ಶರ್ಮಾ ಎಲ್‌ಎಸ್‌ಜಿ ವಿರುದ್ಧ ಅದ್ಭುತ ಪ್ರದರ್ಶನ ನೀಡುವ ಮೂಲಕ ಆರ್‌ಸಿಬಿಗೆ ಗೆಲುವು ತಂದುಕೊಟ್ಟರು. ಈ ಪಂದ್ಯದಲ್ಲಿ, ಜಿತೇಶ್ ಕೇವಲ 33 ಎಸೆತಗಳಲ್ಲಿ 85 ರನ್ ಗಳಿಸಿದರು. ಇದು ಅವರ ಐಪಿಎಲ್ ವೃತ್ತಿಜೀವನದ ಮೊದಲ ಅರ್ಧಶತಕ ಮತ್ತು ಅತ್ಯುತ್ತಮ ಇನ್ನಿಂಗ್ಸ್ ಆಗಿತ್ತು. ಅಂತಹ ಪರಿಸ್ಥಿತಿಯಲ್ಲಿ, ಇಂದು ಜಿತೇಶ್‌ಗೆ ಮತ್ತೆ ಅವಕಾಶ ಸಿಕ್ಕರೆ, ಅಭಿಮಾನಿಗಳು ಅವರಿಂದ ಇದೇ ರೀತಿಯ ಸ್ಫೋಟಕ ಇನ್ನಿಂಗ್ಸ್ ನಿರೀಕ್ಷಿಸುತ್ತಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:16 pm, Thu, 29 May 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್