AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮುಂಬೈ-ಪಂಜಾಬ್ ನಡುವಿನ ಕ್ವಾಲಿಫೈಯರ್-2 ರದ್ದಾದರೆ ಯಾವ ತಂಡ ಫೈನಲ್‌ಗೇರುತ್ತದೆ?

IPL 2025 Qualifier 2: ಐಪಿಎಲ್ 2025ರ ಕ್ವಾಲಿಫೈಯರ್ 2 ಪಂದ್ಯ ಮಳೆಯಿಂದ ರದ್ದಾದರೆ ಫೈನಲ್‌ಗೆ ಯಾವ ತಂಡ ಅರ್ಹ ಎಂಬುದು ಈ ಲೇಖನದಲ್ಲಿ ವಿವರಿಸಲಾಗಿದೆ. ಲೀಗ್ ಹಂತದಲ್ಲಿ ಉತ್ತಮ ಶ್ರೇಯಾಂಕ ಹೊಂದಿದ್ದ ತಂಡ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಪಂಜಾಬ್ ಕಿಂಗ್ಸ್ ಲೀಗ್ ಹಂತದಲ್ಲಿ 19 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದು, ಮಳೆಯಿಂದ ಪಂದ್ಯ ರದ್ದಾದರೆ ಆ ತಂಡ ಫೈನಲ್‌ಗೆ ಅರ್ಹತೆ ಪಡೆಯುತ್ತದೆ.

IPL 2025: ಮುಂಬೈ-ಪಂಜಾಬ್ ನಡುವಿನ ಕ್ವಾಲಿಫೈಯರ್-2 ರದ್ದಾದರೆ ಯಾವ ತಂಡ ಫೈನಲ್‌ಗೇರುತ್ತದೆ?
Mi Vs Pbks
ಪೃಥ್ವಿಶಂಕರ
|

Updated on:May 31, 2025 | 8:24 PM

Share

ಐಪಿಎಲ್ 2025 (IPL 2025) ರ ಪ್ಲೇಆಫ್ ಹಂತ ಮುಗಿಯುತ್ತಾ ಬಂದಿದ್ದು, ಇದೀಗ ಎಲ್ಲರ ಕಣ್ಣುಗಳು ಜೂನ್ 1 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ವಾಲಿಫೈಯರ್ -2 ಪಂದ್ಯದ ಮೇಲೆ ಇವೆ. ಈ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ (MI vs PBKS) ತಂಡಗಳು ಸೆಣಸಲಿವೆ. ಈ ಪಂದ್ಯದಲ್ಲಿ ಗೆದ್ದ ತಂಡವು ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಈಗಾಗಲೇ ಕ್ವಾಲಿಫೈಯರ್-1 ರಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸುವ ಮೂಲಕ ಆರ್​ಸಿಬಿ ಫೈನಲ್‌ ತಲುಪಿದೆ. ಇದೀಗ ಕ್ವಾಲಿಫೈಯರ್ 2 ರಲ್ಲಿ ಗೆಲ್ಲುವ ತಂಡವು ಆರ್​ಸಿಬಿ ವಿರುದ್ಧ ಸೆಣಲಿದೆ. ಆದರೆ ಕ್ವಾಲಿಫೈಯರ್-2 ಪಂದ್ಯ ಮಳೆಯಿಂದ ಅಥವಾ ಇನ್ನಾವುದೇ ಕಾರಣದಿಂದಾಗಿ ರದ್ದಾದರೆ, ಫೈನಲ್‌ನಲ್ಲಿ ಯಾವ ತಂಡ ಆಡುತ್ತದೆ? ಎಂಬುದರ ಮೇಲೆ ಎಲ್ಲರ ಗಮನವಿದೆ. ಅದಕ್ಕೆಲ್ಲ ಉತ್ತರ ಇಲ್ಲಿದೆ.

ಪಂದ್ಯ ರದ್ದಾದರೆ ಯಾರಿಗೆ ಫೈನಲ್‌ ಟಿಕೆಟ್?

ಐಪಿಎಲ್ 2025 ರ ಪ್ಲೇಆಫ್ ಸ್ವರೂಪದ ಪ್ರಕಾರ, ಲೀಗ್ ಹಂತದ ಕೊನೆಯಲ್ಲಿ ಅಗ್ರ ನಾಲ್ಕು ತಂಡಗಳು ಪ್ಲೇಆಫ್ ತಲುಪುತ್ತವೆ. ಕ್ವಾಲಿಫೈಯರ್-1 ರಲ್ಲಿ ಅಗ್ರ ಎರಡು ತಂಡಗಳು (ಪಂಜಾಬ್ ಕಿಂಗ್ಸ್ ಮತ್ತು ಆರ್‌ಸಿಬಿ) ಮುಖಾಮುಖಿಯಾಗುತ್ತವೆ, ವಿಜೇತ ತಂಡವು ನೇರವಾಗಿ ಫೈನಲ್‌ಗೆ ಹೋಗುತ್ತದೆ. ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿರುವ ತಂಡಗಳು (ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್) ಎಲಿಮಿನೇಟರ್‌ನಲ್ಲಿ ಆಡುತ್ತವೆ. ಈ ಪಂದ್ಯದಲ್ಲಿ ಗೆದ್ದ ತಂಡವು ಕ್ವಾಲಿಫೈಯರ್ 2 ರಲ್ಲಿ ಕ್ವಾಲಿಫೈಯರ್ 1 ರ ಸೋತ ತಂಡದ ವಿರುದ್ಧ ಆಡುತ್ತದೆ. ಕ್ವಾಲಿಫೈಯರ್-2 ರ ಗೆದ್ದ ತಂಡವು ಫೈನಲ್‌ನಲ್ಲಿ ಕ್ವಾಲಿಫೈಯರ್-1 ರ ವಿಜೇತರಾದ ತಂಡವನ್ನು ಎದುರಿಸಲಿದೆ. ಈ ಸೀಸನ್‌ನಲ್ಲಿ ಪಂಜಾಬ್ ಕಿಂಗ್ಸ್ ಲೀಗ್ ಹಂತದಲ್ಲಿ 19 ಅಂಕಗಳೊಂದಿಗೆ ಮೊದಲ ಸ್ಥಾನ ಗಳಿಸಿದರೆ, ಆರ್‌ಸಿಬಿ 19 ಅಂಕಗಳೊಂದಿಗೆ ಎರಡನೇ ಸ್ಥಾನ ಗಳಿಸಿತು. ಅದೇ ಸಮಯದಲ್ಲಿ, ಮುಂಬೈ ಇಂಡಿಯನ್ಸ್ ತಂಡವು ಎಲಿಮಿನೇಟರ್‌ನಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಸೋಲಿಸುವ ಮೂಲಕ ಕ್ವಾಲಿಫೈಯರ್ -2 ಗೆ ಪ್ರವೇಶ ಪಡೆದಿದೆ.

ಐಪಿಎಲ್ ನಿಯಮಗಳ ಪ್ರಕಾರ, ಕ್ವಾಲಿಫೈಯರ್ -2 ಪಂದ್ಯವು ಮಳೆ ಅಥವಾ ಇನ್ನಾವುದೇ ಕಾರಣದಿಂದಾಗಿ ರದ್ದಾದರೆ, ಲೀಗ್ ಹಂತದಲ್ಲಿ ಉತ್ತಮ ಶ್ರೇಯಾಂಕ ಹೊಂದಿರುವ ತಂಡವು ಫೈನಲ್‌ಗೆ ಸ್ಥಾನ ಪಡೆಯುತ್ತದೆ. ಆ ಪ್ರಕಾರ ಲೀಗ್ ಹಂತದಲ್ಲಿ 19 ಅಂಕ ಮತ್ತು ಉತ್ತಮ ನೆಟ್​ ರನ್ ರೇಟ್​ನೊಂದಿಗೆ (+0.376) ಮೊದಲ ಸ್ಥಾನ ಪಡೆದಿದ್ದ ಪಂಜಾಬ್ ಕಿಂಗ್ಸ್ ಫೈನಲ್‌ಗೆ ಅರ್ಹತೆ ಪಡೆಯಲಿದೆ. ಇದರರ್ಥ ಪಂಜಾಬ್ ಕಿಂಗ್ಸ್ ಫೈನಲ್‌ನಲ್ಲಿ ಆರ್‌ಸಿಬಿ ವಿರುದ್ಧ ಆಡಲಿದೆ.

IPL 2025: ಗುಜರಾತ್ ಟೈಟನ್ಸ್ ಸೋಲುತ್ತಿದ್ದಂತೆ ಕಣ್ಣೀರಿಟ್ಟ ಆಶಿಶ್ ನೆಹ್ರಾ ಮಗ

ಕನಿಷ್ಠ 5 ಓವರ್​ಗಳ ಪಂದ್ಯ

ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆಯಲಿರುವ ಈ ಪಂದ್ಯ ಬಹಳ ಮಹತ್ವದ್ದಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಈ ಪಂದ್ಯದ ಫಲಿತಾಂಶವನ್ನು ಯಾವುದೇ ಬೆಲೆ ತೆತ್ತಾದರೂ ನಿರ್ಧರಿಸಲು ಪ್ರಯತ್ನಿಸಲಾಗುವುದು, ಆದಾಗ್ಯೂ, ಪಂದ್ಯದ ಫಲಿತಾಂಶವನ್ನು ನಿರ್ಧರಿಸಲು, ಕನಿಷ್ಠ ಎರಡೂ ತಂಡಗಳು ತಲಾ 5 ಓವರ್‌ಗಳನ್ನು ಆಡುವುದು ಅವಶ್ಯಕವಾಗಿರುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:11 pm, Sat, 31 May 25

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ