AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ಆಟಗಾರನ ದೊಡ್ಡ ಎಡವಟ್ಟು: ಸೋಲಿನಿಂದ ಜಸ್ಟ್ ಪಾರು

IPL 2025 RCB vs RR: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 42ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 205 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್​ಗಳಲ್ಲಿ 194 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ.

IPL 2025: RCB ಆಟಗಾರನ ದೊಡ್ಡ ಎಡವಟ್ಟು: ಸೋಲಿನಿಂದ ಜಸ್ಟ್ ಪಾರು
Rcb
ಝಾಹಿರ್ ಯೂಸುಫ್
|

Updated on: Apr 26, 2025 | 10:31 AM

Share

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 42ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (RR) ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಕೇವಲ 11 ರನ್​ಗಳ ಜಯ ಸಾಧಿಸಿದೆ. ಅದು ಕೂಡ ಕೊನೆಯ ಓವರ್​ ಮೂಲಕ ಎಂಬುದು ವಿಶೇಷ. ಅದರಲ್ಲೂ ಕೊನೆಯ 2 ಓವರ್​ಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಗೆಲ್ಲಲು ಕೇವಲ 18 ರನ್​ಗಳ ಅವಶ್ಯಕತೆಯಿತ್ತು. ಇದರ ನಡುವೆ ಆರ್​ಸಿಬಿ ಆಟಗಾರನ ಮಾಡಿದ ತಪ್ಪಿನಿಂದಾಗಿ ಈ ಗುರಿಯು 13 ಕ್ಕೆ ಬರುತ್ತಿತ್ತು ಎಂದರೆ ನಂಬಲೇಬೇಕು.

9ನೇ ಓವರ್​ನ ಕೊನೆಯ ಎಸೆತದಲ್ಲಿ ನಿತೀಶ್ ರಾಣಾ  ಕವರ್ಸ್​ನತ್ತ ಬಾರಿಸಿದ್ದರು. ಈ ವೇಳೆ ರಿಯಾನ್ ಪರಾಗ್ ಓಡಲು ಮುಂದಾದರೂ, ರಾಣಾ ರನ್ ನಿರಾಕರಿಸಿದರು. ಅತ್ತ  ಕಡೆಯಿಂದ ಫೀಲ್ಡರ್ ಚೆಂಡನ್ನು ವಿಕೆಟ್ ಕೀಪರ್​ನತ್ತ ಎಸೆದಿದ್ದಾರೆ. ಆದರೆ ಚೆಂಡು ಹಿಡಿಯುವಲ್ಲಿ ಜಿತೇಶ್ ಶರ್ಮಾ ವಿಫಲರಾದರು. ಈ ವೇಳೆ ವಿಕೆಟ್ ಕೀಪರ್ ಹಿಂದೆ ಇದ್ದ ಸುಯಶ್ ಸರ್ಮಾ ತನ್ನ ಕ್ಯಾಪ್​ನಿಂದ ಚೆಂಡನ್ನು ಹಿಡಿದಿದ್ದಾರೆ.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

10ನೇ ಓವರ್​ ಆರಂಭಕ್ಕೂ ಮುನ್ನ ಅಂಪೈರ್ ಫೀಲ್ಡರ್ ಕ್ಯಾಪ್​ನಲ್ಲಿ ಚೆಂಡನ್ನು ಹಿಡಿದಿರುವುದನ್ನು ಮರು ಪರಿಶೀಲಿಸಿದ್ದಾರೆ. ಈ ವಿಡಿಯೋ ಪರಿಶೀಲನೆ ವೇಳೆ ನಾನ್ ಸ್ಟ್ರೈಕ್​ನಲ್ಲಿದ್ದ ಅಂಪೈರ್ ಓವರ್​ ಮುಗಿದಿರುವುದನ್ನು ಘೋಷಿಸಿರುವುದು ಕಂಡು ಬಂದಿದೆ. ಇಲ್ಲದಿದ್ದರೆ ಆರ್​ಸಿಬಿ ತಂಡಕ್ಕೆ 5 ರನ್​ಗಳ ಪೆನಾಲ್ಟಿ ವಿಧಿಸಲಾಗುತ್ತಿತ್ತು.

ಸುಯಶ್ ಶರ್ಮಾ ಮಾಡಿದ ತಪ್ಪಿನ ಬಗ್ಗೆ ಕಾಮೆಂಟೇಟರ್​ಗಳ ಚರ್ಚೆ:

ಐಪಿಎಲ್ ನಿಯಮದ ಪ್ರಕಾರ, ಒಬ್ಬ ಫೀಲ್ಡರ್ ತನ್ನ ದೇಹದ ಯಾವುದೇ ಭಾಗದಿಂದ ಚೆಂಡನ್ನು ಫೀಲ್ಡಿಂಗ್ ಮಾಡಬಹುದು. ಆದಾಗ್ಯೂ, ಚೆಂಡು ಆಟದಲ್ಲಿರುವಾಗ, ಅದನ್ನು ಬೇರೆ ವಸ್ತುಗಳಿಂದ ತಡೆದರೆ ಅಥವಾ ಫೀಲ್ಡಿಂಗ್ ಮಾಡಿದ್ದರೆ ಅದನ್ನು ಕಾನೂನುಬಾಹಿರ ಫೀಲ್ಡಿಂಗ್ ಪರಿಗಣಿಸಲಾಗುತ್ತದೆ.

ಇಲ್ಲಿ ಸುಯಶ್ ಶರ್ಮಾ ಕ್ಯಾಪ್​ನಲ್ಲಿ ಚೆಂಡನ್ನು ತಡೆದಿರುವುದು ಕಾನೂನುಬಾಹಿರವಾಗಿತ್ತು. ಹೀಗಾಗಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 5 ರನ್​ಗಳನ್ನು ನೀಡಬೇಕಿತ್ತು. ಆದರೆ ಸುಯಶ್ ಚೆಂಡನ್ನು ತಡೆಯುವ ಮುನ್ನವೇ ಅಂಪೈರ್ ಓವರ್​ ಮುಗಿದಿದೆ ಎಂದು ಸೂಚನೆ ನೀಡಿದ್ದರು. ಹೀಗಾಗಿ ಚೆಂಡು ಡೆಡ್ ಆಗಿದೆ ಎಂದು ಪರಿಗಣಿಸಲಾಗಿದೆ.

ಒಂದು ವೇಳೆ ಅಂಪೈರ್ ಓವರ್ ಮುಗಿದಿದೆ ಎನ್ನುವ ಮೊದಲೇ, ಸುಯಶ್ ಶರ್ಮಾ ಕ್ಯಾಪ್​ಗೆ ಚೆಂಡು ತಾಗಿದ್ದರೆ 5 ರನ್​ಗಳ ಪೆನಾಲ್ಟಿ ವಿಧಿಸಲಾಗುತ್ತಿತ್ತು. ಈ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಹೆಚ್ಚುವರಿ 5 ರನ್​ಗಳು ಲಭಿಸುತ್ತಿತ್ತು. ಆದರೆ ಚೆಂಡನ್ನು ಗಮನಿಸದೇ ಅಂಪೈರ್ ಓವರ್ ಮುಕ್ತಾಯ ಎಂದಿರುವುದು ಆರ್​ಸಿಬಿ ಪಾಲಿಗೆ ವರವಾಗಿ ಪರಿಣಮಿಸಿತು.

ಇದನ್ನೂ ಓದಿ: IPL 2025: ಅಣ್ಣಾ ಬಿಟ್ ಬಿಡಣ್ಣ… RCB ತಂಡದಲ್ಲಿ ಎಲ್ಲವೂ ಸರಿಯಿಲ್ವಾ?

ಒಂದು ವೇಳೆ ಈ 5 ರನ್ ಲಭಿಸಿದ್ದರೆ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಕೊನೆಯ 2 ಓವರ್​ಗಳಲ್ಲಿ ಗೆಲ್ಲಲು ಕೇವಲ 13 ರನ್​ಗಳ ಅವಶ್ಯಕತೆ ಮಾತ್ರ ಇರುತ್ತಿತ್ತು. ಈ ಮೂಲಕ ಆರ್​ಆರ್​ ತಂಡಕ್ಕೆ ಸುಲಭವಾಗಿ ಗೆಲ್ಲುವ ಅವಕಾಶವಿರುತ್ತಿತ್ತು. ಆದರೆ ಅದೃಷ್ಟ ಆರ್​ಸಿಬಿ ಪರವಿದ್ದ ಕಾರಣ ಅಂತಿಮವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 11 ರನ್​ಗಳ ರೋಚಕ ಜಯ ಸಾಧಿಸಿದೆ.

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ