Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ಗ್ರೀನ್ ಜೆರ್ಸಿ ಪಂದ್ಯಕ್ಕೆ ಡೇಟ್ ಫಿಕ್ಸ್

IPL 2025 RCB vs RR: 2011 ರಿಂದ ಐಪಿಎಲ್​ನಲ್ಲಿ ಗೋ ಗ್ರೀನ್ ಅಭಿಯಾನ ಅರಂಭಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ರತಿ ಸೀಸನ್​ನ ಒಂದು ಪಂದ್ಯದಲ್ಲಿ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯುತ್ತಾ ಬಂದಿದೆ. ಅದರಂತೆ ಈ ಬಾರಿ ಆರ್​ಸಿಬಿ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ.

IPL 2025: RCB ಗ್ರೀನ್ ಜೆರ್ಸಿ ಪಂದ್ಯಕ್ಕೆ ಡೇಟ್ ಫಿಕ್ಸ್
Rcb
Follow us
ಝಾಹಿರ್ ಯೂಸುಫ್
|

Updated on:Apr 12, 2025 | 10:31 AM

IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗ್ರೀನ್ ಜೆರ್ಸಿ ಪಂದ್ಯಕ್ಕೆ ದಿನಾಂಕ ನಿಗದಿಯಾಗಿದೆ. ಅದರಂತೆ ಏಪ್ರಿಲ್ 13 ರಂದು ನಡೆಯಲಿರುವ ಪಂದ್ಯದಲ್ಲಿ ಆರ್​ಸಿಬಿ ತಂಡ ಗ್ರೀನ್ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದೆ. ಜೈಪುರ್​ನ ಸವಾಯಿ ಮಾನ್​​ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ.

ಗ್ರೀನ್ ಜೆರ್ಸಿ ಯಾಕೆ?

2011 ರಿಂದ ಐಪಿಎಲ್​ನಲ್ಲಿ ಗೋ ಗ್ರೀನ್ ಅಭಿಯಾನ ಅರಂಭಿಸಿರುವ ಆರ್​ಸಿಬಿ ಪ್ರತಿ ಸೀಸನ್​ನ ಒಂದು ಪಂದ್ಯದಲ್ಲಿ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯುತ್ತಾ ಬಂದಿದೆ. ಇದರ ಮೂಲ ಉದ್ದೇಶ ಪರಿಸರದ ಬಗ್ಗೆ ಕಾಳಜಿ ಮೂಡಿಸುವುದು. ಅದರಲ್ಲೂ ಮರಗಳನ್ನು ಉಳಿಸಿ-ಬೆಳೆಸಿ ಎಂಬ ಸಂದೇಶ ಸಾರಲು ಆರ್​ಸಿಬಿ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿಯುತ್ತಿದೆ.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಇದಾಗ್ಯೂ 2021 ರ ಐಪಿಎಲ್​ ವೇಳೆ ಆರ್​ಸಿಬಿ ಗ್ರೀನ್ ಜೆರ್ಸಿ ಬದಲಿಗೆ ಬ್ಲೂ ಜೆರ್ಸಿಯಲ್ಲಿ ಕಣಕ್ಕಿಳಿದಿತ್ತು ಎಂಬುದು ವಿಶೇಷ. ಅಂದು ಕೊರೋನಾ ವಾರಿಯರ್ಸ್​ಗೆ ಗೌರವ ಸೂಚಿಸುವ ಸಲುವಾಗಿ ಆರ್​ಸಿಬಿ ಪಿಪಿಐ ಕಿಟ್​ ಬಣ್ಣದ ಜೆರ್ಸಿಯಲ್ಲಿ ಕೆಕೆಆರ್ ವಿರುದ್ಧ ಪಂದ್ಯವಾಡಿತ್ತು.

ಇದೀಗ ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೋ ಗ್ರೀನ್ ಅಭಿಯಾನದಡಿಯಲ್ಲಿ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಅದು ಸಹ ರಾಜಸ್ಥಾನ್ ರಾಯಲ್ ವಿರುದ್ಧ, ಪಿಂಕ್ ಸಿಟಿ ಜೈಪುರ್​ನಲ್ಲಿ ಎಂಬುದು ವಿಶೇಷ.

RCB ಗೇಮ್ ಫರ್ ಗ್ರೀನ್:

ಉಭಯ ತಂಡಗಳು ಹೀಗಿವೆ:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ , ರಜತ್ ಪಾಟಿದಾರ್ (ನಾಯಕ) , ಸ್ವಸ್ತಿಕ್ ಚಿಕಾರಾ , ದೇವದತ್ ಪಡಿಕ್ಕಲ್ , ಜಿತೇಶ್ ಶರ್ಮಾ , ಫಿಲ್ ಸಾಲ್ಟ್ , ಮನೋಜ್ ಭಾಂಡಗೆ , ಟಿಮ್ ಡೇವಿಡ್ , ಕೃನಾಲ್ ಪಾಂಡ್ಯ , ಲಿಯಾಮ್ ಲಿವಿಂಗ್​ಸ್ಟೋನ್ , ರೊಮಾರಿಯೋ ಶೆಫರ್ಡ್ , ಜೇಕಬ್ ಬೆಥೆಲ್ , ಸ್ವಪ್ನಿಲ್ ಸಿಂಗ್ , ಭುವನೇಶ್ವರ್ ಕುಮಾರ್, ಲುಂಗಿ ಎನ್ಗಿಡಿ , ಯಶ್ ದಯಾಳ್ , ರಾಸಿಖ್ ದಾರ್ ಸಲಾಂ , ಸುಯಶ್ ಶರ್ಮಾ , ಮೋಹಿತ್ ರಾಠಿ , ಅಭಿನಂದನ್ ಸಿಂಗ್.

ಇದನ್ನೂ ಓದಿ: IPL 2025: ಮುಂಬೈ ಇಂಡಿಯನ್ಸ್ ಆಟಗಾರನ ಬ್ಯಾನ್ ಮಾಡಿದ ಪಾಕಿಸ್ತಾನ್

ರಾಜಸ್ಥಾನ್ ರಾಯಲ್ಸ್ ತಂಡ: ಯಶಸ್ವಿ ಜೈಸ್ವಾಲ್ , ಶಿಮ್ರೋನ್ ಹೆಟ್ಮೆಯರ್ , ಶುಭಂ ದುಬೆ , ವೈಭವ್ ಸೂರ್ಯವಂಶಿ , ಸಂಜು ಸ್ಯಾಮ್ಸನ್ (ನಾಯಕ) , ಧ್ರುವ್ ಜುರೆಲ್ , ಕುನಾಲ್ ಸಿಂಗ್ ರಾಥೋಡ್ , ರಿಯಾನ್ ಪರಾಗ್ , ಯುಧ್ವಿರ್ ಸಿಂಗ್ ಚರಕ್ , ನಿತೀಶ್ ರಾಣಾ , ಸಂದೀಪ್ ಶರ್ಮಾ , ತುಷಾರ್ ದೇಶಪಾಂಡೆ ,  ಆಕಾಶ್ ಮಧ್ವಾಳ್, ವನಿಂದು ಹಸರಂಗ , ಮಹೇಶ್ ತೀಕ್ಷಣ , ಫಝಲ್ಹಕ್ ಫಾರೂಕಿ , ಅಶೋಕ್ ಶರ್ಮಾ , ಜೋಫ್ರಾ ಆರ್ಚರ್.

Published On - 10:26 am, Sat, 12 April 25

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ