AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡಕ್ಕೆ ಮೇಜರ್ ಸರ್ಜರಿ: ಕೆರಿಬಿಯನ್​ ದೈತ್ಯನಿಗೆ ಅವಕಾಶ ಸಾಧ್ಯತೆ

IPL 2025 PBKS vs RCB: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 37ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಚಂಡೀಗಢ್​ನ ಮುಲ್ಲನ್​ಪುರ್​ನ ಎಂವೈಎಸ್​ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಆರ್​ಸಿಬಿ ತಂಡ ದ್ವಿತೀಯಾರ್ಧವನ್ನು ಆರಂಭಿಸಲಿದೆ.

IPL 2025: RCB ತಂಡಕ್ಕೆ ಮೇಜರ್ ಸರ್ಜರಿ: ಕೆರಿಬಿಯನ್​ ದೈತ್ಯನಿಗೆ ಅವಕಾಶ ಸಾಧ್ಯತೆ
Rcb Team
Follow us
ಝಾಹಿರ್ ಯೂಸುಫ್
|

Updated on: Apr 19, 2025 | 1:55 PM

IPL 2025: ಐಪಿಎಲ್​ ಸೀಸನ್-18ರ ಮೊದಲಾರ್ಧ ಮುಗಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇದೀಗ ದ್ವಿತೀಯಾರ್ಧಕ್ಕಾಗಿ ಸಜ್ಜಾಗುತ್ತಿದೆ. ಏಪ್ರಿಲ್ 20 ರಂದು ಚಂಡೀಗಢ್​ನಲ್ಲಿ ನಡೆಯಲಿರುವ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ಮೂಲಕ ಆರ್​ಸಿಬಿ ತನ್ನ ದ್ವಿತೀಯ ಸುತ್ತನ್ನು ಆರಂಭಿಸಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಒಂದು ಮಹತ್ವದ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.

ಏಕೆಂದರೆ ಕಳೆದ 7 ಪಂದ್ಯಗಳಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿರುವ ಲಿಯಾಮ್ ಲಿವಿಂಗ್​ಸ್ಟೋನ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಅಲ್ಲದೆ ಕಳೆದ 6 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು ಕಲೆಹಾಕಿರುವುದು ಕೇವಲ 87 ರನ್​ಗಳು ಮಾತ್ರ. ಹೀಗಾಗಿ ಪಂಜಾಬ್ ಕಿಂಗ್ಸ್​ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ವೆಸ್ಟ್ ಇಂಡೀಸ್ ದೈತ್ಯ ರೊಮೊರಿಯೊ ಶೆಫರ್ಡ್​ಗೆ ಚಾನ್ಸ್ ನೀಡಬಹುದು.

ಅದರಲ್ಲೂ ಮುಲ್ಲನ್​ಪುರ್​ನ ಪಿಚ್​ ಬ್ಯಾಟರ್​ಗಳಿಗೆ ಸಹಕಾರಿ. ಹೀಗಾಗಿ ಶೆರ್ಫಡ್​ ಅವರನ್ನು ಕಣಕ್ಕಿಳಿಸಿದರೆ ಬಿಗ್ ಹಿಟ್ಟರ್ ಆಯ್ಕೆಯೊಂದಿಗೆ ಆರ್​ಸಿಬಿ ಹೆಚ್ಚುವರಿ ವೇಗಿಯ ನೆರವು ಪಡೆದುಕೊಳ್ಳಬಹುದು. ಹೀಗಾಗಿ ಲಿವಿಂಗ್​ಸ್ಟೋನ್ ಬದಲಿಗೆ ರೊಮೊರಿಯೊಗೆ ಚಾನ್ಸ್​ ನೀಡುವ ಸಾಧ್ಯತೆಯಿದೆ.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಇನ್ನು ಈ ಪಂದ್ಯದಲ್ಲೂ ಆರ್​ಸಿಬಿ ತಂಡದ ಆರಂಭಿಕರಾಗಿ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಮುಂದುವರೆಯಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ದೇವದತ್ ಪಡಿಕ್ಕಲ್ ಕಣಕ್ಕಿಳಿಯಲಿದ್ದು, ನಾಲ್ಕನೇ ಕ್ರಮಾಂಕದಲ್ಲಿ ರಜತ್ ಪಾಟಿದಾರ್ ಬ್ಯಾಟ್ ಬೀಸಲಿದ್ದಾರೆ.

ಐದನೇ ಕ್ರಮಾಂಕದಲ್ಲಿ ಲಿಯಾಮ್ ಲಿವಿಂಗ್​ಸ್ಟೋನ್ ಬದಲಿಗೆ ರೊಮೊರಿಯೊ ಶೆಫರ್ಡ್​ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ. ಆರನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾಗೆ ಕಣಕ್ಕಿಳಿಯಲಿದ್ದಾರೆ. ಏಳು ಮತ್ತು ಎಂಟನೇ ಕ್ರಮಾಂಕಗಳಲ್ಲಿ ಟಿಮ್ ಡೇವಿಡ್ ಹಾಗೂ ಕೃನಾಲ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ.

ಇನ್ನು ಬೌಲರ್​ಗಳಾಗಿ ಜೋಶ್ ಹ್ಯಾಝಲ್​ವುಡ್, ಯಶ್ ದಯಾಳ್ ಹಾಗೂ ಭುವನೇಶ್ವರ್ ಕುಮಾರ್ ಕಣಕ್ಕಿಳಿಯಲಿದ್ದಾರೆ. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

1. ಫಿಲ್ ಸಾಲ್ಟ್ (ಬ್ಯಾಟರ್) 2. ವಿರಾಟ್ ಕೊಹ್ಲಿ (ಬ್ಯಾಟರ್) 3. ದೇವದತ್ ಪಡಿಕ್ಕಲ್ (ಬ್ಯಾಟರ್) 4. ರಜತ್ ಪಾಟಿದಾರ್ (ನಾಯಕ, ಬ್ಯಾಟರ್) 5. ರೊಮಾರಿಯೊ ಶೆಫರ್ಡ್​ 6. ಜಿತೇಶ್ ಶರ್ಮಾ (ಬ್ಯಾಟರ್) 7. ಟಿಮ್ ಡೇವಿಡ್ (ಆಲ್-ರೌಂಡರ್) 8. ಕೃನಾಲ್ ಪಾಂಡ್ಯ (ಆಲ್-ರೌಂಡರ್) 9. ಭುವನೇಶ್ವರ್ ಕುಮಾರ್ (ಬೌಲರ್) 10. ಜೋಶ್ ಹ್ಯಾಝಲ್‌ವುಡ್ (ಬೌಲರ್) 11. ಯಶ್ ದಯಾಳ್ (ಬೌಲರ್)

ಇದನ್ನೂ ಓದಿ: Tim David: ಟಿಮ್ ಡೇವಿಡ್ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಝಲ್‌ವುಡ್, ಯಶ್ ದಯಾಳ್, ಸುಯಶ್ ಶರ್ಮಾ, ಸ್ವಪ್ನಿಲ್ ಸಿಂಗ್, ರಾಸಿಖ್ ದರ್ ಸಲಾಮ್, ಜೇಕಬ್ ಬೆಥೆಲ್, ರೊಮಾರಿಯೊ ಶೆಫರ್ಡ್, ಲುಂಗಿ ಎನ್‌ಗಿಡಿ, ನುವಾನ್ ತುಷಾರ, ಮೋಹಿತ್ ರಾಠಿ, ಸ್ವಸ್ತಿಕ್ ಚಿಕಾರ, ಅಭಿನಂದನ್ ಸಿಂಗ್.

ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್