AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ವಿಂಡೀಸ್ ದೈತ್ಯನನ್ನು ಕಣಕ್ಕಿಳಿಸಲಿದೆಯಾ RCB

IPL 2025 RCB vs DC: ಈ ಬಾರಿಯ ಐಪಿಎಲ್​ನಲ್ಲಿ ಈವರೆಗೆ 4 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೂರು ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇದೀಗ ಐದನೇ ಪಂದ್ಯದಲ್ಲಿ ಆರ್​ಸಿಬಿ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದ್ದು, ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದರೆ ರಾಯಲ್ ಪಡೆಯು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲಿದೆ.

IPL 2025: ವಿಂಡೀಸ್ ದೈತ್ಯನನ್ನು ಕಣಕ್ಕಿಳಿಸಲಿದೆಯಾ RCB
RCB
Follow us
ಝಾಹಿರ್ ಯೂಸುಫ್
|

Updated on:Apr 10, 2025 | 12:14 PM

IPL 2025: ಐಪಿಎಲ್​ನ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಕಣಕ್ಕಿಳಿಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ. ಏಕೆಂದರೆ ಕಳೆದ 4 ಪಂದ್ಯಗಳಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿರುವ ಲಿಯಾಮ್ ಲಿವಿಂಗ್​ಸ್ಟೋನ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ.

ಹೀಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವೆಸ್ಟ್ ಇಂಡೀಸ್ ದೈತ್ಯ ರೊಮೊರಿಯೊ ಶೆಫರ್ಡ್​ಗೆ ಚಾನ್ಸ್ ನೀಡಬಹುದು. ಅದರಲ್ಲೂ ಬೆಂಗಳೂರು ಪಿಚ್​ ಬ್ಯಾಟರ್​ಗಳಿಗೆ ಸಹಕಾರಿ. ಹೀಗಾಗಿ ಶೆರ್ಫಡ್​ ಅವರನ್ನು ಕಣಕ್ಕಿಳಿಸಿದರೆ ಆರ್​ಸಿಬಿ ಹೆಚ್ಚುವರಿ ವೇಗಿಯ ನೆರವು ಪಡೆದುಕೊಳ್ಳಬಹುದು. ಹೀಗಾಗಿ ಲಿವಿಂಗ್​ಸ್ಟೋನ್ ಬದಲಿಗೆ ರೊಮೊರಿಯೊಗೆ ಚಾನ್ಸ್​ ನೀಡುವ ಸಾಧ್ಯತೆಯಿದೆ.

ಇನ್ನು ಈ ಪಂದ್ಯದಲ್ಲೂ ಆರ್​ಸಿಬಿ ತಂಡದ ಆರಂಭಿಕರಾಗಿ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಮುಂದುವರೆಯಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ದೇವದತ್ ಪಡಿಕ್ಕಲ್ ಕಣಕ್ಕಿಳಿಯಲಿದ್ದು, ನಾಲ್ಕನೇ ಕ್ರಮಾಂಕದಲ್ಲಿ ರಜತ್ ಪಾಟಿದಾರ್ ಬ್ಯಾಟ್ ಬೀಸಲಿದ್ದಾರೆ.

ಇದನ್ನೂ ಓದಿ
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
PSL​ನಲ್ಲಿ ಕಣಕ್ಕಿಳಿಯಲಿರುವ ವಿದೇಶಿ ಆಟಗಾರರ ಪಟ್ಟಿ ಪ್ರಕಟ
Image
ಮುಂಬೈ ಇಂಡಿಯನ್ಸ್ ಬಳಗಕ್ಕೆ ಕ್ವಿಂಟನ್ ಡಿಕಾಕ್ ಎಂಟ್ರಿ

ಐದನೇ ಕ್ರಮಾಂಕದಲ್ಲಿ ಲಿಯಾಮ್ ಲಿವಿಂಗ್​ಸ್ಟೋನ್ ಬದಲಿಗೆ ರೊಮೊರಿಯೊ ಶೆಫರ್ಡ್​ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಆರನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾಗೆ ಕಣಕ್ಕಿಳಿಯಲಿದ್ದಾರೆ. ಏಳು ಮತ್ತು ಎಂಟನೇ ಕ್ರಮಾಂಕಗಳಲ್ಲಿ ಟಿಮ್ ಡೇವಿಡ್ ಹಾಗೂ ಕೃನಾಲ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ.

ಇನ್ನು ಬೌಲರ್​ಗಳಾಗಿ ಜೋಶ್ ಹ್ಯಾಝಲ್​ವುಡ್, ಯಶ್ ದಯಾಳ್ ಹಾಗೂ ಭುವನೇಶ್ವರ್ ಕುಮಾರ್ ಕಣಕ್ಕಿಳಿಯಲಿದ್ದಾರೆ. ಅದರಂತೆ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  • 1. ಫಿಲ್ ಸಾಲ್ಟ್ (ಬ್ಯಾಟರ್)
  • 2. ವಿರಾಟ್ ಕೊಹ್ಲಿ (ಬ್ಯಾಟರ್)
  • 3. ದೇವದತ್ ಪಡಿಕ್ಕಲ್ (ಬ್ಯಾಟರ್)
  • 4. ರಜತ್ ಪಾಟಿದಾರ್ (ನಾಯಕ, ಬ್ಯಾಟರ್)
  • 5. ರೊಮಾರಿಯೊ ಶೆಫರ್ಡ್​ ಅಥವಾ ಲಿಯಾಮ್ ಲಿವಿಂಗ್​ಸ್ಟೋನ್ (ಆಲ್-ರೌಂಡರ್)
  • 6. ಜಿತೇಶ್ ಶರ್ಮಾ (ಬ್ಯಾಟರ್)
  • 7. ಟಿಮ್ ಡೇವಿಡ್ (ಆಲ್-ರೌಂಡರ್)
  • 8. ಕೃನಾಲ್ ಪಾಂಡ್ಯ (ಆಲ್-ರೌಂಡರ್)
  • 9. ಭುವನೇಶ್ವರ್ ಕುಮಾರ್ (ಬೌಲರ್)
  • 10. ಜೋಶ್ ಹ್ಯಾಝಲ್‌ವುಡ್ (ಬೌಲರ್)
  • 11. ಯಶ್ ದಯಾಳ್ (ಬೌಲರ್)

ಇದನ್ನೂ ಓದಿ: PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಝಲ್‌ವುಡ್, ಯಶ್ ದಯಾಳ್, ಸುಯಶ್ ಶರ್ಮಾ, ಸ್ವಪ್ನಿಲ್ ಸಿಂಗ್, ರಾಸಿಖ್ ದರ್ ಸಲಾಮ್, ಜೇಕಬ್ ಬೆಥೆಲ್, ರೊಮಾರಿಯೊ ಶೆಫರ್ಡ್, ಲುಂಗಿ ಎನ್‌ಗಿಡಿ, ನುವಾನ್ ತುಷಾರ, ಮೋಹಿತ್ ರಾಠಿ, ಸ್ವಸ್ತಿಕ್ ಚಿಕಾರ, ಅಭಿನಂದನ್ ಸಿಂಗ್.

Published On - 12:08 pm, Thu, 10 April 25

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ