AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ನಮ್ಮ ಬೌಲರ್​ಗಳು ಸಖತ್ತಾಗಿ ಬೌಲಿಂಗ್ ಮಾಡಿದ್ದಾರೆ: ರಜತ್ ಪಾಟಿದಾರ್ ಅಚ್ಚರಿಯ ಹೇಳಿಕೆ

Royal Challengers Bengaluru vs Gujarat Titans: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ RCB ತಂಡವು 20 ಓವರ್​ಗಳಲ್ಲಿ 169 ರನ್ ಗಳಿಸಿದರೆ, ಈ ಗುರಿಯನ್ನು GT ತಂಡವು 17.5 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಗುಜರಾತ್ ಟೈಟಾನ್ಸ್​ ತಂಡ 8 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ.

IPL 2025: ನಮ್ಮ ಬೌಲರ್​ಗಳು ಸಖತ್ತಾಗಿ ಬೌಲಿಂಗ್ ಮಾಡಿದ್ದಾರೆ: ರಜತ್ ಪಾಟಿದಾರ್ ಅಚ್ಚರಿಯ ಹೇಳಿಕೆ
Rajat Patidar
ಝಾಹಿರ್ ಯೂಸುಫ್
|

Updated on:Apr 03, 2025 | 7:01 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 14ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸೋಲನುಭವಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಜಿಟಿ ತಂಡದ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ವಿರಾಟ್ ಕೊಹ್ಲಿ ಕೇವಲ 7 ರನ್​ಗಳಿಸಿ ಔಟಾದರೆ, ಆ ಬಳಿಕ ಬಂದ ದೇವದತ್ ಪಡಿಕ್ಕಲ್ 4 ರನ್​ಗಳಿಸಿ ಬೌಲ್ಡ್ ಆದರು. ಇನ್ನು ಫಿಲ್ ಸಾಲ್ಟ್ ಇನಿಂಗ್ಸ್ 14 ರನ್​ಗಳಿಗೆ ಸೀಮಿತವಾಯಿತು.

ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಲಿಯಾಮ್ ಲಿವಿಂಗ್​ಸ್ಟೋನ್ 40 ಎಸೆತಗಳಲ್ಲಿ 54 ರನ್​ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 169 ರನ್ ಕಲೆಹಾಕಿತು.

170 ರನ್​ಗಳ ಗುರಿ ಪಡೆದ ಗುಜರಾತ್ ಟೈಟಾನ್ಸ್ ಪರ ಸಾಯಿ ಸುದರ್ಶನ್ 49 ರನ್ ಬಾರಿಸಿ ಉತ್ತಮ ಆರಂಭ ಒದಗಿಸಿದ್ದರು. ಇನ್ನು ಜೋಸ್ ಬಟ್ಲರ್ ಕೇವಲ 39 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 73 ರನ್ ಬಾರಿಸಿದರು. ಈ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಗುಜರಾತ್ ಟೈಟಾನ್ಸ್ ತಂಡವು 17.5 ಓವರ್​ಗಳಲ್ಲಿ 170 ರನ್​ ಬಾರಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಇದನ್ನೂ ಓದಿ
Image
ಯುಜ್ವೇಂದ್ರ ಚಹಲ್-ಧನಶ್ರೀ ವರ್ಮಾ ವಿಚ್ಛೇದನಕ್ಕೆ ಇದುವೇ ಅಸಲಿ ಕಾರಣ
Image
RCB ದಾಖಲೆ ಧೂಳೀಪಟ ಮಾಡಿದ ಡೆಲ್ಲಿ ಬಾಯ್ಸ್
Image
David Warner: ಡೇವಿಡ್ ವಾರ್ನರ್​ಗೆ ಒಲಿದ ನಾಯಕತ್ವ..!
Image
VIDEO: ಎಂಎಸ್ ಧೋನಿ ಎಂಟ್ರಿಗೆ ಕಿವಿ ಮುಚ್ಚಿ ಕೂತ ನೀತಾ ಅಂಬಾನಿ

ಈ ಸೋಲಿನ ಬಳಿಕ ಮಾತನಾಡಿದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್, ನಮ್ಮ ತಂಡವು ಉತ್ತಮವಾಗಿ ಬೌಲಿಂಗ್ ಮಾಡಿದೆ ಎಂದಿರುವುದು ಅಚ್ಚರಿಗೆ ಕಾರಣವಾಗಿತ್ತು. ಏಕೆಂದರೆ ಈ ಪಂದ್ಯವನ್ನು ಗುಜರಾತ್ ಟೈಟಾನ್ಸ್ ತಂಡವು 17.5 ಓವರ್​ಗಳಲ್ಲಿ ಮುಗಿಸಿದರೆ, ಇತ್ತ ಆರ್​ಸಿಬಿ ಬೌಲರ್​ಗಳು ಪಡೆದಿರುವುದು ಕೇವಲ 2 ವಿಕೆಟ್ ಮಾತ್ರ.

ಆದರೆ ಪಂದ್ಯದ ಬಳಿಕ ಮಾತನಾಡಿದ ರಜತ್ ಪಾಟಿದಾರ್, ನಮ್ಮ ಗುರಿ 200 ರನ್​ ಆಗಿರಲಿಲ್ಲ. ಪವರ್​ಪ್ಲೇನಲ್ಲಿ ವಿಕೆಟ್ ಕಳೆದುಕೊಂಡಿದ್ದ ಪರಿಣಾಮ ನಾವು 190 ರನ್​ಗಳನ್ನು ಗುರಿಯಾಗಿಸಿಕೊಂಡಿದ್ದೆವು. ಆದರೆ ಆರಂಭಿಕ ವಿಕೆಟ್‌ಗಳನ್ನು ಕಳೆದುಕೊಂಡಿರುವುದು ನಮ್ಮೆಲ್ಲಾ ಯೋಜನೆಗಳನ್ನು ಹಾಳುಗೆಡವಿತು. ನಾವು ಪವರ್​ಪ್ಲೇನಲ್ಲಿ 3 ವಿಕೆಟ್ ಕಳೆದುಕೊಂಡಿರುವುದು ದೊಡ್ಡ ತಪ್ಪು ಎಂದು ಭಾವಿಸುತ್ತೇನೆ. ಏಕೆಂದರೆ ಆ ಬಳಿಕ ಪಿಚ್​ ಬ್ಯಾಟಿಂಗ್​ಗೆ ಸಹಕಾರಿಯಾಗಿತ್ತು. ಇದಾಗ್ಯೂ ನಮ್ಮ ಬೌಲರ್​ಗಳು ಅತ್ಯುತ್ತಮವಾಗಿ ಬೌಲಿಂಗ್ ಮಾಡಿದರು ಎಂದು ರಜತ್ ಪಾಟಿದಾರ್ ಹೇಳಿದ್ದಾರೆ.

170 ರನ್​ಗಳ ಗುರಿ ನೀಡಿದ ಬಳಿಕ ನಮ್ಮ ಬೌಲರ್​ಗಳು ಅದನ್ನು ರಕ್ಷಿಸಲು ಅದ್ಭುತವಾಗಿ ಪ್ರಯತ್ನಿಸಿದರು. ಈ ಚೇಸ್ ಅನ್ನು 18 ನೇ ಓವರ್‌ವರೆಗೆ ಕೊಂಡೊಯ್ದಿರುವುದೇ ಅದ್ಭುತ ಎಂದು ಪಾಟಿದಾರ್ ಆರ್​ಸಿಬಿ ಬೌಲರ್​ಗಳನ್ನು ಹಾಡಿ ಹೊಗಳಿದ್ದಾರೆ.

ಇದನ್ನೂ ಓದಿ: IPL 2025: ಬ್ಯಾನ್ ಬ್ಯಾನ್ ಬ್ಯಾನ್… ಐಪಿಎಲ್ ಆಟಗಾರರಿಗೆ ಬ್ಯಾನ್ ಭೀತಿ

ಆದರೆ ಆರ್​ಸಿಬಿ ಪರ ವಿಕೆಟ್ ಪಡೆದಿರುವುದು ಭುವನೇಶ್ವರ್ ಕುಮಾರ್ ಮತ್ತು ಜೋಶ್ ಹ್ಯಾಝಲ್​ವುಡ್ ಮಾತ್ರ. ಅದು ಕೂಡ ಕೇವಲ 2 ವಿಕೆಟ್​ಗಳು ಮಾತ್ರ. ಅತ್ತ ಗುಜರಾತ್ ಟೈಟಾನ್ಸ್ ತಂಡವು 13 ಎಸೆತಗಳನ್ನು ಬಾಕಿಯಿರಿಸಿ ನಿರಾಯಾಸವಾಗಿ ಪಂದ್ಯವನ್ನು ಗೆದ್ದುಕೊಂಡಿದ್ದಾರೆ. ಇದಾಗ್ಯೂ ರಜತ್ ಪಾಟಿದಾರ್ ಆರ್​ಸಿಬಿ ಬೌಲರ್​ಗಳನ್ನು ಹಾಡಿ ಹೊಗಳಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.

Published On - 6:55 am, Thu, 3 April 25

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ