AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂವರ ಸ್ಫೋಟಕ ಅರ್ಧಶತಕ… ಪಂದ್ಯಶ್ರೇಷ್ಠ ಪ್ರಶಸ್ತಿ ಸಿಕ್ಕಿದ್ದು ಬೌಲರ್​ಗೆ..!

IPL 2025 KKR vs RCB: ಐಪಿಎಲ್ ಸೀಸನ್-18ರ ಮೊದಲ ಪಂದ್ಯದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಬಾರಂಭ ಮಾಡಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಆರ್​ಸಿಬಿ ತಂಡವು 7 ವಿಕೆಟ್​ಗಳ ಜಯ ಸಾಧಿಸಿದೆ. ಬ್ಯಾಟರ್​ಗಳ ಅಬ್ಬರ ನಡುವೆ ಈ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶಿಸಿದ್ದು ಕೃನಾಲ್ ಪಾಂಡ್ಯ.

ಮೂವರ ಸ್ಫೋಟಕ ಅರ್ಧಶತಕ... ಪಂದ್ಯಶ್ರೇಷ್ಠ ಪ್ರಶಸ್ತಿ ಸಿಕ್ಕಿದ್ದು ಬೌಲರ್​ಗೆ..!
Rcb
ಝಾಹಿರ್ ಯೂಸುಫ್
|

Updated on:Mar 23, 2025 | 7:35 AM

Share

IPL 2025: ಐಪಿಎಲ್​ನ ಬಲಿಷ್ಠ ಪಡೆದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಹೀನಾಯವಾಗಿ ಸೋಲಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೀಸನ್-18ರ ಅಭಿಯಾನವನ್ನು ಆರಂಭಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಕೆಕೆಆರ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಮೊದಲ ಓವರ್​ನಲ್ಲೇ ಕ್ವಿಂಟನ್ ಡಿಕಾಕ್ (4) ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಕಣಕ್ಕಿಳಿದ ಅಜಿಂಕ್ಯ ರಹಾನೆ ಮತ್ತೋರ್ವ ಆರಂಭಿಕ ಸುನಿಲ್ ನರೈನ್ ಜೊತೆಗೂಡಿ ಸ್ಪೋಟಕ ಇನಿಂಗ್ಸ್ ಆಡಿದರು.

26 ಎಸೆತಗಳಲ್ಲಿ 44 ರನ್ ಬಾರಿಸಿ ಸುನಿಲ್ ನರೈನ್ ಔಟಾದರೆ, ಮತ್ತೊಂದೆಡೆ ಅಜಿಂಕ್ಯ ರಹಾನೆ 31 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 56 ರನ್ ಚಚ್ಚಿದರು. ಈ ಅರ್ಧಶಥಕದ ನೆರವಿನಿಂದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 174 ರನ್​ ಕಲೆಹಾಕಿತು.

ಇದನ್ನೂ ಓದಿ
Image
RCBಯಲ್ಲಿ ಬ್ರಿಟಿಷ್ ಪಡೆ... ಸೋತು ಸುಣ್ಣವಾಗಲಿದೆ ಎಂದ ಗಿಲ್​ಕ್ರಿಸ್ಟ್
Image
IPL 2025: ಐಪಿಎಲ್​ ಕಣದಲ್ಲಿದ್ದಾರೆ 13 ಕನ್ನಡಿಗರು
Image
IPL 2025: ಬ್ಯಾನ್ ಬ್ಯಾನ್ ಬ್ಯಾನ್... ಐಪಿಎಲ್ ಆಟಗಾರರಿಗೆ ಬ್ಯಾನ್ ಭೀತಿ
Image
IPL 2025: ಐಪಿಎಲ್​ನಲ್ಲಿ 10 ನಿಮಯಗಳು ಬದಲಾವಣೆ

175 ರನ್​ಗಳ ಗುರಿ ಪಡೆದ ಆರ್​ಸಿಬಿ ತಂಡಕ್ಕೆ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ವಿಸ್ಪೋಟಕ ಆರಂಭ ಒದಗಿಸಿದ್ದರು. ಪರಿಣಾಮ ಪವರ್​ಪ್ಲೇನಲ್ಲೇ ಆರ್​ಸಿಬಿ ತಂಡದ ಮೊತ್ತ 80 ಕ್ಕೆ ಬಂದು ನಿಂತಿತು. ಇದರ ಬೆನ್ನಲ್ಲೇ ಫಿಲ್ ಸಾಲ್ಟ್ 31 ಎಸೆತಗಳಲ್ಲಿ 56 ರನ್ ಬಾರಿಸಿ ಔಟಾದರು.

ಆದರೆ ಮತ್ತೊಂದೆಡೆ ಜವಾಬ್ದಾರಿಯುತ ಇನಿಂಗ್ಸ್ ಆಡಿದ ವಿರಾಟ್ ಕೊಹ್ಲಿ 36 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ ಅಜೇಯ 59 ರನ್ ಬಾರಿಸಿ 16.2 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಆರ್​ಸಿಬಿ ತಂಡವು ಮೊದಲ ಪಂದ್ಯದಲ್ಲಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಬೌಲರ್​ಗೆ ಪಂದ್ಯಶ್ರೇಷ್ಠ ಪ್ರಶಸ್ತಿ:

ಈ ಪಂದ್ಯದಲ್ಲಿ ಅಜಿಂಕ್ಯ ರಹಾನೆ (56), ಫಿಲ್ ಸಾಲ್ಟ್ (56) ಹಾಗೂ ವಿರಾಟ್ ಕೊಹ್ಲಿ (59) ಸ್ಪೋಟಕ ಅರ್ಧಶತಕ ಬಾರಿಸಿದ್ದರೂ, ಪಂದ್ಯಶ್ರೇಷ್ಠ ಪ್ರಶಸ್ತಿ ಸಿಕ್ಕಿದ್ದು ಕೃನಾಲ್ ಪಾಂಡ್ಯಗೆ ಎಂಬುದು ವಿಶೇಷ.

ಏಕೆಂದರೆ ಕೆಕೆಆರ್ ತಂಡದ ಸಿಡಿಲಬ್ಬರದ ಬ್ಯಾಟಿಂಗ್ ನಡುವೆ ಕೃನಾಲ್ ಪಾಂಡ್ಯ ಅದ್ಭುತ ಬೌಲಿಂಗ್ ಪ್ರದರ್ಶಿಸಿದ್ದರು. ಅದರಲ್ಲೂ 200ರ ಗಡಿದಾಟಬೇಕಿದ್ದ ಕೆಕೆಆರ್ ಮೊತ್ತವನ್ನು 175 ರನ್​ಗಳ ಒಳಗೆ ನಿಯಂತ್ರಿಸುವಲ್ಲಿ ಕೃನಾಲ್ ಪ್ರಮುಖ ಪಾತ್ರವಹಿಸಿದ್ದರು.

ಇದನ್ನೂ ಓದಿ: IPL 2025: RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಗಾಯಾಳು

4 ಓವರ್​ಗಳನ್ನು ಎಸೆದಿದ್ದ ಕೃನಾಲ್ ಪಾಂಡ್ಯ ಡೇಂಜರಸ್ ಅಜಿಂಕ್ಯ ರಹಾನೆ, ರಿಂಕು ಸಿಂಗ್, ವೆಂಕಟೇಶ್ ಅಯ್ಯರ್ ಅವರ ವಿಕೆಟ್ ಪಡೆದಿದ್ದಲ್ಲದೇ ಕೇವಲ 29 ರನ್​ ಮಾತ್ರ ನೀಡಿದ್ದರು. ಈ ಅತ್ಯುತ್ತಮ ಬೌಲಿಂಗ್ ಪ್ರದರ್ಶನದ ಫಲವಾಗಿ ಐಪಿಎಲ್ ಸೀಸನ್-18ರ ಮೊದಲ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೃನಾಲ್ ಪಾಂಡ್ಯ ಪಾಲಾಯಿತು.

Published On - 7:30 am, Sun, 23 March 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ