AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಆರ್​ಸಿಬಿಯ ಕೊನೆಯ ಲೀಗ್ ಪಂದ್ಯ; ಎಲ್ಲಿ, ಯಾವಾಗ, ಯಾರು ಎದುರಾಳಿ?

RCB vs LSG IPL 2025 Final League Match: ಮೇ 27 ರಂದು, ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆರ್‌ಸಿಬಿ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಐಪಿಎಲ್ 2025 ರ 70ನೇ ಮತ್ತು ಅಂತಿಮ ಲೀಗ್ ಪಂದ್ಯ ನಡೆಯಲಿದೆ. ಈ ಪಂದ್ಯವು ಆರ್‌ಸಿಬಿಗೆ ಅತ್ಯಂತ ಮುಖ್ಯವಾಗಿದೆ, ಏಕೆಂದರೆ ಗೆಲುವು ಅವರಿಗೆ ಟಾಪ್ 2 ಸ್ಥಾನವನ್ನು ಖಚಿತಪಡಿಸುತ್ತದೆ. ಲಕ್ನೋ ಈಗಾಗಲೇ ಪ್ಲೇಆಫ್‌ನಿಂದ ಹೊರಗುಳಿದಿದೆ. ಪಂದ್ಯದ ನೇರ ಪ್ರಸಾರ ಜಿಯೋಸಿನಿಮಾ ಮತ್ತು ಸ್ಟಾರ್ ಸ್ಪೋರ್ಟ್ಸ್ ಟಿವಿ ಚಾನೆಲ್‌ಗಳಲ್ಲಿ ಲಭ್ಯವಿರುತ್ತದೆ.

IPL 2025: ಆರ್​ಸಿಬಿಯ ಕೊನೆಯ ಲೀಗ್ ಪಂದ್ಯ; ಎಲ್ಲಿ, ಯಾವಾಗ, ಯಾರು ಎದುರಾಳಿ?
Rcb
ಪೃಥ್ವಿಶಂಕರ
|

Updated on: May 26, 2025 | 10:17 PM

Share

ಐಪಿಎಲ್ 2025 (IPL 2025) ಲೀಗ್‌ನ ಕೊನೆಯ ಪಂದ್ಯ ಅಂದರೆ 70 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ (RCB vs LSG) ನಡುವೆ ಮೇ 27 ರ ಮಂಗಳವಾರ ನಡೆಯಲಿದೆ. ಈ ಪಂದ್ಯವು ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯ ಆರ್‌ಸಿಬಿಗೆ ಬಹಳ ಮುಖ್ಯವಾಗಲಿದೆ, ಏಕೆಂದರೆ ಬೆಂಗಳೂರು ತಂಡ ಲಕ್ನೋವನ್ನು ಸೋಲಿಸುವ ಮೂಲಕ ಅಗ್ರ 2 ರಲ್ಲಿ ಸ್ಥಾನ ಪಡೆಯುವ ಇರಾದೆಯಲ್ಲಿದೆ. ಮತ್ತೊಂದೆಡೆ, ಲಕ್ನೋ ಸೂಪರ್ ಜೈಂಟ್ಸ್ ತಂಡವು ಈಗಾಗಲೇ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿದ್ದು, ಕೇವಲ ಔಪಚಾರಿಕವಾಗಿದೆ. ಆದಾಗ್ಯೂ ಕಳೆದ ಪಂದ್ಯ ಗೆದ್ದಿರುವ ಲಕ್ನೋ ತಂಡ ಆರ್​ಸಿಬಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಈ ಸೀಸನ್‌ನಲ್ಲಿ ಆರ್​ಸಿಬಿ ಆಡಿದ 13 ಪಂದ್ಯಗಳಲ್ಲಿ 8 ಗೆಲುವು ಮತ್ತು 4 ಸೋಲುಗಳೊಂದಿಗೆ 17 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಇತ್ತ ಲಕ್ನೋ ಸೂಪರ್ ಜೈಂಟ್ಸ್ ಆಡಿದ 13 ಪಂದ್ಯಗಳಲ್ಲಿ 6 ಗೆಲುವು ಮತ್ತು 7 ಸೋಲುಗಳೊಂದಿಗೆ 12 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಹೀಗಾಗಿ ಆರ್​ಸಿಬಿ, ಲಕ್ನೋ ವಿರುದ್ಧ ಗೆದ್ದರೆ, 19 ಅಂಕಗಳೊಂದಿಗೆ ಟಾಪ್ 2 ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ.

ಆರ್​ಸಿಬಿ ಹಾಗೂ ಲಕ್ನೋ ನಡುವಿನ ಕೊನೆಯ ಲೀಗ್ ಪಂದ್ಯ ಯಾವಾಗ ನಡೆಯಲಿದೆ?

ಆರ್​ಸಿಬಿ ಹಾಗೂ ಲಕ್ನೋ ನಡುವಿನ ಕೊನೆಯ ಲೀಗ್ ಪಂದ್ಯ ಮೇ 27 ರ ಮಂಗಳವಾರ ನಡೆಯಲಿದೆ.

ಆರ್​ಸಿಬಿ ಹಾಗೂ ಲಕ್ನೋ ನಡುವಿನ ಕೊನೆಯ ಲೀಗ್ ಪಂದ್ಯ ಎಲ್ಲಿ ನಡೆಯಲಿದೆ?

ಆರ್​ಸಿಬಿ ಹಾಗೂ ಲಕ್ನೋ ನಡುವಿನ ಕೊನೆಯ ಲೀಗ್ ಪಂದ್ಯ ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಆರ್​ಸಿಬಿ ಹಾಗೂ ಲಕ್ನೋ ನಡುವಿನ ಕೊನೆಯ ಲೀಗ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಉಭಯ ತಂಡಗಳ ನಡುವಿನ ಈ ಪಂದ್ಯ ಸಂಜೆ 7:30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ ಸಂಜೆ 7:00 ಗಂಟೆಗೆ ನಡೆಯಲಿದೆ.

ಆರ್​ಸಿಬಿ ಹಾಗೂ ಲಕ್ನೋ ನಡುವಿನ ಕೊನೆಯ ಲೀಗ್ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬೇಕು?

ಆರ್​ಸಿಬಿ ಹಾಗೂ ಲಕ್ನೋ ನಡುವಿನ ಕೊನೆಯ ಲೀಗ್ ಪಂದ್ಯದ ನೇರ ಪ್ರಸಾರವನ್ನು ನೀವು ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದು. ಹಾಗೆಯೇ ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಮತ್ತು ನೆಟ್‌ವರ್ಕ್ 18 ಟಿವಿ ಚಾನೆಲ್‌ಗಳಲ್ಲಿ ಲಭ್ಯವಿರುತ್ತದೆ.

ರೋಹಿತ್, ಕೊಹ್ಲಿ, ಧೋನಿಗೆ ಸಿಕ್ಕ ಗೌರವ ಕನ್ನಡಿಗ ಮನೀಶ್ ಪಾಂಡೆಗೆ ಸಿಗಲಿಲ್ಲ; ಬಿಸಿಸಿಐ ವಿರುದ್ಧ ಮಹಿಳಾ ಕ್ರಿಕೆಟರ್ ಗರಂ

ಉಭಯ ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಮಯಾಂಕ್ ಅಗರ್ವಾಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೊ ಶೆಫರ್ಡ್, ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ, ಜೋಶ್ ಹೇಜಲ್‌ವುಡ್, ಯಶ್ ದಯಾಳ್, ರಸಿಖ್ ದಾರ್ ಸಲಾಂ, ಮನೋಜ್ ಭಾಂಡಗೆ, ಜೇಕಬ್ ಬೆಥೆಲ್, ಸ್ವಪ್ನಿಲ್ ಸಿಂಗ್, ಲಿಯಾಮ್ ಲಿವಿಂಗ್‌ಸ್ಟೋನ್, ನುವಾನ್ ತುಷಾರ, ಬ್ಲೆಸ್ಸಿಂಗ್ ಮುಜರಬಾನಿ, ಟಿಮ್ ಸೀಫರ್ಟ್, ಮೋಹಿತ್ ರಥಿ, ಸ್ವಸ್ತಿಕ್ ಚಿಕಾರಾ, ಅಭಿನಂದನ್ ಸಿಂಗ್.

ಲಕ್ನೋ ಸೂಪರ್ ಜೈಂಟ್ಸ್: ರಿಷಭ್ ಪಂತ್, ರವಿ ಬಿಷ್ಣೋಯ್, ನಿಕೋಲಸ್ ಪೂರನ್, ಅವೇಶ್ ಖಾನ್, ಆಕಾಶ್ ದೀಪ್, ಆಯುಷ್ ಬಡೋನಿ, ಮೊಹ್ಸಿನ್ ಖಾನ್, ಮಿಚೆಲ್ ಮಾರ್ಷ್, ಶಹಬಾಜ್ ಅಹ್ಮದ್, ಡೇವಿಡ್ ಮಿಲ್ಲರ್, ಅಬ್ದುಲ್ ಸಮದ್, ಐಡೆನ್ ಮರ್ಕ್ರಾಮ್, ಶಮರ್ ಜೋಸೆಫ್, ದಿಗ್ವೇಶ್ ಸಿಂಗ್, ಪ್ರಿನ್ಸ್ ಹೆಚ್.ಎಚ್. ಸಿದ್ಧಾರ್ಥ್, ಮ್ಯಾಥ್ಯೂ ಬ್ರಿಟ್ಜ್ಕೆ, ಅರ್ಶಿನ್ ಕುಲಕರ್ಣಿ, ಆರ್ಯನ್ ಜುಯಲ್, ಹಿಮ್ಮತ್ ಸಿಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!