Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025 RCB vs MI: ಸಹೋದರರ ಸವಾಲ್

Mumbai Indians vs Royal Challengers Bengaluru: ಐಪಿಎಲ್ ಇತಿಹಾಸದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಒಟ್ಟು 33 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಮುಂಬೈ ಇಂಡಿಯನ್ಸ್ ತಂಡವು 19 ಪಂದ್ಯಗಳಲ್ಲಿ ವಿಜಯ ಸಾಧಿಸಿ ಆರ್​ಸಿಬಿ ವಿರುದ್ಧ ಪಾರುಪತ್ಯ ಮೆರೆದಿದೆ.

IPL 2025 RCB vs MI: ಸಹೋದರರ ಸವಾಲ್
Pandya Brothers
Follow us
ಝಾಹಿರ್ ಯೂಸುಫ್
|

Updated on:Apr 07, 2025 | 10:20 AM

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2025) 20ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಇದೀಗ ಸಹೋದರರ ನಡುವಣ ಕದನವಾಗಿ ಮಾರ್ಪಟ್ಟಿದೆ. ಏಕೆಂದರೆ ಆರ್​ಸಿಬಿ ತಂಡದಲ್ಲಿ ಕೃನಾಲ್ ಪಾಂಡ್ಯ ಇದ್ದರೆ, ಮುಂಬೈ ಇಂಡಿಯನ್ಸ್ ಬಳಗದಲ್ಲಿ ಹಾರ್ದಿಕ್ ಪಾಂಡ್ಯ ಇದ್ದಾರೆ.  ಹೀಗಾಗಿ ಇಂದಿನ ಪಂದವು ಅಣ್ತಮ್ಮಂದಿರ ನಡುವಣ ಕಾದಾಟವಾಗಿ ಗುರುತಿಸಿಕೊಂಡಿದೆ.

ಇಬ್ಬರೂ ಆಟಗಾರರು ಈ ಹಿಂದೆ ಮುಂಬೈ ಇಂಡಿಯನ್ಸ್ ಪರ ಜೊತೆಯಾಗಿ ಆಡಿದ್ದರು. ಆ ಬಳಿಕ ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿದರೆ, ಕೃನಾಲ್ ಪಾಂಡ್ಯ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದರು.

ಇದೀಗ ಹಾರ್ದಿಕ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಮರಳಿದ್ದಾರೆ. ಇತ್ತ ಕಳೆದ ಬಾರಿ ಲಕ್ನೋ ಪರ ಆಡಿದ್ದ ಕೃನಾಲ್ ಪಾಂಡ್ಯ ಆರ್​ಸಿಬಿ ಜೊತೆ ಹೊಸ ಅಧ್ಯಾಯ ಆರಂಭಿಸಿದ್ದಾರೆ. ಹೀಗಾಗಿ ಈ ವರ್ಷದ ಮುಖಾಮುಖಿಯಲ್ಲಿ ಯಾರು ಮೇಲುಗೈ ಸಾಧಿಸಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲಿದೆ.

ಇದನ್ನೂ ಓದಿ
Image
ಹುಡುಗಿಯಾಗಿ ಬದಲಾದ ಟೀಮ್ ಇಂಡಿಯಾದ ಮಾಜಿ ಆಟಗಾರನ ಪುತ್ರ
Image
VIDEO: ವಿರಾಟ್ ಕೊಹ್ಲಿಗೆ ಬೌಲಿಂಗ್: ಭಾವುಕರಾಗಿ ಅರ್ಧದಲ್ಲೇ ನಿಂತ ಸಿರಾಜ್
Image
11ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ವಿಶ್ವ ದಾಖಲೆ ಬರೆದ ನಸೀಮ್ ಶಾ
Image
MS Dhoni: ಕೇವಲ 3 ರನ್​: ಗ್ರೇಟ್​ ಫಿನಿಶರ್ ಫಿನಿಶ್..!

RCB vs MI ಹೆಡ್ ಟು ಹೆಡ್:

ಇದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು 33 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಮುಂಬೈ ಇಂಡಿಯನ್ಸ್ ತಂಡವು 19 ಬಾರಿ ಗೆಲುವು ದಾಖಲಿಸಿದೆ. ಇನ್ನು ಆರ್​ಸಿಬಿ ತಂಡ ಮುಂಬೈ ವಿರುದ್ಧ ಗೆದ್ದಿರುವುದು ಕೇವಲ 14 ಪಂದ್ಯಗಳಲ್ಲಿ ಮಾತ್ರ.

ಇದಾಗ್ಯೂ ಕೊನೆಯ 6 ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4 ಪಂದ್ಯಗಳಲ್ಲಿ ವಿಜಯ ಸಾಧಿಸಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಆರ್​ಸಿಬಿ ಕಡೆಯಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು. ಅದರಲ್ಲೂ ಈ ಪಂದ್ಯ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವುದರಿಂದ ಮುಂಬೈ ಇಂಡಿಯನ್ಸ್ ಕಡೆಯಿಂದಲೂ ಅಮೋಘ ಪ್ರದರ್ಶನ ಎದುರು ನೋಡಬಹುದು.

ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ, ರಯಾನ್ ರಿಕಲ್ಟನ್ (ವಿಕೆಟ್ ಕೀಪರ್) , ಹಾರ್ದಿಕ್ ಪಾಂಡ್ಯ (ನಾಯಕ) , ವಿಲ್ ಜ್ಯಾಕ್ಸ್ , ನಮನ್ ಧೀರ್ , ಸೂರ್ಯಕುಮಾರ್ ಯಾದವ್ , ತಿಲಕ್ ವರ್ಮಾ , ಮಿಚೆಲ್ ಸ್ಯಾಂಟ್ನರ್ , ರಾಜ್ ಬಾವಾ , ದೀಪಕ್ ಚಹರ್ , ಅಶ್ವನಿ ಕುಮಾರ್ , ವಿಘ್ನೇಶ್ ಪುತ್ತೂರ್ , ಜಸ್ಪ್ರೀತ್ ಬುಮ್ರಾ , ಕಾರ್ಬಿನ್ ಬಾಷ್, ಕರ್ಣ್ ಶರ್ಮಾ,  ಟ್ರೆಂಟ್ ಬೌಲ್ಟ್ , ರೀಸ್ ಟೋಪ್ಲಿ , ಮುಜೀಬ್ ಉರ್ ರೆಹಮಾನ್ , ಕೃಷ್ಣನ್ ಶ್ರೀಜಿತ್ , ಅರ್ಜುನ್ ತೆಂಡೂಲ್ಕರ್ , ಬೆವನ್ ಜೇಕಬ್ಸ್.

ಇದನ್ನೂ ಓದಿ: ಒಂದು ಬೌಂಡರಿಗೆ 19 ಎಸೆತಗಳು: ಐಪಿಎಲ್​ನಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಧೋನಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ) , ಜಿತೇಶ್ ಶರ್ಮಾ (ವಿಕೆಟ್ ಕೀಪರ್) , ಫಿಲಿಪ್ ಸಾಲ್ಟ್ , ವಿರಾಟ್ ಕೊಹ್ಲಿ , ದೇವದತ್ ಪಡಿಕ್ಕಲ್ , ಲಿಯಾಮ್ ಲಿವಿಂಗ್​ಸ್ಟೋನ್ , ಕೃನಾಲ್ ಪಾಂಡ್ಯ , ಟಿಮ್ ಡೇವಿಡ್ , ಭುವನೇಶ್ವರ್ ಕುಮಾರ್ , ಜೋಶ್ ಹ್ಯಾಝಲ್​ವುಡ್ , ಯಶ್ ದಯಾಳ್ , ರಾಸಿಖ್ ದಾರ್ ಸಲಾಮ್ , ಸುಯಾಶ್ ಶರ್ಮಾ , ಸ್ವಪ್ನಿಲ್ ಸಿಂಗ್ , ಅಭಿನಂದನ್ ಸಿಂಗ್ , ರೊಮಾರಿಯೋ ಶೆಫರ್ಡ್ , ಲುಂಗಿ ಎನ್​ಗಿಡಿ , ನುವಾನ್ ತುಷಾರ , ಮೋಹಿತ್ ರಥಿ , ಸ್ವಸ್ತಿಕ್ ಚಿಕಾರ.

Published On - 10:17 am, Mon, 7 April 25

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ