AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs PBKS: ಆರ್​ಸಿಬಿ vs ಪಂಜಾಬ್ ಕಿಂಗ್ಸ್ ನಡುವೆ ನಾಳೆ ಮತ್ತೆ ಪಂದ್ಯ

IPL 2025: Royal Challengers Bengaluru vs Punjab Kings: ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ತಂಡವು ತವರು ಮೈದಾನದಲ್ಲಿ ಮೂರನೇ ಬಾರಿ ಸೋಲನುಭವಿಸಿದೆ. ಮಳೆಯ ಕಾರಣ 14 ಓವರ್​ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 95 ರನ್​ ಕಲೆಹಾಕಿದರೆ, ಪಂಜಾಬ್ ಕಿಂಗ್ಸ್ ತಂಡವು 12.1 ಓವರ್​ಗಳಲ್ಲಿ ಈ ಗುರಿ ಮುಟ್ಟಿದೆ.

RCB vs PBKS: ಆರ್​ಸಿಬಿ vs ಪಂಜಾಬ್ ಕಿಂಗ್ಸ್ ನಡುವೆ ನಾಳೆ ಮತ್ತೆ ಪಂದ್ಯ
Pbks Vs Rcb
ಝಾಹಿರ್ ಯೂಸುಫ್
|

Updated on:Apr 19, 2025 | 9:15 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಪಂಜಾಬ್ ಕಿಂಗ್ಸ್ (PBKS) ತಂಡ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರ್​ಸಿಬಿ ತಂಡವನ್ನು 5 ವಿಕೆಟ್​ಗಳಿಂದ ಮಣಿಸುವಲ್ಲಿ ಶ್ರೇಯಸ್ ಅಯ್ಯರ್ ಪಡೆ ಯಶಸ್ವಿಯಾಗಿದೆ. ಈ ಮ್ಯಾಚ್​ನೊಂದಿಗೆ ಉಭಯ ತಂಡಗಳು ಐಪಿಎಲ್​ನ ಮೊದಲಾರ್ಥ ಪೂರ್ಣಗೊಳಿಸಿದೆ. ಇದೀಗ ದ್ವಿತೀಯಾರ್ಧದ ಮೊದಲ ಪಂದ್ಯದಲ್ಲೇ ಉಭಯ ತಂಡಗಳು ಮುಖಾಮುಖಿಯಾಗಲಿದೆ. ಅದು ಕೂಡ ನಾಳೆ (ಏಪ್ರಿಲ್ 20) ಎಂಬುದು ವಿಶೇಷ.

ಐಪಿಎಲ್​ ಮ್ಯಾನೇಜ್ಮೆಂಟ್ ರೂಪಿಸಿರುವ ವೇಳಾಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್​ ತಂಡಗಳಿಗೆ ಬ್ಯಾಕ್ ಟು ಬ್ಯಾಕ್ ಪಂದ್ಯಗಳನ್ನು ನಿಗದಿ ಮಾಡಲಾಗಿದೆ. ಅದರಂತೆ ಉಭಯ ತಂಡಗಳು ಭಾನುವಾರ ಮತ್ತೆ ಮುಖಾಮುಖಿಯಾಗಬೇಕಿದೆ.

ಪಂದ್ಯ ಎಲ್ಲಿ, ಎಷ್ಟು ಗಂಟೆಗೆ?

ಈ ಪಂದ್ಯವು ಪಂಜಾಬ್ ಕಿಂಗ್ಸ್ ತಂಡದ ತವರು ಮೈದಾನದಲ್ಲಿ ನಡೆಯಲಿದೆ. ಅಂದರೆ ಚಂಡೀಗಢ್​ನ ಮುಲ್ಲನ್​ಪುರ್ ಸ್ಟೇಡಿಯಂನಲ್ಲಿ ಆರ್​ಸಿಬಿ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಲಿದೆ.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಏಪ್ರಿಲ್ 20 ರಂದು, ಭಾನುವಾರ ಸಂಜೆ 3.30 ಕ್ಕೆ ಈ ಮ್ಯಾಚ್ ಶುರುವಾಗಲಿದ್ದು, ಇದಕ್ಕಾಗಿ ಉಭಯ ತಂಡಗಳು ಶನಿವಾರ ಬೆಂಗಳೂರಿನಿಂದ ಚಂಡೀಗಢ್​ನತ್ತ ಪ್ರಯಾಣ ಬೆಳೆಸಲಿದೆ. ಅಂದರೆ ಉಭಯ ತಂಡಗಳ ನಡುವಣ ಮುಖಾಮುಖಿಗೆ ಕೇವಲ ಒಂದು ದಿನಗಳ ಬಿಡುವು ಮಾತ್ರ ಇದೆ.

ಇತ್ತ ಕಳೆದ ಪಂದ್ಯದಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಾಳಿನ (ಏ.20) ಪಂದ್ಯದಲ್ಲಿ ಗೆಲ್ಲುವ ಮೂಲಕ ಸೇಡು ತೀರಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

ಪಂಜಾಬ್ ಪಡೆ ಜಯಭೇರಿ:

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊದಲ ಮುಖಾಮುಖಿಯಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡರು. ಮಳೆಯ ಕಾರಣ 14 ಓವರ್​ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

ಅದರಲ್ಲೂ ಕೇವಲ 63 ರನ್​ಗಳಿಗೆ 9 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಸ್ಪೋಟಕ ಇನಿಂಗ್ಸ್ ಆಡಿದ ಟಿಮ್ ಡೇವಿಡ್ 26 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 50 ರನ್ ಬಾರಿಸಿದರು. ಈ ಮೂಲಕ ಆರ್​ಸಿಬಿ ತಂಡವು ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 95 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 12.1 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 98 ರನ್ ಬಾರಿಸಿ ಐದು ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಪಂಜಾಬ್ ಕಿಂಗ್ಸ್ ತಂಡವು ಮೊದಲಾರ್ಥವನ್ನು ಜಯದೊಂದಿಗೆ ಅಂತ್ಯಗೊಳಿಸಿದೆ. ಇದೀಗ ಭಾನುವಾರ ನಡೆಯಲಿರುವ ದ್ವಿತೀಯಾರ್ಧ ಮೊದಲ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗಬೇಕಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ 11: ಫಿಲಿಪ್ ಸಾಲ್ಟ್ , ವಿರಾಟ್ ಕೊಹ್ಲಿ , ರಜತ್ ಪಾಟಿದಾರ್ (ನಾಯಕ) , ಲಿಯಾಮ್ ಲಿವಿಂಗ್​ಸ್ಟೋನ್ , ಜಿತೇಶ್ ಶರ್ಮಾ ( ವಿಕೆಟ್ ಕೀಪರ್ ) , ಟಿಮ್ ಡೇವಿಡ್ , ಕೃನಾಲ್ ಪಾಂಡ್ಯ , ಭುವನೇಶ್ವರ್ ಕುಮಾರ್ , ಜೋಶ್ ಹ್ಯಾಝಲ್​ವುಡ್ , ಸುಯಶ್ ಶರ್ಮಾ , ಯಶ್ ದಯಾಳ್.

ಇದನ್ನೂ ಓದಿ: IPL 2025: ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್​ಗೇರಲು ಮೂರೇ ಮೂರು ಹೆಜ್ಜೆ ದೂರ

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ 11: ಪ್ರಿಯಾಂಶ್ ಆರ್ಯ , ನೆಹಾಲ್ ವಧೇರಾ , ಶ್ರೇಯಸ್ ಅಯ್ಯರ್ (ನಾಯಕ) , ಶಶಾಂಕ್ ಸಿಂಗ್ , ಜೋಶ್ ಇಂಗ್ಲಿಸ್ ( ವಿಕೆಟ್ ಕೀಪರ್ ) , ಮಾರ್ಕಸ್ ಸ್ಟೊಯಿನಿಸ್ , ಮಾರ್ಕೊ ಯಾನ್ಸೆನ್ , ಹರ್ಪ್ರೀತ್ ಬ್ರಾರ್ , ಕ್ಸೇವಿಯರ್ ಬಾರ್ಟ್ಲೆಟ್ , ಅರ್ಶ್ದೀಪ್ ಸಿಂಗ್ , ಯುಜ್ವೇಂದ್ರ ಚಹಲ್.

Published On - 7:18 am, Sat, 19 April 25

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಸಿದ್ದರಾಮಯ್ಯ ಆಪ್ತರೇ ಸಹಿ ಸಂಗ್ರಹಿಸಿ ಬೆನ್ನಿಗೆ ಚೂರಿ ಹಾಕಿದ್ರಾ?
ಸಿದ್ದರಾಮಯ್ಯ ಆಪ್ತರೇ ಸಹಿ ಸಂಗ್ರಹಿಸಿ ಬೆನ್ನಿಗೆ ಚೂರಿ ಹಾಕಿದ್ರಾ?
ಸಿದ್ದರಾಮಯ್ಯ ಟೀಮ್​​​ಗೆ ಢವಢವ: ಈ 13 ಜನರಿಗೆ ಸಚಿವ ಸ್ಥಾನ ಫಿಕ್ಸ್​​?
ಸಿದ್ದರಾಮಯ್ಯ ಟೀಮ್​​​ಗೆ ಢವಢವ: ಈ 13 ಜನರಿಗೆ ಸಚಿವ ಸ್ಥಾನ ಫಿಕ್ಸ್​​?
ರಾಯಚೂರು ಡೀಸೆಲ್ ಕೊರತೆ: ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ
ರಾಯಚೂರು ಡೀಸೆಲ್ ಕೊರತೆ: ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ
ಕನ್ನಡ ಚಿತ್ರರಂಗಕ್ಕೆ ಗಟ್ಟಿ ನಾಯಕತ್ವದ ಅವಶ್ಯಕತೆ ಇದೆ: ಸುಮಲತಾ
ಕನ್ನಡ ಚಿತ್ರರಂಗಕ್ಕೆ ಗಟ್ಟಿ ನಾಯಕತ್ವದ ಅವಶ್ಯಕತೆ ಇದೆ: ಸುಮಲತಾ
Video: 30 ಸೆಕೆಂಡುಗಳಲ್ಲಿ ಹಲವರಿಗೆ ಕಚ್ಚಿದ ಬೀದಿ ನಾಯಿ
Video: 30 ಸೆಕೆಂಡುಗಳಲ್ಲಿ ಹಲವರಿಗೆ ಕಚ್ಚಿದ ಬೀದಿ ನಾಯಿ
ಸಿದ್ದರಾಮಯ್ಯ ರಾಜೀನಾಮೆ ನೆನೆದು ಎಂ.ಸಿ.ಸುಧಾಕರ್​ ಕಣ್ಣೀರು
ಸಿದ್ದರಾಮಯ್ಯ ರಾಜೀನಾಮೆ ನೆನೆದು ಎಂ.ಸಿ.ಸುಧಾಕರ್​ ಕಣ್ಣೀರು
ಸಿದ್ದರಾಮಯ್ಯ ರಾಜೀನಾಮೆ ಹಿಂದಿನ ಸತ್ಯ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ರಾಜೀನಾಮೆ ಹಿಂದಿನ ಸತ್ಯ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ
ಸಿಎಂ ರಾಜೀನಾಮೆ ಸುದ್ದಿ ಬೆನ್ನಲ್ಲೇ BJP ಸಂಪರ್ಕಿಸಿದ್ದ ಕೆಲ ಕಾಂಗ್ರೆಸಿಗರು!
ಸಿಎಂ ರಾಜೀನಾಮೆ ಸುದ್ದಿ ಬೆನ್ನಲ್ಲೇ BJP ಸಂಪರ್ಕಿಸಿದ್ದ ಕೆಲ ಕಾಂಗ್ರೆಸಿಗರು!
ಮಕ್ಕಳನ್ನು ಮಲಗಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದ ಕೆಲಸದಾಕೆ
ಮಕ್ಕಳನ್ನು ಮಲಗಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದ ಕೆಲಸದಾಕೆ
ಡಿಕೆಶಿ​​ ಕೈ ಬಿಡದ ಆಂದ್ಲೆ ಶ್ರೀ ಜಗದೀಶ್ವರಿ: ಸತ್ಯವಾಯ್ತು ದೇವಿಯ ಶುಭಸೂಚನೆ
ಡಿಕೆಶಿ​​ ಕೈ ಬಿಡದ ಆಂದ್ಲೆ ಶ್ರೀ ಜಗದೀಶ್ವರಿ: ಸತ್ಯವಾಯ್ತು ದೇವಿಯ ಶುಭಸೂಚನೆ