AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಡೆಯಬೇಕಿದ್ದ ಆರ್​ಸಿಬಿಯ ಮುಂದಿನ ಪಂದ್ಯ​ ಬೇರೆಡೆಗೆ ಶಿಫ್ಟ್​: ಎಲ್ಲಿಗೆ ಗೊತ್ತಾ?

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಈ ಬಾರಿಯ ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿದ್ದು, ಈಗಾಗಲೇ ಪ್ಲೇ ಆಫ್​ಗೆ ಲಗ್ಗೆ ಇಟ್ಟಿದೆ. ಆದರೂ ಸಹ ಆರ್‌ಸಿಬಿಗೆ ಮಳೆ ಕಾಟ ಕೊಡುತ್ತಿದೆ. ಮೊನ್ನೆ ಅಷ್ಟೇ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಆರ್​ಸಿಬಿ ಹಾಗೂ ಕೆಕೆಆರ್ ಪಂದ್ಯ ಮಳೆಯಿಂದ ರದ್ದಾಗಿತ್ತು. ಇದರಿಂದ ಇದೀಗ ಇದೇ ಮೇ 23ರಂದು ಬೆಂಗಳೂರಿನಲ್ಲಿ ನಡೆಯಬೇಕಿದ್ದ ಹೈದರಾಬಾದ್ ಹಾಗೂ ಆರ್​ಸಿಬಿ ಪಂದ್ಯವನ್ನು ಬೇರೆಡೆಗೆ ಶಿಫ್ಟ್ ಮಾಡಲಾಗಿದೆ.

ಬೆಂಗಳೂರಿನಲ್ಲಿ ನಡೆಯಬೇಕಿದ್ದ ಆರ್​ಸಿಬಿಯ ಮುಂದಿನ ಪಂದ್ಯ​ ಬೇರೆಡೆಗೆ ಶಿಫ್ಟ್​: ಎಲ್ಲಿಗೆ ಗೊತ್ತಾ?
RCB Vs SRH
ರಮೇಶ್ ಬಿ. ಜವಳಗೇರಾ
|

Updated on:May 20, 2025 | 6:49 PM

Share

​ಐಪಿಎಲ್​-2025ರ ಟೂರ್ನಿ ಕ್ಲೈಮ್ಯಾಕ್ಸ್​ ಹಂತ ತಲುಪಿದ್ದು,   ಮೇ 29ರಿಂದ ಪ್ಲೇ ಆಫ್​ ಪಂದ್ಯಗಳು ನಡೆಯಲಿವೆ. ಅದರಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್​ ಬೆಂಗಳೂರು (Royal Challengers Bengaluru) ಹಾಗೂ ಸನ್ ರೈಸರ್ಸ್​ ಹೈದರಾಬಾದ್ (Sunrisers hyderabad) ನಡುವಿನ ಹೈವೋಲ್ಟೇಜ್ ಪಂದ್ಯ ಬೇರೆಡೆಗೆ ಶಿಫ್ಟ್​ ಆಗಿದೆ. ಇದೇ ಮೇ 23 ರಂದು ನಿಗದಿಯಂತೆ ಆರ್​ಸಿಬಿ ಮತ್ತು ಎಸ್​ಆರ್​ಎಚ್​(SRH) ಪಂದ್ಯವು ಬೆಂಗಳೂರಿನ (Bengaluru) ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿತ್ತು. ಆದರೆ ಬೆಂಗಳೂರಿನಲ್ಲಿ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಪಂದ್ಯವನ್ನು ಲಕ್ನೋಗೆ ಸ್ಥಳಾಂತರ ಮಾಡಲಾಗಿದೆ. ಹೀಗಾಗಿ ಮೇ 23ರಂದೇ ಆರ್​ಸಿಬಿ ವರ್ಸಸ್ ಹೈದರಾಬಾದ್​ ನಡುವಿನ ಪಂದ್ಯ  ಲಕ್ನೋನ ಏಕನಾಥ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಹವಾಮಾನ ಇಲಾಖೆ ಮಳೆ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಪಂದ್ಯವನ್ನು ಲಕ್ನೋದ ಎಕನಾ ಮೈದಾನದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಮೇ 17ರಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಮೈದಾನದಲ್ಲಿ ಕೋಲ್ಕತ್ತ ವಿರುದ್ಧ ಪಂದ್ಯವಿತ್ತು. ಆದರೆ ಮಳೆಯಿಂದಾಗಿ ನಡೆಸಲು ಸಾಧ್ಯವಾಗಲಿಲ್ಲ. ಪಂದ್ಯ ಕ್ಯಾನ್ಸಲ್ ಆದ ಹಿನ್ನೆಲೆಯಲ್ಲಿ ಎರಡೂ ತಂಡಕ್ಕೆ ತಲಾ ಒಂದೊಂದು ಅಂಕ ನೀಡಲಾಯ್ತು, ಇದರಿಂದ ಆರ್​ಸಿಬಿ ಪ್ಲೇ ಆಫ್​ಗೆ ಪ್ರವೇಶಿಸಿದರೆ, ಕೆಕೆಆರ್​ ಪ್ಲೇ ಆಫ್​ನಿಂದ ಹೊರಬಿದ್ದಿದೆ.

ಇದನ್ನೂ ಓದಿ: IPL 2025: ದೂರದ ಬ್ರಿಸ್ಬೇನ್​ನಿಂದ RCB ಅಭಿಮಾನಿಗಳಿಗೆ ಗುಡ್ ನ್ಯೂಸ್

ಈ ರೀತಿ ಮತ್ತೆ ಆಗಬಾರದು ಎನ್ನುವ ಕಾರಣಕ್ಕೆ ಆರ್​ಸಿಬಿ ಮತ್ತು ಎಸ್​ಆರ್​ಎಚ್​ ಪಂದ್ಯವನ್ನು ಬೆಂಗಳೂರಿನ ಲಕ್ನೋಗೆ ಶಿಫ್ಟ್ ಮಾಡಲಾಗಿದೆ. ಹೀಗಾಗಿ ಆರ್​ಸಿಬಿ ಮೇ 23ರಂದು ಹೈದರಾಬಾದ್​​ ಜತೆ ಹಾಗೂ ಮೇ 27ರಂದು ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧ ಇದೇ ಲಕ್ನೋನ ಎಕಾನಾ ಸ್ಟೇಡಿಯಂನಲ್ಲಿ ಆಡಲಿದೆ. ಈಗಾಗಲೇ ಆರ್​ಸಿಬಿ ಪ್ಲೇ ಆಫ್​ಗೆ ಪ್ರವೇಶಿಸಿದ್ದು, ಇನ್ನುಳಿದ ಈ ಎರಡು ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಥವಾ ಎರಡನೇ ಸ್ಥಾನ ಪಡೆದುಕೊಂಡರೆ ಪ್ಲೇ ಆಫ್​ನಲ್ಲಿ ಸೋತರೂ ಸಹ ಇನ್ನೊಂದು ಅವಕಾಶ ಸಿಗಲಿದೆ. ಹೀಗಾಗಿ ಆರ್​ಸಿಬಿ ಪಾಯಿಂಟ್ಸ್​ ಟೇಬಲ್​ನಲ್ಲಿ ಟಾಪ್ ಒನ್ ಅಥವಾ ಎರಡನೇ ಕಾಯ್ದುಕೊಳ್ಳಲು ಪ್ಲಾನ್ ಮಾಡಿದೆ. ಮತ್ತೊಂದೆಡೆ ಆರ್​ಸಿಬಿ ಫ್ಯಾನ್ಸ್​ ಸಹ ಈ ಸಲ ಕಪ್ ನಮ್ದೆ ಎಂದು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ.​​

ಇದನ್ನೂ ಓದಿ
Image
IPL 2025: RCB ಮುಝರಬಾನಿಯನ್ನೇ ಆಯ್ಕೆ ಮಾಡಿದ್ಯಾಕೆ ಗೊತ್ತಾ?
Image
IPL 2025: ಐಪಿಎಲ್​ಗೆ ಆಯ್ಕೆಯಾದ ಝಿಂಬಾಬ್ವೆಯ 5 ಆಟಗಾರರು ಇವರೇ
Image
IPL 2025: RCB ತಂಡದ ಮುಂದಿನ ಗುರಿ 17+4
Image
ಡೆಲ್ಲಿ ವಿರುದ್ಧ 10 ವಿಕೆಟ್​ಗಳಿಂದ ಗೆದ್ದು ಇತಿಹಾಸ ಸೃಷ್ಟಿಸಿದ ಗುಜರಾತ್

ಆರ್‌ಸಿಬಿ ತನ್ನ ಸಂಘಟಿತ ಆಟದ ಮೂಲಕ ಈ ಬಾರಿಯ ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿದ್ದು, ಎಲ್ಲರ ಗಮನ ಸೆಳೆಯುತ್ತಿದೆ. ಇದರಿಂದ ಈ ಬಾರಿ ಆರ್​ಸಿಬಿ ಕಪ್​ ಎತ್ತಿ ಹಿಡಿಯಲಿದೆ ಎನ್ನುವ ಆಶಾಭಾವನೆ ಇದ್ದು, ಏನಾಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಇನ್ನು ಐಪಿಎಲ್ ಅಂತಿಮಘಟ್ಟ ತಲುಪಿದ್ದು, ಮೇ 29 ರಿಂದ ಪ್ಲೇ-ಆಫ್ ಪಂದ್ಯಗಳು ನಡೆಯಲಿವೆ. ಜೂನ್ 3 ರಂದು ಫೈನಲ್ ಪಂದ್ಯ ನಡೆಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:22 pm, Tue, 20 May 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ