AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮೇ 17 ರಿಂದ ಐಪಿಎಲ್ ದ್ವಿತೀಯಾರ್ಧ, ಜೂನ್ 3 ರಂದು ಫೈನಲ್; ಬಿಸಿಸಿಐ ಅಧಿಕೃತ ಹೇಳಿಕೆ

BCCI Announces IPL 2025 Restart Date: ಭಾರತ ಮತ್ತು ಪಾಕಿಸ್ತಾನದ ನಡುವಿನ ಸೇನಾ ಕಾರ್ಯಾಚರಣೆಯಿಂದಾಗಿ ಅರ್ಧಕ್ಕೆ ನಿಂತಿದ್ದ 2025ರ ಐಪಿಎಲ್ ಟೂರ್ನಮೆಂಟ್ ಅನ್ನು ಮರು ಆರಂಭಿಸುವುದಾಗಿ ಬಿಸಿಸಿಐ ಘೋಷಿಸಿದೆ. ಮೇ 17ರಿಂದ ಉಳಿದ 17 ಪಂದ್ಯಗಳು ಆರಂಭವಾಗಲಿದ್ದು, 6 ನಗರಗಳಲ್ಲಿ ಪಂದ್ಯಗಳು ನಡೆಯಲಿವೆ. ಜೂನ್ 3ರಂದು ಫೈನಲ್ ಪಂದ್ಯ ನಡೆಯಲಿದೆ ಎಂದು ಬಿಸಿಸಿಐ ತಿಳಿಸಿದೆ. ಇಂಡಿಯನ್ ಪ್ರೀಮಿಯರ್ ಲೀಗ್‌ನ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.

IPL 2025: ಮೇ 17 ರಿಂದ ಐಪಿಎಲ್ ದ್ವಿತೀಯಾರ್ಧ, ಜೂನ್ 3 ರಂದು ಫೈನಲ್; ಬಿಸಿಸಿಐ ಅಧಿಕೃತ ಹೇಳಿಕೆ
Ipl 2025
ಪೃಥ್ವಿಶಂಕರ
|

Updated on:May 12, 2025 | 11:10 PM

Share

ಭಾರತ ಹಾಗೂ ಪಾಕಿಸ್ತಾನ ನಡುವಿನ ಸೇನಾ ಕಾರ್ಯಾಚರಣೆಯಿಂದಾಗಿ 2025 ರ ಐಪಿಎಲ್ (IPL 2025) ಅರ್ಧಕ್ಕೆ ನಿಂತಿತ್ತು. ಉಭಯ ದೇಶಗಳ ನಡುವೆ ಯುದ್ಧದ ಭೀತಿ ಎದುರಾಗಿದ್ದರಿಂದ ಮೇ 8 ರಂದು ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಿದ್ದ ಬಿಸಿಸಿಐ (BCCI), 2025 ರ ಐಪಿಎಲ್ ಅನ್ನು ಒಂದು ವಾರ ಮುಂದೂಡಿರುವುದಾಗಿ ಮೇ 9 ರಂದು ಘೋಷಿಸಿತ್ತು. ಆದರೀಗ ಎರಡೂ ದೇಶಗಳು ಕದನ ವಿರಾಮ ಘೋಷಿಸಿರುವ ಕಾರಣ ಬಿಸಿಸಿಐ ಉಳಿದ ಪಂದ್ಯಗಳಿಗೆ ಹೊಸ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಹೊಸ ವೇಳಾಪಟ್ಟಿಯ ಪ್ರಕಾರ, ಮೇ 17 ರಿಂದ ಲೀಗ್ ಮತ್ತೆ ಪ್ರಾರಂಭವಾಗಲಿದ್ದು, ಒಟ್ಟು 17 ಪಂದ್ಯಗಳು 6 ಸ್ಥಳಗಳಲ್ಲಿ ನಡೆಯಲಿವೆ. ಹಾಗೆಯೇ ಫೈನಲ್ ಪಂದ್ಯವು ಜೂನ್ 3 ರಂದು ನಡೆಯಲಿದೆ. ಈ ಬಗ್ಗೆ ಇಂಡಿಯನ್ ಪ್ರೀಮಿಯರ್ ಲೀಗ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಹೊಸ ವೇಳಾಪಟ್ಟಿ ಪ್ರಕಟ

ಉಳಿದ ಪಂದ್ಯಗಳನ್ನು ಬೆಂಗಳೂರು, ದೆಹಲಿ, ಲಕ್ನೋ, ಮುಂಬೈ, ಅಹಮದಾಬಾದ್ ಮತ್ತು ಜೈಪುರ ಸೇರಿದಂತೆ 6 ಸ್ಥಳಗಳಲ್ಲಿ ನಡೆಸಲು ಬಿಸಿಸಿಐ ನಿರ್ಧರಿಸಿದೆ. ಈ ಅವಧಿಯಲ್ಲಿ, ಉಳಿದ ಲೀಗ್ ಪಂದ್ಯಗಳನ್ನು ಮೇ 17 ರಿಂದ ಮೇ 25 ರವರೆಗೆ ಆಡಲಾಗುವುದು, ಇದರಲ್ಲಿ 2 ಡಬಲ್ ಹೆಡರ್‌ ಪಂದ್ಯಗಳು ಸೇರಿವೆ. ಅಂದರೆ ಒಂದೇ ದಿನ 2 ಪಂದ್ಯಗಳು ನಡೆಯಲಿದ್ದು, ಈ  ಡಬಲ್ ಹೆಡರ್ ಪಂದ್ಯಗಳನ್ನು ಎರಡು ಭಾನುವಾರಗಳಂದು ನಡೆಸಲು ತೀರ್ಮಾನಿಸಲಾಗಿದೆ.  ಇದಲ್ಲದೆ, ಪ್ಲೇಆಫ್ ಪಂದ್ಯಗಳು ಮೇ 29 ರಿಂದ ಪ್ರಾರಂಭವಾಗಲಿದ್ದು, ಫೈನಲ್ ಪಂದ್ಯ ಜೂನ್ 3 ರಂದು ನಡೆಯಲಿದೆ. ಆದರೆ ಲೀಗ್ ಪಂದ್ಯಗಳಿಗೆ ಸ್ಥಳಗಳನ್ನು ಪ್ರಕಟಿಸಿರುವ ಬಿಸಿಸಿಐ ಪ್ಲೇಆಫ್ ಪಂದ್ಯಗಳ ಸ್ಥಳಗಳನ್ನು ಇನ್ನೂ ನಿರ್ಧರಿಸಿಲ್ಲ.

ಐಪಿಎಲ್ ಪತ್ರಿಕಾ ಪ್ರಕಟಣೆ

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಐಪಿಎಲ್, ‘ಟಾಟಾ ಐಪಿಎಲ್ 2025 ಪುನರಾರಂಭವನ್ನು ಘೋಷಿಸಲು ಬಿಸಿಸಿಐ ಸಂತೋಷಪಡುತ್ತಿದೆ. ಐಪಿಎಲ್ ದ್ವಿತೀಯಾರ್ಧ ಮೇ 17 ರಿಂದ ಪ್ರಾರಂಭವಾಗಿ ಜೂನ್ 3 ರಂದು ನಡೆಯುವ ಫೈನಲ್‌ ಪಂದ್ಯದೊಂದಿಗೆ ಅಂತ್ಯವಾಗಲಿದೆ. ಈ ಅವಧಿಯಲ್ಲಿ ಒಟ್ಟು 17 ಪಂದ್ಯಗಳು 6 ಸ್ಥಳಗಳಲ್ಲಿ ನಡೆಯಲಿವೆ. ಹೊಸ ವೇಳಾಪಟ್ಟಿಯಲ್ಲಿ ಎರಡು ಡಬಲ್-ಹೆಡರ್‌ಗಳು ಸೇರಿವೆ. ಪ್ಲೇಆಫ್ ಪಂದ್ಯಗಳನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದ್ದು, ಕ್ವಾಲಿಫೈಯರ್ 1 – ಮೇ 29 ರಂದು, ಎಲಿಮಿನೇಟರ್ – ಮೇ 30 ರಮದು, ಕ್ವಾಲಿಫೈಯರ್ 2 – ಜೂನ್ 1 ರಂದು ಮತ್ತು ಫೈನಲ್ ಪಂದ್ಯ ಜೂನ್ 3 ರಂದು ನಡೆಯಲಿದೆ. ಪ್ಲೇಆಫ್ ಪಂದ್ಯಗಳ ಸ್ಥಳಗಳನ್ನು ನಂತರ ಘೋಷಿಸಲಾಗುವುದು. ಕ್ರಿಕೆಟ್ ಸುರಕ್ಷಿತವಾಗಿ ಮರಳಲು ಕಾರಣರಾದ ಭಾರತೀಯ ಸಶಸ್ತ್ರ ಪಡೆಗಳ ಶೌರ್ಯ ಮತ್ತು ಸ್ಥಿತಿಸ್ಥಾಪಕತ್ವಕ್ಕೆ ಮತ್ತೊಮ್ಮೆ ನಮನ ಸಲ್ಲಿಸಲು ಬಿಸಿಸಿಐ ಈ ಅವಕಾಶವನ್ನು ಬಳಸಿಕೊಳ್ಳುತ್ತದೆ ಎಂದು ತಿಳಿಸಿದೆ.

ಉಳಿದ ಪಂದ್ಯಗಳ ವೇಳಾಪಟ್ಟಿ

ದಿನಾಂಕ ಮುಖಾಮುಖಿ ಸಮಯ ಸ್ಥಳ
17-05-2025 ಆರ್​ಸಿಬಿ vs ಕೆಕೆಆರ್ ಸಂಜೆ 7:30 ಬೆಂಗಳೂರು
18-05-2025 ರಾಜಸ್ಥಾನ vs ಪಂಜಾಬ್ ಮಧ್ಯಾಹ್ನ 3:30 ಜೈಪುರ
18-05-2025 ಡೆಲ್ಲಿ vs ಗುಜರಾತ್ ಸಂಜೆ 7:30 ದೆಹಲಿ
19-05-2025 ಲಕ್ನೋ vs ಹೈದರಾಬಾದ್ ಸಂಜೆ 7:30 ಲಕ್ನೋ
20-05-2025 ಸಿಎಸ್​ಕೆ vs ರಾಜಸ್ಥಾನ್ ಸಂಜೆ 7:30 ದೆಹಲಿ
21-05-2025 ಮುಂಬೈ vs ಡೆಲ್ಲಿ ಸಂಜೆ 7:30 ಮುಂಬೈ
22-05-2025 ಗುಜರಾತ್ vs ಲಕ್ನೋ ಸಂಜೆ 7:30 ಅಹಮದಾಬಾದ್
23-05-2025 ಆರ್​ಸಿಬಿ vs ಹೈದರಾಬಾದ್ ಸಂಜೆ 7:30 ಬೆಂಗಳೂರು
24-05-2025 ಪಂಜಾಬ್ vs ಡೆಲ್ಲಿ ಸಂಜೆ 7:30 ಜೈಪುರ
25-05-2025 ಗುಜರಾತ್ vs ಸಿಎಸ್​ಕೆ ಮಧ್ಯಾಹ್ನ 3:30 ಅಹಮದಾಬಾದ್
25-05-2025 ಹೈದರಾಬಾದ್ vs ಕೋಲ್ಕತ್ತಾ ಸಂಜೆ 7:30 ದೆಹಲಿ
26-05-2025 ಪಂಜಾಬ್ vs ಮುಂಬೈ ಸಂಜೆ 7:30 ಜೈಪುರ
27-05-2025 ಲಕ್ನೋ vs ಆರ್​ಸಿಬಿ ಸಂಜೆ 7:30 ಲಕ್ನೋ
29-05-2025 ಕ್ವಾಲಿಫೈಯರ್ 1 ಸಂಜೆ 7:30 ಸ್ಥಳ ನಿಗದಿ ಪಡಿಸಿಲ್ಲ
30-05-2025 ಎಲಿಮಿನೇಟರ್ ಸಂಜೆ 7:30 ಸ್ಥಳ ನಿಗದಿ ಪಡಿಸಿಲ್ಲ
01-06-2025 ಕ್ವಾಲಿಫೈಯರ್ 2 ಸಂಜೆ 7:30 ಸ್ಥಳ ನಿಗದಿ ಪಡಿಸಿಲ್ಲ
03-06-2025 ಫೈನಲ್ ಪಂದ್ಯ ಸಂಜೆ 7:30 ಸ್ಥಳ ನಿಗದಿ ಪಡಿಸಿಲ್ಲ

Published On - 10:40 pm, Mon, 12 May 25

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ