AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್ ಫೈನಲ್ ಕೋಲ್ಕತ್ತಾದಿಂದ ಶಿಫ್ಟ್..! ಕಾರಣ ಯುದ್ಧದ ಭೀತಿಯಲ್ಲ

IPL 2025 Final Venue Change: ಭಾರತ-ಪಾಕಿಸ್ತಾನ ಉದ್ವಿಗ್ನತೆಯಿಂದಾಗಿ ಸ್ಥಗಿತಗೊಂಡಿದ್ದ ಐಪಿಎಲ್ 2025 ಪುನರಾರಂಭದ ಭರವಸೆ ಹೆಚ್ಚಾಗಿದೆ. ಆದರೆ, ಮೇ 25ಕ್ಕೆ ನಿಗದಿಯಾಗಿದ್ದ ಫೈನಲ್ ಪಂದ್ಯ ಕೋಲ್ಕತ್ತಾದಲ್ಲಿ ಮಳೆಯ ಸಾಧ್ಯತೆಯಿಂದಾಗಿ ಅಹಮದಾಬಾದ್‌ಗೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ. ಉಳಿದ ಪಂದ್ಯಗಳ ವೇಳಾಪಟ್ಟಿ ಇನ್ನೂ ಘೋಷಣೆಯಾಗಿಲ್ಲ. ವಿದೇಶಿ ಆಟಗಾರರ ಲಭ್ಯತೆಯೂ ಒಂದು ಪ್ರಮುಖ ಅಂಶವಾಗಿದೆ.

IPL 2025: ಐಪಿಎಲ್ ಫೈನಲ್ ಕೋಲ್ಕತ್ತಾದಿಂದ ಶಿಫ್ಟ್..! ಕಾರಣ ಯುದ್ಧದ ಭೀತಿಯಲ್ಲ
Ipl 2025
ಪೃಥ್ವಿಶಂಕರ
|

Updated on:May 11, 2025 | 9:54 PM

Share

ಭಾರತ ಮತ್ತು ಪಾಕಿಸ್ತಾನ ನಡುವಿನ ಸೇನಾ ಕಾರ್ಯಾಚರಣೆಯಿಂದಾಗಿ ಅರ್ಧಕ್ಕೆ ನಿಂತಿದ್ದ ಐಪಿಎಲ್ 2025 (IPL 2025) ರ ಪುನರಾರಂಭದ ಭರವಸೆ ಹೆಚ್ಚಿದೆ. ಉಳಿದ ಐಪಿಎಲ್ ಪಂದ್ಯಗಳ ಪುನರಾರಂಭದ ದಿನಾಂಕಗಳನ್ನು ಇನ್ನೂ ಘೋಷಿಸಲಾಗಿಲ್ಲವಾದರೂ, ಈ ಸೀಸನ್​ನ ಫೈನಲ್ ಪಂದ್ಯದ ಬಗ್ಗೆ ಮಾತ್ರ ಬಿಗ್ ಅಪ್​ಡೇಟ್ ಹೊರಬಿದ್ದಿದೆ. ವಾಸ್ತವವಾಗಿ ಈ ಸೀಸನ್​ನ ಫೈನಲ್ ಪಂದ್ಯವನ್ನು ಕೋಲ್ಕತ್ತಾದ ಈಡನ್ ಗಾರ್ಡನ್ಸ್ (Kolkata Eden Gardens) ಕ್ರೀಡಾಂಗಣದಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು. ಈ ಪಂದ್ಯ ಮೇ 25 ರಂದು ಸಂಜೆ 7:30 ಕ್ಕೆ ಆರಂಭವಾಗಬೇಕಿತ್ತು. ಆದರೆ ಈಗ ಈ ಫೈನಲ್ ಪಂದ್ಯದ ಸ್ಥಳದಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ. ಇದು ಇನ್ನೂ ಅಧಿಕೃತವಾಗಿ ದೃಢೀಕರಿಸಲ್ಪಟ್ಟಿಲ್ಲವಾದರೂ, ಇದು ಸಂಭವಿಸಿದಲ್ಲಿ ಕೋಲ್ಕತ್ತಾದ ಕ್ರಿಕೆಟ್ ಪ್ರಿಯರಿಗೆ ತುಂಬಾ ನಿರಾಶೆಯಾಗಲಿದೆ.

ಮಳೆಯೇ ಪ್ರಮುಖ ಕಾರಣ

ಮೇಲೆ ಹೇಳಿದಂತೆ ಈ ಸೀಸನ್​ನ ಫೈನಲ್ ಪಂದ್ಯವು ಮೇ 25 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಆದರೆ ಭಾರತ-ಪಾಕಿಸ್ತಾನ ಉದ್ವಿಗ್ನತೆಯಿಂದಾಗಿ, ಐಪಿಎಲ್ ಅನ್ನು ಒಂದು ವಾರ ಸ್ಥಗಿತಗೊಳಿಸಲಾಯಿತು. ಈಗ ಹೊಸ ವೇಳಾಪಟ್ಟಿ ಘೋಷಣೆಯ ನಂತರವೇ ಪಂದ್ಯಗಳು ಯಾವಾಗ ಪ್ರಾರಂಭವಾಗುತ್ತವೆ ಎಂದು ತಿಳಿಯುತ್ತದೆ. ಆದಗ್ಯೂ ಈ ಸೀಸನ್​ನ ಫೈನಲ್ ಪಂದ್ಯವೂ ಮೇ 30 ರಂದು ನಡೆಯುವ ಸಾಧ್ಯತೆಗಳಿದ್ದು, ಅದೇ ದಿನ ಕೋಲ್ಕತ್ತಾದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ. ಪಿಟಿಐ ವರದಿಯ ಪ್ರಕಾರ, ಮೇ 30 ರಂದು ಕೋಲ್ಕತ್ತಾದಲ್ಲಿ ಶೇ. 65 ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಇಂತಹ ಪರಿಸ್ಥಿತಿಯಲ್ಲಿ, ಫೈನಲ್ ಪಂದ್ಯವನ್ನು ಕೋಲ್ಕತ್ತಾದ ಬದಲು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಸಬಹುದು ಎಂದು ಹೇಳಲಾಗುತ್ತಿದೆ.

IPL 2025: ಐಪಿಎಲ್ ಆರಂಭದ ಬಗ್ಗೆ ಇನ್ನೂ ಯಾವುದೇ ನಿರ್ಧಾರವಾಗಿಲ್ಲ; ರಾಜೀವ್ ಶುಕ್ಲಾ

ಒಂದು ವಾರ ಮುಂದೂಡಿಕೆ

ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು, ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯು ಮೇ 9 ರಂದು ಪಂದ್ಯಾವಳಿಯನ್ನು ಒಂದು ವಾರ ಮುಂದೂಡುವುದಾಗಿ ಘೋಷಿಸಿತ್ತು. ಈ ಸೀಸನ್​ನಲ್ಲಿ ಇದುವರೆಗೆ 57 ಪಂದ್ಯಗಳನ್ನು ಆಡಲಾಗಿದೆ. ಆದರೆ ಒಟ್ಟು 74 ಪಂದ್ಯಗಳು ನಡೆಯಬೇಕಿತ್ತು. ಇದರರ್ಥ ಇನ್ನೂ 17 ಪಂದ್ಯಗಳು ಉಳಿದಿದ್ದು, ಈ ಪಂದ್ಯಗಳನ್ನು ಪೂರ್ಣಗೊಳಿಸಲು ಕನಿಷ್ಠ ಎರಡು ವಾರ ಬೇಕಾಗಬಹುದು. ಬಿಸಿಸಿಐ ಈ ಲೀಗ್ ಅನ್ನು ಆದಷ್ಟು ಬೇಗ ಆಯೋಜಿಸುವ ಬಗ್ಗೆ ಯೋಚಿಸುತ್ತಿದೆ. ಇದಕ್ಕಾಗಿ ಸುರಕ್ಷಿತ ಸ್ಥಳವನ್ನು ಸಹ ಹುಡುಕುತ್ತಿದೆ. ಆದರೆ ಐಪಿಎಲ್‌ನಲ್ಲಿ ಭಾಗವಹಿಸುತ್ತಿರುವ ವಿದೇಶಿ ಆಟಗಾರರು ತವರಿಗೆ ಮರಳಿದ್ದು, ಅವರಲ್ಲಿ ಕೆಲವರು ಮತ್ತೆ ಭಾರತಕ್ಕೆ ಬರುವ ಬಗ್ಗೆ ಅನುಮಾನ ಮೂಡಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:53 pm, Sun, 11 May 25

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ