AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಸುಲಭವಾಗಿ ಗೆಲ್ಲಬಹುದಾಗಿದ್ದ ಪಂದ್ಯ: ಸೋಲಿಗೆ ಕಾರಣ ರಿಷಭ್ ಪಂತ್..!

IPL 2025 CSK vs LSG: ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೊನೆಗೂ ಗೆಲುವಿನ ಲಯಕ್ಕೆ ಮರಳಿದೆ. ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡ 166 ರನ್​ ಕಲೆಹಾಕಿದರೆ, ಈ ಗುರಿಯನ್ನು ಸಿಎಸ್​ಕೆ ತಂಡವು 19.3 ಓವರ್​ಗಳಲ್ಲಿ ಚೇಸ್ ಮಾಡಿ 5 ವಿಕೆಟ್​ಗಳ ಜಯ ಸಾಧಿಸಿದೆ.

IPL 2025: ಸುಲಭವಾಗಿ ಗೆಲ್ಲಬಹುದಾಗಿದ್ದ ಪಂದ್ಯ: ಸೋಲಿಗೆ ಕಾರಣ ರಿಷಭ್ ಪಂತ್..!
Dhoni - Pant
ಝಾಹಿರ್ ಯೂಸುಫ್
|

Updated on: Apr 15, 2025 | 8:24 AM

Share

IPL 2025: ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 30ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಇದಾಘ್ಯೂ ರಿಷಭ್ ಪಂತ್ 49 ಎಸೆತಗಳಲ್ಲಿ 63 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡ 20 ಓವರ್​ಗಳಲ್ಲಿ 166 ರನ್ ಕಲೆಹಾಕಿತು.

167 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 15 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 111 ರನ್​ಗಳು ಮಾತ್ರ. ಕೊನೆಯ 5 ಓವರ್​ಗಳಲ್ಲಿ ಸಿಎಸ್​ಕೆ ತಂಡವು 55 ರನ್​ಗಳ ಗುರಿ ಪಡೆದಿತ್ತು. ಇದಾಗ್ಯೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ತೆಗೆದುಕೊಂಡ ಅಚ್ಚರಿಯ ನಿರ್ಧಾರಗಳೇ LSG ಪಾಲಿಗೆ ಮುಳುವಾಯಿತು.

ಪಂತ್ ಅಚ್ಚರಿಯ ನಡೆ:

15ನೇ ಓವರ್​ ಮುಕ್ತಾಯದ ವೇಳೆಗೆ ಮಹೇಂದ್ರ ಸಿಂಗ್ ಧೋನಿ ಕ್ರೀಸ್​ಗೆ ಆಗಮಿಸಿದ್ದರು. ಧೋನಿಗೆ ಸ್ಪಿನ್ ಬೌಲರ್‌ಗಳ ವಿರುದ್ಧ ಸಮಸ್ಯೆಗಳಿವೆ ಎಂದು ಎಲ್ಲರಿಗೂ ತಿಳಿದಿದೆ. ಪಿಚ್ ಸ್ಪಿನ್ ಬೌಲರ್‌ಗಳಿಗೆ ಅನುಕೂಲಕರವಾಗಿದ್ದರೂ ರಿಷಭ್ ಪಂತ್ ರವಿ ಬಿಷ್ಣೋಯ್‌ಗೆ ಓವರ್ ನೀಡಲಿಲ್ಲ ಎಂಬುದೇ ಅಚ್ಚರಿ.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಮೂರು ಓವರ್​ಗಳಲ್ಲಿ ಖೇವಲ 18 ರನ್ ನೀಡಿ 2 ವಿಕೆಟ್ ಪಡೆದಿದ್ದ ರವಿ ಬಿಷ್ಣೋಯ್ ಅವರಿಂದ ಕೊನೆಯ 5 ಓವರ್​ಗಳಲ್ಲಿ ಒಂದು ಓವರ್​ ಹಾಕಿಸದಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿತ್ತು. ಈ ಬಗ್ಗೆ ಲೈವ್​ನಲ್ಲೇ ಕಾಮೆಂಟೇಟರ್​ಗಳು ಸಹ ಪ್ರಶ್ನೆಗಳೆನ್ನೆತ್ತಿದ್ದರು.

ಶಾರ್ದೂಲ್​ಗೆ ಪದೇ ಪದೇ ಓವರ್:

ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ದುಬಾರಿಯಾಗಿದ್ದು ಶಾರ್ದೂಲ್ ಠಾಕೂರ್. ಇದಾಗ್ಯೂ ರಿಷಭ್ ಪಂತ್ 17ನೇ ಮತ್ತು 19ನೇ ಓವರ್​ಗಳನ್ನು ಶಾರ್ದೂಲ್ ಠಾಕೂರ್​ಗೆ ನೀಡಿರುವುದು ಮತ್ತೊಂದು ಅಚ್ಚರಿ. ಲಯದಲ್ಲಿ ಇಲ್ಲದಿದ್ದರೂ ಶಾರ್ದೂಲ್ ಠಾಕೂರ್​ಗೆ ಸತತ ಬೌಲಿಂಗ್ ನೀಡುವ ಮೂಲಕ ಪಂತ್ ಪಂದ್ಯವನ್ನೇ ಕೈಚೆಲ್ಲಿಕೊಂಡರು.

ಚೆಂಡು ಬದಲಿಸಿದರೂ ಪ್ಲ್ಯಾನ್ ಬದಲಾಗಲಿಲ್ಲ:

ಈ ಪಂದ್ಯದ 16ನೇ ಓವರ್​ನ ನಂತರ ಅಂಪೈರ್‌ಗಳು ಚೆಂಡನ್ನು ಬದಲಾಯಿಸಿದರು. ಉತ್ತಮ ಚೆಂಡಿನೊಂದಿಗೆ ಸ್ಪಿನ್ನರ್‌ಗೆ ಬೌಲಿಂಗ್ ಮಾಡುವುದು ಸುಲಭವಾಗುತ್ತಿತ್ತು. ಆದರೆ ರಿಷಭ್ ಪಂತ್ ರವಿ ಬಿಷ್ಣೋಯ್​ಗೆ ಓವರ್ ನೀಡದೇ, ಶಾರ್ದೂಲ್ ಠಾಕೂರ್​ಗೆ ಕೈಗೆ ಚೆಂಡು ನೀಡಿದರು.

ಅವೇಶ್ ಖಾನ್ ಯಶಸ್ವಿ:

ಈ ಪಂದ್ಯದ ಡೆತ್ ಓವರ್​ಗಳಲ್ಲಿ ಅವೇಶ್ ಖಾನ್ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ್ದರು. ಇದರ ನಡುವೆ ಧೋನಿ ಬ್ಯಾಟ್​ನಿಂದ ಡೀಪ್ ಥರ್ಡ್​ಮ್ಯಾನ್​ನತ್ತ ಬೌಂಡರಿ ಹೋಯಿತು. ಇದಾಗ್ಯೂ ರಿಷಭ್ ಪಂತ್ ಅತ್ತ ಕಡೆ ಫೀಲ್ಡಿಂಗ್ ಸೆಟ್ ಮಾಡದಿರುವುದು ಕೂಡ ಅಚ್ಚರಿಗೆ ಕಾರಣವಾಗಿತ್ತು.

ಇದನ್ನೂ ಓದಿ: ಮೋಸದಾಟದ ಡೌಟ್… ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್

19ನೇ ಓವರ್​ ದುಬಾರಿ:

ಶಾರ್ದೂಲ್ ಠಾಕೂರ್ 3 ಓವರ್​ಗಳಲ್ಲಿ 37 ರನ್ ನೀಡಿದ್ದರು. ಇದಾಗ್ಯೂ ನಿರ್ಣಾಯಕ ಹಂತದಲ್ಲಿ ರಿಷಭ್ ಪಂತ್ 19ನೇ ಓವರ್​ ಅನ್ನು ಶಾರ್ದೂಲ್ ಠಾಕೂರ್ ಕೈಯಿಂದ ಹಾಕಿಸಿರುವುದೇ ಆಶ್ಚರ್ಯ. ಪರಿಣಾಮ ಈ ಓವರ್​ನಲ್ಲಿ ಫುಲ್ ಟಾಸ್ ನೋಬಾಲ್​ನೊಂದಿಗೆ ಶಾರ್ದೂಲ್ ಬರೋಬ್ಬರಿ 19 ರನ್ ಬಿಟ್ಟುಕೊಟ್ಟರು. ಪರಿಣಾಮ ಗೆಲ್ಲಬಹುದಾಗಿದ್ದ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ಕೈಚೆಲ್ಲಿಕೊಂಡರು.

ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!