AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR vs LSG: ಸೋಲಿಗೆ ಸ್ಯಾಂಡಿ ಕಾರಣ: ರಿಯಾನ್ ಪರಾಗ್

IPL 2025 LSG vs RR: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 36ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 180 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು 178 ರನ್​ಗಳಿಸಿ ಕೇವಲ 2 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

RR vs LSG: ಸೋಲಿಗೆ ಸ್ಯಾಂಡಿ ಕಾರಣ: ರಿಯಾನ್ ಪರಾಗ್
Riyan Parag
Follow us
ಝಾಹಿರ್ ಯೂಸುಫ್
|

Updated on: Apr 20, 2025 | 8:24 AM

ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2025) 36ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (RR) ವಿರುದ್ಧ ಲಕ್ನೋ ಸೂಒರ್ ಜೈಂಟ್ಸ್ (LSG) ತಂಡವು 2 ರನ್​ಗಳ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ತಂಡದ ನಾಯಕ ರಿಷಭ್ ಪಂತ್ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 180 ರನ್ ಕಲೆಹಾಕಿತು.

181 ರನ್​ಗಳ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡ 19 ಓವರ್​ಗಳಲ್ಲಿ 172 ರನ್​ ಕಲೆಹಾಕಿತ್ತು. ಅದರಂತೆ ಕೊನೆಯ ಓವರ್​ನಲ್ಲಿ 9 ರನ್​ಗಳ ಗುರಿ ಪಡೆದ ಆರ್​ಆರ್ ತಂಡವು ಕೇವಲ 6 ರನ್​ಗಳಿಸಿ 2 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಈ ಸೋಲಿನ ಬಳಿಕ ಮಾತನಾಡಿದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್, ನಮ್ಮ ಪರಾಜಯಕ್ಕೆ ಕೊನೆಯ ಓವರ್​ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ. ಏಕೆಂದರೆ ನಾವು ಅಂತಿಮ ಓವರ್​ನಲ್ಲಿ ಅತ್ಯಧಿಕ ರನ್ ನೀಡಿದ್ದೆವು. ಇದುವೇ ಸೋಲಿಗೆ ಕಾರಣವಾಯ್ತು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

181 ರನ್​ಗಳ ಗುರಿ ಬೆನ್ನತ್ತಿದ್ದರೂ, ನಾವು 18-19ನೇ ಓವರ್ ವರೆಗೆ ಮೇಲುಗೈ ಸಾಧಿಸಿದ್ದೆವು. ಬಹುಶಃ 19ನೇ ಓವರ್‌ನಲ್ಲೇ ನಾವು ಪಂದ್ಯವನ್ನು ಮುಗಿಸಬೇಕಿತ್ತು. ಅದಕ್ಕೆ ನಾನು ನನ್ನನ್ನೇ ದೂಷಿಸುತ್ತೇನೆ. ಏಕೆಂದರೆ ನಾವು ಪಂದ್ಯವನ್ನು ಕೊನೆಯವರೆಗೆ ತೆಗೆದುಕೊಂಡು ಹೋಗಿದ್ದು ತಪ್ಪು ಎಂಬುದು ನನ್ನ ಭಾವನೆ.

ಇದಕ್ಕೂ ಮುನ್ನ ನಾವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು 165-170 ರೊಳಗೆ ನಿಯಂತ್ರಿಸುವ ವಿಶ್ವಾಸವಿತ್ತು.  ಆದರೆ ಸ್ಯಾಂಡಿ (ಸಂದೀಪ್ ಶರ್ಮಾ) ಓವರ್​ ನಮ್ಮ ಪಾಲಿಗೆ ದುಬಾರಿಯಾಯಿತು, ಅವರು ನಮ್ಮ ಪರ ಕೆಟ್ಟ ಪಂದ್ಯವನ್ನಾಡಿದ್ದಾರೆ. ಇದುವೇ ಪಂದ್ಯದ ಚಿತ್ರಣ ಬದಲಿಸಿತು ಎಂದು ರಿಯಾನ್ ಪರಾಗ್ ಹೇಳಿದ್ದಾರೆ.

ರಿಯಾನ್ ಪರಾಗ್ ಈ ಹೇಳಿಕೆ ನೀಡಲು ಮುಖ್ಯ ಕಾರಣ, ರಾಜಸ್ಥಾನ್ ರಾಯಲ್ಸ್ ಪರ ಸಂದೀಪ್ ಶರ್ಮಾ 20ನೇ ಓವರ್​ನಲ್ಲಿ ಬರೋಬ್ಬರಿ 27 ರನ್​ಗಳನ್ನು ಬಿಟ್ಟು ಕೊಟ್ಟಿರುವುದು. ಅಬ್ದುಲ್ ಸಮದ್ ಕೊನೆಯ ಓವರ್​ನಲ್ಲಿ 4 ಭರ್ಜರಿ ಸಿಕ್ಸ್ ಸಿಡಿಸಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸ್ಕೋರ್​ ಅನ್ನು 180 ಕ್ಕೆ ತಂದು ನಿಲ್ಲಿಸಿದ್ದರು.

ಇದನ್ನೂ ಓದಿ: Tim David: ಟಿಮ್ ಡೇವಿಡ್ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್

ಒಂದು ವೇಳೆ ಸಂದೀಪ್ ಶರ್ಮಾ ಕೊನೆಯ ಓವರ್​ನಲ್ಲಿ 4 ಸಿಕ್ಸರ್​ಗಳನ್ನು ಹೊಡೆಸಿಕೊಳ್ಳದಿದ್ದರೆ, ಈ ಪಂದ್ಯವು ರಾಜಸ್ಥಾನ್ ರಾಯಲ್ಸ್ ಪರ ಇರುತ್ತಿತ್ತು. ಇದಾಗ್ಯೂ ನಾವು 181 ರನ್​ಗಳನ್ನು ಬೆನ್ನಟ್ಟಬೇಕಿತ್ತು. ಏಕೆಂದರೆ ಪಿಚ್​ ಬಗ್ಗೆ ಯಾವುದೇ ದೂರುಗಳನ್ನು ಹೇಳುವಂತಿಲ್ಲ. ಬ್ಯಾಟಿಂಗ್​ ಮಾಡಲು ಉತ್ತಮವಾಗಿತ್ತು.  ಆದರೆ ಕೆಲ ಎಸೆತಗಳಿಂದಾಗಿ ನಾವು ಪಂದ್ಯವನ್ನು ಕಳೆದುಕೊಂಡಿದ್ದೇವೆ ಎಂದು ರಿಯಾನ್ ಪರಾಗ್ ಹೇಳಿದ್ದಾರೆ.

ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ