AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಟರ್ ಮೈಂಡ್… ಮೈದಾನಕ್ಕಿಳಿಯದೇ ಪಂದ್ಯದ ಚಿತ್ರಣ ಬದಲಿಸಿದ ರೋಹಿತ್ ಶರ್ಮಾ

IPL 2025 DC vs MI: ಐಪಿಎಲ್ 2025 ರ 29ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ 205 ರನ್ ಕಲೆಹಾಕಿದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡ 193 ರನ್​ಗಳಿಗೆ ಆಲೌಟ್ ಆಗಿ 12 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಮಾಸ್ಟರ್ ಮೈಂಡ್... ಮೈದಾನಕ್ಕಿಳಿಯದೇ ಪಂದ್ಯದ ಚಿತ್ರಣ ಬದಲಿಸಿದ ರೋಹಿತ್ ಶರ್ಮಾ
Rohit Sharma
ಝಾಹಿರ್ ಯೂಸುಫ್
|

Updated on: Apr 14, 2025 | 9:04 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ರಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದ್ದ ಮುಂಬೈ ಇಂಡಿಯನ್ಸ್ (MI) ತಂಡವು ಕೊನೆಗೂ ಗೆಲುವಿನ ಲಯಕ್ಕೆ ಮರಳಿದೆ. ಅದು ಸಹ ಅಜೇಯರಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಕ್ಕೆ ಸೋಲುಣಿಸುವ ಮೂಲಕ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ ಗೆಲುವಿನ ಹಿಂದೆ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಅವರ ಕಾರ್ಯತಂತ್ರ ಕೂಡ ಅಡಗಿದೆ.

ಏಕೆಂದರೆ ಒಂದು ಹಂತದವರೆಗೆ ಇಡೀ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್​ನತ್ತ ವಾಲಿತ್ತು. ಈ ಹಂತದಲ್ಲಿ ರೋಹಿತ್ ಶರ್ಮಾ ನೀಡಿದ ಕೆಲ ಸಲಹೆಗಳೇ ಪಂದ್ಯ ಚಿತ್ರಣವನ್ನು ಬದಲಿಸುವಂತೆ ಮಾಡಿತ್ತು ಎಂದರೆ ತಪ್ಪಾಗಲಾರದು.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

13 ಓವರ್​ಗಳ ಮುಕ್ತಾಯದ ವೇಳೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು 4 ವಿಕೆಟ್ ಕಳೆದುಕೊಂಡು 145 ರನ್ ಕಲೆಹಾಕಿ ಸುಸ್ಥಿತಿಯಲ್ಲಿತ್ತು. ಈ ವೇಳೆ ಡಗೌಟ್​ನಲ್ಲಿದ್ದ ರೋಹಿತ್ ಶರ್ಮಾ ಚೆಂಡು ಬದಲಿಸುವಂತೆ ಕೋಚ್ ಮಹೇಲ ಜಯವರ್ಧನೆ ಹಾಗೂ ನಾಯಕ ಹಾರ್ದಿಕ್ ಪಾಂಡ್ಯಗೆ ಸೂಚಿಸಿದ್ದರು. ಅದರಂತೆ ಬಾಲ್ ಬದಲಿಸಲಾಯಿತು.

ಕೋಚ್​ಗೆ ರೋಹಿತ್ ಶರ್ಮಾ ಸಲಹೆ:

ಸ್ಪಿನ್ನರ್​ ರಣತಂತ್ರ:

ಚೆಂಡು ಬದಲಿಸಿದ ಬಳಿಕ ರೋಹಿತ್ ಶರ್ಮಾ ಸ್ಪಿನ್ನರ್​ಗೆ ಬಾಲ್ ನೀಡುವಂತೆ ಸಲಹೆ ನೀಡಿದ್ದಾರೆ. ಅದರಂತೆ 14ನೇ ಓವರ್​ನಲ್ಲಿ ದಾಳಿಗಿಳಿದ ಕರ್ಣ್​ ಶರ್ಮಾ ಟ್ರಿಸ್ಟನ್ ಸ್ಟಬ್ಸ್ ವಿಕೆಟ್ ಪಡೆದರು. 16ನೇ ಓವರ್​ನಲ್ಲಿ ಕರ್ಣ್ ಶರ್ಮಾ ಎಸೆತದಲ್ಲಿ ಕೆಎಲ್ ರಾಹುಲ್ ಸಹ ಕ್ಯಾಚ್ ನೀಡಿದರು. ಈ ಎರಡು ವಿಕೆಟ್​ಗಳು ಡೆಲ್ಲಿ ಕ್ಯಾಪಿಟಲ್ಸ್ ತಂಡದ ರನ್ ಗತಿಯನ್ನು ನಿಯಂತ್ರಿಸಿತು.

ಇದನ್ನೂ ಓದಿ: ಭಾರತೀಯರು ನಿಮ್ಮನ್ನು… ಪಾಕ್ ಪತ್ರಕರ್ತನ ಪ್ರಶ್ನೆಗೆ ಡೇವಿಡ್ ವಾರ್ನರ್ ಖಡಕ್ ಉತ್ತರ

ಪರಿಣಾಮ ಕೊನೆಯ 2 ಓವರ್​ಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 23 ರನ್​ಗಳ ಅಗತ್ಯವಿತ್ತು. ಆದರೆ 19ನೇ ಓವರ್​ನಲ್ಲಿ ಮೂವರು ರನೌಟ್ ಆಗುವುದರೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಇನಿಂಗ್ಸ್ 193 ರನ್​ಗಳಿಗೆ ಅಂತ್ಯಗೊಂಡಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವು 12 ರನ್​ಗಳ ರೋಚಕ ಜಯ ಸಾಧಿಸಿತು.

ಹಿಟ್​ಮ್ಯಾನ್ ಮಾಸ್ಟರ್ ಪ್ಲ್ಯಾನ್:

13ನೇ ಓವರ್​ ಮುಕ್ತಾಯದ ಬೆನ್ನಲ್ಲೇ ರೋಹಿತ್ ಶರ್ಮಾ ನೀಡಿದ ಸಲಹೆಯು ಮುಂಬೈ ಇಂಡಿಯನ್ಸ್ ಪಾಲಿಗೆ ವರದಾನವಾಯಿತು. ಅದರಲ್ಲೂ ಡಗೌಟ್​ನಲ್ಲೇ ಕೂತು ಇಡೀ ಪಂದ್ಯದ ಚಿತ್ರಣ ಬದಲಿಸಿದ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕನ ನಡೆಗೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಡಗೌಟ್​ನಿಂದಲೇ ರೋಹಿತ್ ಶರ್ಮಾ ಸಲಹೆ ಸೂಚನೆ:

ಇಂತಹ ನಾಯಕತ್ದದ ನಡೆಗಳಿಂದಲೇ ಈ ಹಿಂದೆ ಮುಂಬೈ ಇಂಡಿಯನ್ಸ್ ತಂಡವು 5 ಬಾರಿ ಟ್ರೋಫಿ ಎತ್ತಿ ಹಿಡಿದಿದೆ ಎಂದು ಅಭಿಮಾನಿಗಳು ರೋಹಿತ್ ಶರ್ಮಾಗೆ ಬಹುಪರಾಕ್ ಅನ್ನುತ್ತಿದ್ದಾರೆ.

ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು
ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್