AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಟರ್ ಮೈಂಡ್… ಮೈದಾನಕ್ಕಿಳಿಯದೇ ಪಂದ್ಯದ ಚಿತ್ರಣ ಬದಲಿಸಿದ ರೋಹಿತ್ ಶರ್ಮಾ

IPL 2025 DC vs MI: ಐಪಿಎಲ್ 2025 ರ 29ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ 205 ರನ್ ಕಲೆಹಾಕಿದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡ 193 ರನ್​ಗಳಿಗೆ ಆಲೌಟ್ ಆಗಿ 12 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಮಾಸ್ಟರ್ ಮೈಂಡ್... ಮೈದಾನಕ್ಕಿಳಿಯದೇ ಪಂದ್ಯದ ಚಿತ್ರಣ ಬದಲಿಸಿದ ರೋಹಿತ್ ಶರ್ಮಾ
Rohit Sharma
Follow us
ಝಾಹಿರ್ ಯೂಸುಫ್
|

Updated on: Apr 14, 2025 | 9:04 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ರಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದ್ದ ಮುಂಬೈ ಇಂಡಿಯನ್ಸ್ (MI) ತಂಡವು ಕೊನೆಗೂ ಗೆಲುವಿನ ಲಯಕ್ಕೆ ಮರಳಿದೆ. ಅದು ಸಹ ಅಜೇಯರಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಕ್ಕೆ ಸೋಲುಣಿಸುವ ಮೂಲಕ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ ಗೆಲುವಿನ ಹಿಂದೆ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಅವರ ಕಾರ್ಯತಂತ್ರ ಕೂಡ ಅಡಗಿದೆ.

ಏಕೆಂದರೆ ಒಂದು ಹಂತದವರೆಗೆ ಇಡೀ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್​ನತ್ತ ವಾಲಿತ್ತು. ಈ ಹಂತದಲ್ಲಿ ರೋಹಿತ್ ಶರ್ಮಾ ನೀಡಿದ ಕೆಲ ಸಲಹೆಗಳೇ ಪಂದ್ಯ ಚಿತ್ರಣವನ್ನು ಬದಲಿಸುವಂತೆ ಮಾಡಿತ್ತು ಎಂದರೆ ತಪ್ಪಾಗಲಾರದು.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

13 ಓವರ್​ಗಳ ಮುಕ್ತಾಯದ ವೇಳೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು 4 ವಿಕೆಟ್ ಕಳೆದುಕೊಂಡು 145 ರನ್ ಕಲೆಹಾಕಿ ಸುಸ್ಥಿತಿಯಲ್ಲಿತ್ತು. ಈ ವೇಳೆ ಡಗೌಟ್​ನಲ್ಲಿದ್ದ ರೋಹಿತ್ ಶರ್ಮಾ ಚೆಂಡು ಬದಲಿಸುವಂತೆ ಕೋಚ್ ಮಹೇಲ ಜಯವರ್ಧನೆ ಹಾಗೂ ನಾಯಕ ಹಾರ್ದಿಕ್ ಪಾಂಡ್ಯಗೆ ಸೂಚಿಸಿದ್ದರು. ಅದರಂತೆ ಬಾಲ್ ಬದಲಿಸಲಾಯಿತು.

ಕೋಚ್​ಗೆ ರೋಹಿತ್ ಶರ್ಮಾ ಸಲಹೆ:

ಸ್ಪಿನ್ನರ್​ ರಣತಂತ್ರ:

ಚೆಂಡು ಬದಲಿಸಿದ ಬಳಿಕ ರೋಹಿತ್ ಶರ್ಮಾ ಸ್ಪಿನ್ನರ್​ಗೆ ಬಾಲ್ ನೀಡುವಂತೆ ಸಲಹೆ ನೀಡಿದ್ದಾರೆ. ಅದರಂತೆ 14ನೇ ಓವರ್​ನಲ್ಲಿ ದಾಳಿಗಿಳಿದ ಕರ್ಣ್​ ಶರ್ಮಾ ಟ್ರಿಸ್ಟನ್ ಸ್ಟಬ್ಸ್ ವಿಕೆಟ್ ಪಡೆದರು. 16ನೇ ಓವರ್​ನಲ್ಲಿ ಕರ್ಣ್ ಶರ್ಮಾ ಎಸೆತದಲ್ಲಿ ಕೆಎಲ್ ರಾಹುಲ್ ಸಹ ಕ್ಯಾಚ್ ನೀಡಿದರು. ಈ ಎರಡು ವಿಕೆಟ್​ಗಳು ಡೆಲ್ಲಿ ಕ್ಯಾಪಿಟಲ್ಸ್ ತಂಡದ ರನ್ ಗತಿಯನ್ನು ನಿಯಂತ್ರಿಸಿತು.

ಇದನ್ನೂ ಓದಿ: ಭಾರತೀಯರು ನಿಮ್ಮನ್ನು… ಪಾಕ್ ಪತ್ರಕರ್ತನ ಪ್ರಶ್ನೆಗೆ ಡೇವಿಡ್ ವಾರ್ನರ್ ಖಡಕ್ ಉತ್ತರ

ಪರಿಣಾಮ ಕೊನೆಯ 2 ಓವರ್​ಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 23 ರನ್​ಗಳ ಅಗತ್ಯವಿತ್ತು. ಆದರೆ 19ನೇ ಓವರ್​ನಲ್ಲಿ ಮೂವರು ರನೌಟ್ ಆಗುವುದರೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಇನಿಂಗ್ಸ್ 193 ರನ್​ಗಳಿಗೆ ಅಂತ್ಯಗೊಂಡಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವು 12 ರನ್​ಗಳ ರೋಚಕ ಜಯ ಸಾಧಿಸಿತು.

ಹಿಟ್​ಮ್ಯಾನ್ ಮಾಸ್ಟರ್ ಪ್ಲ್ಯಾನ್:

13ನೇ ಓವರ್​ ಮುಕ್ತಾಯದ ಬೆನ್ನಲ್ಲೇ ರೋಹಿತ್ ಶರ್ಮಾ ನೀಡಿದ ಸಲಹೆಯು ಮುಂಬೈ ಇಂಡಿಯನ್ಸ್ ಪಾಲಿಗೆ ವರದಾನವಾಯಿತು. ಅದರಲ್ಲೂ ಡಗೌಟ್​ನಲ್ಲೇ ಕೂತು ಇಡೀ ಪಂದ್ಯದ ಚಿತ್ರಣ ಬದಲಿಸಿದ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕನ ನಡೆಗೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಡಗೌಟ್​ನಿಂದಲೇ ರೋಹಿತ್ ಶರ್ಮಾ ಸಲಹೆ ಸೂಚನೆ:

ಇಂತಹ ನಾಯಕತ್ದದ ನಡೆಗಳಿಂದಲೇ ಈ ಹಿಂದೆ ಮುಂಬೈ ಇಂಡಿಯನ್ಸ್ ತಂಡವು 5 ಬಾರಿ ಟ್ರೋಫಿ ಎತ್ತಿ ಹಿಡಿದಿದೆ ಎಂದು ಅಭಿಮಾನಿಗಳು ರೋಹಿತ್ ಶರ್ಮಾಗೆ ಬಹುಪರಾಕ್ ಅನ್ನುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ