Sign In

By signing in or creating an account, you agree with Associated Broadcasting Company's Terms & Conditions and Privacy Policy.

RR vs KKR: ಕೆಕೆಆರ್​ ತಂಡದಿಂದ ಹೊರಬಿದ್ದ ಸ್ಟಾರ್ ಪ್ಲೇಯರ್..! ರಾಜಸ್ಥಾನ್ ತಂಡದಲ್ಲೂ ಬದಲಾವಣೆ

RR vs KKR Playing 11: ಗುವಾಹಟಿಯಲ್ಲಿ ರಾಜಸ್ಥಾನ ಮತ್ತು ಕೋಲ್ಕತ್ತಾ ನಡುವೆ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಕೋಲ್ಕತ್ತಾ ತಂಡ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ರಾಜಸ್ಥಾನ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಎರಡೂ ತಂಡಗಳ ಪ್ಲೇಯಿಂಗ್ 11 ನಲ್ಲಿ ಬದಲಾವಣೆ ಆಗಿದ್ದು, ಕೆಕೆಆರ್ ತಂಡದಿಂದ ಸುನೀಲ್ ನರೈನ್ ಹೊರಬಿದ್ದಿದ್ದರೆ, ರಾಜಸ್ಥಾನ್ ತಂಡದಿಂದ ಫರೂಕಿ ಹೊರಬಿದ್ದಿದ್ದಾರೆ.

RR vs KKR: ಕೆಕೆಆರ್​ ತಂಡದಿಂದ ಹೊರಬಿದ್ದ ಸ್ಟಾರ್ ಪ್ಲೇಯರ್..! ರಾಜಸ್ಥಾನ್ ತಂಡದಲ್ಲೂ ಬದಲಾವಣೆ
Kkr Vs Rr
Follow us
TV9 Web
| Updated By: ಪೃಥ್ವಿಶಂಕರ

Updated on:Mar 26, 2025 | 7:28 PM

2025 ರ ಐಪಿಎಲ್ (IPL 2025) ಅನ್ನು ಸೋಲಿನೊಂದಿಗೆ ಆರಂಭಿಸಿದ್ದ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ (RR vs KKR) ತಂಡಗಳು ಮತ್ತೆ ಗೆಲುವಿನ ಹಾದಿಗೆ ಮರಳಲು ಎದುರು ನೋಡುತ್ತಿವೆ. ಮೊದಲ ಪಂದ್ಯದಲ್ಲಿ ಕೋಲ್ಕತ್ತಾ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೋತರೆ, ಸನ್‌ರೈಸರ್ಸ್ ಹೈದರಾಬಾದ್ ತಂಡ ರಾಜಸ್ಥಾನವನ್ನು ಸೋಲಿಸಿತ್ತು. ಹೀಗಾಗಿ ಎರಡು ತಂಡಗಳು ಮೊದಲ ಗೆಲುವಿನ ನಿರೀಕ್ಷೆಯಲ್ಲಿವೆ. ಇನ್ನು ಈ ಪಂದ್ಯದಲ್ಲೂ ಸಂಜು ಸ್ಯಾಮ್ಸನ್ ನಾಯಕನಾಗಿ ಆಡುತ್ತಿಲ್ಲ. ಅವರ ಬದಲಿಗೆ ರಿಯಾನ್ ಪರಾಗ್ ರಾಜಸ್ಥಾನ ತಂಡವನ್ನು ಮುನ್ನಡೆಸುತ್ತಿದ್ದಾರೆ. ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಕೆಕೆಆರ್ ನಾಯಕ ಅಜಿಂಕ್ಯಾ ರಹಾನೆ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇದರ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದೆ.

ಒಂದೊಂದು ಬದಲಾವಣೆ

ಈ ಪಂದ್ಯದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ನಾಯಕ ರಹಾನೆ ಮೊದಲು ಬೌಲಿಂಗ್ ಮಾಡುವುದಾಗಿ ತಿಳಿಸಿದರು. ಆ ಬಳಿಕ ಪ್ಲೇಯಿಂಗ್ 11 ಬಗ್ಗೆ ಮಾಹಿತಿ ನೀಡಿದ ರಹಾನೆ, ಈ ಪಂದ್ಯದಲ್ಲಿ ಸುನಿಲ್ ನರೈನ್ ಆಡುತ್ತಿಲ್ಲ. ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಸ್ಥಾನದಲ್ಲಿ ಮೊಯೀನ್ ಅಲಿ ಆಡಲಿದ್ದಾರೆ ಎಂದಿದ್ದಾರೆ. ಇತ್ತ ರಾಜಸ್ಥಾನ ನಾಯಕ ರಿಯಾನ್ ಪರಾಗ್ ಕೂಡ ತಮ್ಮ ತಂಡದಲ್ಲಿ ಬದಲಾವಣೆ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದು ಫಜಲ್ಹಕ್ ಫಾರೂಕಿ ಬದಲಿಗೆ ವನಿಂದು ಹಸರಂಗ ಆಡಲಿದ್ದಾರೆ ಎಂದರು.

ಉಭಯ ತಂಡಗಳ ಪ್ಲೇಯಿಂಗ್ 11

ರಾಜಸ್ಥಾನ ರಾಯಲ್ಸ್: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ನಿತೀಶ್ ರಾಣಾ, ರಿಯಾನ್ ಪರಾಗ್ (ನಾಯಕ), ಧ್ರುವ್ ಜುರೆಲ್ (ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮಾಯೆರ್, ವನಿಂದು ಹಸರಂಗ, ಜೋಫ್ರಾ ಆರ್ಚರ್, ಮಹೀಶ್ ತೀಕ್ಷಣ, ತುಷಾರ್ ದೇಶಪಾಂಡೆ, ಸಂದೀಪ್ ಶರ್ಮಾ.

ಕೋಲ್ಕತ್ತಾ ನೈಟ್ ರೈಡರ್ಸ್: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ಅಜಿಂಕ್ಯ ರಹಾನೆ (ನಾಯಕ), ರಿಂಕು ಸಿಂಗ್, ಮೋಯಿನ್ ಅಲಿ, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಸ್ಪೆನ್ಸರ್ ಜಾನ್ಸನ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

RR vs KKR Live Score, IPL 2025: ಟಾಸ್ ಗೆದ್ದ ಕೆಕೆಆರ್; ರಾಜಸ್ಥಾನ್ ಮೊದಲು ಬ್ಯಾಟಿಂಗ್

ಮುಖಾಮುಖಿ ದಾಖಲೆ

ರಾಜಸ್ಥಾನ ಮತ್ತು ಕೆಕೆಆರ್ ತಂಡಗಳ ಮುಖಾಮುಖಿಯ ಬಗ್ಗೆ ಹೇಳುವುದಾದರೆ, ಐಪಿಎಲ್‌ನಲ್ಲಿ ಇಲ್ಲಿಯವರೆಗೆ ರಾಜಸ್ಥಾನ ಮತ್ತು ಕೆಕೆಆರ್ ನಡುವೆ ಒಟ್ಟು 29 ಪಂದ್ಯಗಳು ನಡೆದಿದ್ದು, ಎರಡೂ ತಂಡಗಳು ತಲಾ 14 ಪಂದ್ಯಗಳನ್ನು ಗೆದ್ದಿವೆ, ಉಳಿದಂತೆ ಒಂದು ಪಂದ್ಯವು ಫಲಿತಾಂಶವಿಲ್ಲದೆ ಕೊನೆಗೊಂಡಿದೆ.

Published On - 7:25 pm, Wed, 26 March 25

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ