AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್​ನಲ್ಲಿ 10 ನಿಮಯಗಳು ಬದಲಾವಣೆ

IPL 2025 Rule Changes: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 10 ನಿಯಮಗಳನ್ನು ಬದಲಿಸಲಾಗಿದೆ. ಈ ಎಲ್ಲಾ ನಿಯಮಗಳು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ನಡುವಣ ಪಂದ್ಯದ ವೇಳೆ ಜಾರಿಗೆ ಬರಲಿದೆ. ಹಾಗಿದ್ರೆ ಈ ಬಾರಿಯ ಐಪಿಎಲ್​ನಲ್ಲಿ ಬದಲಾಗಿರುವ ನಿಯಮಗಳಾವುವು? ಎಂದು ನೋಡೋಣ...

IPL 2025: ಐಪಿಎಲ್​ನಲ್ಲಿ 10 ನಿಮಯಗಳು ಬದಲಾವಣೆ
Ipl 2025
ಝಾಹಿರ್ ಯೂಸುಫ್
|

Updated on:Mar 22, 2025 | 7:59 AM

Share

ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಇಂದಿನಿಂದ ಶುರುವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ ಹಲವು ನಿಯಮಗಳು ಕೂಡ ಜಾರಿಯಾಗಲಿರುವುದು ವಿಶೇಷ. ಆ ನಿಯಮಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…

  1. ಎಂಜಲು ಬಳಕೆಗೆ ಅವಕಾಶ: ಕೋವಿಡ್ -19 ಸಾಂಕ್ರಾಮಿಕ ರೋಗದ ಭೀತಿ ಹಿನ್ನಲೆಯಲ್ಲಿ ಐಸಿಸಿ ಚೆಂಡಿನ ಮೇಲೆ ಎಂಜಲು ಬಳಕೆಯನ್ನು ನಿಷೇಧಿಸಿತ್ತು. ಆದರೆ ಈ ಬಾರಿಯ ಐಪಿಎಲ್​ನಲ್ಲಿ ಈ ನಿಯಮವನ್ನು ತೆಗೆದು ಹಾಕಲಾಗಿದೆ. ಹೀಗಾಗಿ ಬೌಲರ್​ಗಳು ಚೆಂಡಿನ ಮೇಲೆ ಎಂಜಲನ್ನು ಬಳಸಿ ರಿವರ್ಸ್ ಸ್ವಿಂಗ್ ಸಹಾಯವನ್ನು ಪಡೆಯಬಹುದು.
  2. ಎರಡು ಚೆಂಡುಗಳ ಬಳಕೆ: ರಾತ್ರಿ 7.30 ರಿಂದ ಶುರುವಾಗುವ ಪಂದ್ಯಗಳ ದ್ವಿತೀಯ ಇನಿಂಗ್ಸ್ ವೇಳೆ ಎರಡು ಚೆಂಡನ್ನು ಬಳಸಲು ಅವಕಾಶ ನೀಡಲಾಗಿದೆ. ಎರಡನೇ ಇನ್ನಿಂಗ್ಸ್‌ನ 11ನೇ ಓವರ್‌ನ ನಂತರ ಇಬ್ಬನಿಯ ಪರಿಣಾಮವನ್ನು ತಗ್ಗಿಸಲು ಅಂಪೈರ್‌ಗಳು ಚೆಂಡಿನ ಬದಲಾವಣೆಯನ್ನು ಅನುಮತಿಸಲಿದ್ದಾರೆ.
  3. ನಾಯಕನ ನಿಷೇಧ ತೆರವು: ಐಪಿಎಲ್​ನಲ್ಲಿ 3 ಬಾರಿ ಸ್ಲೋ ಓವರ್ ರೇಟ್​ ತಪ್ಪು ಮಾಡಿದ ನಾಯಕನಿಗೆ ಒಂದು ಪಂದ್ಯದ ನಿಷೇಧ ಹೇರಲಾಗುತ್ತಿತ್ತು. ಆದರೆ ಇನ್ಮುಂದೆ ಈ ನಿಯಮ ಇರುವುದಿಲ್ಲ. ಬದಲಾಗಿ ಡಿಮೆರಿಟ್ ಅಂಕಗಳು ಮತ್ತು 25 ರಿಂದ 75% ರಷ್ಟು ಪಂದ್ಯ ಶುಲ್ಕವನ್ನು ಕಡಿತ ಮಾಡಲಾಗುತ್ತದೆ.
  4. ವೈಡ್, ನೋಬಾಲ್​ಗೆ ಹೊಸ ತಂತ್ರಜ್ಞಾನ ಬಳಕೆ: ವೈಡ್ ಮತ್ತು ನೋ-ಬಾಲ್‌ಗಳ ತೀರ್ಪು ನೀಡಲು ಸಹ ತಂತ್ರಜ್ಞಾನವನ್ನು ಬಳಸಿಕೊಳ್ಳಲಿದ್ದಾರೆ. ಅಂದರೆ ತಲೆಯ ಮೇಲಿಂದ ಹೋದ ನೋ ಬಾಲ್ ಅಥವಾ ಬ್ಯಾಟರ್ ಆಫ್ ಸ್ಟಂಪ್​ನತ್ತ ಸಾಗಿದ್ದರೆ, ವೈಡ್ ತೀರ್ಪು ನೀಡಲು ಹಾಕ್-ಐ ಮತ್ತು ಬಾಲ್-ಟ್ರ್ಯಾಕಿಂಗ್ ತಂತ್ರಜ್ಞಾನಗಳನ್ನು ಬಳಸಿಕೊಳ್ಳಲಿದ್ದಾರೆ.
  5. ಇದನ್ನೂ ಓದಿ
    Image
    IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
    Image
    15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
    Image
    ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
    Image
    ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು
  6. ಪಂದ್ಯ ಶುಲ್ಕ ಜಾರಿ: ಈ ಬಾರಿಯ ಐಪಿಎಲ್​ನಲ್ಲಿ ಪ್ಲೇಯಿಂಗ್ ಇಲೆವೆನ್​ನಲ್ಲಿರುವ ಆಟಗಾರರು ಪ್ರತಿ ಪಂದ್ಯಕ್ಕೆ 7.5 ಲಕ್ಷ ರೂ. ಪಡೆಯಲಿದ್ದಾರೆ. ಅಂದರೆ ವೇತನವಲ್ಲದೆ, ಹೆಚ್ಚುವರಿ ಪಂದ್ಯ ಶುಲ್ಕ ಸಿಗಲಿದೆ.
  7. ಹೊಸ ಅಭ್ಯಾಸ ನಿಯಮಗಳು: ಬಿಸಿಸಿಐ ಪಂದ್ಯದ ಸ್ಥಳಗಳಲ್ಲಿ ಅಭ್ಯಾಸ ಮಾಡುವುದನ್ನು ನಿರ್ಬಂಧಿಸಿದೆ. ಇದರಲ್ಲಿ ಮುಕ್ತ ನೆಟ್ ಸೆಷನ್‌ಗಳ ನಿಷೇಧವೂ ಸೇರಿದೆ.
  8. ಡ್ರೆಸ್ಸಿಂಗ್ ರೂಮ್ ಪ್ರವೇಶ ನಿಷೇಧ : ಪಂದ್ಯದ ಮೊದಲು, ಸಮಯದಲ್ಲಿ ಅಥವಾ ನಂತರ ಆಟಗಾರರ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಡ್ರೆಸ್ಸಿಂಗ್ ರೂಮ್‌ಗಳಿಗೆ ಪ್ರವೇಶಿಸುವುದನ್ನು ಬಿಸಿಸಿಐ ನಿಷೇಧಿಸಿದೆ. ಅವರು ಆಟದ ಮೈದಾನವನ್ನು ಪ್ರವೇಶಿಸಲು ಸಹ ಅವಕಾಶವಿಲ್ಲ.
  9. ಎಲ್ಇಡಿ ಬೋರ್ಡ್‌ ಬಳಿ ಕೂರುವುದು ನಿಷೇಧ: ಪಂದ್ಯ ನಡೆಯುವಾಗ ಆಟಗಾರರು ಮತ್ತು ಸಹಾಯಕ ಸಿಬ್ಬಂದಿಗಳು ಬೌಂಡರಿ ಲೈನ್ ಬಳಿಯಿರುವ ಎಲ್ಇಡಿ ಬೋರ್ಡ್‌ಗಳು ಮುಂದೆ ಕುಳಿತುಕೊಳ್ಳುವುದನ್ನು ನಿಷೇಧಿಸಲಾಗಿದೆ. ಅಲ್ಲದೆ ಪ್ರತಿಯೊಬ್ಬರು ಡಗೌಟ್​ನಲ್ಲಿರುವುದನ್ನು ಕಡ್ಡಾಯ ಮಾಡಲಾಗಿದೆ.
  10. ಫ್ಲಾಪಿ ಹ್ಯಾಟ್​ಗೂ ನಿಷೇಧ: ಫ್ಲಾಫಿ ಹ್ಯಾಟ್ ಧರಿಸಿ ಪ್ರಶಸ್ತಿ ಪ್ರಧಾನ ಸಮಾರಂಭದ ವೇಳೆ ಕಾಣಿಸಿಕೊಳ್ಳುವಂತಿಲ್ಲ ಎಂದು ಬಿಸಿಸಿಐ ತಿಳಿಸಿದೆ.  ಈ ನಿಯಮವನ್ನು ಉಲ್ಲಂಘಿಸಿದರೆ ಮೊದಲ ಬಾರಿಗೆ ಎಚ್ಚರಿಕೆ ನೀಡಲಿದ್ದು, ಅದೇ ತಪ್ಪನ್ನು ಪುನರಾವರ್ತಿಸಿದರೆ ದಂಡ ವಿಧಿಸಲಾಗುತ್ತದೆ.
  11. ಸ್ಲೀವ್​ಲೆಸ್ ಜೆರ್ಸಿ ನಿಷೇಧ: ಪಂದ್ಯ ಮುಗಿದ ಬಳಿಕ ನಡೆಯುವ ಪ್ರಶಸ್ತಿ ಪ್ರಧಾನ ಸಮಾರಂಭದ ವೇಳೆ ತೋಳಿಲ್ಲದ ಜೆರ್ಸಿ ಧರಿಸಿ ಕಾಣಿಸಿಕೊಳ್ಳುವುದನ್ನು ಸಹ ನಿಷೇಧಿಸಲಾಗಿದೆ. ಈ ನಿಯಮವನ್ನು ಉಲ್ಲಂಘಿಸಿದರೆ ಮೊದಲ ಬಾರಿಗೆ ಎಚ್ಚರಿಕೆ ನೀಡಲಿದ್ದು, ಅದೇ ತಪ್ಪನ್ನು ಪುನರಾವರ್ತಿಸಿದರೆ ದಂಡ ವಿಧಿಸಲಾಗುವುದಾಗಿ ಬಿಸಿಸಿಐ ತಿಳಿಸಿದೆ.

Published On - 7:57 am, Sat, 22 March 25

Follow Us
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು