AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್​ನಿಂದ ಹೊರಬಿದ್ದ ರಾಜಸ್ಥಾನ್ ವೇಗಿ ಸಂದೀಪ್ ಶರ್ಮಾ

Sandeep Sharma Injury: ರಾಜಸ್ಥಾನ ರಾಯಲ್ಸ್ ತಂಡ ಐಪಿಎಲ್ 2025ರಲ್ಲಿ ನಿರಾಶಾದಾಯಕ ಪ್ರದರ್ಶನ ನೀಡುತ್ತಿದೆ. ಈಗಾಗಲೇ ಒಂಬತ್ತನೇ ಸ್ಥಾನದಲ್ಲಿರುವ ತಂಡಕ್ಕೆ ಪ್ರತಿ ಪಂದ್ಯವೂ ಮಹತ್ವದ್ದಾಗಿದೆ. ಈ ಸಮಯದಲ್ಲಿ, ಅನುಭವಿ ವೇಗಿ ಸಂದೀಪ್ ಶರ್ಮಾ ಗಾಯಗೊಂಡು ಟೂರ್ನಿಯಿಂದ ಹೊರಗುಳಿದಿದ್ದಾರೆ. ಗುಜರಾತ್ ವಿರುದ್ಧದ ಪಂದ್ಯದಲ್ಲಿ ಬಲಗೈ ಬೆರಳಿಗೆ ಗಾಯ ಮಾಡಿಕೊಂಡಿದ್ದ ಸಂದೀಪ್ ಈ ಸೀಸನ್​ನಲ್ಲಿ ಉಳಿದಿರುವ ಪಂದ್ಯಗಳಲ್ಲಿ ಕಣಕ್ಕಿಳಿಯುವುದಿಲ್ಲ.

IPL 2025: ಐಪಿಎಲ್​ನಿಂದ ಹೊರಬಿದ್ದ ರಾಜಸ್ಥಾನ್ ವೇಗಿ ಸಂದೀಪ್ ಶರ್ಮಾ
Sandeep Sharma
ಪೃಥ್ವಿಶಂಕರ
|

Updated on:May 01, 2025 | 9:58 PM

Share

ಐಪಿಎಲ್ 2025 (IPL 2025) ರಲ್ಲಿ ರಾಜಸ್ಥಾನ ರಾಯಲ್ಸ್ (Rajasthan Royals) ತಂಡ ತುಂಬಾ ನಿರಾಶಾದಾಯಕ ಪ್ರದರ್ಶನ ನೀಡಿದೆ. ಆಡಿದ 9 ಪಂದ್ಯಗಳಲ್ಲಿ ಕೇವಲ ಮೂರರಲ್ಲಿ ಮಾತ್ರ ಜಯಗಳಿಸಿದ್ದು ಪಾಯಿಂಟ್ಸ್ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ. ಹೀಗಾಗಿನ ರಾಜಸ್ಥಾನ್ ತಂಡಕ್ಕೆ ಪ್ರತಿಯೊಂದು ಪಂದ್ಯವೂ ಮಾಡು ಇಲ್ಲವೇ ಮಡಿಯಂತ್ತಾಗಿದೆ. ಒಂದೇ ಒಂದು ಸೋಲು ಕೂಡ ತಂಡವನ್ನು ಪ್ಲೇಆಫ್‌ನಿಂದ ಹೊರ ಹಾಕಬಹುದು. ಇಂತಹ ಒತ್ತಡದ ಸಮಯದಲ್ಲಿ ರಾಜಸ್ಥಾನ್ ತಂಡಕ್ಕೆ ಆಘಾತಕ್ಕಾರಿ ಸುದ್ದಿ ಎದುರಾಗಿದೆ. ತಂಡದ ಅನುಭವಿ ವೇಗದ ಬೌಲರ್​ ಸಂದೀಪ್ ಶರ್ಮಾ (Sandeep Sharma) ಇಂಜುರಿಯಿಂದಾಗಿ ಇಡೀ ಟೂರ್ನಿಯಿಂದಲೇ ಹೊರಬಿದಿದ್ದಾರೆ.

ಐಪಿಎಲ್​ನಿಂದ ಸಂದೀಪ್ ಶರ್ಮಾ ಔಟ್

ಏಪ್ರಿಲ್ 28 ರಂದು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ವೇಳೆ ರಾಜಸ್ಥಾನ್ ರಾಯಲ್ಸ್ ತಂಡದ ವೇಗಿ ಸಂದೀಪ್ ಶರ್ಮಾ ಗಾಯಗೊಂಡಿದ್ದರು. ಗುಜರಾತ್ ಟೈಟಾನ್ಸ್ ಇನ್ನಿಂಗ್ಸ್​ನ 16 ನೇ ಓವರ್ ಎಸೆದಿದ್ದ ಸಂದೀಪ್ ಶರ್ಮಾ ಅವರ ನಾಲ್ಕನೇ ಎಸೆತವನ್ನು ಗಿಲ್ ಚೆಂಡನ್ನು ಡ್ರೈವ್ ಮಾಡಿದರು. ಸಂದೀಪ್ ತನ್ನ ಫಾಲೋ ಥ್ರೂನಲ್ಲಿ ಚೆಂಡನ್ನು ತಡೆಯಲು ಪ್ರಯತ್ನಿಸಿದರು. ಈ ವೇಳೆ ಅವರ ಬಲಗೈ ಬೆರಳಿಗೆ ಗಾಯವಾಯಿತು. ಇದರ ಹೊರತಾಗಿಯೂ, ಅವರು ಬೌಲಿಂಗ್ ಮುಂದುವರಿಸಿ ನಾಲ್ಕು ಓವರ್‌ಗಳ ಕೋಟಾವನ್ನು ಪೂರ್ಣಗೊಳಿಸಿದರು. ಈ ಪಂದ್ಯದಲ್ಲಿ ಅವರು 4 ಓವರ್‌ಗಳಲ್ಲಿ 33 ರನ್‌ಗಳಿಗೆ ಒಂದು ವಿಕೆಟ್ ಪಡೆದರು.

ಮೇ 1 ರಂದು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಸಂದೀಪ್ ಶರ್ಮಾ ತಂಡದ ಬಸ್ಸಿನಿಂದ ಇಳಿಯುವಾಗ ಅವರ ಬಲಗೈಗೆ ಬ್ಯಾಂಡೇಜ್ ಹಾಕಲಾಗಿತ್ತು. ರಾಜಸ್ಥಾನ ರಾಯಲ್ಸ್ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ತನ್ನ ವಿಡಿಯೋವನ್ನು ಹಂಚಿಕೊಂಡಿದೆ. ಅದರಲ್ಲಿ ಬೆರಳಿನಲ್ಲಿ ಮೂಳೆ ಮುರಿತವಾಗಿದ್ದರೂ ತಂಡಕ್ಕಾಗಿ ತನ್ನ ದೇಹವನ್ನು ಪಣಕ್ಕಿಟ್ಟು ತನ್ನ ಖೋಟಾವನ್ನು ಪೂರ್ಣಗೊಳಿಸಿದ ಈ ಯೋಧನಿಗೆ ಚಪ್ಪಾಳೆ ತಟ್ಟಿ ಎಂದು ಬರೆದುಕೊಂಡಿದೆ.

IPL 2025: ಕೊದಲೆಳೆ ಅಂತರದಲ್ಲಿ ಸಿಕ್ಕ ಜೀವದಾನ; ವಿಶೇಷ ದಾಖಲೆ ಬರೆದ ರೋಹಿತ್ ಶರ್ಮಾ

ಸಂದೀಪ್ ಪ್ರದರ್ಶನ

ರಾಜಸ್ಥಾನ್ ರಾಯಲ್ಸ್ ತಂಡದ ವೇಗಿ ಸಂದೀಪ್ ಶರ್ಮಾ ಈ ಸೀಸನ್‌ನಲ್ಲಿ ಒಟ್ಟು 10 ಪಂದ್ಯಗಳನ್ನು ಆಡಿದ್ದು, 9.89 ಎಕಾನಮಿಯಲ್ಲಿ 9 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಐಪಿಎಲ್‌ನಲ್ಲಿ ಅವರ ಪ್ರದರ್ಶನದ ಬಗ್ಗೆ ಮಾತನಾಡುತ್ತಾ, ಅವರು ಇಲ್ಲಿಯವರೆಗೆ 137 ಪಂದ್ಯಗಳನ್ನು ಆಡಿದ್ದಾರೆ, ಇದರಲ್ಲಿ ಅವರು 8.03 ಸರಾಸರಿಯಲ್ಲಿ 146 ವಿಕೆಟ್‌ಗಳನ್ನು ಪಡೆದಿದ್ದಾರೆ. ಸಂದೀಪ್ ಶರ್ಮಾ ಅವರನ್ನು ಡೆತ್ ಓವರ್‌ ಸ್ಪೆಷಲಿಸ್ಟ್ ಎಂದು ಕರೆಯಲಾಗುತ್ತದೆ. ಇದಕ್ಕೆ ಪೂರಕವಾಗಿ ಅವರು ಕೊನೆಯ ಓವರ್​ಗಳಲ್ಲಿ ಎಷ್ಟೋ ಬಾರಿ ಏಕಾಂಗಿಯಾಗಿ ಪಂದ್ಯವನ್ನು ಗೆಲ್ಲಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:57 pm, Thu, 1 May 25

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ