AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಡ ಕಣೋ… ಶುಭ್​ಮನ್ ಗಿಲ್ ಜಗಳ ಬಿಡಿಸಲು ಮುಂದಾದ ಅಭಿಷೇಕ್ ಶರ್ಮಾ

IPL 2025 GT vs SRH: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 224 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 186 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಗುಜರಾತ್ ಟೈಟಾನ್ಸ್ ತಂಡ 38 ರನ್​ಗಳ ಜಯ ಸಾಧಿಸಿದೆ.

ಬೇಡ ಕಣೋ... ಶುಭ್​ಮನ್ ಗಿಲ್ ಜಗಳ ಬಿಡಿಸಲು ಮುಂದಾದ ಅಭಿಷೇಕ್ ಶರ್ಮಾ
Shubman Gill - Abhishek Sharma
ಝಾಹಿರ್ ಯೂಸುಫ್
|

Updated on: May 03, 2025 | 8:11 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 51ನೇ ಪಂದ್ಯದಲ್ಲಿ ಅಂಪೈರ್​ ಜೊತೆ ಗುಜರಾತ್ ಟೈಟಾನ್ಸ್ (GT) ತಂಡದ ನಾಯಕ ಶುಭ್​ಮನ್ ಗಿಲ್ (Shubman Gill) ಮಾತಿನ ಚಕಮಕಿ ನಡೆಸಿದ್ದಾರೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್​ರೈಸರ್ಸ್ ಹೈದರಾಬಾದ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 224 ರನ್​ ಕಲೆಹಾಕಿತು.

ಈ ಗುರಿ ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಅಭಿಷೇಕ್ ಶರ್ಮಾ ಉತ್ತಮ ಆರಂಭ ಒದಗಿಸಿದ್ದರು. ಬಿರುಸಿನ ಇನಿಂಗ್ಸ್​ನೊಂದಿಗೆ ಎದುರಾಳಿ ಬೌಲರ್​ಗಳನ್ನು ದಂಡಿಸುತ್ತಿದ್ದ ಅಭಿಷೇಕ್ ವಿಕೆಟ್​ ಗುಜರಾತ್ ಟೈಟಾನ್ಸ್ ಪಾಲಿಗೆ ಅನಿವಾರ್ಯವಾಗಿತ್ತು. ಅದರಂತೆ ಪ್ರಸಿದ್ಧ್ ಕೃಷ್ಣ ಎಸೆದ 14ನೇ ಓವರ್​ನಲ್ಲಿ ಚೆಂಡು ಅಭಿಷೇಕ್ ಶರ್ಮಾ ಅವರ ಶೂಸ್​ಗೆ ಬಡಿಯಿತು.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಈ ವೇಳೆ ಗುಜರಾತ್ ಟೈಟಾನ್ಸ್ ಆಟಗಾರರು ಎಲ್​ಬಿಡಬ್ಲ್ಯೂಗಾಗಿ ಬಲವಾದ ಮನವಿ ಮಾಡಿದ್ದರು. ಇದಾಗ್ಯೂ ಫೀಲ್ಡ್ ಅಂಪೈರ್ ಔಟ್ ನೀಡಿರಲಿಲ್ಲ. ಹೀಗಾಗಿ ಶುಭ್​ಮನ್ ಗಿಲ್ ರಿವ್ಯೂ ತೆಗೆದುಕೊಂಡರು. ಮೂರನೇ ಅಂಪೈರ್ ಪರಿಶೀಲಿಸಿ ನಾಟೌಟ್ ಎಂದು ತೀರ್ಪು ನೀಡಿದ್ದರು. ಈ ವೇಳೆ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಅಂಪೈರ್ ಜೊತೆ ವಾದಕ್ಕಿಳಿದರು.

ಬಾಲ್ ಟ್ರ್ಯಾಕಿಂಗ್ ಪರಿಶೀಲನೆ ಹಾಗೂ ಫೀಲ್ಡ್ ಅಂಪೈರ್ ತೀರ್ಪಿನ ವಿರುದ್ಧ ಅಸಮಾಧಾನಗೊಂಡಿದ್ದ ಶುಭ್​​ಮನ್ ಗಿಲ್ ಮಾತಿನ ಚಕಮಕಿಗೆ ಇಳಿದರು. ಕುತೂಹಲಕಾರಿ ವಿಷಯ ಎಂದರೆ, ಗೆಳೆಯ ಅಂಪೈರ್ ಜೊತೆ ವಾಕ್ಸಮರಕ್ಕೆ ಇಳಿಯುತ್ತಿದ್ದಂತೆ ಸನ್​ರೈಸರ್ಸ್​ ಹೈದರಾಬಾದ್​ ತಂಡದ ಆಟಗಾರ ಅಭಿಷೇಕ್ ಶರ್ಮಾ ಗಿಲ್ ಅವರನ್ನು ಸಮಾಧಾನಪಡಿಸಲು ಮುಂದಾದರು.

ಇದಾಗ್ಯೂ ಸಿಟ್ಟಿನಿಂದಲೇ ವಾದ ಮುಂದುವರೆಸಿದ್ದ ಶುಭ್​ಮನ್ ಗಿಲ್ ಅವರ ಹಿಂದೆಯೇ ಸಾಗುತ್ತಿದ್ದ ಅಭಿಷೇಕ್ ಶರ್ಮಾ ಬೇಡ, ಬಿಡು ಕಣೋ ಎಂಬಾರ್ಥದಲ್ಲಿ ಗೆಳೆಯನನ್ನು ಸಮಾಧಾನಪಡಿಸಲು ಯತ್ನಿಸಿದ್ದರು. ಇದೀಗ ಈ ವಿಡಿಯೋ ವೈರಲ್ ಆಗಿದ್ದು, ಇಬ್ಬರ ಗೆಳೆತನಕ್ಕೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಶುಭ್​ಮನ್ ಗಿಲ್ – ಅಭಿಷೇಕ್ ಶರ್ಮಾ ವಿಡಿಯೋ:

ಗೆದ್ದು ಬೀಗಿದ ಗುಜರಾತ್ ಟೈಟಾನ್ಸ್:

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ಪರ ನಾಯಕ ಶುಭ್​ಮನ್ ಗಿಲ್ 38 ಎಸೆತಗಳಲ್ಲಿ 76 ರನ್ ಬಾರಿಸಿದ್ದರು. ಈ ಅರ್ಧಶತಕದ ನೆರವಿನಿನೊಂದಿಗೆ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 224 ರನ್ ಕಲೆಹಾಕಿತು.

ಇದನ್ನೂ ಓದಿ: 11 ಫೋರ್, 3 ಸಿಕ್ಸ್: ಕೊನೆಗೂ ಶತಕ ಪೂರೈಸಿದ ಗ್ಲೆನ್ ಮ್ಯಾಕ್ಸ್​ವೆಲ್

ಈ ಕಠಿಣ ಗುರಿ ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ಪರ ಅಭಿಷೇಕ್ ಶರ್ಮಾ 41 ಎಸೆತಗಳಲ್ಲಿ 74 ರನ್ ಬಾರಿಸಿದ್ದರು. ಇದಾಗ್ಯೂ ಎಸ್​ಆರ್​ಹೆಚ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 186 ರನ್​ ಕಲೆಹಾಕಿತು. ಈ ಮೂಲಕ ಗುಜರಾತ್ ಟೈಟಾನ್ಸ್ ತಂಡವು 38 ರನ್​ಗಳ ಜಯ ಸಾಧಿಸಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?