AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ದಕ್ಷಿಣ ಭಾರತದ ಈ 3 ನಗರಗಳಲ್ಲಿ ನಡೆಯಲಿದೆ ಐಪಿಎಲ್ ದ್ವಿತೀಯಾರ್ಧ

IPL 2025 Rescheduled: ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧದಿಂದಾಗಿ ಐಪಿಎಲ್ 2025 ಒಂದು ವಾರ ಮುಂದೂಡಲ್ಪಟ್ಟಿತ್ತು. ಆದರೆ ಈಗ ಉಭಯ ದೇಶಗಳು ಕದನ ವಿರಾಮ ಘೋಷಿಸಿರುವುದರಿಂದ, ಐಪಿಎಲ್ ಪುನರಾರಂಭಗೊಳ್ಳುವ ಸಾಧ್ಯತೆಗಳಿವೆ. ಭದ್ರತಾ ಕಾರಣಗಳಿಂದ, ಬಿಸಿಸಿಐ ಉಳಿದ ಪಂದ್ಯಗಳನ್ನು ದಕ್ಷಿಣ ಭಾರತದ ಬೆಂಗಳೂರು, ಚೆನ್ನೈ ಮತ್ತು ಹೈದರಾಬಾದ್ ನಗರಗಳಲ್ಲಿ ಆಯೋಜಿಸಲು ನಿರ್ಧರಿಸಿದೆ ಎಂದು ಇಎಸ್‌ಪಿಎನ್ ವರದಿ ಮಾಡಿದೆ.

IPL 2025: ದಕ್ಷಿಣ ಭಾರತದ ಈ 3 ನಗರಗಳಲ್ಲಿ ನಡೆಯಲಿದೆ ಐಪಿಎಲ್ ದ್ವಿತೀಯಾರ್ಧ
Ipl 2025
Follow us
ಪೃಥ್ವಿಶಂಕರ
|

Updated on: May 10, 2025 | 8:33 PM

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯಿಂದಾಗಿ 2025 ರ ಐಪಿಎಲ್ (IPL 2025) ಅನ್ನು ಒಂದು ವಾರ ಮುಂದೂಡಲಾಗಿತ್ತು. ಆದರೀಗ ಉಭಯ ದೇಶಗಳ ನಡುವೆ ಕದನ ವಿರಾಮ ಘೋಷಣೆಯಾಗಿರುವುದರಿಂದ ಐಪಿಎಲ್ ದ್ವಿತೀಯಾರ್ಧ ಮುಂದಿನ ವಾರದಿಂದ ಆರಂಭವಾಗುವ ಸಾಧ್ಯತೆಗಳಿದೆ. ಮೇ 10 ರಂದು ಅಮೇರಿಕಾದ ಮಧ್ಯಸ್ಥಿತಿಕೆಯಲ್ಲಿ ಭಾರತ ಹಾಗೂ ಪಾಕಿಸ್ತಾನ ಕದನ ವಿರಾಮ ಘೋಷಿಸಿವೆ. ಆದಾಗ್ಯೂ ಯಾವುದೇ ಸಂದರ್ಭದಲ್ಲೂ ಮತ್ತೆ ಸೇನಾ ಕಾರ್ಯಾಚರಣೆ ಶುರುವಾಗುವ ಆತಂಕವಿರುವ ಕಾರಣ ಈ ಮೊದಲು ನಿಗದಿಪಡಿಸಿದ್ದ ಸ್ಥಳಗಳಲ್ಲಿ ಉಳಿದ 16 ಪಂದ್ಯಗಳನ್ನು ನಡೆಸುವ ಸಾಧ್ಯತೆಗಳು ತೀರ ಕಡಿಮೆ. ಹಾಗಾಗಿ ಬೇರೆಯದ್ದೇ ಯೋಜನೆ ಮಾಡಿಕೊಂಡಿರುವ ಬಿಸಿಸಿಐ (BCCI), ಉಳಿದ ಎಲ್ಲಾ ಪಂದ್ಯಗಳನ್ನು ದಕ್ಷಿಣ ಭಾರತದ ಮೂರು ನಗರಗಳಲ್ಲಿ ನಡೆಸಲು ತೀರ್ಮಾನಿಸಿದೆ ಎಂದು ಇಎಸ್‌ಪಿಎನ್ ವರದಿ ಮಾಡಿದೆ.

ಒಂದು ವಾರ ಮುಂದೂಡಿಕೆ

ಐಪಿಎಲ್ 2025 ರಲ್ಲಿ ಇಲ್ಲಿಯವರೆಗೆ 57 ಪಂದ್ಯಗಳು ನಡೆದಿವೆ. 58 ನೇ ಪಂದ್ಯವು ಮೇ 8 ರಂದು ಧರ್ಮಶಾಲಾದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿತ್ತು. ಆದರೆ ಭಾರತ ಮತ್ತು ಪಾಕಿಸ್ತಾನದ ನಡುವೆ ಶಸ್ತ್ರಾಸ್ತ್ರ ದಾಳಿ ಆರಂಭವಾದ ಕಾರಣ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಲಾಯಿತು. ಆ ಬಳಿಕ ಸಭೆ ನಡೆಸಿದ್ದ ಬಿಸಿಸಿಐ ಪಂದ್ಯಾವಳಿಯನ್ನು ಒಂದು ವಾರ ಮುಂದೂಡಲು ನಿರ್ಧರಿಸಿತ್ತು.

ಇನ್ನು 16 ಪಂದ್ಯಗಳು ಬಾಕಿ

ಟೂರ್ನಿಯಲ್ಲಿ ಇನ್ನೂ 12 ಲೀಗ್ ಪಂದ್ಯಗಳು ಬಾಕಿ ಉಳಿದಿದ್ದು, ನಂತರ ನಾಲ್ಕು ಪ್ಲೇಆಫ್ ಪಂದ್ಯಗಳು ನಡೆಯಲಿವೆ. ಆರಂಭದಲ್ಲಿ ಮೊದಲ ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯಗಳನ್ನು ಹೈದರಾಬಾದ್‌ನಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಹಾಗೆಯೇ ಎರಡನೇ ಕ್ವಾಲಿಫೈಯರ್ ಮತ್ತು ಫೈನಲ್ ಪಂದ್ಯವನ್ನು ಕೋಲ್ಕತ್ತಾದಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಐಪಿಎಲ್ ಅರ್ಧಕ್ಕೆ ನಿಂತ ಕಾರಣ ಬಿಸಿಸಿಐ, ಇದೀಗ ನೂತನ ವೇಳಾಪಟ್ಟಿಯನ್ನು ಸಿದ್ಧಗೊಳಿಸಬೇಕಾಗಿದೆ.

IPL 2025: ಎಲ್ಲಾ ಹಣ ವಾಪಸ್; ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಆರ್​ಸಿಬಿ

ದಕ್ಷಿಣ ಭಾರತದ ಮೂರು ನಗರಗಳು

ಇದೀಗ ಉಭಯ ದೇಶಗಳ ನಡುವಿನ ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡಿರುವ ಬಿಸಿಸಿಐ ಉಳಿದ ಐಪಿಎಲ್ ಪಂದ್ಯಗಳನ್ನು ದಕ್ಷಿಣ ಭಾರತದ 3 ಪ್ರಮುಖ ನಗರಗಳಾದ ಬೆಂಗಳೂರು, ಚೆನ್ನೈ ಮತ್ತು ಹೈದರಾಬಾದ್​ನಲ್ಲಿ ನಡೆಸಲು ತೀರ್ಮಾನಿಸಿದೆ ಎಂದು ಇಎಸ್‌ಪಿಎನ್ ವರದಿ ಮಾಡಿದೆ. ಈ ಮೂರು ನಗರಗಳಲ್ಲಿ ಯಾವ ಮೈದಾನದಲ್ಲಿ ಎಷ್ಟು ಪಂದ್ಯಗಳು ನಡೆಯಲಿವೆ. ನಾಕೌಟ್ ಪಂದ್ಯಗಳು ಹಾಗೂ ಪೈನಲ್ ಪಂದ್ಯ ಎಲ್ಲಿ ನಡೆಯಲಿದೆ ಎಂಬುದು ಇನ್ನಷ್ಟೇ ಹೊರಬೀಳಬೇಕಿದೆ. ಆದಾಗ್ಯೂ ಕದನ ವಿರಾಮ ಘೋಷಣೆಯಾಗಿರುವುದರಿಂದ ಬೇರೆ ಸ್ಥಳಗಳ ಬಗ್ಗೆಯೂ ಬಿಸಿಸಿಐ ಯೋಚಿಸಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ