Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಮೋಸದಾಟಕ್ಕೆ ಮುಂದಾಗಿ ಸಿಕ್ಕಿಬಿದ್ದ ಸುನಿಲ್ ನರೈನ್, ಆ್ಯಂಡ್ರೆ ರಸೆಲ್

IPL 2025 PBKS vs KKR: ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್ 2025) ಸೀಸನ್-18 ರಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಈ ನಿಯಮಗಳ ಜಾರಿ ಬೆನ್ನಲ್ಲೇ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಟಗಾರರು ನಿಯಮಮೀರಿ ಬ್ಯಾಟ್​ಗಳನ್ನು ಬಳಸಲು ಮುಂದಾಗಿರುವುದು ಕಂಡು ಬಂದಿದೆ.

VIDEO: ಮೋಸದಾಟಕ್ಕೆ ಮುಂದಾಗಿ ಸಿಕ್ಕಿಬಿದ್ದ ಸುನಿಲ್ ನರೈನ್, ಆ್ಯಂಡ್ರೆ ರಸೆಲ್
Sunil Narine - Andre Russell
Follow us
ಝಾಹಿರ್ ಯೂಸುಫ್
|

Updated on: Apr 16, 2025 | 9:04 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 31ನೇ ಪಂದ್ಯದಲ್ಲಿ ನಿಯಮ ಮೀರಿದ ಬ್ಯಾಟ್​ಗಳನ್ನು ಬಳಸಲು ಮುಂದಾಗಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ಸುನಿಲ್ ನರೈನ್ (Sunil Narine) ಹಾಗೂ ಆ್ಯಂಡ್ರೆ ರಸೆಲ್ (Andre Russell) ಸಿಕ್ಕಿ ಬಿದ್ದಿದ್ದಾರೆ. ಮುಲ್ಲನ್​ಪುರ್​ನ ಎಂವೈಎಸ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 15.3 ಓವರ್​ಗಳಲ್ಲಿ 111 ರನ್​ಗಳಿಸಿ ಆಲೌಟ್ ಆಯಿತು.

ಈ ಗುರಿಯನ್ನು ಬೆನ್ನತ್ತಲು ಆರಂಭಿಕನಾಗಿ ಕಣಕ್ಕಿಳಿಯಲು ಮುಂದಾಗಿದ್ದ ಸುನಿಲ್ ನರೈನ್ ಅವರ ಬ್ಯಾಟ್ ಅನ್ನು ಅಂಪೈರ್ ಪರಿಶೀಲಿಸಿದ್ದಾರೆ. ಈ ಪರಿಶೀಲನೆ ವೇಳೆ ನರೈನ್ ಬಳಸಲು ಮುಂದಾಗಿದ್ದ ಬ್ಯಾಟ್ ಅಗಲದಿಂದ ಕೂಡಿರುವುದು ಕಂಡು ಬಂದಿದೆ. ಹೀಗಾಗಿ ಆ ಬ್ಯಾಟ್ ಅನ್ನು ಬಳಸಲು ಅಂಪೈರ್ ಅನುಮತಿ ನೀಡಿರಲಿಲ್ಲ.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಸುನಿಲ್ ನರೈನ್ ಬ್ಯಾಟ್ ಪರಿಶೀಲನೆ ವಿಡಿಯೋ:

ಇದಾದ ಬಳಿಕ ಕೆಕೆಆರ್ ಪರ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆ್ಯಂಡ್ರೆ ರಸೆಲ್ ಕೂಡ ದಪ್ಪದ ಬ್ಯಾಟ್​ನೊಂದಿಗೆ ಆಗಮಿಸಿದ್ದರು. ಈ ಬಗ್ಗೆ ಸಂದೇಹಗೊಂಡ ಅಂಪೈರ್ ಗೇಜ್​ನೊಂದಿಗೆ ಬ್ಯಾಟ್ ಪರಿಶೀಲಿಸಿದರು. ಈ ವೇಳೆ ಬ್ಯಾಟ್​ನ ಹಿಂಭಾಗವು ನಿಗದಿತ ಮಿತಿಗಿಂತ ದೊಡ್ಡದಿರುವುದು ಕಂಡು ಬಂದಿದೆ. ಹೀಗಾಗಿ ಬ್ಯಾಟ್ ಬದಲಿಸುವಂತೆ ಸೂಚಿಸಿದ್ದಾರೆ.

ಆ್ಯಂಡ್ರೆ ರಸೆಲ್ ಬ್ಯಾಟ್ ಪರಿಶೀಲನೆ ವಿಡಿಯೋ:

ಬ್ಯಾಟ್ ಅಗಲ ಎಷ್ಟಿರಬೇಕು?

ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಾವಳಿಗಾಗಿ ಬ್ಯಾಟ್‌ನ ಆಯಾಮಗಳಿಗೆ ಮಿತಿಯನ್ನು ನಿಗದಿಪಡಿಸಿದೆ. ಅದರ ಪ್ರಕಾರ ಬ್ಯಾಟ್​ನ ಅಂಚಿನ ಅಗಲ 4 ಸೆಂಟಿಮೀಟರ್, ಮುಖದ ಅಗಲ 10.79 ಸೆಂಟಿಮೀಟರ್‌ಗಳನ್ನು ಮೀರಿರಬಾರದು. ಇನ್ನು  ಬ್ಲೇಡ್‌ನ ದಪ್ಪ 6.7 ಸೆಂ.ಮೀ ಮೀರಬಾರದು. ಹಾಗೆಯೇ ಬ್ಯಾಟ್‌ನ ಉದ್ದ 96.4 ಸೆಂಟಿಮೀಟರ್​ಗಿಂತ ಹೆಚ್ಚಿರಬಾರದು.

ಇದನ್ನು ಫೀಲ್ಡ್ ಅಂಪೈರ್​ಗಳು ಗೇಜ್ ಬಳಸಿ ಪರಿಶೀಲಿಸಲಿದ್ದಾರೆ. ಈ ಪರಿಶೀಲನೆಯಲ್ಲಿ ಅಂಪೈರ್ ಬಳಸುವ ಗೇಜ್​ ಮೂಲಕ ಬ್ಯಾಟ್ ಹಾದು ಹೋದರೆ ಮಾತ್ರ ಬ್ಯಾಟಿಂಗ್ ಮುಂದುವರೆಸಲು ಅವಕಾಶ ನೀಡಲಾಗುತ್ತದೆ.

ಅಂದರೆ 4 ಸೆಂಟಿಮೀಟರ್​ ಇಂಚುಗಳಿಗಿಂತ ಹೆಚ್ಚಿನ ಅಗಲವಾದ ಬ್ಯಾಟ್ ಬಳಸಲು ಅವಕಾಶವಿಲ್ಲ. ಹೀಗಾಗಿ ಬ್ಯಾಟ್​ಗಳ ಅಗಲದ ಮೇಲೆ ಸಂದೇಹ ಮೂಡಿದರೆ ಅಂಪೈರ್ ಮೈದಾನದಲ್ಲೇ ಪರಿಶೀಲಿಸುತ್ತಿದ್ದಾರೆ.

ಈ ನಿಯಮ ಜಾರಿ ಮಾಡಿದ್ದೇಕೆ?

ಐಪಿಎಲ್​​ನಲ್ಲಿ ಬ್ಯಾಟ್ ಪರಿಶೀಲನೆ ನಿಯಮವನ್ನು ಜಾರಿಗೊಳಿಸಲು ಮುಖ್ಯ ಕಾರಣ ಬ್ಯಾಟರ್​ಗಳ ಅಬ್ಬರ. ಕೆಲ ಬ್ಯಾಟ್ಸ್​ಮನ್​ಗಳು ಹೆಚ್ಚಿನ ಅಗಲದ ಬ್ಯಾಟ್ ಬಳಸಿದ್ದಾರೆ ಎಂದು ಆರೋಪಗಳು ಕೇಳಿ ಬಂದಿದೆ. ಹೀಗಾಗಿ ಬಿಸಿಸಿಐ ಕಠಿಣ ನಿಯಮದೊಂದಿಗೆ ಬ್ಯಾಟ್ ಪರಿಶೀಲಿಸಲು ಮುಂದಾಗಿದ್ದಾರೆ.

ಅದರಂತೆ ಇದೀಗ ಪ್ರತಿ ಪಂದ್ಯಗಳಲ್ಲೂ ಬ್ಯಾಟ್ ಪರಿಶೀಲನೆ ನಡೆಯುತ್ತಿದೆ. ಇದರ ನಡುವೆ ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಸುನಿಲ್ ನರೈನ್ ಹಾಗೂ ಆ್ಯಂಡ್ರೆ ರಸೆಲ್ ನಿಗದಿತ ಮಿತಿಗಿಂತ ಹೆಚ್ಚಿನ ಅಗಲ ಮತ್ತು ದಪ್ಪದ ಬ್ಯಾಟ್ ಬಳಸಲು ಮುಂದಾಗಿರುವುದು ಕಂಡು ಬಂದಿದೆ.

ಪಂಜಾಬ್ ಪರಾಕ್ರಮಕ್ಕೆ ಒಲಿದ ಜಯ:

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 15.3 ಓವರ್​ಗಳಲ್ಲಿ ಕೇವಲ 111 ರನ್​ಗಳಿಸಿ ಆಲೌಟ್ ಆಗಿದೆ. ಈ ಸುಲಭ ಗುರಿಯನ್ನು ಬೆನ್ನತ್ತಿದ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 15.1 ಓವರ್​ಗಳಲ್ಲಿ ಆಲೌಟ್ ಆಗುವ ಮೂಲಕ 16 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಇದನ್ನೂ ಓದಿ: ಮೋಸದಾಟದ ಡೌಟ್… ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್

ಈ ಗೆಲುವಿನೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತೀ ಕಡಿಮೆ ಸ್ಕೋರ್​ಗಳಿಸಿ ಜಯ ಸಾಧಿಸಿ ತಂಡವೆಂಬ ದಾಖಲೆಯನ್ನು ಪಂಜಾಬ್ ಕಿಂಗ್ಸ್ ತನ್ನಾಗಿಸಿಕೊಂಡಿದೆ. ಇದಕ್ಕೂ ಮುನ್ನ 2009 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕಿಂಗ್ಸ್ ಇಲೆವೆನ್ ಪಂಜಾಬ್ (ಪಂಜಾಬ್ ಕಿಂಗ್ಸ್) ವಿರುದ್ಧ 116 ರನ್​ ಬಾರಿಸಿ 24 ರನ್​ಗಳ ಗೆಲುವು ದಾಖಲಿಸಿತ್ತು. ಇದೀಗ 111 ರನ್​ಗಳಿಸಿ 16 ರನ್​ಗಳ ವಿಜಯ ಸಾಧಿಸಿ ಹೊಸ ಇತಿಹಾಸ ಬರೆಯುವಲ್ಲಿ ಪಂಜಾಬ್ ಕಿಂಗ್ಸ್ ಯಶಸ್ವಿಯಾಗಿದೆ.

Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ