AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ಪಾಲಿಗೆ ಕಂಟಕವಾಗಿರುವ 6ನೇ ಪಿಚ್

IPL 2025 RCB vs RR: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡ ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಯಾವ ಪಿಚ್​ನಲ್ಲಿ ಜರುಗಲಿದೆ ಎಂಬುದೇ ಈಗ ಕುತೂಹಲ.

IPL 2025: RCB ಪಾಲಿಗೆ ಕಂಟಕವಾಗಿರುವ 6ನೇ ಪಿಚ್
Rcb
ಝಾಹಿರ್ ಯೂಸುಫ್
|

Updated on: Apr 24, 2025 | 1:08 PM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಈವರೆಗೆ 5 ಗೆಲುವು ದಾಖಲಿಸಿದೆ. ಈ ಐದು ಜಯ ಮೂಡಿಬಂದಿರುವುದು ಎದುರಾಳಿಗಳ ತವರು ಮೈದಾನದಲ್ಲಿ ಎಂಬುದು ವಿಶೇಷ. ಅಂದರೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ಆರ್​ಸಿಬಿ ಮುಗ್ಗರಿಸಿದೆ. ಈ ಸೋಲಿನ ಬೆನ್ನಲ್ಲೇ ರಾಯಲ್ ಪಡೆಯ ಪಿಚ್​ ಆಯ್ಕೆ ಬಗ್ಗೆ ಪ್ರಶ್ನೆಗಳೆದ್ದಿವೆ.

ಸಾಮಾನ್ಯವಾಗಿ ಬೆಂಗಳೂರಿನಲ್ಲಿ ನಡೆಯುವ ಪಂದ್ಯಗಳ ವೇಳೆ ರನ್​ ಸುರಿಮಳೆ ಕಂಡು ಬರುತ್ತವೆ. ಆದರೆ ಈ ಬಾರಿ ಅಂತಹ ರನ್ ಮಳೆ ಕಂಡು ಬಂದಿಲ್ಲ. ಇದಕ್ಕೆ ಮುಖ್ಯ ಕಾರಣ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚಿನ್ನಸ್ವಾಮಿ ಮೈದಾನದಲ್ಲಿ 6ನೇ ಪಿಚ್​ನಲ್ಲಿ ಆಡುತ್ತಿರುವುದು.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಒಟ್ಟು 8 ಪಿಚ್​ಗಳಿವೆ. ಅವುಗಳಲ್ಲಿ ಬಹುತೇಕ ಪಿಚ್​ಗಳು ಪಂದ್ಯವಾಡಲು ಯೋಗ್ಯವಾಗಿದೆ. ಈ ಪಿಚ್​ಗಳಲ್ಲಿ ಆರ್​ಸಿಬಿ ಮೊದಲ ಮೂರು ಪಂದ್ಯಗಳಿಗೆ ಆಯ್ಕೆ ಮಾಡಿಕೊಂಡಿದ್ದು 6ನೇ ಪಿಚ್​ ಎಂಬುದು ವಿಶೇಷ.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಆರನೇ ಪಿಚ್​ ಬ್ಯಾಟಿಂಗ್​ಗೆ ಸಹಕಾರಿ. ಆದರೆ ಇದೇ ಪಿಚ್​ನಲ್ಲಿ ಮೊದಲ ಇನಿಂಗ್ಸ್​ನಲ್ಲಿ ಬೌಲರ್​ಗಳಿಗೆ ಹೆಚ್ಚಿನ ನೆರವು ಸಹ ಸಿಗುತ್ತದೆ. ಇದೇ ಕಾರಣದಿಂದಾಗಿ ಈ ಬಾರಿ ಆಡಿದ ಮೊದಲ ಮೂರು ಮ್ಯಾಚ್​ಗಳಲ್ಲಿ ಬೃಹತ್ ಮೊತ್ತದ ಸ್ಕೋರ್​ ಕಂಡು ಬಂದಿಲ್ಲ.

  • ಈ ಬಾರಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಕಲೆಹಾಕಿದ್ದು ಕೇವಲ 169 ರನ್​ಗಳು. ಈ ಗುರಿಯನ್ನು ಗುಜರಾತ್ ಟೈಟಾನ್ಸ್ ತಂಡ 17.2 ಓವರ್​ಗಳಲ್ಲಿ ಚೇಸ್ ಮಾಡಿತ್ತು.
  • ಇನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು 163 ರನ್​ಗಳು. ಈ ಗುರಿಯನ್ನು ಡೆಲ್ಲಿ ಕ್ಯಾಪಿಟಲ್ಸ್ 17.5 ಓವರ್​ಗಳಲ್ಲಿ ಚೇಸ್ ಮಾಡಿದೆ.
  • ಮಳೆಯ ಕಾರಣ 14 ಓವರ್​ಗಳಿಗೆ ಸೀಮಿತವಾಗಿದ್ದ ಮೂರನೇ ಪಂದ್ಯದಲ್ಲಿ ಆರ್​ಸಿಬಿ ಕಲೆಹಾಕಿದ್ದು ಕೇವಲ 95 ರನ್​ಗಳು ಮಾತ್ರ. ಈ ಗುರಿಯನ್ನು ಪಂಜಾಬ್ ಕಿಂಗ್ಸ್ ತಂಡ 12.1 ಓವರ್​ಗಳಲ್ಲಿ ಚೇಸ್ ಮಾಡಿದೆ.

6ನೇ ಪಿಚ್​ನಲ್ಲಿ ಆಡಲಾದ ಈ ಮೂರು ಪಂದ್ಯಗಳಲ್ಲೂ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವಲ್ಲಿ ವಿಫಲವಾಗಿದೆ. ಅದರಲ್ಲೂ ಮೊದಲೆರಡು ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳನ್ನು ಆಡಿದರೂ 175 ರನ್​ಗಳ ಗಡಿದಾಟಲು ಸಾಧ್ಯವಾಗಿಲ್ಲ ಎಂಬುದು ಉಲ್ಲೇಖಾರ್ಹ.

ಅಂದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ಮೊದಲ ಇನಿಂಗ್ಸ್​ನ ಅವರೇಜ್ ಸ್ಕೋರ್ 193 ರನ್​ಗಳು. ಇದಾಗ್ಯೂ ಆರ್​ಸಿಬಿ ಮೂರು ಪಂದ್ಯಗಳಲ್ಲೂ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಇದಕ್ಕೆ ಮುಖ್ಯ ಕಾರಣ 6ನೇ ಪಿಚ್​ನಲ್ಲಿ ಪಂದ್ಯವಾಡುತ್ತಿರುವುದು.

ಅಲ್ಲದೆ 6ನೇ ಪಿಚ್​ನಲ್ಲಿ ಪಂದ್ಯವಾಡಿ ಆರ್​ಸಿಬಿ ತಂಡ ಮೂರು ಪಂದ್ಯಗಳಲ್ಲೂ ಸೋಲೊಪ್ಪಿಕೊಂಡಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಿಚ್ ಬದಲಿಸಿಕೊಳ್ಳಲಿದೆಯಾ ಎಂಬುದೇ ಪ್ರಶ್ನೆ.

ಇದನ್ನೂ ಓದಿ: ಪಹಲ್ಗಾಮ್ ದಾಳಿಯಲ್ಲಿ ನನ್ನ ದೇಶದ ಕೈವಾಡವಿದೆ: ಪಾಕ್ ಕ್ರಿಕೆಟಿಗನ ಹೇಳಿಕೆ..!

ಏಕೆಂದರೆ ಆರ್​ಸಿಬಿ ಪಾಲಿಗೆ ಮುಂದಿನ 6 ಪಂದ್ಯಗಳು ನಿರ್ಣಾಯಕ. ಅದರಲ್ಲೂ ಮುಂದಿನ ಆರು ಮ್ಯಾಚ್​ಗಳಲ್ಲಿ 4 ಪಂದ್ಯಗಳನ್ನು ತವರಿನಲ್ಲಿ ಆಡಲಿದೆ. ತವರು ಮೈದಾನದಲ್ಲಿ ಗೆದ್ದರೆ ಮಾತ್ರ ಪ್ಲೇಆಫ್ ಹಾದಿಯನ್ನು ಸುಗಮಗೊಳಿಸಬಹುದು. ಹೀಗಾಗಿ  ಆರ್​ಸಿಬಿ 6ನೇ ಪಿಚ್​ ಬಿಟ್ಟು ಬೇರೆ ಪಿಚ್​ನಲ್ಲಿ ಕಣಕ್ಕಿಳಿಯಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

Follow Us
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು