AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಯಾಕೋ ಈ ಸಲ RCB… ವರಸೆ ಬದಲಿಸಿದ ಅಂಬಾಟಿ ರಾಯುಡು

IPL 2025 RCB: ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಮೂರು ಬಾರಿ ಫೈನಲ್​ಗೆ ಪ್ರವೇಶಿಸಿದೆ. 2009, 2011 ಮತ್ತು 2016 ರಲ್ಲಿ ಫೈನಲ್ ಪಂದ್ಯವಾಡಿದ್ದ ಆರ್​ಸಿಬಿ ಒಮ್ಮೆಯೂ ಕಪ್ ಗೆದ್ದಿಲ್ಲ. ಇದನ್ನೇ ಪ್ರಸ್ತಾಪಿಸುವ ಮೂಲಕ ಸಿಎಸ್​ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ಹಲವು ಬಾರಿ ಆರ್​ಸಿಬಿ ತಂಡವನ್ನು ವ್ಯಂಗ್ಯವಾಡಿದ್ದರು.

IPL 2025: ಯಾಕೋ ಈ ಸಲ RCB... ವರಸೆ ಬದಲಿಸಿದ ಅಂಬಾಟಿ ರಾಯುಡು
Ambati Rayudu - Rcb
ಝಾಹಿರ್ ಯೂಸುಫ್
|

Updated on: Mar 30, 2025 | 9:04 AM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿರುದ್ಧ ಸದಾ ಕೊಂಕು ನುಡಿಯುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು (Ambati Rayudu) ಇದೀಗ ವರಸೆ ಬದಲಿಸಿದ್ದಾರೆ. ಅದು ಸಹ ಸಿಎಸ್​ಕೆ ವಿರುದ್ಧ ಆರ್​ಸಿಬಿ ತಂಡವು ಭರ್ಜರಿ ಜಯ ಸಾಧಿಸುತ್ತಿದ್ದಂತೆ ಎಂಬುದು ವಿಶೇಷ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಆರ್​ಸಿಬಿಯನ್ನು ಹೀಯಾಳಿಸಿ ಮಾತನಾಡಿದ್ದ ರಾಯುಡು, ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅದ್ಭುವಾಗಿದೆ ಎಂದಿದ್ದಾರೆ.

ಪ್ರಮುಖ ಸ್ಪೋರ್ಟ್ಸ್​ ವೆಬ್​ಸೈಟ್​ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅಂಬಾಟಿ ರಾಯುಡು, ಈ ಬಾರಿಯ ಆರ್​ಸಿಬಿ ತಂಡವು ಸ್ವಲ್ಪ ಭಿನ್ನವಾಗಿ ಕಾಣಿಸುತ್ತಿದೆ. ಅದರಲ್ಲೂ ತಂಡ ಅದ್ಭುತವಾಗಿದೆ ಎಂದೆನಿಸುತ್ತಿದೆ ಎಂದಿದ್ದಾರೆ.

ಅಷ್ಟೇ ಅಲ್ಲದೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ತುಂಬಾ ವಿಶೇಷವಾಗಿದ್ದು, ಏನೋ ಸಾಧಿಸುವ ಹಂಬಲ ಆರ್​ಸಿಬಿ ತಂಡದಲ್ಲಿ ಕಾಣಿಸುತ್ತಿದೆ. ಹೀಗಾಗಿ ಆರ್​ಸಿಬಿ ತಂಡದಿಂದ ಈ ವರ್ಷ ಏನಾದರೂ ನಿರೀಕ್ಷಿಸಬಹುದು ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

ಇದನ್ನೂ ಓದಿ
Image
ಯುಜ್ವೇಂದ್ರ ಚಹಲ್-ಧನಶ್ರೀ ವರ್ಮಾ ವಿಚ್ಛೇದನಕ್ಕೆ ಇದುವೇ ಅಸಲಿ ಕಾರಣ
Image
RCB ದಾಖಲೆ ಧೂಳೀಪಟ ಮಾಡಿದ ಡೆಲ್ಲಿ ಬಾಯ್ಸ್
Image
David Warner: ಡೇವಿಡ್ ವಾರ್ನರ್​ಗೆ ಒಲಿದ ನಾಯಕತ್ವ..!
Image
VIDEO: ಎಂಎಸ್ ಧೋನಿ ಎಂಟ್ರಿಗೆ ಕಿವಿ ಮುಚ್ಚಿ ಕೂತ ನೀತಾ ಅಂಬಾನಿ

ಇದಕ್ಕೂ ಮುನ್ನ ಅಂಬಾಟಿ ರಾಯುಡು, ಈ ಬಾರಿ ಆರ್​ಸಿಬಿ ಕಪ್ ಗೆಲ್ಲಬಾರದು ಎಂದಿದ್ದರು. ಅಲ್ಲದೆ ಆರ್​ಸಿಬಿ ತಂಡದ ಸೋಲಿಗೆ ಅವರ ತಂಡದ ಆಯ್ಕೆಯೇ ಕಾರಣ ಎಂದು ದೂರಿದ್ದರು. ಆದರೀಗ ಆರ್​ಸಿಬಿ ತಂಡ ಬ್ಯಾಕ್ ಟು ಬ್ಯಾಕ್ ಎರಡು ಪಂದ್ಯಗಳನ್ನು ಗೆಲ್ಲುತ್ತಿದ್ದಂತೆ ರಾಯುಡು ತಮ್ಮ ವರಸೆಯನ್ನು ಬದಲಿಸಿದ್ದಾರೆ.

ಅದರಲ್ಲೂ ರಾಯಲ್ ಚಾಲೆಂಜರ್ಸ್​ ಬೆಂಗಳೂರುನಂತಹ ತಂಡ ಐಪಿಎಲ್​ನಲ್ಲಿ ಇರಬೇಕು. ಏಕೆಂದರೆ ನಿರೀಕ್ಷೆಗಳನ್ನು ಹೆಚ್ಚಿಸಿ ಅದನ್ನು ಪೂರೈಸಲು ವಿಫಲವಾಗುವ ತಂಡ ಇದ್ದರೇನೇ ಮನರಂಜನೆ ಸಿಗೋದು.

ಅಷ್ಟೇ ಅಲ್ಲದೆ ಆರ್‌ಸಿಬಿ ತಂಡವು ಗೆಲ್ಲಲು ಹೆಣಗಾಡುವುದನ್ನು ನೋಡಿ ನಾನು ಸದಾ ಆನಂದಿಸುತ್ತೇನೆ. ಇದಾಗ್ಯೂ ಅವರು ಟ್ರೋಫಿ ಗೆಲ್ಲಲಿ ಎಂದು ಬಯಸುತ್ತೇನೆ. ಆದರೆ ಈ ಬಾರಿ ಅವರು ಕಪ್ ಗೆಲ್ಲಬಾರದು. ಮುಂದೊಂದು ದಿನ ಯಾವತ್ತಾದರು ಗೆಲ್ಲಲಿ. ಈ ಸಲ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಟ್ರೋಫಿ ಎತ್ತಿ ಹಿಡಿಯಬೇಕು ಎಂದು ಅಂಬಾಟಿ ರಾಯುಡು ಹೇಳಿದ್ದರು.

ಇದನ್ನೂ ಓದಿ: ಪಾಕ್ ವಿರುದ್ಧ ವಿಶ್ವ ದಾಖಲೆ ಬರೆದ ಪಾಕಿಸ್ತಾನದ ಮಾಜಿ ಕ್ರಿಕೆಟಿಗನ ಪುತ್ರ..!

ಈ ಹೇಳಿಕೆ ಬೆನ್ನಲ್ಲೇ ಆರ್​ಸಿಬಿ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ತವರಿನಲ್ಲಿ 17 ವರ್ಷಗಳ ಬಳಿಕ ಸೋಲಿಸಿದೆ. ಅದು ಕೂಡ 50 ರನ್​ಗಳ ಬೃಹತ್ ಅಂತರದಿಂದ ಎಂಬುದು ವಿಶೇಷ. ಈ ಭರ್ಜರಿ ಗೆಲುವಿನ ಬೆನ್ನಲ್ಲೇ ಅಂಬಾಟಿ ರಾಯುಡು ಆರ್​ಸಿಬಿ ವಿಷಯದಲ್ಲಿ ಯುಟರ್ನ್ ಹೊಡೆದಿದ್ದಾರೆ.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ