AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ RCB ಆಟಗಾರ ಡೌಟ್

IPL 2025 RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ಪಂದ್ಯಗಳು ಇಂದಿನಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಕಣಕ್ಕಿಳಿದರೆ, ದ್ವಿತೀಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ.

IPL 2025: ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ RCB ಆಟಗಾರ ಡೌಟ್
Rcb Team
ಝಾಹಿರ್ ಯೂಸುಫ್
|

Updated on: May 29, 2025 | 7:32 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-18ರ ಮೊದಲ ಕ್ವಾಲಿಫೈಯರ್ ಪಂದ್ಯವು ಇಂದು (ಮೇ 29) ನಡೆಯಲಿದೆ. ಚಂಡೀಗಢ್​ನ ಮುಲ್ಲನ್​​ಪುರ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯದಲ್ಲಿ ಆರ್​ಸಿಬಿ ತಂಡದ ಪ್ರಮುಖ ಆಟಗಾರ ಟಿಮ್ ಡೇವಿಡ್ ಕಣಕ್ಕಿಳಿಯುವುದು ಅನುಮಾನ.

ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಮಂಡಿರಜ್ಜು ನೋವಿಗೆ ಒಳಗಾಗಿದ್ದ ಡೇವಿಡ್ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಇದಾಗ್ಯೂ ಅವರು ಪ್ಲೇಆಫ್ ಸುತ್ತಿನ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು.

ಆದರೆ ಬುಧವಾರ ನಡೆದ ಅಭ್ಯಾಸದ ವೇಳೆ ಟಿಮ್ ಡೇವಿಡ್ ಕಾಣಿಸಿಕೊಂಡಿಲ್ಲ. ಅಂದರೆ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಿರುವ ಸಾಧ್ಯತೆಯಿಲ್ಲ. ಹೀಗಾಗಿ ಮೊದಲ ಕ್ವಾಲಿಫೈಯರ್ ಪಂದ್ಯದಿಂದಲೂ ಟಿಮ್ ಡೇವಿಡ್ ಹೊರಗುಳಿಯುವ ಸಾಧ್ಯತೆಯಿದೆ.

ಒಂದು ವೇಳೆ ಟಿಮ್ ಡೇವಿಡ್ ಹೊರಗುಳಿದರೆ, ಆರ್​ಸಿಬಿ ತಂಡವು ಟಿಮ್ ಸೈಫರ್ಟ್ ಅವರನ್ನು ಕಣಕ್ಕಿಳಿಸಬಹುದು. ಏಕೆಂದರೆ ಕಳೆದ ಪಂದ್ಯದಲ್ಲಿ ಕಾಣಿಸಿಕೊಂಡಿದ್ದ ಲಿಯಾಮ್ ಲಿವಿಂಗ್​ಸ್ಟೋನ್ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದ್ದರು.

ಅಷ್ಟೇ ಅಲ್ಲದೆ ಈ ಬಾರಿ ಆರ್​ಸಿಬಿ ಪರ 8 ಪಂದ್ಯಗಳನ್ನು ಆಡಿರುವ ಲಿಯಾಮ್ ಲಿವಿಂಗ್​ಸ್ಟೋನ್ ಈವರೆಗೆ ಕಲೆಹಾಕಿರುವುದು ಕೇವಲ 87 ರನ್​ಗಳು ಮಾತ್ರ. ಹೀಗಾಗಿ ಕಳಪೆ ಫಾರ್ಮ್​ನಲ್ಲಿರುವ ಲಿವಿಂಗ್​ಸ್ಟೋನ್​ಗೆ ಮತ್ತೆ ಚಾನ್ಸ್ ನೀಡುವ ಸಾಧ್ಯತೆಯಿಲ್ಲ.

ಬದಲಿಗೆ ನ್ಯೂಝಿಲೆಂಡ್​ನ ಹೊಡಿಬಡಿ ದಾಂಡಿಗ ಟಿಮ್ ಸೈಫರ್ಟ್​ ಅವರಿಗೆ ಅವಕಾಶ ನೀಡುವ ಸಾಧ್ಯತೆ ಹೆಚ್ಚಿದೆ. ಅತ್ತ ಆರಂಭಿಕ ದಾಂಡಿಗನಾಗಿರುವ ಸೈಫರ್ಟ್​ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಂಡರೆ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಬಹುದು. ಈ ಮೂಲಕ ಆರ್​ಸಿಬಿ ಟಾಪ್-3 ಅನ್ನು ಬಲಪಡಿಸುವ ಸಾಧ್ಯತೆಯಿದೆ.

ಹೇಝಲ್​ವುಡ್ ರೆಡಿ:

ಮತ್ತೊಂದೆಡೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದ ಆರ್​ಸಿಬಿ ತಂಡದ ಪ್ರಮುಖ ವೇಗಿ ಜೋಶ್ ಹೇಝಲ್​ವುಡ್ ಸಂಪೂರ್ಣ ಫಿಟ್​ನೆಸ್ ಸಾಧಿಸಿದ್ದಾರೆ. ಹೀಗಾಗಿ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕಣಕ್ಕಿಳಿಯುವುದು ಖಚಿತ.

ಇತ್ತ ಹೇಝಲ್​ವುಡ್ ಆಡುವ ಬಳಗಕ್ಕೆ ಎಂಟ್ರಿ ಕೊಟ್ಟರೆ, ನುವಾನ್ ತುಷಾರ ಹೊರಗುಳಿಯಬೇಕಾಗುತ್ತದೆ. ಆದರೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಮಾರಕ ದಾಳಿ ಸಂಘಟಿಸಿರುವ ತುಷಾರ ಅವರನ್ನು ಕೈ ಬಿಡುವುದೇ ಈಗ ಆರ್​ಸಿಬಿ ಮುಂದಿರುವ ದೊಡ್ಡ ಸವಾಲು.

ಇದನ್ನೂ ಓದಿ: ಕ್ರಿಕೆಟ್ ನಿಯಮವೇ ಗೊತ್ತಿಲ್ದೆ ಕ್ರೀಡಾ ಸ್ಫೂರ್ತಿ ಮೆರೆಯುತ್ತಿರುವ ಕ್ರಿಕೆಟಿಗರು

ಏಕೆಂದರೆ ಲಕ್ನೋ ಸೂಪರ್ ಜೈಂಟ್ಸ್ ತಂಡವು ಆರ್​ಸಿಬಿ ವಿರುದ್ಧದ 227 ರನ್ ಬಾರಿಸಿದರೂ, ನುವಾನ್ ತುಷಾರ 4 ಓವರ್​ಗಳಲ್ಲಿ ನೀಡಿರುವುದು ಕೇವಲ 26 ರನ್​ಗಳು ಮಾತ್ರ. ಹೀಗಾಗಿಯೇ ಜೋಶ್ ಹೇಝಲ್​ವುಡ್ ಬದಲಿಗೆ ತಂಡದಿಂದ ಯಾರನ್ನು ಕೈ ಬಿಡುವುದು ಎಂಬ ಚಿಂತೆ ಆರ್​ಸಿಬಿಗೆ ಶುರುವಾಗಿದೆ.

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?