AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ RCB ಆಟಗಾರ ಡೌಟ್

IPL 2025 RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ಪಂದ್ಯಗಳು ಇಂದಿನಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಕಣಕ್ಕಿಳಿದರೆ, ದ್ವಿತೀಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ.

IPL 2025: ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ RCB ಆಟಗಾರ ಡೌಟ್
Rcb Team
ಝಾಹಿರ್ ಯೂಸುಫ್
|

Updated on: May 29, 2025 | 7:32 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-18ರ ಮೊದಲ ಕ್ವಾಲಿಫೈಯರ್ ಪಂದ್ಯವು ಇಂದು (ಮೇ 29) ನಡೆಯಲಿದೆ. ಚಂಡೀಗಢ್​ನ ಮುಲ್ಲನ್​​ಪುರ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯದಲ್ಲಿ ಆರ್​ಸಿಬಿ ತಂಡದ ಪ್ರಮುಖ ಆಟಗಾರ ಟಿಮ್ ಡೇವಿಡ್ ಕಣಕ್ಕಿಳಿಯುವುದು ಅನುಮಾನ.

ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಮಂಡಿರಜ್ಜು ನೋವಿಗೆ ಒಳಗಾಗಿದ್ದ ಡೇವಿಡ್ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಇದಾಗ್ಯೂ ಅವರು ಪ್ಲೇಆಫ್ ಸುತ್ತಿನ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು.

ಆದರೆ ಬುಧವಾರ ನಡೆದ ಅಭ್ಯಾಸದ ವೇಳೆ ಟಿಮ್ ಡೇವಿಡ್ ಕಾಣಿಸಿಕೊಂಡಿಲ್ಲ. ಅಂದರೆ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಿರುವ ಸಾಧ್ಯತೆಯಿಲ್ಲ. ಹೀಗಾಗಿ ಮೊದಲ ಕ್ವಾಲಿಫೈಯರ್ ಪಂದ್ಯದಿಂದಲೂ ಟಿಮ್ ಡೇವಿಡ್ ಹೊರಗುಳಿಯುವ ಸಾಧ್ಯತೆಯಿದೆ.

ಒಂದು ವೇಳೆ ಟಿಮ್ ಡೇವಿಡ್ ಹೊರಗುಳಿದರೆ, ಆರ್​ಸಿಬಿ ತಂಡವು ಟಿಮ್ ಸೈಫರ್ಟ್ ಅವರನ್ನು ಕಣಕ್ಕಿಳಿಸಬಹುದು. ಏಕೆಂದರೆ ಕಳೆದ ಪಂದ್ಯದಲ್ಲಿ ಕಾಣಿಸಿಕೊಂಡಿದ್ದ ಲಿಯಾಮ್ ಲಿವಿಂಗ್​ಸ್ಟೋನ್ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದ್ದರು.

ಅಷ್ಟೇ ಅಲ್ಲದೆ ಈ ಬಾರಿ ಆರ್​ಸಿಬಿ ಪರ 8 ಪಂದ್ಯಗಳನ್ನು ಆಡಿರುವ ಲಿಯಾಮ್ ಲಿವಿಂಗ್​ಸ್ಟೋನ್ ಈವರೆಗೆ ಕಲೆಹಾಕಿರುವುದು ಕೇವಲ 87 ರನ್​ಗಳು ಮಾತ್ರ. ಹೀಗಾಗಿ ಕಳಪೆ ಫಾರ್ಮ್​ನಲ್ಲಿರುವ ಲಿವಿಂಗ್​ಸ್ಟೋನ್​ಗೆ ಮತ್ತೆ ಚಾನ್ಸ್ ನೀಡುವ ಸಾಧ್ಯತೆಯಿಲ್ಲ.

ಬದಲಿಗೆ ನ್ಯೂಝಿಲೆಂಡ್​ನ ಹೊಡಿಬಡಿ ದಾಂಡಿಗ ಟಿಮ್ ಸೈಫರ್ಟ್​ ಅವರಿಗೆ ಅವಕಾಶ ನೀಡುವ ಸಾಧ್ಯತೆ ಹೆಚ್ಚಿದೆ. ಅತ್ತ ಆರಂಭಿಕ ದಾಂಡಿಗನಾಗಿರುವ ಸೈಫರ್ಟ್​ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಂಡರೆ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಬಹುದು. ಈ ಮೂಲಕ ಆರ್​ಸಿಬಿ ಟಾಪ್-3 ಅನ್ನು ಬಲಪಡಿಸುವ ಸಾಧ್ಯತೆಯಿದೆ.

ಹೇಝಲ್​ವುಡ್ ರೆಡಿ:

ಮತ್ತೊಂದೆಡೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದ ಆರ್​ಸಿಬಿ ತಂಡದ ಪ್ರಮುಖ ವೇಗಿ ಜೋಶ್ ಹೇಝಲ್​ವುಡ್ ಸಂಪೂರ್ಣ ಫಿಟ್​ನೆಸ್ ಸಾಧಿಸಿದ್ದಾರೆ. ಹೀಗಾಗಿ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕಣಕ್ಕಿಳಿಯುವುದು ಖಚಿತ.

ಇತ್ತ ಹೇಝಲ್​ವುಡ್ ಆಡುವ ಬಳಗಕ್ಕೆ ಎಂಟ್ರಿ ಕೊಟ್ಟರೆ, ನುವಾನ್ ತುಷಾರ ಹೊರಗುಳಿಯಬೇಕಾಗುತ್ತದೆ. ಆದರೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಮಾರಕ ದಾಳಿ ಸಂಘಟಿಸಿರುವ ತುಷಾರ ಅವರನ್ನು ಕೈ ಬಿಡುವುದೇ ಈಗ ಆರ್​ಸಿಬಿ ಮುಂದಿರುವ ದೊಡ್ಡ ಸವಾಲು.

ಇದನ್ನೂ ಓದಿ: ಕ್ರಿಕೆಟ್ ನಿಯಮವೇ ಗೊತ್ತಿಲ್ದೆ ಕ್ರೀಡಾ ಸ್ಫೂರ್ತಿ ಮೆರೆಯುತ್ತಿರುವ ಕ್ರಿಕೆಟಿಗರು

ಏಕೆಂದರೆ ಲಕ್ನೋ ಸೂಪರ್ ಜೈಂಟ್ಸ್ ತಂಡವು ಆರ್​ಸಿಬಿ ವಿರುದ್ಧದ 227 ರನ್ ಬಾರಿಸಿದರೂ, ನುವಾನ್ ತುಷಾರ 4 ಓವರ್​ಗಳಲ್ಲಿ ನೀಡಿರುವುದು ಕೇವಲ 26 ರನ್​ಗಳು ಮಾತ್ರ. ಹೀಗಾಗಿಯೇ ಜೋಶ್ ಹೇಝಲ್​ವುಡ್ ಬದಲಿಗೆ ತಂಡದಿಂದ ಯಾರನ್ನು ಕೈ ಬಿಡುವುದು ಎಂಬ ಚಿಂತೆ ಆರ್​ಸಿಬಿಗೆ ಶುರುವಾಗಿದೆ.

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ