Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಹರಾಜಿನಲ್ಲಿ ಅನ್​ಸೋಲ್ಡ್ ಆಗಿದ್ದ ಶಾರ್ದೂಲ್​ ಠಾಕೂರ್​ಗೆ​ ಪ್ಲೇಯಿಂಗ್ 11 ನಲ್ಲಿ ಸ್ಥಾನ..!

IPL 2025 DC vs LSG: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಪರ ಮಿಚೆಲ್ ಮಾರ್ಷ್ (72) ಹಾಗೂ ನಿಕೋಲಸ್ ಪೂರನ್ (75) ಅರ್ಧಶತಕ ಬಾರಿಸಿದ್ದರು. ಈ ಅರ್ಧಶತಕಗಳ ನೆರವಿನಿಂದ ಲಕ್ನೋ ತಂಡ 209 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಅಶುತೋಷ್ ಶರ್ಮಾ 31 ಎಸೆತಗಳಲ್ಲಿ ಅಜೇಯ 66 ರನ್ ಸಿಡಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ರೋಚಕ ಜಯ ತಂದುಕೊಟ್ಟರು.

IPL 2025: ಹರಾಜಿನಲ್ಲಿ ಅನ್​ಸೋಲ್ಡ್ ಆಗಿದ್ದ ಶಾರ್ದೂಲ್​ ಠಾಕೂರ್​ಗೆ​ ಪ್ಲೇಯಿಂಗ್ 11 ನಲ್ಲಿ ಸ್ಥಾನ..!
Shardul Thakur
Follow us
ಝಾಹಿರ್ ಯೂಸುಫ್
|

Updated on: Mar 25, 2025 | 7:56 AM

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2025) ಮೆಗಾ ಹರಾಜಿನಲ್ಲಿ ಅನ್​ಸೋಲ್ಡ್ ಆದ ಸ್ಟಾರ್ ಆಟಗಾರರಲ್ಲಿ ಶಾರ್ದೂಲ್ ಠಾಕೂರ್ (Shardul Thakur) ಕೂಡ ಒಬ್ಬರು. ಆದರೆ ಸೋಮವಾರ ರಾತ್ರಿ ನಡೆದ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ ಮೊದಲ ಪಂದ್ಯದಲ್ಲಿ ಶಾರ್ದೂಲ್ ಕಣಕ್ಕಿಳಿದಿದ್ದರು. ಅರೇ, ಬಿಕರಿಯಾಗದೇ ಉಳಿದ ಆಟಗಾರ ಕಣಕ್ಕಿಳಿದಿರುವುದು ಹೇಗೆ ಎಂಬ ಪ್ರಶ್ನೆ ಮೂಡುವುದು ಸಹಜ. ಇದಕ್ಕೆ ಉತ್ತರ ಮೊಹ್ಸಿನ್ ಖಾನ್ ಹೊರಗುಳಿದಿರುವುದು.

ಹೌದು, ಲಕ್ನೋ ಸೂಪರ್ ಜೈಂಟ್ಸ್ ತಂಡದ ಎಡಗೈ ವೇಗಿ ಮೊಹ್ಸಿನ್ ಖಾನ್ ಗಾಯದ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಇತ್ತ ಎಲ್​ಎಸ್​ಜಿ ತಂಡದ ನೆಟ್ ಬೌಲರ್​ ಆಗಿ ಕಾಣಿಸಿಕೊಂಡಿದ್ದ ಶಾರ್ದೂಲ್ ಠಾಕೂರ್ ಅವರನ್ನು ಭಾನುವಾರ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಅಧಿಕೃತವಾಗಿ ಬದಲಿ ಆಟಗಾರನಾಗಿ ಆಯ್ಕೆ ಮಾಡಿಕೊಂಡಿದೆ.

ಅದರಂತೆ ಸೋಮವಾರ ನಡೆದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೊದಲ ಪಂದ್ಯದಲ್ಲೇ ಶಾರ್ದೂಲ್ ಅವರನ್ನು ಕಣಕ್ಕಿಳಿಸಲಾಗಿದೆ.  ಈ ಮೂಲಕ ಬದಲಿಯಾಗಿ ಬಂದ ಲಾರ್ಡ್ ಶಾರ್ದೂಲ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಎರಡು ಓವರ್ ಬೌಲಿಂಗ್ ಮಾಡಿ 19 ರನ್ ನೀಡಿ 2 ವಿಕೆಟ್​ಗಳನ್ನು ಸಹ ಕಬಳಿಸಿ ಮಿಂಚಿದ್ದಾರೆ.

ಇದನ್ನೂ ಓದಿ
Image
RCBಯಲ್ಲಿ ಬ್ರಿಟಿಷ್ ಪಡೆ... ಸೋತು ಸುಣ್ಣವಾಗಲಿದೆ ಎಂದ ಗಿಲ್​ಕ್ರಿಸ್ಟ್
Image
IPL 2025: ಐಪಿಎಲ್​ ಕಣದಲ್ಲಿದ್ದಾರೆ 13 ಕನ್ನಡಿಗರು
Image
IPL 2025: ಬ್ಯಾನ್ ಬ್ಯಾನ್ ಬ್ಯಾನ್... ಐಪಿಎಲ್ ಆಟಗಾರರಿಗೆ ಬ್ಯಾನ್ ಭೀತಿ
Image
IPL 2025: ಐಪಿಎಲ್​ನಲ್ಲಿ 10 ನಿಮಯಗಳು ಬದಲಾವಣೆ

ಶಾರ್ದೂಲ್ ಐಪಿಎಲ್ ಕೆರಿಯರ್:

ಶಾರ್ದೂಲ್ ಠಾಕೂರ್ ಐಪಿಎಲ್​ನಲ್ಲಿ ಈವರೆಗೆ 6 ತಂಡಗಳಲ್ಲಿ ಕಾಣಿಸಿಕೊಂಡಿದ್ದಾರೆ. 2015 ರಲ್ಲಿ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ವೃತ್ತಿಜೀವನ ಆರಂಭಿಸಿದ್ದ ಶಾರ್ದೂಲ್ ಆ ಬಳಿಕ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್, ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿದಿದ್ದರು.

ಈ ವೇಳೆ ಒಟ್ಟು 96 ಪಂದ್ಯಗಳನ್ನಾಡಿದ್ದ ಶಾರ್ದೂಲ್ 37 ಇನಿಂಗ್ಸ್​ಗಳಿಂದ 307 ರನ್ ಕಲೆಹಾಕಿದ್ದಾರೆ. ಹಾಗೆಯೇ 93 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು 96 ವಿಕೆಟ್ ಕಬಳಿಸಿದ್ದಾರೆ.

ಇದೀಗ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಶಾರ್ದೂಲ್ ಠಾಕೂರ್ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ 6 ತಂಡಗಳ ಪರ ಕಣಕ್ಕಿಳಿದ ಕೆಲವೇ ಕೆಲವು ಆಟಗಾರರ ಪಟ್ಟಿಗೆ ಶಾರ್ದೂಲ್ ಠಾಕೂರ್ ಹೆಸರು ಕೂಡ ಸೇರ್ಪಡೆಯಾಗಿದ್ದಾರೆ.

ಗೆದ್ದು ಬೀಗಿದ ಡೆಲ್ಲಿ ಪಡೆ:

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 209 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19.3 ಓವರ್​ಗಳಲ್ಲಿ 211 ರನ್ ಬಾರಿಸಿ 1 ವಿಕೆಟ್​ನ ರೋಚಕ ಜಯ ಸಾಧಿಸಿದೆ. ಈ ಮೂಲಕ ಡೆಲ್ಲಿ ಪಡೆದ ಈ ಬಾರಿಯ ಐಪಿಎಲ್​ನಲ್ಲಿ ಶುಭಾರಂಭ ಮಾಡಿದೆ.

ಲಕ್ನೋ ಸೂಪರ್ ಜೈಂಟ್ಸ್ ಪ್ಲೇಯಿಂಗ್ 11: ಐಡೆನ್ ಮಾರ್ಕ್ರಾಮ್ , ಮಿಚೆಲ್ ಮಾರ್ಷ್ , ನಿಕೋಲಸ್ ಪೂರನ್ , ಆಯುಷ್ ಬದೋನಿ , ರಿಷಭ್ ಪಂತ್ (ನಾಯಕ) ಡೇವಿಡ್ ಮಿಲ್ಲರ್ , ಪ್ರಿನ್ಸ್ ಯಾದವ್ , ದಿಗ್ವೇಶ್ ರಾಠಿ , ಶಹಬಾಝ್ ಅಹ್ಮದ್ , ಶಾರ್ದೂಲ್ ಠಾಕೂರ್ , ರವಿ ಬಿಷ್ಣೋಯ್.

ಇದನ್ನೂ ಓದಿ: IPL 2025: ಸೋಲಿನ ಬೆನ್ನಲ್ಲೇ ರಿಷಭ್ ಪಂತ್​ಗೂ ಬಿಸಿ ಮುಟ್ಟಿಸಿದ ಸಂಜೀವ್ ಗೊಯೆಂಕಾ

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ 11: ಜೇಕ್ ಫ್ರೇಸರ್-ಮೆಕ್‌ಗುರ್ಕ್ , ಫಾಫ್ ಡು ಪ್ಲೆಸಿಸ್ , ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್) , ಸಮೀರ್ ರಿಜ್ವಿ , ಅಕ್ಷರ್ ಪಟೇಲ್ (ನಾಯಕ) , ಟ್ರಿಸ್ಟನ್ ಸ್ಟಬ್ಸ್ , ವಿಪ್ರಜ್ ನಿಗಮ್ , ಮಿಚೆಲ್ ಸ್ಟಾರ್ಕ್ , ಕುಲ್ದೀಪ್ ಯಾದವ್ , ಮೋಹಿತ್ ಶರ್ಮಾ , ಮುಖೇಶ್ ಕುಮಾರ್.

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ