AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಭವ್ ಸೂರ್ಯವಂಶಿಗೆ 2023ರಲ್ಲಿ 14 ವರ್ಷ… 2025ರಲ್ಲೂ 14 ವರ್ಷ..!

Vaibhav Suryavanshi: ವೈಭವ್ ಸೂರ್ಯವಂಶಿ ಬಿಹಾರ ಮೂಲದ ಕ್ರಿಕೆಟಿಗ. 5ನೇ ವಯಸ್ಸಿನಲ್ಲೇ ಕ್ರಿಕೆಟ್ ಅಭ್ಯಾಸ ಶುರು ಮಾಡಿದ್ದ ವೈಭವ್ 12ನೇ ವಯಸ್ಸಿಗೆ ಪ್ರಥಮ ದರ್ಜೆ ಪಂದ್ಯವಾಡಿದ್ದರು ಎಂದರೆ ನಂಬಲೇಬೇಕು. ಅಲ್ಲದೆ ಈಗಾಗಲೇ ರಣಜಿ ಟ್ರೋಫಿ, ಹೇಮಂತ್ ಟ್ರೋಫಿ, ಕೂಚ್ ಬೆಹಾರ್ ಟ್ರೋಫಿ ಮತ್ತು ವಿನೂ ಮಂಕಡ್ ಟೂರ್ನಿಗಳಲ್ಲಿ ಕಣಕ್ಕಿಳಿದಿದ್ದಾರೆ. ಇದೀಗ ಐಪಿಎಲ್​ಗೆ ಪಾದಾರ್ಪಣೆ ಮಾಡಿ ಇತಿಹಾಸ ನಿರ್ಮಿಸಿದ್ದಾರೆ.

ವೈಭವ್ ಸೂರ್ಯವಂಶಿಗೆ 2023ರಲ್ಲಿ 14 ವರ್ಷ... 2025ರಲ್ಲೂ 14 ವರ್ಷ..!
Vaibhav Suryavanshi
ಝಾಹಿರ್ ಯೂಸುಫ್
|

Updated on: Apr 20, 2025 | 9:04 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಪಾದಾರ್ಪಣೆ ಮಾಡಿದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆ ವೈಭವ್ ಸೂರ್ಯವಂಶಿ (Vaibhav Suryavanshi)  ಹೆಸರಿಗೆ ಸೇರ್ಪಡೆಯಾಗಿದೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ 14 ವರ್ಷದ ವೈಭವ್ ಈ ಸಾಧನೆ ಮಾಡಿದ್ದಾರೆ. ಈ ಸಾಧನೆಯ ಬೆನ್ನಲ್ಲೇ ಯುವ ಆಟಗಾರನ ವಯಸ್ಸಿನ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿವೆ. ಇದಕ್ಕೆ ಮುಖ್ಯ ಕಾರಣ 2023 ರಲ್ಲಿ ವೈಭವ್ ಸೂರ್ಯವಂಶಿ ನೀಡಿದ ಹೇಳಿಕೆ.

2023 ರಲ್ಲಿ ಸಂದರ್ಶನವೊಂದರಲ್ಲಿ ಕಾಣಿಸಿಕೊಂಡಿದ್ದ ವೈಭವ್ ಸೂರ್ಯವಂಶಿಗೆ ವಯಸ್ಸಿನ ಬಗ್ಗೆ ಕೇಳಲಾಗಿತ್ತು. ಈ ವೇಳೆ ಸೆಪ್ಟೆಂಬರ್ 27 ರಂದು ನನಗೆ 14 ವರ್ಷ ತುಂಬಲಿದೆ ಎಂದಿದ್ದರು. ಇದೀಗ 2025 ರಲ್ಲೂ ವೈಭವ್ ತನ್ನ ವಯಸ್ಸನ್ನು 14 ಎಂದು ಹೇಳಿಕೊಂಡಿದ್ದಾರೆ.

ಅಂದರೆ 2 ವರ್ಷಗಳ ಹಿಂದೆ 14 ವರ್ಷ ತುಂಬಿದ್ದರೆ, ಈಗ ಅವರಿಗೆ 16 ವರ್ಷಗಳಾಗಬೇಕಿತ್ತು. ಆದರೆ ಐಪಿಎಲ್​ನಲ್ಲಿ 14 ವರ್ಷಗಳೊಂದಿಗೆ ಕಾಣಿಸಿಕೊಂಡಿರುವುದು ಇದೀಗ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಇಲ್ಲಿ ಮತ್ತೊಂದು ಇಂಟ್ರೆಸ್ಟಿಂಗ್ ವಿಷಯ ಎಂದರೆ, 2 ವರ್ಷಗಳ ಹಿಂದೆ ವೈಭವ್ ತಮ್ಮ ಜನ್ಮ ದಿನಾಂಕ ಸೆಪ್ಟೆಂಬರ್ 27 ಎಂದು ಹೇಳಿಕೊಂಡಿದ್ದರು. ಆದರೆ ಇದೀಗ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವುದು ಮಾರ್ಚ್ 27 ರಂದು.  ಹೀಗಾಗಿಯೇ ವೈಭವ್ ಸೂರ್ಯವಂಶಿ ಅವರ ಜನ್ಮ ದಿನಾಂಕದ ಬಗ್ಗೆ ಅನೇಕರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ವೈಭವ್ ಸೂರ್ಯವಂಶಿಯ ಹಳೆಯ ಸಂದರ್ಶನದ ವಿಡಿಯೋ:

1.10 ಕೋಟಿ ರೂ. ಪಡೆದ ವೈಭವ್ ಸೂರ್ಯವಂಶಿ:

ಈ ಬಾರಿಯ ಐಪಿಎಲ್​ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವಾಗ ವೈಭವ್ ಸೂರ್ಯವಂಶಿ ತನ್ನ ವಯಸ್ಸು 13 ಎಂದು ಘೋಷಿಸಿದ್ದರು. ಈ ಕಿರಿಯ ಆಟಗಾರನನ್ನು  ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಬರೋಬ್ಬರಿ 1.10 ಕೋಟಿ ರೂ.ಗೆ ಖರೀದಿಸಿತು. ಇದರೊಂದಿಗೆ ಐಪಿಎಲ್​ಗೆ ಆಯ್ಕೆಯಾದ ಅತ್ಯಂತ ಕಿರಿಯ ಆಟಗಾರನೆಂಬ ದಾಖಲೆ ವೈಭವ್ ಸೂರ್ಯವಂಶಿ ಪಾಲಾಗಿತ್ತು.

ಇದಕ್ಕೂ ಮುನ್ನ ಈ ದಾಖಲೆ ಪ್ರಯಾಸ್ ರೇ ಬರ್ಮನ್ ಹೆಸರಿನಲ್ಲಿತ್ತು. ಐಪಿಎಲ್ 2019 ರ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಪ್ರಯಾಸ್ ಅವರನ್ನು 1.5 ಕೋಟಿ ರೂ. ಖರೀದಿಸಿತ್ತು. ಈ ವೇಳೆಗೆ ಅವರ ವಯಸ್ಸು 16 ವರ್ಷ. ಈ ಮೂಲಕ ಐಪಿಎಲ್​​ ಇತಿಹಾಸದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆಯನ್ನು ಪ್ರಯಾಸ್ ನಿರ್ಮಿಸಿದ್ದರು.

ಆದರೆ 13ನೇ ವಯಸ್ಸಿನಲ್ಲಿ ಐಪಿಎಲ್​​ಗೆ ಎಂಟ್ರಿ ಕೊಟ್ಟ ವೈಭವ್ ಸೂರ್ಯವಂಶಿ ಕಳೆದ ತಿಂಗಳಷ್ಟೇ ತಮ್ಮ 14ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಹುಟ್ಟುಹಬ್ಬದ ಬೆನ್ನಲ್ಲೇ ಇದೀಗ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿದಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಕಣಕ್ಕಿಳಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.

ಇದನ್ನೂ ಓದಿ: Tim David: ಟಿಮ್ ಡೇವಿಡ್ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್

ಈ ಸಾಧನೆ ಬೆನ್ನಲ್ಲೇ ವೈಭವ್ ಸೂರ್ಯವಂಶಿ ಅವರ ವಯಸ್ಸಿನ ಬಗ್ಗೆ ಚರ್ಚೆಗಳು ಶುರುವಾಗಿದೆ. ಇದರ ನಡುವೆ 2 ವರ್ಷಗಳ ಹಿಂದೆ 14 ವರ್ಷ ಎಂದಿರುವ ವಿಡಿಯೋ ಸಹ ವೈರಲ್ ಆಗಿದೆ.  ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ವೈಭವ್ ಸೂರ್ಯವಂಶಿಗೆ ನಿಜಕ್ಕೂ 14 ವರ್ಷನಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿರುವುದಂತು ಸುಳ್ಳಲ್ಲ.

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ