Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಕೊನೆಗೂ ನೀವು ಚೆನ್ನಾಗಿ ಬೌಲಿಂಗ್ ಮಾಡಿದ್ರಿ: ವಿಜಯ ಮಲ್ಯ ಫುಲ್ ಖುಷ್

IPL 2025 RCB: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಮ್ಮೆಯೂ ಕಪ್ ಗೆಲ್ಲದಿರಲು ಮುಖ್ಯ ಕಾರಣ ಕಳಪೆ ಬೌಲಿಂಗ್ ಪ್ರದರ್ಶನ ಎನ್ನಲಾಗುತ್ತದೆ. ಕಳೆದ 17 ಸೀಸನ್​ಗಳಲ್ಲಿ ಬಲಾಢ್ಯ ಬ್ಯಾಟರ್​ಗಳು ಕಣಕ್ಕಿಳಿದರೂ, ಆರ್​ಸಿಬಿ ಬೌಲಿಂಗ್ ವಿಭಾಗದ ಮೂಲಕ ವಿಫಲವಾಗುತ್ತಿತ್ತು. ಆದರೆ ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಬೌಲರ್​ಗಳು ಹೊಸ ನಿರೀಕ್ಷೆ ಹುಟ್ಟುಹಾಕಿದ್ದಾರೆ.

IPL 2025: ಕೊನೆಗೂ ನೀವು ಚೆನ್ನಾಗಿ ಬೌಲಿಂಗ್ ಮಾಡಿದ್ರಿ: ವಿಜಯ ಮಲ್ಯ ಫುಲ್ ಖುಷ್
Vijay Mallya
Follow us
ಝಾಹಿರ್ ಯೂಸುಫ್
|

Updated on: Mar 23, 2025 | 9:54 AM

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ IPL 2025 ರ ಮೊದಲ ಪಂದ್ಯದಲ್ಲಿ ರಾಯಲ್ಲಾಗಿಯೇ ಗೆಲುವು ದಾಖಲಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟರ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 174 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡ 16.4 ಓವರ್​ಗಳಲ್ಲಿ 177 ರನ್​ ಬಾರಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಈ ಭರ್ಜರಿ ಗೆಲುವಿನ ಬೆನ್ನಲ್ಲೇ ಆರ್​ಸಿಬಿಯ ಮಾಜಿ ಮಾಲೀಕರಾದ ವಿಜಯ ಮಲ್ಯ ಅವರು ಸೋಷಿಯಲ್ ಮೀಡಿಯಾ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಅದು ಸಹ ಆರ್​ಸಿಬಿ ಬೌಲರ್​​ಗಳ ಪ್ರದರ್ಶನವನ್ನು ಕೊಂಡಾಡುವ ಮೂಲಕ ಎಂಬುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಪ್ರತಿ ಸೀಸನ್​ನಲ್ಲೂ ಆರ್​ಸಿಬಿ ಬಲಿಷ್ಠ ಬ್ಯಾಟಿಂಗ್ ಲೈನಪ್ ಹೊಂದಿದ್ದರೂ, ಬೌಲಿಂಗ್ ವಿಭಾಗವು ಕಳಪೆಯಿಂದ  ಕೂಡಿರುತ್ತಿತ್ತು. ಆದರೆ ಈ ಬಾರಿಯ ಮೊದಲ ಪಂದ್ಯದಲ್ಲೇ ಬಲಾಢ್ಯ ಬ್ಯಾಟರ್​ಗಳ ದಂಡೇ ಹೊಂದಿರುವ ಕೆಕೆಆರ್ ತಂಡಕ್ಕೆ ಸೋಲುಣಿಸುವಲ್ಲಿ ಆರ್​ಸಿಬಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ
Image
RCBಯಲ್ಲಿ ಬ್ರಿಟಿಷ್ ಪಡೆ... ಸೋತು ಸುಣ್ಣವಾಗಲಿದೆ ಎಂದ ಗಿಲ್​ಕ್ರಿಸ್ಟ್
Image
IPL 2025: ಐಪಿಎಲ್​ ಕಣದಲ್ಲಿದ್ದಾರೆ 13 ಕನ್ನಡಿಗರು
Image
IPL 2025: ಬ್ಯಾನ್ ಬ್ಯಾನ್ ಬ್ಯಾನ್... ಐಪಿಎಲ್ ಆಟಗಾರರಿಗೆ ಬ್ಯಾನ್ ಭೀತಿ
Image
IPL 2025: ಐಪಿಎಲ್​ನಲ್ಲಿ 10 ನಿಮಯಗಳು ಬದಲಾವಣೆ

ಈ ಪಂದ್ಯದ ಮೊದಲ 10 ಓವರ್​ಗಳಲ್ಲಿ 107 ರನ್ ನೀಡಿದ್ದ ಆರ್​ಸಿಬಿ ಬೌಲರ್​ಗಳು, ದ್ವಿತೀಯ 10 ಓವರ್​ಗಳಲ್ಲಿ ಕೇವಲ 67 ರನ್ ನೀಡಿ 6 ವಿಕೆಟ್​ಗಳನ್ನು ಉರುಳಿಸಿದ್ದರು. ಈ ಮೂಲಕ ಬೃಹತ್ ಮೊತ್ತ ಪೇರಿಸುವ ಕೊಲ್ಕತ್ತಾ ನೈಟ್ ರೈಡರ್ಸ್​ ತಂಡದ ಲೆಕ್ಕಾಚಾರವನ್ನು ಆರ್​ಸಿಬಿ ಬೌಲರ್​ಗಳು ತಲೆಕೆಳಗಾಗಿಸಿದ್ದರು.

ಈ ಗೆಲುವಿನ ಬೆನ್ನಲ್ಲೇ ಎಕ್ಸ್​ನಲ್ಲಿ ಪೋಸ್ಟ್ ಹಂಚಿಕೊಂಡಿರುವ ವಿಜಯ ಮಲ್ಯ ಅವರು, ಕೆಕೆಆರ್ ವಿರುದ್ಧದ ಭರ್ಜರಿ ಗೆಲುವಿಗೆ ಆರ್‌ಸಿಬಿಗೆ ಅಭಿನಂದನೆಗಳು. ಆರ್​ಸಿಬಿ ತಂಡದ ಬ್ಯಾಟಿಂಗ್ ಲೈನ್ ಅಪ್ ಬಗ್ಗೆ ಯಾವಾಗಲೂ ಮಾತನಾಡುತ್ತಿತ್ತಾರೆ. ಆದರೆ ಈ ಬಾರಿ ಆರ್‌ಸಿಬಿ ಚೆನ್ನಾಗಿ ಬೌಲಿಂಗ್ ಮಾಡಿದೆ ಎಂದು ಕಾಮೆಂಟೇಟರ್​ಗಳು ಹೇಳುತ್ತಿರುವುದು ಕೇಳಿ ಸಂತೋಷವಾಯಿತು ಎಂದು ಬರೆದುಕೊಂಡಿದ್ದಾರೆ.

ಈ ಮೂಲಕ ಆರ್​ಸಿಬಿ ತಂಡದ ಮೊದಲ ಗೆಲುವಿಗೆ ಮಲ್ಯ ಅವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ. ಅಂದಹಾಗೆ ವಿಜಯ್ ಮಲ್ಯ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಸ್ಥಾಪಕರು. 2008 ರಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ತಂಡಗಳ ಬಿಡ್ಡಿಂಗ್​ನಲ್ಲಿ ಮಲ್ಯ ಅವರು ಆರ್​ಸಿಬಿ ತಂಡವನ್ನು 455 ಕೋಟಿ ರೂ. ನೀಡಿ ಖರೀದಿಸಿದ್ದರು.

ಆದರೆ 2016 ರಲ್ಲಿ ಆರ್ಥಿಕ ಮುಗ್ಗಟ್ಟು ಎದುರಿಸಿ ಸಾಲದ ಸುಳಿಗೆ ಸಿಲುಕಿದ ವಿಜಯ ಮಲ್ಯ ಭಾರತದಿಂದ ಪಾಲಾಯನ ಮಾಡಿ, ಈಗ ಇಂಗ್ಲೆಂಡ್​ನಲ್ಲಿ ನೆಲೆಸಿದ್ದಾರೆ. ಇದೀಗ ಆರ್​ಸಿಬಿ ತಂಡದ ಮಾಲೀಕತ್ವವು ಯುನೈಟೆಡ್ ಸ್ಪಿರಿಟ್ಸ್ ಕಂಪೆನಿಯ ಹೆಸರಿನಲ್ಲಿದ್ದರೂ, ತಂಡದ ಮಾಲಕತ್ವದ ಶೇ. 54.8 ರಷ್ಟು ಭಾಗ ಡಿಯಾಜಿಯೊ ಕಂಪೆನಿಯ ಅಧೀನದಲ್ಲಿದೆ.

ಇದನ್ನೂ ಓದಿ: IPL 2025: RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಗಾಯಾಳು

ಇದಾಗ್ಯೂ ತನ್ನ ಹಳೆಯ ತಂಡದ ಗೆಲುವನ್ನು ವಿಜಯ ಮಲ್ಯ ದೂರ ಲಂಡನ್​ನಲ್ಲಿ ಕೂತು ಸಂಭ್ರಮಿಸುತ್ತಿದ್ದಾರೆ. ಅದು ಸಹ ಆರ್​ಸಿಬಿ ಬೌಲರ್​ಗಳ ಪ್ರದರ್ಶನವನ್ನು ಪ್ರಶಂಸಿಸುವ ಮೂಲಕ ಎಂಬುದು ವಿಶೇಷ.

ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್