Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಈ ಸಲ ಕಪ್ ನಮ್ದೇ ಅಂತ ಮಾತ್ರ ಹೇಳ್ಬೇಡಿ… ವಿರಾಟ್ ಕೊಹ್ಲಿ ಮೆಸೇಜ್

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ಬ ಬೆಂಗಳೂರು ತಂಡ ಮೂರು ಬಾರಿ ಫೈನಲ್​ಗೆ ಪ್ರವೇಶಿಸಿದೆ. 2009 ರಲ್ಲಿ ಚೊಚ್ಚಲ ಫೈನಲ್ ಆಡಿದ್ದ ಆರ್​ಸಿಬಿ, ಆ ಬಳಿಕ 2011 ರಲ್ಲಿ ಮತ್ತೊಮ್ಮೆ ಫೈನಲ್​ಗೇರಿತ್ತು. ಇನ್ನು 2016 ರಲ್ಲಿ ಮೂರನೇ ಬಾರಿ ಅಂತಿಮ ಪಂದ್ಯವಾಡಿತ್ತು. ಆದರೆ ಈ ಮೂರು ಫೈನಲ್​ಗಳಲ್ಲೂ ಎಡವಿ ಆರ್​ಸಿಬಿ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳುವ ಅವಕಾಶ ಕೈತಪ್ಪಿಸಿಕೊಂಡಿತು.

IPL 2025: ಈ ಸಲ ಕಪ್ ನಮ್ದೇ ಅಂತ ಮಾತ್ರ ಹೇಳ್ಬೇಡಿ... ವಿರಾಟ್ ಕೊಹ್ಲಿ ಮೆಸೇಜ್
Virat Kohli
Follow us
ಝಾಹಿರ್ ಯೂಸುಫ್
|

Updated on: Mar 20, 2025 | 9:04 AM

ಈ ಸಲ ಕಪ್ ನಮ್ದೇ ಎನ್ನುವ ಘೋಷವಾಕ್ಯದೊಂದಿಗೆ ಶುರುವಾಗುವ ಆರ್​ಸಿಬಿ ಅಭಿಮಾನಿಗಳ ಟ್ರೋಫಿ ಗೆಲ್ಲುವ ಕನಸು ಇದೀಗ 18ನೇ ವರ್ಷಕ್ಕೆ ಬಂದು ನಿಂತಿದೆ. ಈ ಕನಸಿನೊಂದಿಗೆ ಐಪಿಎಲ್ ಸೀಸನ್-18 ಆರಂಭಿಸುವ ಇರಾದೆಯಲ್ಲಿದ್ದ ಆರ್​ಸಿಬಿ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಪರೋಕ್ಷ ಸಂದೇಶ ರವಾನಿಸಿದ್ದಾರೆ. ಅದು ಸಹ ಈ ಸಲ ಕಪ್ ನಮ್ದೇ ಎಂದು ಮಾತ್ರ ಹೇಳ್ಬೇಡಿ ಎನ್ನುವ ಮೂಲಕ..!

ಹೌದು, ವಿರಾಟ್ ಕೊಹ್ಲಿ ಈ ಸಲ ಕಪ್ ನಮ್ದೇ ಅಂತ ಮಾತ್ರ ಹೇಳ್ಬೇಡಿ ಎಂದು ಎಬಿ ಡಿವಿಲಿಯರ್ಸ್​ಗೆ ಪರ್ಸನಲ್​ ಮೆಸೇಜ್ ಕಳಿಸಿದ್ದಾರೆ. ಈ ವಿಚಾರವನ್ನು ಖುದ್ದು ಎಬಿಡಿ ಬಹಿರಂಗಪಡಿಸಿದ್ದಾರೆ.

ಖಾಸಗಿ ಚಾನೆಲ್​ ಚರ್ಚೆಯಲ್ಲಿ ಮಾತನಾಡಿದ ಎಬಿಡಿ, ಎಲ್ಲೋ ಒಂದ್ಸಲ ನಾನು ಈ ಸಲ ಕಪ್ ನಮ್ದೇ ಅಂತ ಹೇಳಿದ್ದೆ. ಇದನ್ನು ನೋಡಿದ ವಿರಾಟ್ ಕೊಹ್ಲಿ ನನಗೆ ಪರ್ಸನಲ್ ಮೆಸೇಜ್ ಕಳಿಸಿ, ದಯವಿಟ್ಟು ಅದನ್ನು ಮಾತ್ರ ಹೇಳ್ಬೇಡಿ. ಈ ಸಲ ಕಪ್ ನಮ್ದೇ ಎನ್ನುವುದು ಕೇಳಿ ಕೇಳಿ ಸಾಕಾಗಿದೆ ಎಂದಿದ್ದರು.

ಇದನ್ನೂ ಓದಿ
Image
IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
Image
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
Image
ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
Image
ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು

ಹೀಗಾಗಿ ಈ ಘೋಷವಾಕ್ಯವನ್ನು ನಾನು ಬಿಟ್ಟಿದ್ದೀನಿ. ಇದಾಗ್ಯೂ ಈ ಸಲ ಆರ್​ಸಿಬಿ ಕಪ್ ಗೆಲ್ಲುತ್ತೆ ಎಂಬ ವಿಶ್ವಾಸವಿದೆ. ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ಉತ್ತಮ ಸಮತೋಲನದಿಂದ ಕೂಡಿದೆ. ಹೀಗಾಗಿ ಈ ಬಾರಿ ಚೊಚ್ಚಲ ಟ್ರೋಫಿ ಎತ್ತಿ ಹಿಡಿಯುವ ನಿರೀಕ್ಷೆಯಿದೆ ಎಬಿ ಡಿವಿಲಿಯರ್ಸ್ ಹೇಳಿದ್ದಾರೆ.

ಇನ್ನು ಇದು ಐಪಿಎಲ್​ನ 18ನೇ ಸೀಸನ್. ಅತ್ತ ವಿರಾಟ್ ಕೊಹ್ಲಿಯ ಜೆರ್ಸಿ ನಂಬರ್ 18. ಹಾಗಾಗಿ ಈ ವರ್ಷ ಆರ್​ಸಿಬಿಯದ್ದು ಎಂದು ನಾನು ಭಾವಿಸುತ್ತೇನೆ. ಅದರಂತೆ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಎತ್ತಿ ಹಿಡಿಯುವಾಗ ನಾನು ಸಹ ಅಲ್ಲಿರುತ್ತೇನೆ ಎಂದು ಎಬಿ ಡಿವಿಲಿಯರ್ಸ್ ಹೇಳಿದ್ದಾರೆ.

ಇದನ್ನೂ ಓದಿ: IPL 2025: RCB ಗಿಂತ ಡೆಲ್ಲಿ ಪಡೆಯಲ್ಲೇ ಕನ್ನಡಿಗರ ದರ್ಬಾರು

ಅಂದಹಾಗೆ 2008 ರಿಂದ ಐಪಿಎಲ್ ಆಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ ಕಪ್ ಗೆದ್ದಿಲ್ಲ. ಆರ್‌ಸಿಬಿ ತನ್ನ ಇತಿಹಾಸದಲ್ಲಿ ಕ್ರಮವಾಗಿ 2009, 2011 ಮತ್ತು 2016 ರಲ್ಲಿ ಮೂರು ಬಾರಿ ಐಪಿಎಲ್ ಫೈನಲ್ ತಲುಪುವಲ್ಲಿ ಯಶಸ್ವಿಯಾಗಿದೆ. ಆದಾಗ್ಯೂ, ಮೂರು ಬಾರಿ ಕೂಡ ಫೈನಲ್​ನಲ್ಲಿ ಎಡವಿತ್ತು. ಆದರೆ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಎತ್ತಿ ಹಿಡಿಯುವ ವಿಶ್ವಾಸದಲ್ಲಿದ್ದಾರೆ ಆರ್​ಸಿಬಿ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್.

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ