Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸುವವರು ಯಾರು?

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಮಾರ್ಚ್ 22 ರಿಂದ ಶುರುವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಈ ಟೂರ್ನಿಯ ಫೈನಲ್ ಪಂದ್ಯವು ಮೇ 25 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲೇ ಜರುಗಲಿದೆ.

IPL 2025: ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸುವವರು ಯಾರು?
Mumbai Indians
Follow us
ಝಾಹಿರ್ ಯೂಸುಫ್
|

Updated on: Mar 13, 2025 | 11:54 AM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಮಾರ್ಚ್ 22 ರಿಂದ ಆರಂಭವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಮಾರ್ಚ್ 23 ರಂದು ಜರುಗಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಕಣಕ್ಕಿಳಿಯಲಿದೆ.

ಆದರೆ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪಡೆಯನ್ನು ಮುನ್ನಡೆಸುವವರು ಯಾರು ಎಂಬುದೇ ಪ್ರಶ್ನೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಮೊದಲ ಪಂದ್ಯದಿಂದ ನಿಷೇಧಕ್ಕೆ ಒಳಗಾಗಿದ್ದಾರೆ.

ಕಳೆದ ಸೀಸನ್​​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ನಾಯಕ ಹಾರ್ದಿಕ್ ಪಾಂಡ್ಯಗೆ 30 ಲಕ್ಷ ರೂ. ದಂಡ ಹಾಗೂ ಒಂದು ಪಂದ್ಯದ ನಿಷೇಧ ಹೇರಲಾಗಿದೆ.

ಇದನ್ನೂ ಓದಿ
Image
IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
Image
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
Image
ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
Image
ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು

ಈ ಒಂದು ಪಂದ್ಯದ ನಿಷೇಧದ ಶಿಕ್ಷೆ ಈ ಬಾರಿಯ ಐಪಿಎಲ್​​ನಲ್ಲಿ ಮುಂದುವರೆಯಲಿದೆ. ಅದರಂತೆ ಐಪಿಎಲ್ 2025 ರಲ್ಲಿ ಮುಂಬೈ ಇಂಡಿಯನ್ಸ್ ಆಡುವ ಮೊದಲ ಪಂದ್ಯದಿಂದ ನಾಯಕ ಹಾರ್ದಿಕ್ ಪಾಂಡ್ಯ ಹೊರಗುಳಿಯಬೇಕಾಗುತ್ತದೆ. ಹೀಗಾಗಿ ಮಾರ್ಚ್ 23 ರಂದು ನಡೆಯಲಿರುವ ಸಿಎಸ್​ಕೆ ವಿರುದ್ಧದ ಮ್ಯಾಚ್​​ನಲ್ಲಿ ಪಾಂಡ್ಯ ಕಾಣಿಸಿಕೊಳ್ಳುವುದಿಲ್ಲ.

ಇತ್ತ ಹಾರ್ದಿಕ್ ಪಾಂಡ್ಯ ಹೊರಗುಳಿದರೆ ಮುಂಬೈ ಇಂಡಿಯನ್ಸ್ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಅತ್ತ ತಂಡದಲ್ಲಿ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಇದ್ದು, ಇವರಿಬ್ಬರಲ್ಲಿ ಯಾರಿಗೆ ಕ್ಯಾಪ್ಟನ್ ಪಟ್ಟ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಐಪಿಎಲ್ ಸ್ಲೋ ಓವರ್ ರೇಟ್ ನಿಯಮವೇನು?

ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್​ನಿಂದ ಒಬ್ಬ ಫೀಲ್ಡರ್​ನನ್ನು ಕಡಿತ ಮಾಡಲಾಗುತ್ತದೆ. ಹಾಗೆಯೇ ಈ ತಪ್ಪನ್ನು ಮಾಡಿದ ತಂಡದ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ, ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ ತಲಾ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ.

ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಮೂರು ಬಾರಿ ತಪ್ಪು ಮಾಡಿದ ನಾಯಕ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರು ತಲಾ 12 ಲಕ್ಷ ರೂ. ಅಥವಾ ಪಂದ್ಯದ ಶುಲ್ಕದ ಶೇ. 50 ರಷ್ಟು ದಂಡವನ್ನು ಪಾವತಿಸಬೇಕಾಗುತ್ತದೆ.

ಅದರಂತೆ ಕಳೆದ ಸೀಸನ್​​​ನಲ್ಲಿ ಮೂರು ಬಾರಿ ಸ್ಲೋ ಓವರ್​ ರೇಟ್ ತಪ್ಪು ಮಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಐಪಿಎಲ್ 2025ರ ಮೊದಲ ಪಂದ್ಯದಿಂದ ನಿಷೇಧಕ್ಕೆ ಒಳಗಾಗಿದ್ದಾರೆ.

ಇದನ್ನೂ ಓದಿ: IPL 2025: ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಗೆ ಕಹಿ ಸುದ್ದಿ..!

ಮುಂಬೈ ಇಂಡಿಯನ್ಸ್ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಜಸ್​ಪ್ರೀತ್ ಬುಮ್ರಾ, ತಿಲಕ್ ವರ್ಮಾ, ಟ್ರೆಂಟ್ ಬೌಲ್ಟ್, ನಮನ್ ಧೀರ್, ರಾಬಿನ್ ಮಿಂಝ್, ಕರ್ಣ್ ಶರ್ಮಾ, ದೀಪಕ್ ಚಹರ್, ರೀಸ್ ಟೋಪ್ಲಿ, ರಿಯಾನ್ ರಿಕೆಲ್ಟನ್, ವಿಲ್ ಜ್ಯಾಕ್ಸ್, ಮಿಚೆಲ್ ಸ್ಯಾಂಟ್ನರ್, ಕರ್ಣ್ ಶರ್ಮಾ, ರಾಜ್ವ ಶರ್ಮಾ, ಸತ್ಯನಾರಾಯಣ ರಾಜು, ರಾಜ್​ ಬಾವ, ಕೃಷ್ಣನ್ ಶ್ರೀಜಿತ್, ಅಶ್ವಾಣಿ ಕುಮಾರ್, ಬೆವನ್ ಜೇಕಬ್ಸ್, ಅರ್ಜುನ್ ತೆಂಡೂಲ್ಕರ್, ಲಿಝಾಡ್ ವಿಲಿಯಮ್ಸ್, ಮುಜೀಬ್ ಉರ್ ರೆಹಮಾನ್.

ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ