Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಕೇವಲ 1 ಓವರ್: ಯುಜ್ವೇಂದ್ರ ಚಹಲ್​ನ ನಿರ್ಲಕ್ಷಿಸಿದ್ರಾ ಶ್ರೇಯಸ್ ಅಯ್ಯರ್

IPL 2025 CSK vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ 2025 ರಲ್ಲಿ ಪಂಜಾಬ್ ಕಿಂಗ್ಸ್ ತಂಡವು ತನ್ನ ಪರಾಕ್ರಮ ಮುಂದುವರೆಸಿದೆ. ಈ ಪರಾಕ್ರಮದೊಂದಿಗೆ ಈ ಬಾರಿ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೋಲುಣಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ 219 ರನ್​ ಕಲೆಹಾಕಿದರೆ, ಸಿಎಸ್​ಕೆ ಗಳಿಸಿದ್ದು ಕೇವಲ 201 ರನ್​ಗಳು ಮಾತ್ರ. ಈ ಮೂಲಕ ಶ್ರೇಯಸ್ ಅಯ್ಯರ್ ಪಡೆ 18 ರನ್​ಗಳ ಜಯ ಸಾಧಿಸಿದೆ.

IPL 2025: ಕೇವಲ 1 ಓವರ್: ಯುಜ್ವೇಂದ್ರ ಚಹಲ್​ನ ನಿರ್ಲಕ್ಷಿಸಿದ್ರಾ ಶ್ರೇಯಸ್ ಅಯ್ಯರ್
Shreyas Iyer - Yuzvendra Chahal
Follow us
ಝಾಹಿರ್ ಯೂಸುಫ್
|

Updated on: Apr 09, 2025 | 9:54 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18ರ 22ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪ್ರಮುಖ ಸ್ಪಿನ್ನರ್ ಯುಜ್ವೇಂದ್ರ ಚಹಲ್ (Yuzvendra Chahal) ಕೇವಲ ಒಂದು ಓವರ್ ಮಾತ್ರ ಎಸೆದಿದ್ದಾರೆ. ಅದು ಸಹ 17ನೇ ಓವರ್​ನಲ್ಲಿ. ಅಂದರೆ 16 ಓವರ್​ಗಳವರೆಗೆ ಚಹಲ್​ಗೆ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಚೆಂಡು ನೀಡಿರಲಿಲ್ಲ. ಇನ್ನು 17ನೇ ಓವರ್ ಎಸೆದ ಯುಜ್ವೇಂದ್ರ ಚಹಲ್ 9 ರನ್ ನೀಡಿದರು. ಇದಾಗ್ಯೂ ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ.

ಚಹಲ್​ಗೆ ಓವರ್ ನೀಡಿಲ್ಲವೇಕೆ?

ಯುಜ್ವೇಂದ್ರ ಚಹಲ್​ಗೆ ಓವರ್ ನೀಡದಿರಲು ಕಾರಣವೇನು? ಎಂಬ ಪ್ರಶ್ನೆಗೆ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಉತ್ತರ ನೀಡಿದ್ದಾರೆ. ಪಂದ್ಯದ ಬಳಿಕ ಮಾತನಾಡಿದ ಅಯ್ಯರ್, ಇದು ನಮ್ಮ ತಂಡದ ಕಾರ್ಯತಂತ್ರದ ನಿರ್ಧಾರವಾಗಿತ್ತು.

ಏಕೆಂದರೆ ಶಿವಂ ದುಬೆ ಮತ್ತು ಡೆವೊನ್ ಕಾನ್ವೇ ಕ್ರೀಸ್‌ನಲ್ಲಿದ್ದರು. ಇಬ್ಬರೂ ಸ್ಪಿನ್ ವಿರುದ್ಧ ಉತ್ತಮವಾಗಿ ಬ್ಯಾಟ್ ಮಾಡುತ್ತಾರೆ. ಮಧ್ಯದ ಓವರ್‌ಗಳಲ್ಲಿ ಅವರು ಚೆನ್ನಾಗಿ ಆಡಿದ್ದರು. ಅಂತಹ ಪರಿಸ್ಥಿತಿಯಲ್ಲಿ ಚಹಲ್​ಗೆ ಓವರ್​ ನೀಡುವುದು ಸರಿಯಾದ ಕ್ರಮವಾಗಿರಲಿಲ್ಲ.

ಇದನ್ನೂ ಓದಿ
Image
ಹುಡುಗಿಯಾಗಿ ಬದಲಾದ ಟೀಮ್ ಇಂಡಿಯಾದ ಮಾಜಿ ಆಟಗಾರನ ಪುತ್ರ
Image
VIDEO: ವಿರಾಟ್ ಕೊಹ್ಲಿಗೆ ಬೌಲಿಂಗ್: ಭಾವುಕರಾಗಿ ಅರ್ಧದಲ್ಲೇ ನಿಂತ ಸಿರಾಜ್
Image
11ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ವಿಶ್ವ ದಾಖಲೆ ಬರೆದ ನಸೀಮ್ ಶಾ
Image
MS Dhoni: ಕೇವಲ 3 ರನ್​: ಗ್ರೇಟ್​ ಫಿನಿಶರ್ ಫಿನಿಶ್..!

ಒಂದು ವೇಳೆ ನಾವು ಯುಜ್ವೇಂದ್ರ ಚಹಲ್ ಅವರನ್ನು ದಾಳಿಗಿಳಿಸಿದ್ದರೆ, ಅವರು ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸುವ ಸಾಧ್ಯತೆಯಿತ್ತು. ಹೀಗಾಗಿ ಶಿವಂ ದುಬೆ ಔಟಾಗುವ ತನಕ ಚಹಲ್​ಗೆ ಬೌಲಿಂಗ್ ನೀಡದಿರಲು ನಿರ್ಧರಿಸಿದೆವು ಎಂದು ಶ್ರೇಯಸ್ ಅಯ್ಯರ್ ಹೇಳಿದ್ದಾರೆ.

ಇದೇ ವೇಳೆ ಯುಜ್ವೇಂದ್ರ ಚಹಲ್ ಅವರ ಬೌಲಿಂಗ್ ಸಾಮರ್ಥ್ಯವನ್ನು ಹಾಡಿಹೊಗಳಿರುವ ಶ್ರೇಯಸ್ ಅಯ್ಯರ್, ಅವರೊಬ್ಬರು  ಬುದ್ಧಿವಂತ ಬೌಲರ್. ಅದರಲ್ಲಿ ಯಾವುದೇ ಸಂದೇಹವಿಲ್ಲ. ಆದರೆ ಕೆಲವೊಮ್ಮೆ ನಾವು ನಮ್ಮ ಕಾರ್ಯತಂತ್ರಗಳನ್ನು ಸಹ ನೋಡಬೇಕಿರುತ್ತದೆ.

ಹೀಗಾಗಿ ಸಿಎಸ್​ಕೆ ವಿರುದ್ಧ ವೇಗಿಗಳೊಂದಿಗೆ ಮುಂದುವರೆಯಲು ನಿರ್ಧರಿಸಿದೆವು. ಅಲ್ಲದೆ ವೇಗದ ಬೌಲರ್​ಗಳು ನಿಧಾನಗತಿಯ ಎಸೆತಗಳೊಂದಿಗೆ ಪಂದ್ಯದ ಮೇಲೆ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾದರು ಎಂದು ಶ್ರೇಯಸ್ ಅಯ್ಯರ್ ಹೇಳಿದ್ದಾರೆ.

ಕಿಂಗ್ಸ್ ವಿರುದ್ಧ ಕಿಂಗ್ಸ್ ಪರಾಕ್ರಮ:

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ಪರ ಯುವ ಎಡಗೈ ದಾಂಡಿಗ ಪ್ರಿಯಾಂಶ್ ಆರ್ಯ (103) ಶತಕ ಬಾರಿಸಿದ್ದರು. ಈ ಶತಕದ ನೆರವಿನೊಂದಿಗೆ ಪಂಜಾಬ್ ಕಿಂಗ್ಸ್ ತಂಡವು 20 ಒವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 219 ರನ್​ ಕಲೆಹಾಕಿತು.

ಇದನ್ನೂ ಓದಿ: IPL 2025: ಗೆಲುವಿನ ಬೆನ್ನಲ್ಲೇ RCB ನಾಯಕ ರಜತ್ ಪಾಟಿದಾರ್​ಗೆ ದಂಡ ವಿಧಿಸಿದ ಬಿಸಿಸಿಐ

220 ರನ್​ಗಳ ಕಠಿಣ ಗುರಿ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 201 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡವು 18 ರನ್​ಗಳ ಜಯ ಸಾಧಿಸಿದೆ.

‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..