AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್ 2026ರಲ್ಲಿ ನಿವೃತ್ತಿ ಘೋಷಿಸಲಿದ್ದಾರೆ ಈ ಐದು ಆಟಗಾರರು?

2026ರ ಐಪಿಎಲ್ ಬಳಿಕ ಐದು ಪ್ರಮುಖ ಆಟಗಾರರು ನಿವೃತ್ತಿ ಘೋಷಿಸುವ ಸಾಧ್ಯತೆ ಎನ್ನಲಾಗಿದೆ. ಎಂ.ಎಸ್. ಧೋನಿ ಸೇರಿದಂತೆ ಅನೇಕ ಹೆಸರುಗಳು ಮುನ್ನೆಲೆಗೆ ಬಂದಿವೆ. ವಯಸ್ಸು, ಅಂತರಾಷ್ಟ್ರೀಯ ನಿವೃತ್ತಿ ಮತ್ತು ಇತ್ತೀಚಿನ ಪ್ರದರ್ಶನಗಳು ಅವರ ನಿರ್ಗಮನಕ್ಕೆ ಕಾರಣಗಳಾಗಿವೆ. ಈ ಸೀಸನ್ ಈ ಕ್ರಿಕೆಟ್ ದಂತಕಥೆಗಳಿಗೆ ಕೊನೆಯ ಸೀಸನ್ ಆಗಬಹುದು.

ಐಪಿಎಲ್ 2026ರಲ್ಲಿ ನಿವೃತ್ತಿ ಘೋಷಿಸಲಿದ್ದಾರೆ ಈ ಐದು ಆಟಗಾರರು?
ನಿವೃತ್ತಿ ಪಡೆಯಲಿರೋ ಆಟಗಾರರು
ರಾಜೇಶ್ ದುಗ್ಗುಮನೆ
|

Updated on:Mar 24, 2026 | 7:49 AM

Share

2026ರ ಐಪಿಎಲ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಬಾರಿ ಬೆಂಗಳೂರಿನಲ್ಲಿ ಮೊದಲ ಪಂದ್ಯ ನಡೆಯುತ್ತಿರುವುದು ವಿಶೇಷ. ಹಾಲಿ ಚಾಂಪಿಯನ್ಸ್ ಆರ್​​ಸಿಬಿ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಈ ಬಾರಿ ಎಲ್ಲಾ ತಂಡಗಳಲ್ಲಿ ಕೆಲವು ಬದಲಾವಣೆಗಳನ್ನು ಕೂಡ ಮಾಡಲಾಗಿದೆ. ಪ್ರಮುಖ ಆಟಗಾರರು ಬೇರೆ ಬೇರೆ ತಂಡ ಸೇರಿದ್ದಾರೆ. ಈ ಮಧ್ಯೆ ಈ ಬಾರಿಯ ಐಪಿಎಲ್ ಬಳಿಕ ಐದು ಆಟಗಾರರು ಐಪಿಎಲ್​​ನಿಂದ ಹೊರ ಹೋಗಲಿದ್ದಾರೆ ಎನ್ನುವ ಮಾತಿದೆ.

ಎಂಎಸ್ ಧೋನಿ

ಐಪಿಎಲ್ ಇತಿಹಾಸದಲ್ಲಿ ಹಲವು ದಾಖಲೆ ಬರೆದ ಎಂಎಸ್​ ಧೋನಿ ಈಗ 45ನೇ ವಯಸ್ಸಿಗೆ ಕಾಲಿಡುತ್ತಿದ್ದಾರೆ. ಅವರು ಈಗ ಆಡುತ್ತಿರುವುದು 19ನೇ ಸೀಸನ್. ಇಲ್ಲಿಯವರೆಗೆ ಟೂರ್ನಿಯಲ್ಲಿ ಅತಿ ಹೆಚ್ಚು ಪಂದ್ಯಗಳನ್ನು (278) ಆಡಿರುವುದು ಧೋನಿ ಹೆಚ್ಚುಗಾರಿಕೆ. ಅವರ ನಿವೃತ್ತಿ ಬಗ್ಗೆ ಆಗಾಗ ಸುದ್ದಿಗಳು ಹರಿದಾಡಿಯೇ ಇತ್ತು. ಆದರೆ, ಅದು ನಿಜವಾಗಿಲ್ಲ. ಇದು ಅವರ ಕೊನೆಯ ಸೀಸನ್ ಆಗಬಹುದು. ಈಗಾಗಲೇ ತಮ್ಮ ಎನರ್ಜಿ ಕಡಿಮೆ ಆಗುತ್ತಿರುವುದಾಗಿ ಧೋನಿ ಹೇಳಿಕೆ ನೀಡಿದ್ದಾರೆ. ರುತುರಾಜ್ ಗಾಯಕ್ವಾಡ್ ನಾಯಕನಾಗಿದ್ದು, ಸಂಜು ಸ್ಯಾಮ್ಸನ್ ಕೂಡ ಸಿಎಸ್​ಕೆ ಆಗಮಿಸಿದ್ದಾರೆ.

ಮಿಚೆಲ್ ಸ್ಟಾರ್ಕ್

ಆಸ್ಟ್ರೇಲಿಯಾದ ಲೆಜೆಂಡರಿ ಬೌಲರ್ ಎನಿಸಿಕೊಂಡಿರೋ ಮಿಚೆಲ್ ಸ್ಟಾರ್ಕ್ ಎಷ್ಟೋ ಪಂದ್ಯಗಳ ದಿಕ್ಕನ್ನೇ ಬದಲಿಸಿದ್ದಾರೆ. ಈಗಾಗಲೇ ಅಂತರರಾಷ್ಟ್ರೀಯ ಟಿ20 ಪಂದ್ಯಗಳಿಂದ ನಿವೃತ್ತರಾಗಿದ್ದಾರೆ. ಅವರು ಮುಂಬರುವ ವಿಶ್ವಕಪ್ ಪರಿಗಣಿಸಿ, ಅವರು ಈ ವರ್ಷದ ಬಳಿಕ ಐಪಿಎಲ್​​​ನಿಂದ ಹೊರ ಹೋಗಬಹುದು. ಅವರು ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿದ್ದಾರೆ. ಅವರ ಆಗಮನಕ್ಕೆ ಇನ್ನೂ ಗ್ರೀನ್ ಸಿಗ್ನಲ್ ಸಿಗದ ಕಾರಣ ಆರಂಭದ ಕೆಲ ಪಂದ್ಯಗಳನ್ನು ಅವರು ಮಿಸ್ ಮಾಡಿಕೊಳ್ಳಬಹುದು.

ಇಶಾಂತ್ ಶರ್ಮಾ

ಭಾರತದ ಅನುಭವಿ ವೇಗಿ ಇಶಾಂತ್ ಶರ್ಮಾ ಅವರದ್ದು ಕೂಡ ಇದು ಕೊನೆಯ ಸೀಸನ್ ಎನ್ನಲಾಗುತ್ತಿದೆ. 37 ವರ್ಷದ ಇಶಾಂತ್ ಶರ್ಮಾ ಮೊದಲ ಸೀಸನ್‌ನಿಂದ ಐಪಿಎಲ್​ ಆಡುತ್ತಿದ್ದಾರೆ. ಅವರು ಗುಜರಾತ್ ಟೈಟನ್ಸ್​​ನಲ್ಲಿ ಇದ್ದು, ಅವರು ಐಪಿಎಲ್​ಗೆ ನಿವೃತ್ತಿ ಘೋಷಿಸೋ ಸಾಧ್ಯತೆ ಇದೆ.

ಇದನ್ನೂ ಓದಿ: 60 ವರ್ಷದವರೆಗೆ ಐಪಿಎಲ್ ಆಡಬೇಕು ಎಂದಿದ್ದಕ್ಕೆ ಧೋನಿ ಏನಂದ್ರು?

ಮನೀಶ್ ಪಾಂಡೆ

ಐಪಿಎಲ್‌ನಲ್ಲಿ ಶತಕ ಗಳಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಮನೀಶ್ ಪಾಂಡೆ. ಕಳೆದ ನಾಲ್ಕೈದು ವರ್ಷಗಳಲ್ಲಿ ಅವರು ಸಾಕಷ್ಟು ಏರಿಳಿತ ಕಂಡಿದ್ದಾರೆ. ಕಳೆದ ಐದು ಸೀಸನ್​​ಗಳಿಂದ ಅವರು ಕಣಕ್ಕೆ ಇಳಿದಿದ್ದು ಕೇವಲ 28 ಪಂದ್ಯಗಳಲ್ಲಿ ಮಾತ್ರ. ಐದು ಸೀಸನ್​​ಗಳಲ್ಲಿ ನಾಲ್ಕು ವಿಭಿನ್ನ ತಂಡಗಳನ್ನು ಪ್ರತಿನಿಧಿಸಿದ್ದಾರೆ. 36 ವರ್ಷದ ಮನೀಶ್ ಪಾಂಡೆ ಕೆಕೆಆರ್‌ನಲ್ಲಿದ್ದಾರೆ. ಅವರು ನಿವೃತ್ತಿ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಸುನಿಲ್ ನರೈನ್

ಮನೀಶ್ ಪಾಂಡೆ ಜೊತೆಗೆ, ಕೆಕೆಆರ್‌ನ ಅನುಭವಿ ಆಲ್‌ರೌಂಡರ್ ಸುನಿಲ್ ನರೈನ್‌ಗೆ ಇದು ಕೊನೆಯ ಸೀಸನ್ ಆಗಬಹುದು ಎನ್ನಲಾಗುತ್ತಿದೆ. ಅವರು ಈ ಬಾರಿ ಐಪಿಲ್​​ನಿಂದ ನಿವೃತ್ತಿ ಘೋಷಿಸುತ್ತಾರಾ ಎನ್ನುವ ಕುತೂಹಲ ಮೂಡಿದೆ. ಈ ಸೀಸನ್‌ನಲ್ಲಿ ಅವರ ಬ್ಯಾಟಿಂಗ್ ಮತ್ತು ಬಾಲ್ ಎರಡರಲ್ಲೂ ಪ್ರದರ್ಶನ ನೀಡದಿದ್ದರೆ, ಇದು ಅವರ ಕೊನೆಯ ಸೀಸನ್ ಆಗಬಹುದು.

ಇನ್ನಷ್ಟು ಕ್ರಿಕೆಟ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:44 am, Tue, 24 March 26

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಅಪ್ಪನಿಗೆ ಚಿನ್ನದ ಉಂಗುರ ಉಡುಗೊರೆ ನೀಡಿದ ಪುಟ್ಟ ಬಾಲಕಿ
ಅಪ್ಪನಿಗೆ ಚಿನ್ನದ ಉಂಗುರ ಉಡುಗೊರೆ ನೀಡಿದ ಪುಟ್ಟ ಬಾಲಕಿ
ರಾಜೀನಾಮೆ ಬಳಿಕವೂ ಸಿದ್ದರಾಮಯ್ಯ-ಡಿಕೆಶಿ ನಡುವೆ ಅನ್ಯೂನ್ಯತೆ ಹೇಗಿದೆ ನೋಡಿ
ರಾಜೀನಾಮೆ ಬಳಿಕವೂ ಸಿದ್ದರಾಮಯ್ಯ-ಡಿಕೆಶಿ ನಡುವೆ ಅನ್ಯೂನ್ಯತೆ ಹೇಗಿದೆ ನೋಡಿ
ಎಸ್ಟೇಟ್​​​ನಲ್ಲಿ ಬೀಡುಬಿಟ್ಟ ಕಾಡಾನೆಗಳು: ಗಜಪಡೆ ಕಂಡು ಸ್ಥಳೀಯರು ಕಂಗಾಲು
ಎಸ್ಟೇಟ್​​​ನಲ್ಲಿ ಬೀಡುಬಿಟ್ಟ ಕಾಡಾನೆಗಳು: ಗಜಪಡೆ ಕಂಡು ಸ್ಥಳೀಯರು ಕಂಗಾಲು
ಕೊನೆಗೂ ಮೌನ ಮುರಿದ ಡಿಕೆಶಿ, ಪ್ರಮಾಣವಚನದ ಬಗ್ಗೆ ಹೇಳಿದ್ದಿಷ್ಟು
ಕೊನೆಗೂ ಮೌನ ಮುರಿದ ಡಿಕೆಶಿ, ಪ್ರಮಾಣವಚನದ ಬಗ್ಗೆ ಹೇಳಿದ್ದಿಷ್ಟು