AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK vs GT: ದುಬೆಗೆ 3 ಜೀವದಾನ; 5 ಕ್ಯಾಚ್ ಕೈಚೆಲ್ಲಿದ ಗುಜರಾತ್

IPL 2026 Catches Crisis: ಇತ್ತೀಚಿನ ಐಪಿಎಲ್ ಪಂದ್ಯಗಳಲ್ಲಿ ಬ್ಯಾಟ್ಸ್‌ಮನ್‌ಗಳ ಅಬ್ಬರದ ಬದಲಿಗೆ ಆಟಗಾರರ ಕಳಪೆ ಫೀಲ್ಡಿಂಗ್ ಮತ್ತು ಕೈಚೆಲ್ಲಿದ ಕ್ಯಾಚ್‌ಗಳು ಸುದ್ದಿಯಾಗಿವೆ. ಕಳೆದ 24 ಗಂಟೆಗಳಲ್ಲಿ ನಡೆದ ಮೂರು ಪಂದ್ಯಗಳಲ್ಲಿ 20ಕ್ಕೂ ಹೆಚ್ಚು ಕ್ಯಾಚ್‌ಗಳನ್ನು ಕೈಬಿಡಲಾಗಿದೆ. ಗುಜರಾತ್-ಚೆನ್ನೈ, ಪಂಜಾಬ್-ದೆಹಲಿ, ರಾಜಸ್ಥಾನ-ಹೈದರಾಬಾದ್ ಪಂದ್ಯಗಳಲ್ಲಿ ಈ ಕಳಪೆ ಪ್ರದರ್ಶನ ಎದ್ದು ಕಾಣಿಸಿದ್ದು, ಪಂದ್ಯಗಳ ಫಲಿತಾಂಶದ ಮೇಲೆ ನೇರ ಪರಿಣಾಮ ಬೀರಿದೆ. ಶಿವಂ ದುಬೆಗೆ 3 ಜೀವದಾನ ಸಿಕ್ಕಿರುವುದು ಇದಕ್ಕೆ ಸ್ಪಷ್ಟ ನಿದರ್ಶನ.

CSK vs GT: ದುಬೆಗೆ 3 ಜೀವದಾನ; 5 ಕ್ಯಾಚ್ ಕೈಚೆಲ್ಲಿದ ಗುಜರಾತ್
Gt Vs Csk
TV9 Web
| Edited By: |

Updated on: Apr 26, 2026 | 6:58 PM

Share

ಇಷ್ಟು ದಿನ 2026 ರ ಐಪಿಎಲ್‌ನಲ್ಲಿ (IPL 2026) ಬರಿ ಬ್ಯಾಟ್ಸ್‌ಮನ್​ಗಳ ಅಬ್ಬರವೇ ಹೆಚ್ಚಿತ್ತು. ಹೀಗಾಗಿ ಪ್ರತಿ ಪಂದ್ಯದಲ್ಲೂ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆ ಹರಿಯುತ್ತಿತ್ತು. ಆದರೆ ಕಳೆದ 24 ಗಂಟೆಗಳಲ್ಲಿ ಆಟಗಾರರ ಕಳಪೆ ಫಿಲ್ಡಿಂಗ್​ನಿಂದಾಗಿ ಐಪಿಎಲ್ ಸುದ್ದಿಯಾಗಿದೆ. ಕಳದೆ 24 ಗಂಟೆಗಳ ಅವಧಿಯಲ್ಲಿ ಮೂರು ಪಂದ್ಯಗಳು ನಡೆದಿವೆ. ಈ ಮೂರು ಪಂದ್ಯಗಳಿಂದ ಸೇರಿ ಬರೋಬ್ಬರಿ 20 ಕ್ಕೂ ಹೆಚ್ಚು ಕ್ಯಾಚ್‌ಗಳನ್ನು ಕೈಬಿಡಲಾಗಿದೆ. ಗುಜರಾತ್ ಟೈಟಾನ್ಸ್-ಚೆನ್ನೈ ಸೂಪರ್ ಕಿಂಗ್ಸ್ (CSK vs GT) ಪಂದ್ಯದಂತೆಯೇ ಪಂಜಾಬ್-ದೆಹಲಿ ಮತ್ತು ರಾಜಸ್ಥಾನ-ಹೈದರಾಬಾದ್ ಪಂದ್ಯಗಳಲ್ಲಿಯೂ ಕಳಪೆ ಫಿಲ್ಡಿಂಗ್ ಕಂಡುಬಂದಿದೆ.

ಏಪ್ರಿಲ್ 26 ರ ಭಾನುವಾರದಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಚೆನ್ನೈ ಮತ್ತು ಗುಜರಾತ್ ನಡುವೆ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಚೆನ್ನೈ ತಂಡ ಕೇವಲ 37 ರನ್‌ಗಳಿಗೆ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು. ಅಲ್ಲದೆ 50 ರನ್‌ಗಳನ್ನು ಪೂರೈಸಲು 12 ಓವರ್‌ಗಳನ್ನು ತೆಗೆದುಕೊಂಡಿತು. ಹೀಗಾಗಿ ತಂಡವು 100 ರನ್‌ ತಲುಪುವುದು ಕೂಡ ಕಷ್ಟಕರವಾಗಿತ್ತು. ಆದರೆ ಗುಜರಾತ್ ತಂಡದ ಕಳಪೆ ಫಿಲ್ಡಿಂಗ್​ ಸಿಎಸ್​​ಕೆಗೆ ವರದಾನವಾಯಿತು.

ಶಿವಂ ದುಬೆಗೆ 3 ಜೀವದಾನ

ಗುಜರಾತ್ ತಂಡದ ಫೀಲ್ಡಿಂಗ್ ತುಂಬಾ ಕಳಪೆಯಾಗಿತ್ತು. ತಂಡವು 20 ಓವರ್‌ಗಳಲ್ಲಿ ಐದು ಕ್ಯಾಚ್‌ಗಳನ್ನು ಕೈಬಿಟ್ಟಿತು. ಇವುಗಳಲ್ಲಿ ಶಿವಂ ದುಬೆ ಅವರದ್ದೇ ಮೂರು ಕ್ಯಾಚ್​ಗಳು ಸೇರಿದ್ದವು. ದುಬೆ 6 ರನ್ ಗಳಿಸಿದ್ದಾಗ ವಿಕೆಟ್ ಕೀಪರ್ ಜೋಸ್ ಬಟ್ಲರ್ ಮೊದಲ ಕ್ಯಾಚ್ ಕೈಚೆಲ್ಲಿದರು. ನಂತರ, ದುಬೆ 11 ರನ್ ಗಳಿಸಿದ್ದಾಗ ಸಾಯಿ ಸುದರ್ಶನ್ ಎರಡನೇ ಕ್ಯಾಚ್ ಬಿಟ್ಟರು. ದುಬೆ 22 ರನ್‌ಗಳಿಸಿದ್ದಾಗ ಮೊಹಮ್ಮದ್ ಸಿರಾಜ್ ಕೂಡ ಮತ್ತೊಂದು ಜೀವದಾನ ನೀಡಿದರು. ಆದಾಗ್ಯೂ, ಮೂರು ಜೀವದಾನಗಳ ಹೊರತಾಗಿಯೂ ದುಬೆ ಹೇಳಿಕೊಳ್ಳುವಂತಹ ಇನ್ನಿಂಗ್ಸ್ ಆಡಲಿಲ್ಲ.

ಕ್ಯಾಚ್ ಕೈಬಿಟ್ಟ ಗಿಲ್

ದುಬೆ ಮಾತ್ರವಲ್ಲ, ಕಾರ್ತಿಕ್ ಶರ್ಮಾ ಮತ್ತು ಜೇಮಿ ಓವರ್ಟನ್​ಗೂ ಜೀವದಾನ ಸಿಕ್ಕಿತು. 18 ನೇ ಓವರ್‌ನಲ್ಲಿ, ಕಾರ್ತಿಕ್ ಶರ್ಮಾ ಡೀಪ್ ಸ್ಕ್ವೇರ್ ಲೆಗ್‌ಗೆ ಶಾಟ್ ಆಡಿದರು. ಆದರೆ ಮಾನವ್ ಸುತಾರ್ ಮತ್ತು ರಶೀದ್ ಖಾನ್ ನಡುವಿನ ಸಂವಹನದ ಕೊರತೆಯಿಂದಾಗಿ ಈ ಕ್ಯಾಚ್ ಡ್ರಾಪ್ ಆಯಿತು. ನಂತರ, ಮುಂದಿನ ಓವರ್‌ನಲ್ಲಿ, ಜೇಮೀ ಓವರ್ಟನ್ ಮಿಡ್-ಆಫ್‌ಗೆ ಶಾಟ್ ಹೊಡೆದರು. ಗುಜರಾತ್ ನಾಯಕ ಶುಭ್ಮನ್ ಗಿಲ್ ಕ್ಯಾಚ್ ತೆಗೆದುಕೊಳ್ಳಲು ಡೈವ್ ಮಾಡಿದರು ಆದರೆ ಹಿಡಿಯುವಲ್ಲಿ ವಿಫಲರಾದರು.

CSK vs GT IPL 2026 Live Score: ಗುಜರಾತ್ ಶತಕ ಪೂರ್ಣ

ನಿನ್ನೆ 16ಕ್ಯಾಚ್ ಡ್ರಾಪ್

ಇದಕ್ಕೂ ಮೊದಲು, ಏಪ್ರಿಲ್ 25 ರ ಶನಿವಾರದಂದು ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ಎರಡು ಪಂದ್ಯಗಳು ನಡೆದವು. ಈ ಪಂದ್ಯದಲ್ಲಿ ಒಟ್ಟಾರೆಯಾಗಿ, ನಾಲ್ಕು ಇನ್ನಿಂಗ್ಸ್‌ಗಳಲ್ಲಿ 16 ಕ್ಯಾಚ್‌ಗಳನ್ನು ಕೈಚೆಲ್ಲಲಾಯಿತು. ಇದು ಪಂದ್ಯದ ಮೇಲೆ ಪರಿಣಾಮ ಬೀರಿತು. ಡೆಲ್ಲಿ ಮತ್ತು ರಾಜಸ್ಥಾನ್ ಈ ಕ್ಯಾಚ್‌ಗಳನ್ನು ಬಂಡವಾಳ ಮಾಡಿಕೊಂಡು ತಮ್ಮ ಇನ್ನಿಂಗ್ಸ್‌ಗಳಲ್ಲಿ ದೊಡ್ಡ ಸ್ಕೋರ್‌ಗಳನ್ನು ಗಳಿಸಿದರೆ, ಪಂಜಾಬ್ ಮತ್ತು ಸನ್‌ರೈಸರ್ಸ್ ಕೈಬಿಟ್ಟ ಕ್ಯಾಚ್‌ಗಳನ್ನು ಬಂಡವಾಳ ಮಾಡಿಕೊಂಡು ದೊಡ್ಡ ಸ್ಕೋರ್‌ಗಳನ್ನು ಬೆನ್ನಟ್ಟುವ ಮೂಲಕ ಗೆಲುವು ಸಾಧಿಸಿದವು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪಂಚಮಸಾಲಿ ಪೀಠ ಸಂಘರ್ಷ: 3 ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ
ಪಂಚಮಸಾಲಿ ಪೀಠ ಸಂಘರ್ಷ: 3 ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ
ನನ್ನ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಐರನ್ ಲೇಡಿ
ನನ್ನ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಐರನ್ ಲೇಡಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ