AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026 Final: ಟಾಸ್ ಗೆದ್ದ ಆರ್​ಸಿಬಿ, ಫೈನಲ್ ಪಂದ್ಯ ಆಡದ ಸಾಲ್ಟ್; ಗುಜರಾತ್ ತಂಡದಲ್ಲೂ ಬದಲಾವಣೆ

RCB vs GT IPL Final 2026: ಅಹಮದಾಬಾದ್‌ನಲ್ಲಿ ಆರ್​ಸಿಬಿ ಮತ್ತು ಗುಜರಾತ್ ಟೈಟಾನ್ಸ್ ನಡುವೆ ಐಪಿಎಲ್ ಫೈನಲ್ ನಡೆಯುತ್ತಿದೆ. ಸತತ ಎರಡನೇ ಬಾರಿಗೆ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಲು ಬೆಂಗಳೂರು ಸಿದ್ಧವಾಗಿದೆ. ಟಾಸ್ ಗೆದ್ದ ಆರ್​ಸಿಬಿ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಫಿಲ್ ಸಾಲ್ಟ್ ಇಲ್ಲದೆ ಆರ್​ಸಿಬಿ ಕಣಕ್ಕಿಳಿದಿದ್ದು, ಗುಜರಾತ್ ತಂಡದಲ್ಲಿ ಸಾಯಿ ಕಿಶೋರ್ ಬದಲಿಗೆ ಅರ್ಷದ್ ಖಾನ್ ಸೇರಿಕೊಂಡಿದ್ದಾರೆ.

IPL 2026 Final: ಟಾಸ್ ಗೆದ್ದ ಆರ್​ಸಿಬಿ, ಫೈನಲ್ ಪಂದ್ಯ ಆಡದ ಸಾಲ್ಟ್; ಗುಜರಾತ್ ತಂಡದಲ್ಲೂ ಬದಲಾವಣೆ
Rcb Vs Gt TossImage Credit source: IPL X
ಪೃಥ್ವಿಶಂಕರ
|

Updated on:May 31, 2026 | 7:20 PM

Share

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ಐಪಿಎಲ್ 2026 ರ ಫೈನಲ್ (IPL 2026 Final) ಪಂದ್ಯ ನಡೆಯುತ್ತಿದೆ. ಸತತ ಎರಡನೇ ಬಾರಿಗೆ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಬೆಂಗಳೂರು ಇತಿಹಾಸ ನಿರ್ಮಿಸುವ ಅವಕಾಶವನ್ನು ಹೊಂದಿದೆ. ಆರ್​ಸಿಬಿ ಈ ಸಾಧನೆ ಮಾಡಿದರೆ ಐಪಿಎಲ್‌ನಲ್ಲಿ ಸತತ ಎರಡನೇ ಬಾರಿಗೆ ಟ್ರೋಫಿ ಗೆದ್ದ ಮೂರನೇ ತಂಡ ಎನಿಸಿಕೊಳ್ಳಲಿದೆ. ಇತ್ತ ಗುಜರಾತ್ ಕೂಡ 2022 ರ ನಂತರ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಲು ನೋಡುತ್ತಿದೆ. ಇನ್ನು ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಟಾಸ್ ಗೆದ್ದ ಆರ್​ಸಿಬಿ ನಾಯಕ ರಜತ್ ಪಾಟಿದರ್ ಬೌಲಿಂಗ್ ಆಯ್ದುಕೊಂಡಿದ್ದಾರೆ.

ಟಾಸ್ ಗೆದ್ದ ಆರ್​ಸಿಬಿ

ಮೇಲೆ ಹೇಳಿದಂತೆ ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ರಜತ್ ಪಾಟಿದಾರ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಆ ಬಳಿಕ ಪ್ಲೇಯಿಂಗ್ 11 ಬಗ್ಗೆ ಮಾಹಿತಿ ನೀಡಿದ ರಜತ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ ಎಂದರು. ಅಂದರೆ ಈ ನಿರ್ಣಾಯಕ ಪಂದ್ಯದಲ್ಲೂ ಫಿಲ್ ಸಾಲ್ಟ್ ಇಲ್ಲದೆ ಆರ್​ಸಿಬಿ ಕಣಕ್ಕಿಳಿಯುತ್ತಿದೆ. ಇತ್ತ ಟಾಸ್ ಸೋತ ಗುಜರಾತ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಸಾಯಿ ಕಿಶೋರ್ ಬದಲಿಗೆ ಅರ್ಷದ್ ಖಾನ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

RCB vs GT, IPL 2026 Final Live Score: ಟಾಸ್ ಗೆದ್ದ ಆರ್​​ಸಿಬಿ ಬೌಲಿಂಗ್ ಆಯ್ಕೆ

ಉಭಯ ತಂಡಗಳ ಪ್ಲೇಯಿಂಗ್ 11

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI: ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಕೃನಾಲ್ ಪಾಂಡ್ಯ, ಟಿಮ್ ಡೇವಿಡ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರೊಮಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಜಾಕೋಬ್ ಡಫ್ಫಿ ಮತ್ತು ರಸಿಖ್ ಸಲಾಂ.

ಇಂಪ್ಯಾಕ್ಟ್ ಪ್ಲೇಯರ್ಸ್​: ವೆಂಕಟೇಶ್ ಅಯ್ಯರ್, ಕನಿಷ್ಕ್ ಚೌಹಾನ್, ಸ್ವಪ್ನಿಲ್ ಸಿಂಗ್, ಅಭಿನಂದನ್ ಸಿಂಗ್ ಮತ್ತು ಜೋರ್ಡಾನ್ ಕಾಕ್ಸ್.

ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ XI: ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ವಾಷಿಂಗ್ಟನ್ ಸುಂದರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ನಿಶಾಂತ್ ಸಿಂಧು, ಕಗಿಸೋ ರಬಾಡ, ಅರ್ಷದ್ ಖಾನ್ (ಸಾಯಿ ಕಿಶೋರ್ ಬದಲಿಗೆ) ಮೊಹಮ್ಮದ್ ಸಿರಾಜ್.

ಇಂಪ್ಯಾಕ್ಟ್ ಪ್ಲೇಯರ್ಸ್​: ಪ್ರಸಿದ್ಧ್ ಕೃಷ್ಣ, ಗ್ಲೆನ್ ಫಿಲಿಪ್ಸ್, ಅನುಜ್ ರಾವತ್, ಕುಮಾರ್ ಕುಶಾಗ್ರಾ, ಸಾಯಿ ಕಿಶೋರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:17 pm, Sun, 31 May 26

Follow Us
ಮೂರುವರೆ ವರ್ಷ ಕಳೆದರೂ ಉಡುಪಿಗೆ ಸಿಗದ ಸುಸಜ್ಜಿತ ಜಿಲ್ಲಾ ಆಸ್ಪತ್ರೆ
ಮೂರುವರೆ ವರ್ಷ ಕಳೆದರೂ ಉಡುಪಿಗೆ ಸಿಗದ ಸುಸಜ್ಜಿತ ಜಿಲ್ಲಾ ಆಸ್ಪತ್ರೆ
ಪುಟಿನ್​ಗೆ ಅಪ್ಪುಗೆಯ ಸ್ವಾಗತ ನೀಡಿದ ಪ್ರಧಾನಿ ಮೋದಿ
ಪುಟಿನ್​ಗೆ ಅಪ್ಪುಗೆಯ ಸ್ವಾಗತ ನೀಡಿದ ಪ್ರಧಾನಿ ಮೋದಿ
105 ವರ್ಷದ ತಾಯಿ ನೋಡಲು ದುರ್ಗಮ ಹಾದಿಯಲ್ಲಿ ಕ್ರಮಿಸಿ ಬಂದ 85 ವರ್ಷದ ಮಗಳು!
105 ವರ್ಷದ ತಾಯಿ ನೋಡಲು ದುರ್ಗಮ ಹಾದಿಯಲ್ಲಿ ಕ್ರಮಿಸಿ ಬಂದ 85 ವರ್ಷದ ಮಗಳು!
ಭಕ್ತರ ಕಾಟಕ್ಕೆ ತಲೆ ಕೆರೆದುಕೊಂಡ ಓಂ ಪ್ರಕಾಶ್ ರಾವ್ ಗುರೂಜಿ
ಭಕ್ತರ ಕಾಟಕ್ಕೆ ತಲೆ ಕೆರೆದುಕೊಂಡ ಓಂ ಪ್ರಕಾಶ್ ರಾವ್ ಗುರೂಜಿ
ಅಕ್ರಮವಾಗಿ ಬಂದೂಕು ಇಟ್ಟುಕೊಂಡವರಿಗೆ ಖಡಕ್​ ಎಚ್ಚರಿಕೆ ಕೊಟ್ಟ ಸಿಎಂ
ಅಕ್ರಮವಾಗಿ ಬಂದೂಕು ಇಟ್ಟುಕೊಂಡವರಿಗೆ ಖಡಕ್​ ಎಚ್ಚರಿಕೆ ಕೊಟ್ಟ ಸಿಎಂ
ಸ್ಕ್ಯಾಮ್ ಹಣದಲ್ಲಿ ಪ್ರಿಯತಮೆಗೆ ಚಿನ್ನ ಗಿಫ್ಟ್ ನೀಡಿದ್ದ ಜ್ಞಾನೇಂದ್ರ
ಸ್ಕ್ಯಾಮ್ ಹಣದಲ್ಲಿ ಪ್ರಿಯತಮೆಗೆ ಚಿನ್ನ ಗಿಫ್ಟ್ ನೀಡಿದ್ದ ಜ್ಞಾನೇಂದ್ರ
ಭಿಕ್ಷಾಟನೆ ಮುಕ್ತ ಕರ್ನಾಟಕಕ್ಕೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ
ಭಿಕ್ಷಾಟನೆ ಮುಕ್ತ ಕರ್ನಾಟಕಕ್ಕೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ
ಧಾರವಾಡ: ಎಪಿಎಂಸಿಯಲ್ಲಿ ಅಕ್ರಮ ಮರದ ದಿಮ್ಮಿಗಳ ಸಂಗ್ರಹ
ಧಾರವಾಡ: ಎಪಿಎಂಸಿಯಲ್ಲಿ ಅಕ್ರಮ ಮರದ ದಿಮ್ಮಿಗಳ ಸಂಗ್ರಹ
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ