AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈನಲ್ ಪಂದ್ಯಕ್ಕೂ ಮುನ್ನ ಸಂಕಷ್ಟಕ್ಕೆ ಸಿಲುಕಿದ ಗುಜರಾತ್ ಟೈಟಾನ್ಸ್​!

IPL 2026 Final, Royal Challengers Bengaluru vs Gujarat Titans: ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಶುಭ್​ಮನ್ ಗಿಲ್​ ಪಡೆ ಸಂಕಷ್ಟಕ್ಕೆ ಸಿಲುಕಿದೆ.

ಫೈನಲ್ ಪಂದ್ಯಕ್ಕೂ ಮುನ್ನ ಸಂಕಷ್ಟಕ್ಕೆ ಸಿಲುಕಿದ ಗುಜರಾತ್ ಟೈಟಾನ್ಸ್​!
Gujarat Titans Image Credit source: IPL
ಝಾಹಿರ್ ಯೂಸುಫ್
|

Updated on: May 31, 2026 | 8:21 AM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯಕ್ಕೂ ಮುನ್ನ ಗುಜರಾತ್ ಟೈಟಾನ್ಸ್​ ತಂಡವು ಭಾರೀ ಸಂಕಷ್ಟಕ್ಕೆ ಸಿಲುಕಿದೆ. ವಾಯುವ್ಯ ಭಾರತದಲ್ಲಿ ಎದ್ದಿರುವ ಧೂಳಿನ ಬಿರುಗಾಗಿ ಹಾಗೂ ಭಾರೀ ಮಳೆಯಿಂದಾಗಿ ಶುಭ್​ಮನ್ ಗಿಲ್ ನೇತೃತ್ವದ ಜಿಟಿ ಪಡೆಯ ವಿಮಾನ ಪ್ರಯಾಣ ಗಂಟೆಗಟ್ಟಲೆ ವಿಳಂಬವಾಗಿದೆ. ಇದರಿಂದ ಶನಿವಾರದ ಅಭ್ಯಾಸವನ್ನು ತಪ್ಪಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಫೈನಲ್ ಪಂದ್ಯಕ್ಕೆ 24 ಗಂಟೆಗಳಿಗಿಂತ ಕಡಿಮೆ ಸಮಯ ಬಾಕಿ ಇರುವಾಗ ಗುಜರಾತ್ ಟೈಟಾನ್ಸ್ ಅಹಮದಾಬಾದ್​ಗೆ ಬಂದಿಳಿದಿದೆ.

ಎಷ್ಟು ಗಂಟೆಗೆ ಬರಬೇಕಿತ್ತು?

ಶುಕ್ರವಾರ ನಡೆದ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ನ್ಯೂ ಚಂಡೀಗಢ್​ನಿಂದ ಶನಿವಾರ ಮಧ್ಯಾಹ್ನದೊಳಗೆ ಅಹಮದಾಬಾದ್​ಗೆ ವಿಶೇಷ ಚಾರ್ಟರ್ಡ್ ವಿಮಾನದಲ್ಲಿ ಬಂದಿಳಿಯಬೇಕಿತ್ತು. ಆದರೆ ಪಂಜಾಬ್ ಮತ್ತು ರಾಜಸ್ಥಾನದಲ್ಲಿ ಆವರಿಸಿದ ಭೀಕರ ಚಂಡಮಾರುತ ಮತ್ತು ಮಳೆಯಿಂದಾಗಿ ವಿಮಾನದ ಟೇಕ್ ಆಫ್​ ಅನುಮತಿಯನ್ನು ನಿರಾಕರಿಸಲಾಯಿತು.

ಹೀಗಾಗಿ ಗುಜರಾತ್ ಟೈಟಾನ್ಸ್ ಆಟಗಾರರು ನ್ಯೂ ಚಂಡೀಗಢ್​ನಲ್ಲೇ ಉಳಿದಿದ್ದರು. ಅಲ್ಲದೆ ಸುದೀರ್ಘ ಕಾಯುವಿಕೆಯ ನಂತರ ಶನಿವಾರ ತಡರಾತ್ರಿ (10 ಗಂಟೆಯ ನಂತರ) ಗುಜರಾತ್ ಟೈಟಾನ್ಸ್ ಆಟಗಾರರು ಅಹಮದಾಬಾದ್​ಗೆ ಬಂದಿಳಿದಿದ್ದಾರೆ. ಅಲ್ಲದೆ ಅಲ್ಲಿಂದ ಟೀಮ್ ಹೊಟೇಲ್ ತಲುಪುವಷ್ಟರಲ್ಲಿ ಮಧ್ಯ ರಾತ್ರಿಯಾಗಿತ್ತು ಎಂದು ತಿಳಿದು ಬಂದಿದೆ.

ತಂಡದ ಮೇಲೆ ಪರಿಣಾಮ:

ಗುಜರಾತ್ ಟೈಟಾನ್ಸ್ ತಂಡವು ಶನಿವಾರ ಮಧ್ಯರಾತ್ರಿ ಅಹಮದಾಬಾದ್​ ತಲುಪಿದ ಕಾರಣ ಅಭ್ಯಾಸ ನಡೆಸಲು ಸಾಧ್ಯವಾಗಿಲ್ಲ. ಇದು ತಂಡದ ಸಿದ್ಧತೆಯ ಮೇಲೆ ಪರಿಣಾಮ ಬೀರಲಿದೆ. ಏಕೆಂದರೆ ಕಳೆದ ಮಧ್ಯ ರಾತ್ರಿ ಅಹಮದಾಬಾದ್​ಗೆ ತಲುಪಿರುವ ಆಟಗಾರರು ಹೆಚ್ಚಿನ ಸಮಯ ವಿಶ್ರಾಂತಿ ಪಡೆಯಲಿದ್ದಾರೆ.

ಅಲ್ಲದೆ ಇಂದು ಹೊಟೇಲ್ ರೂಮ್​ನಿಂದ ಪಂದ್ಯದ ಆರಂಭಕ್ಕೂ ಮುನ್ನ ಮೈದಾನಕ್ಕೆ ಬರಲಿದ್ದಾರೆ. ಅಂದರೆ ಫೈನಲ್ ಪಂದ್ಯಕ್ಕಾಗಿ ಹೆಚ್ಚಿನ ಅಭ್ಯಾಸ ನಡೆಸಲು ಗುಜರಾತ್ ಟೈಟಾನ್ಸ್ ತಂಡಕ್ಕೆ ಸಮಯ ಸಿಗಲ್ಲ ಎಂದೇ ಹೇಳಬಹುದು.

ಆರ್​ಸಿಬಿ ನಿರಾಳ:

ಇತ್ತ ಗುಜರಾತ್ ಟೈಟಾನ್ಸ್ ತಂಡವು ವಿಮಾನ ಪ್ರಯಾಣ ವಿಳಂಬ, ದಣಿವು ಹಾಗೂ ಅಭ್ಯಾಸ ಕೈ ತಪ್ಪಿದ ಚಿಂತೆಯಲ್ಲಿದ್ದರೆ ಅತ್ತ ಆರ್​ಸಿಬಿ ತಂಡವು ನಿರಾಳವಾಗಿದೆ. ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಕ್ವಾಲಿಫೈಯರ್ ಪಂದ್ಯ ಗೆದ್ದ ಬೆನ್ನಲ್ಲೇ ಅಹಮದಾಬಾದ್​ಗೆ ಆಗಮಿಸಿದ್ದರು.

ಆರ್​ಸಿಬಿ ತಂಡಕ್ಕೆ ಎರಡು ದಿನಗಳ ಕಾಲ ಸಂಪೂರ್ಣ ವಿಶ್ರಾಂತಿ ಸಿಕ್ಕಿದ್ದು, ಇದರ ಜೊತೆಗೆ ತಾಲೀಮು ನಡೆಸಲು ಸಾಕಷ್ಟು ಸಮಯ ಕೂಡ ದಕ್ಕಿದೆ. ಹೀಗಾಗಿ ಫೈನಲ್ ಪಂದ್ಯಕ್ಕಾಗಿ ಸಕಲ ರೀತಿಯಲ್ಲೂ ಸಜ್ಜಾಗಿದ್ದಾರೆ.

ಇದನ್ನೂ ಓದಿ: RCB vs GT: ಯಾರೇ ಗೆದ್ದರೂ 2ನೇ ಬಾರಿ ಚಾಂಪಿಯನ್!

ಅತ್ತ ಫ್ಲೈಟ್ ಡಿಲೇಯಿಂದಾಗಿ ಗುಜರಾತ್ ಟೈಟಾನ್ಸ್ ತಂಡವು ಸಂಕಷ್ಟಕ್ಕೆ ಸಿಲುಕಿದ್ದು, ಇದಾಗ್ಯೂ ಭಾನುವಾರ ಸಂಜೆ ಮೈದಾನಕ್ಕಿಳಿಯುವ ಮೂಲಕ ಶುಭ್​ಮನ್ ಗಿಲ್ ಪಡೆ ಫೈನಲ್ ಪಂದ್ಯಕ್ಕಾಗಿ ಬೇಕಾದ ಸಿದ್ಧತೆಗಳನ್ನು ನಡೆಸುವ ನಿರೀಕ್ಷೆಯಿದೆ. ಈ ಅಲ್ಪಾವಧಿಯ ಸಿದ್ಧತೆಗಳೊಂದಿಗೆ ಗುಜರಾತ್ ಟೈಟಾನ್ಸ್ ಆರ್​ಸಿಬಿ ವಿರುದ್ಧ ಹೇಗೆ ಹೋರಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?