AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಐವರು ರಣಬೇಟೆಗಾರರು RCB ಪಾಲಿಗೆ ಡೇಂಜರಸ್!

IPL 2026 Final, RCB vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ ಸೀಸನ್​-19ರ ಮೊದಲ ಕ್ವಾಲಿಫೈಯರ್​ನಲ್ಲಿ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ದ್ವಿತೀಯ ಕ್ವಾಲಿಫೈಯರ್​ನಲ್ಲಿ ಜಯ ಸಾಧಿಸಿರುವ ಗುಜರಾತ್ ಟೈಟಾನ್ಸ್ ತಂಡಗಳು ಈ ಬಾರಿಯ ಫೈನಲ್​ನಲ್ಲಿ ಮುಖಾಮುಖಿಯಾಗಲಿದೆ. ಈ ಫೈನಲ್ ಪಂದ್ಯದೊಂದಿಗೆ ಐಪಿಎಲ್​​ಗೆ ತೆರೆ ಬೀಳಲಿದೆ.

IPL 2026: ಐವರು ರಣಬೇಟೆಗಾರರು RCB ಪಾಲಿಗೆ ಡೇಂಜರಸ್!
Gt Vs RcbImage Credit source: IPL
ಝಾಹಿರ್ ಯೂಸುಫ್
|

Updated on: May 30, 2026 | 1:46 PM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ 15 ಪಂದ್ಯಗಳನ್ನಾಡಿದೆ. ಈ ಹದಿನೈದು ಪಂದ್ಯಗಳಲ್ಲಿ ಆರ್​ಸಿಬಿ ತಂಡ ಆಲೌಟ್ ಆಗಿರುವುದು ಏಕೈಕ ಮ್ಯಾಚ್​ನಲ್ಲಿ. ಅಂದರೆ 8 ತಂಡಗಳ ಬೌಲರ್​ಗಳಿಗೆ ಆರ್​ಸಿಬಿ ವಿರುದ್ಧ ಸಂಪೂರ್ಣ ಮೇಲುಗೈ ಸಾಧಿಸಲು ಸಾಧ್ಯವಾಗಿಲ್ಲ. ಇನ್ನು ರಾಯಲ್​ ಚಾಲೆಂಜರ್ಸ್ ಬೆಂಗಳೂರು ಪಡೆಯನ್ನು ಆಲೌಟ್ ಮಾಡಿದ ತಂಡ ಮತ್ಯಾವುದೂ ಅಲ್ಲ, ಅದು ಗುಜರಾತ್ ಟೈಟಾನ್ಸ್​. ಅದು ಕೂಡ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ.

ಅಂದರೆ ಈ ಬಾರಿಯ ಐಪಿಎಲ್​ನ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಲೌಟ್ ಆಗಿತ್ತು. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 19.2 ಓವರ್​ಗಳಲ್ಲಿ 155 ರನ್​ಗಳಿಸಿ ಆಲೌಟ್ ಆಗಿತ್ತು.

ಅಂದು ಆರ್​ಸಿಬಿ ಬ್ಯಾಟರ್​ಗಳ ಪಾಲಿಗೆ ಕಂಟಕವಾಗಿದ್ದು ಗುಜರಾತ್ ಟೈಟಾನ್ಸ್ ತಂಡದ ಐವರು ಬೌಲರ್​ಗಳು ಅವರೆಂದರೆ…

  • ಮೊಹಮ್ಮದ್ ಸಿರಾಜ್
  • ಕಗಿಸೊ ರಬಾಡ
  • ರಶೀದ್ ಖಾನ್
  • ಜೇಸನ್ ಹೋಲ್ಡರ್
  • ಅರ್ಷದ್ ಖಾನ್

ಈ ಐವರು ರಣಬೇಟೆಗಾರರು ಬಲಿಷ್ಠ ಬ್ಯಾಟಿಂಗ್ ಲೈನಪ್ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕೇವಲ 155 ರನ್​ಗಳಿಗೆ ಆಲೌಟ್ ಮಾಡಿದ್ದರು.

ಇದೀಗ ಅದೇ ಗುಜರಾತ್ ಟೈಟಾನ್ಸ್​ ವಿರುದ್ಧ ಫೈನಲ್ ಪಂದ್ಯವಾಡಲು ಆರ್​ಸಿಬಿ ಸಜ್ಜಾಗಿದೆ. ಅದು ಸಹ ಈ ಹಿಂದೆ ಆಲೌಟ್ ಆಗಿದ್ದ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ.

ಹೀಗಾಗಿ ಗುಜರಾತ್ ಟೈಟಾನ್ಸ್​ ತಂಡವು ಈ ಬಾರಿ ಕೂಡ ಐವರು ರಣಬೇಟೆಗಾರರೊಂದಿಗೆ ಕಣಕ್ಕಿಳಿಯುವುದು ದಿಟ. ಇಲ್ಲಿ ಅರ್ಷದ್ ಖಾನ್ ಆಡದಿದ್ದರೆ, ಅವರ ಸ್ಥಾನದಲ್ಲಿ ಪ್ರಸಿದ್ಧ್ ಕೃಷ್ಣ ಕಾಣಿಸಿಕೊಳ್ಳಬಹುದು. ಇನ್ನುಳಿದ ನಾಲ್ವರು ಫೈನಲ್ ಮ್ಯಾಚ್ ಆಡುವುದು ಖಚಿತ ಎಂದೇ ಹೇಳಬಹುದು.

ಇದನ್ನೂ ಓದಿ: 96 ರನ್​ಗಳಿಸಿ ಬಂದ ವೈಭವ್​ನ ಗದರಿಸಿದ ರಿಯಾನ್ ಪರಾಗ್!

ಹೀಗಾಗಿ ಅಹಮದಾಬಾದ್​ ಪಿಚ್​ನಲ್ಲಿ ಈ ನಾಲ್ವರನ್ನು ಎದುರಿಸಲು ಆರ್​ಸಿಬಿ ತಂಡ ಹೊಸ ರಣತಂತ್ರದೊಂದಿಗೆ ಕಣಕ್ಕಿಳಿಯಬೇಕಿದೆ. ಏಕೆಂದರೆ ಗುಜರಾತ್ ಟೈಟಾನ್ಸ್ ತಂಡವು ತವರು ಪಿಚ್​ನ ಸಂಪೂರ್ಣ ಲಾಭ ಪಡೆಯಲು ಸಕಲ ರೀತಿಯಲ್ಲೂ ಸಿದ್ಧತೆ ಮಾಡಿಕೊಂಡಿದೆ. ಈ ಸಿದ್ಧತೆಯೊಂದಿಗೆ ಈ ಬಾರಿಯ ಐಪಿಎಲ್ ಫೈನಲ್ ಬೌಲಿಂಗ್ (GT) vs ಬ್ಯಾಟಿಂಗ್ (RCB) ಎಂಬುದೇ ಸದ್ಯದ ಕುತೂಹಲ.

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ