AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: RCB ತಂಡದ ಅತೀ ದೊಡ್ಡ ಸಮಸ್ಯೆಗೆ ಇಲ್ಲಿದೆ ಪರಿಹಾರ!

IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಚಂಡ ಪ್ರದರ್ಶನ ನೀಡಿದೆ. ಈ ಪ್ರದರ್ಶನದ ಹೊರತಾಗಿಯೂ ಆರ್​ಸಿಬಿ ತಂಡವು ದೊಡ್ಡ ಸಮಸ್ಯೆಯೊಂದನ್ನು ಎದುರಿಸುತ್ತಿದೆ. ಆ ಸಮಸ್ಯೆಯೇನು? ಅದಕ್ಕೆ ಪರಿಹಾರವೇನು? ಎಂಬುದರ ಮಾಹಿತಿ ಇಲ್ಲಿದೆ.

IPL 2026: RCB ತಂಡದ ಅತೀ ದೊಡ್ಡ ಸಮಸ್ಯೆಗೆ ಇಲ್ಲಿದೆ ಪರಿಹಾರ!
RCB
ಝಾಹಿರ್ ಯೂಸುಫ್
|

Updated on: May 21, 2026 | 9:33 AM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 67ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡಕ್ಕೆ ಮೊದಲ ಕ್ವಾಲಿಫೈಯರ್ ಆಡಲು ಅವಕಾಶ ಸಿಗಲಿದೆ. ಅಷ್ಟೇ ಅಲ್ಲದೆ ಪ್ಲೇಆಫ್ ಹಂತಕ್ಕೂ ಮುನ್ನ ಆರ್​ಸಿಬಿ ಕಣಕ್ಕಿಳಿಯಲಿರುವ ಕೊನೆಯ ಪಂದ್ಯ ಕೂಡ ಇದಾಗಿದೆ. ಹೀಗಾಗಿ ಈ ಮ್ಯಾಚ್​ ಮೂಲಕ ಆರ್​ಸಿಬಿ ತನ್ನೆಲ್ಲಾ ನೂನ್ಯತೆಗಳನ್ನು ಸರಿಪಡಿಸಿಕೊಳ್ಳಬೇಕಿದೆ.

ಇಲ್ಲಿ ಆರ್​ಸಿಬಿ ತಂಡದ ಪ್ರಮುಖ ನ್ಯೂನತೆ ಏನು ಎಂದು ನೋಡುವುದಾದರೆ… ಆರಂಭಿಕರ ವೈಫಲ್ಯ. ಅಂದರೆ ಕಳೆದ 7 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಉತ್ತಮ ಆರಂಭ ಪಡೆದಿಲ್ಲ. ಗಾಯಗೊಂಡು ಹೊರಗುಳಿದಿರುವ ಫಿಲ್ ಸಾಲ್ಟ್ ಬದಲಿಗೆ ಕಣಕ್ಕಿಳಿದಿರುವ ಜೇಕಬ್ ಬೆಥೆಲ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿ ಬರುತ್ತಿಲ್ಲ. ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು.

  • ಈ ಬಾರಿಯ ಐಪಿಎಲ್​ನಲ್ಲಿ ಜೇಕಬ್ ಬೆಥೆಲ್ 7 ಮ್ಯಾಚ್​ಗಳಲ್ಲಿ ಇನಿಂಗ್ಸ್ ಆರಂಭಿಸಿದ್ದಾರೆ.
  • ಈ ವೇಳೆ ಎದುರಿಸಿರುವುದು ಕೇವಲ 77 ಎಸೆತಗಳನ್ನು ಮಾತ್ರ. ಇನ್ನು ಕಲೆಹಾಕಿರುವುದು 96 ರನ್​ಗಳು.
  • ಜೇಕಬ್ ಬೆಥೆಲ್ ಪ್ರತಿ ಮ್ಯಾಚ್​ನಲ್ಲಿ ಕೆಲಹಾಕಿರುವ ರನ್​ ಸರಾಸರಿ ಕೇವಲ 13.71 
  • ಇನ್ನು 77 ಎಸೆತಗಳಲ್ಲಿ ಬಾರಿಸಿರುವುದು 3 ಸಿಕ್ಸ್ ಹಾಗೂ 12 ಫೋರ್​ಗಳು ಮಾತ್ರ.

ಅಂದರೆ ಆರಂಭಿಕನಾಗಿ ಜೇಕಬ್ ಬೆಥೆಲ್ ಅಟ್ಟರ್ ಫ್ಲಾಪ್ ಎಂದೇ ಹೇಳಬಹುದು. ಇದಕ್ಕೇನು ಪರಿಹಾರ ಎಂದು ನೋಡುವುದಾದರೆ…

ವೆಂಕಟೇಶ್ ಅಯ್ಯರ್ ಆಯ್ಕೆ: ಈ ಬಾರಿಯ ಐಪಿಎಲ್​ನಲ್ಲಿ ವೆಂಕಟೇಶ್ ಅಯ್ಯರ್ ಅವರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಸಲಾಗುತ್ತಿದೆ. ಆದರೆ ಅಯ್ಯರ್ ಅತ್ಯುತ್ತಮ ಆರಂಭಿಕ ಆಟಗಾರ ಎಂಬುದು ಇಲ್ಲಿ ಉಲ್ಲೇಖಾರ್ಹ. ಈ ಹಿಂದೆ ಕೆಕೆಆರ್ ಪರ ಆರಂಭಿಕನಾಗಿ ಆಡಿದ್ದರು. ಅಲ್ಲದೆ ಇದೀಗ ಉತ್ತಮ ಫಾರ್ಮ್​ನಲ್ಲೂ ಇದ್ದಾರೆ.

ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಜತ್ ಪಾಟಿದಾರ್ ಅನುಪಸ್ಥಿತಿಯಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ವೆಂಕಟೇಶ್ ಅಯ್ಯರ್ 40 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 73 ರನ್ ಬಾರಿಸಿದ್ದರು. ಇದೀಗ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ರಜತ್ ಪಾಟಿದಾರ್ ಕಣಕ್ಕಿಳಿದರೆ ವೆಂಕಟೇಶ್ ಅಯ್ಯರ್ ಅವರನ್ನು ಆಡುವ ಬಳಗದಿಂದ ಕೈ ಬಿಡಬೇಕಾಗುತ್ತದೆ.

ಆದರೆ ಇಲ್ಲಿ ಜೇಕಬ್ ಬೆಥೆಲ್ ಅವರ ಬದಲಿಗೆ ವೆಂಕಟೇಶ್ ಅಯ್ಯರ್ ಅವರನ್ನು ಆರಂಭಿಕನಾಗಿ ಕಣಕ್ಕಿಳಿಸಿದರೆ ಆರ್​ಸಿಬಿ ತನ್ನ ಒಪನಿಂಗ್ ಸಮಸ್ಯೆಯನ್ನು ಸರಿಪಡಿಸಿಕೊಳ್ಳಬಹುದು. ಅಂದರೆ ಉತ್ತಮ ಫಾರ್ಮ್​ನಲ್ಲಿರುವ ವಿರಾಟ್ ಕೊಹ್ಲಿ ಹಾಗೂ ವೆಂಕಟೇಶ್ ಅಯ್ಯರ್ ಆರಂಭಿಕರಾಗಿ ಕಣಕ್ಕಿಳಿಯುವುದು ಆರ್​ಸಿಬಿಗೆ ಪ್ಲಸ್ ಪಾಯಿಂಟ್ ಆಗುವುದರಲ್ಲಿ ಅನುಮಾನವೇ ಇಲ್ಲ.

ಪ್ಲಸ್ ಪಾಯಿಂಟ್ ಏನು?

ಜೇಕಬ್ ಬೆಥೆಲ್ ಅವರನ್ನು ಕೈ ಬಿಟ್ಟು ವೆಂಕಟೇಶ್ ಅಯ್ಯರ್ ಅವರನ್ನು ಆರಂಭಿಕನಾಗಿ ಕಣಕ್ಕಿಳಿಸಿದರೆ, ಆರ್​ಸಿಬಿ ತಂಡವು ಮತ್ತೋರ್ವ ವಿದೇಶಿ ಆಟಗಾರನನ್ನು ಆಡಿಸಬಹುದು. ಅಂದರೆ ಇಲ್ಲಿ ವೇಗಿ ಜೇಕಬ್ ಡಫಿಯನ್ನೂ ಕೂಡ ಆಡುವ ಬಳಗದಲ್ಲಿ ಸೇರಿಸಿಕೊಳ್ಳಬಹುದು.

ಜೋಶ್ ಹೇಝಲ್​ವುಡ್, ಭುವನೇಶ್ವರ್ ಕುಮಾರ್ ಜೊತೆ ಜೇಕಬ್ ಡಫಿ ಕೂಡ ಇದ್ದರೆ ಆರ್​ಸಿಬಿ ತಂಡದ ಬೌಲಿಂಗ್ ಲೈನಪ್ ಕೂಡ ಮತ್ತಷ್ಟು ಬಲಿಷ್ಠವಾಗಲಿದೆ.

ಅಂದರೆ ಅತ್ತ ಆರಂಭಿಕ ಸಮಸ್ಯೆ ಸರಿಯಾಗುವುದರ ಜೊತೆ ಬೌಲಿಂಗ್ ವಿಭಾಗ ಕೂಡ ಬಲಿಷ್ಠವಾಗಲಿದೆ. ಹೀಗಾಗಿ ಆರ್​ಸಿಬಿ ತಂಡವು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ವೆಂಕಟೇಶ್ ಅಯ್ಯರ್ ಅವರನ್ನು ಆರಂಭಿಕನಾಗಿ ಕಣಕ್ಕಿಳಿಸುವುದು ಉತ್ತಮ.

ಇದನ್ನೂ ಓದಿ: IPL​ ಆಡಲು ಮೊಹಮ್ಮದ್ ಅಮಿರ್​ಗೆ ‘ಗ್ರೀನ್ ಸಿಗ್ನಲ್’

ಇನ್ನು ವೆಂಕಿಯನ್ನು ಆರಂಭಿಕನಾಗಿ ಅಲ್ಲದೆ, ಮಧ್ಯಮ ಕ್ರಮಾಂಕದಲ್ಲಿ ಮುಂದುವರೆಸಲು ಬಯಸಿದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ದೇವದತ್ ಪಡಿಕ್ಕಲ್ ಅವರನ್ನು ಓಪನರ್ ಆಗಿ ಬಳಸಿಕೊಳ್ಳಬಹುದು. ಈ ಮೂಲಕ ಕೂಡ ಆರಂಭಿಕ ಸಮಸ್ಯೆಯನ್ನು ಸರಿಪಡಿಸಿ ಆರ್​ಸಿಬಿ ಬಲಿಷ್ಠ ಪಡೆಯನ್ನು ಕಣಕ್ಕಿಳಿಸಬಹುದು.

ಒಟ್ಟಾರೆಯಾಗಿ ಹೇಳುವುದಾದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆರಂಭಿಕ ಸಮಸ್ಯೆಯನ್ನು ಸರಿದೂಗಿಸಲು ಇಬ್ಬರು ಎಡಗೈ ದಾಂಡಿಗರ ಉತ್ತಮ ಆಯ್ಕೆ ಇದೆ. ಈ ಆಯ್ಕೆಗಳೊಂದಿಗೆ ಆರ್​ಸಿಬಿ ಪ್ಲೇಆಫ್ ಪಂದ್ಯಕ್ಕೂ ಮುನ್ನ ತನ್ನ ಓಪನಿಂಗ್ ಜೋಡಿಯನ್ನು ಬದಲಿಸಲಿದೆಯಾ ಕಾದು ನೋಡಬೇಕಿದೆ.

Follow Us
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?
ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?
ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ
ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ
ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ
ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ
ಕಾರ್ಗಿಲ್ ವಿಜಯ್ ದಿವಸ: ಹುತಾತ್ಮ ವೀರ ಸೈನಿಕರಿಗೆ ಡಿಕೆ ಪುಷ್ಪನಮನ!
ಕಾರ್ಗಿಲ್ ವಿಜಯ್ ದಿವಸ: ಹುತಾತ್ಮ ವೀರ ಸೈನಿಕರಿಗೆ ಡಿಕೆ ಪುಷ್ಪನಮನ!