
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 67ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್ನಲ್ಲಿ ಗೆಲ್ಲುವ ತಂಡಕ್ಕೆ ಮೊದಲ ಕ್ವಾಲಿಫೈಯರ್ ಆಡಲು ಅವಕಾಶ ಸಿಗಲಿದೆ. ಅಷ್ಟೇ ಅಲ್ಲದೆ ಪ್ಲೇಆಫ್ ಹಂತಕ್ಕೂ ಮುನ್ನ ಆರ್ಸಿಬಿ ಕಣಕ್ಕಿಳಿಯಲಿರುವ ಕೊನೆಯ ಪಂದ್ಯ ಕೂಡ ಇದಾಗಿದೆ. ಹೀಗಾಗಿ ಈ ಮ್ಯಾಚ್ ಮೂಲಕ ಆರ್ಸಿಬಿ ತನ್ನೆಲ್ಲಾ ನೂನ್ಯತೆಗಳನ್ನು ಸರಿಪಡಿಸಿಕೊಳ್ಳಬೇಕಿದೆ.
ಇಲ್ಲಿ ಆರ್ಸಿಬಿ ತಂಡದ ಪ್ರಮುಖ ನ್ಯೂನತೆ ಏನು ಎಂದು ನೋಡುವುದಾದರೆ… ಆರಂಭಿಕರ ವೈಫಲ್ಯ. ಅಂದರೆ ಕಳೆದ 7 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಉತ್ತಮ ಆರಂಭ ಪಡೆದಿಲ್ಲ. ಗಾಯಗೊಂಡು ಹೊರಗುಳಿದಿರುವ ಫಿಲ್ ಸಾಲ್ಟ್ ಬದಲಿಗೆ ಕಣಕ್ಕಿಳಿದಿರುವ ಜೇಕಬ್ ಬೆಥೆಲ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿ ಬರುತ್ತಿಲ್ಲ. ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು.
ಅಂದರೆ ಆರಂಭಿಕನಾಗಿ ಜೇಕಬ್ ಬೆಥೆಲ್ ಅಟ್ಟರ್ ಫ್ಲಾಪ್ ಎಂದೇ ಹೇಳಬಹುದು. ಇದಕ್ಕೇನು ಪರಿಹಾರ ಎಂದು ನೋಡುವುದಾದರೆ…
ವೆಂಕಟೇಶ್ ಅಯ್ಯರ್ ಆಯ್ಕೆ: ಈ ಬಾರಿಯ ಐಪಿಎಲ್ನಲ್ಲಿ ವೆಂಕಟೇಶ್ ಅಯ್ಯರ್ ಅವರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಸಲಾಗುತ್ತಿದೆ. ಆದರೆ ಅಯ್ಯರ್ ಅತ್ಯುತ್ತಮ ಆರಂಭಿಕ ಆಟಗಾರ ಎಂಬುದು ಇಲ್ಲಿ ಉಲ್ಲೇಖಾರ್ಹ. ಈ ಹಿಂದೆ ಕೆಕೆಆರ್ ಪರ ಆರಂಭಿಕನಾಗಿ ಆಡಿದ್ದರು. ಅಲ್ಲದೆ ಇದೀಗ ಉತ್ತಮ ಫಾರ್ಮ್ನಲ್ಲೂ ಇದ್ದಾರೆ.
ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಜತ್ ಪಾಟಿದಾರ್ ಅನುಪಸ್ಥಿತಿಯಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ವೆಂಕಟೇಶ್ ಅಯ್ಯರ್ 40 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 8 ಫೋರ್ಗಳೊಂದಿಗೆ ಅಜೇಯ 73 ರನ್ ಬಾರಿಸಿದ್ದರು. ಇದೀಗ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ರಜತ್ ಪಾಟಿದಾರ್ ಕಣಕ್ಕಿಳಿದರೆ ವೆಂಕಟೇಶ್ ಅಯ್ಯರ್ ಅವರನ್ನು ಆಡುವ ಬಳಗದಿಂದ ಕೈ ಬಿಡಬೇಕಾಗುತ್ತದೆ.
ಆದರೆ ಇಲ್ಲಿ ಜೇಕಬ್ ಬೆಥೆಲ್ ಅವರ ಬದಲಿಗೆ ವೆಂಕಟೇಶ್ ಅಯ್ಯರ್ ಅವರನ್ನು ಆರಂಭಿಕನಾಗಿ ಕಣಕ್ಕಿಳಿಸಿದರೆ ಆರ್ಸಿಬಿ ತನ್ನ ಒಪನಿಂಗ್ ಸಮಸ್ಯೆಯನ್ನು ಸರಿಪಡಿಸಿಕೊಳ್ಳಬಹುದು. ಅಂದರೆ ಉತ್ತಮ ಫಾರ್ಮ್ನಲ್ಲಿರುವ ವಿರಾಟ್ ಕೊಹ್ಲಿ ಹಾಗೂ ವೆಂಕಟೇಶ್ ಅಯ್ಯರ್ ಆರಂಭಿಕರಾಗಿ ಕಣಕ್ಕಿಳಿಯುವುದು ಆರ್ಸಿಬಿಗೆ ಪ್ಲಸ್ ಪಾಯಿಂಟ್ ಆಗುವುದರಲ್ಲಿ ಅನುಮಾನವೇ ಇಲ್ಲ.
ಜೇಕಬ್ ಬೆಥೆಲ್ ಅವರನ್ನು ಕೈ ಬಿಟ್ಟು ವೆಂಕಟೇಶ್ ಅಯ್ಯರ್ ಅವರನ್ನು ಆರಂಭಿಕನಾಗಿ ಕಣಕ್ಕಿಳಿಸಿದರೆ, ಆರ್ಸಿಬಿ ತಂಡವು ಮತ್ತೋರ್ವ ವಿದೇಶಿ ಆಟಗಾರನನ್ನು ಆಡಿಸಬಹುದು. ಅಂದರೆ ಇಲ್ಲಿ ವೇಗಿ ಜೇಕಬ್ ಡಫಿಯನ್ನೂ ಕೂಡ ಆಡುವ ಬಳಗದಲ್ಲಿ ಸೇರಿಸಿಕೊಳ್ಳಬಹುದು.
ಜೋಶ್ ಹೇಝಲ್ವುಡ್, ಭುವನೇಶ್ವರ್ ಕುಮಾರ್ ಜೊತೆ ಜೇಕಬ್ ಡಫಿ ಕೂಡ ಇದ್ದರೆ ಆರ್ಸಿಬಿ ತಂಡದ ಬೌಲಿಂಗ್ ಲೈನಪ್ ಕೂಡ ಮತ್ತಷ್ಟು ಬಲಿಷ್ಠವಾಗಲಿದೆ.
ಅಂದರೆ ಅತ್ತ ಆರಂಭಿಕ ಸಮಸ್ಯೆ ಸರಿಯಾಗುವುದರ ಜೊತೆ ಬೌಲಿಂಗ್ ವಿಭಾಗ ಕೂಡ ಬಲಿಷ್ಠವಾಗಲಿದೆ. ಹೀಗಾಗಿ ಆರ್ಸಿಬಿ ತಂಡವು ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ವೆಂಕಟೇಶ್ ಅಯ್ಯರ್ ಅವರನ್ನು ಆರಂಭಿಕನಾಗಿ ಕಣಕ್ಕಿಳಿಸುವುದು ಉತ್ತಮ.
ಇದನ್ನೂ ಓದಿ: IPL ಆಡಲು ಮೊಹಮ್ಮದ್ ಅಮಿರ್ಗೆ ‘ಗ್ರೀನ್ ಸಿಗ್ನಲ್’
ಇನ್ನು ವೆಂಕಿಯನ್ನು ಆರಂಭಿಕನಾಗಿ ಅಲ್ಲದೆ, ಮಧ್ಯಮ ಕ್ರಮಾಂಕದಲ್ಲಿ ಮುಂದುವರೆಸಲು ಬಯಸಿದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ದೇವದತ್ ಪಡಿಕ್ಕಲ್ ಅವರನ್ನು ಓಪನರ್ ಆಗಿ ಬಳಸಿಕೊಳ್ಳಬಹುದು. ಈ ಮೂಲಕ ಕೂಡ ಆರಂಭಿಕ ಸಮಸ್ಯೆಯನ್ನು ಸರಿಪಡಿಸಿ ಆರ್ಸಿಬಿ ಬಲಿಷ್ಠ ಪಡೆಯನ್ನು ಕಣಕ್ಕಿಳಿಸಬಹುದು.
ಒಟ್ಟಾರೆಯಾಗಿ ಹೇಳುವುದಾದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆರಂಭಿಕ ಸಮಸ್ಯೆಯನ್ನು ಸರಿದೂಗಿಸಲು ಇಬ್ಬರು ಎಡಗೈ ದಾಂಡಿಗರ ಉತ್ತಮ ಆಯ್ಕೆ ಇದೆ. ಈ ಆಯ್ಕೆಗಳೊಂದಿಗೆ ಆರ್ಸಿಬಿ ಪ್ಲೇಆಫ್ ಪಂದ್ಯಕ್ಕೂ ಮುನ್ನ ತನ್ನ ಓಪನಿಂಗ್ ಜೋಡಿಯನ್ನು ಬದಲಿಸಲಿದೆಯಾ ಕಾದು ನೋಡಬೇಕಿದೆ.